ಬೆಳಗಾವಿ: ಮೈಸೂರು ನಂಜನಗೂಡು ತಾಲೂಕಿನ ಕೌಲಂದೆ ಗ್ರಾಮದಲ್ಲಿ ನೀಚರು, ನಿರ್ಲಜ್ಯರಿಂದ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಲಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಅನ್ನ ತಿನ್ನುವ ಇಂತಹವರೆಲ್ಲ ದೇಶ ದ್ರೋಹಿಗಳು. ಪಾಕಿಸ್ತಾನದ ಮೇಲೆ ಪ್ರೀತಿ ಇದ್ರೆ ಅಲ್ಲಿಗೆ ಹೋಗಬೇಕು. ನಾನು ಕೂಡ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ ಎಂದರು. ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದರೆ ಶ್ರೀರಾಮಸೇನೆಯಿಂದ ಮೈಸೂರಿನ ‘ಕೌಲಂದೆ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತೇವೆ ಎಂದು …
Read More »‘ನಿಮ್ ಮೋದಿ ಹಾಗೆ ರಾಹುಲ್ ವಿಮಾನದಲ್ಲಿ 13 ಸಾವಿರ ಕೋಟಿ ರೂ. ಕೊಳ ಇಟ್ಕೊಂಡು ಈಜುತ್ತಾ ಹೋಗ್ಲಿಲ್ಲ’
ಕೋಲ್ಕತಾ: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿಯವರು ನೇಪಾಳದ ಪಾರ್ಟಿಯೊಂದರಲ್ಲಿ ಮದ್ಯಹೀರುತ್ತಿರುವ ಯುವತಿಯ ಪಕ್ಕ ಕಾಣಿಸಿಕೊಂಡಿರುವ ವಿಡಿಯೋ ಭಾರಿ ಕೋಲಾಹಲ ಸೃಷ್ಟಿಸಿರುವುದು ಕಾಂಗ್ರೆಸ್ಸಿಗರಿಗೆ ಭಾರಿ ಕೋಪ ತರಿಸಿದೆ. ಸ್ನೇಹಿತೆಯೊಬ್ಬರ ಮದುವೆಗೆ ರಾಹುಲ್ ಗಾಂಧಿ ಹೋಗಿದ್ದೇ ವಿನಾ ಅಲ್ಲಿ ನೈಟ್ಕ್ಲಬ್ನಲ್ಲಿ ಮೋಜುಮಸ್ತಿ ಮಾಡಲು ಅಲ್ಲ ಎಂದು ಕಾಂಗ್ರೆಸ್ ಹೇಳುತ್ತಾ ಬಂದಿದ್ದರೂ, ಈ ವಿಡಿಯೋ ಜಾಲತಾಣದಲ್ಲಿ ವಿಧವಿಧ ಕಮೆಂಟ್ಗಳ ಜತೆ ಹರಿದಾಡುತ್ತಿದೆ. ಬಿಜೆಪಿಯ ಕಾರ್ಯಕರ್ತರು ಕೂಡ ಈ ವಿಡಿಯೋ ಬಗ್ಗೆ ತಮಾಷೆ ಮಾಡುತ್ತಿರುವುದು …
Read More »ಐಷಾರಾಮಿ ಕಾರು ಖರೀದಿಸಿದ ನಟಿ ಆದಿತಿ ರಾವ್ ಹೈದರಿ: ಬೆಲೆ ಎಷ್ಟಿರಬಹುದು?
ಬಾಲಿವುಡ್ ರಾಜಕುಮಾರಿ ಎಂದೇ ಖ್ಯಾತಿಯಾಗಿರುವ ಅದಿತಿ ರಾವ್ ಹೈದರಿ ಹೊಸ ‘ಔಡಿ ಕ್ಯೂ 7’ ಕಾರು ಖರೀದಿಸಿದ್ದಾರೆ. ಬೋಲ್ಡ್ ಪಾತ್ರ ಹಾಗೂ ಮಾತುಗಳಿಗೆ ಹೆಸರಾಗಿರುವ ಅದಿತಿ ಇದೇ ಮೊದಲ ಬಾರಿಗೆ ಐಷಾರಾಮಿ ಕಾರು ಖರೀದಿಸಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಫೋಟೊ ಹಂಚಿಕೊಂಡಿದ್ದಾರೆ. ಅದಿತಿ ಸಾಮಾಜಿಕ ಮಾಧ್ಯಮಗಳಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ಅದಿತಿಯ ಹೊಸ ಕಾರು ಖರೀದಿಸಿದ್ದಾರೆ ಅಭಿಮಾನಿಗಳು ಶುಭಾಶಯಗಳನ್ನು ಹೇಳುತ್ತಿದ್ದಾರೆ. ಈ ಐಷಾರಾಮಿ ಕಾರಿನ ಬೆಲೆ ₹ 96 …
Read More »ಕನ್ನಡದ ಕೋಟ್ಯಧಿಪತಿ ಖ್ಯಾತಿಯ ಲೈನ್ಮನ್ ಆತ್ಮಹತ್ಯೆ!
ಬೀಳಗಿ(ಬಾಗಲಕೋಟೆ): ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನಪ್ರಿಯತೆ ಗಳಿಸಿದ್ದ, ಟಿಕ್ಟಾಕ್, ಹಾಸ್ಯ, ಸಂಗೀತದ ಮೂಲಕ ಅಪಾರ ಅಭಿಮಾನಿಗಳನ್ನ ಹೊಂದಿದ್ದ ಬೀಳಗಿ ಹೆಸ್ಕಾಂ ಲೈನ್ಮನ್ ತಿಮ್ಮಣ್ಣ ಭೀಮಪ್ಪ ಗುರಡ್ಡಿ(27) ದುರಂತ ಅಂತ್ಯ ಕಂಡಿದ್ದಾರೆ. ನಟ ರಮೇಶ್ ಅರವಿಂದ್ ಅವರು ನಡೆಸಿಕೊಡುತ್ತಿದ್ದ ಕನ್ನಡದ ಕೋಟ್ಯಧಿಪತಿಯಲ್ಲಿ ಭಾಗವಹಿಸಿದ್ದ ತಿಮ್ಮಣ್ಣ 6.40 ಲಕ್ಷ ರೂ. ಗೆದ್ದಿದ್ದರು. ಓದಿದ್ದು ಎಸ್ಸೆಸ್ಸೆಲ್ಸಿ ಆದರೂ ಅಪಾರ ಜ್ಞಾನ ಇತ್ತು. ಟಿಕ್ಟಾಕ್, ಹಾಸ್ಯ, ಸಂಗೀತದಲ್ಲೂ ನಿಪುಣರಾಗಿದ್ದ ತಿಮ್ಮಣ್ಣ, ಖೋ ಖೋ ಕ್ರೀಡಾಪಟು …
Read More »ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೀಘ್ರ ‘ವೇತನ ಹೆಚ್ಚಳ’ಕ್ಕೆ ರಾಜ್ಯ ಸರ್ಕಾರ ನಿರ್ಧಾರ
ಶಿರಸಿ : ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಲು ಮುಂದಾಗಿದ್ದು, ಶೀಘ್ರ ವೇತನ ಹೆಚ್ಚಳ ಮಾಡುವ ಬಗ್ಗೆ ಹಣಕಾಸು ಇಲಾಖೆ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ. ಶಿರಸಿ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿ ನಂತ್ರ ಮಾತನಾಡಿದ ಸಚಿವರು, ವೇತನ ಹೆಚ್ಚಳದ ಬಗ್ಗೆ ಹಣಕಾಸು ಇಲಾಖೆ ಜತೆ ಚರ್ಚಿಸಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗುವುದು, ‘ಸಾರಿಗೆ ಸಿಬ್ಬಂದಿಗೆ ಶೀಘ್ರ ವೇತನ …
Read More »ಮೇ 10ರೊಳಗೆ ಸಂಪುಟ ಪುನಾರಚನೆ: ಅಶೋಕ್, ಸುಧಾಕರ್, ಎಂಟಿಬಿ, ಸೋಮಣ್ಣಗೆ ಕೊಕ್? ಪ್ರೀತಮ್, ಯತ್ನಾಳ್, ವಿಜಯೇಂದ್ರ ಗೆ ಲಕ್?
ಬೆಂಗಳೂರು: ಬಸವರಾಜ ಬೊಮ್ಮಾಯಿ ಸರ್ಕಾರದ ಸಂಪುಟ ಪುನಾರಚನೆ ಇನ್ನು ಒಂದೆರಡು ದಿನಗಳಲ್ಲಿ ನಡೆಯಲಿದೆ. ಹೀಗಾಗಿ ಮೇ 11 ರಂದು ಗುರುವಾರ ಸಂಪುಟ ಸಭೆ ನಿಗದಿಯಾಗಿದೆ. ಸಂಪುಟ ಪುನಾರಚನೆ ಸಂಬಂಧ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದರು. ಸಿಎಂ ಬೊಮ್ಮಾಯಿ ಅವರ ಜೊತೆ ಯಾರ್ಯಾರನ್ನು ಕೈ ಬಿಡಬೇಕು ಮತ್ತು ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಎಂದು ವರದಿಯಾಗಿದೆ. ಸಂಪುಟ ಪುನಾರಚನೆ ನಿರ್ಧಾರದೊಂದಿಗೆ ಅಮಿತ್ …
Read More »ಮೈಸೂರು ವಿವಿಯಲ್ಲಿ ತೃತೀಯ ಲಿಂಗಿಯಿಂದ ಪಿಹೆಚ್ಡಿ ವ್ಯಾಸಂಗ; ಇದು ರಾಜ್ಯದಲ್ಲೇ ಮೊದಲು!
ಮೈಸೂರು: ಸಮಾಜದಲ್ಲಿ ಲೈಗಿಂಕ ಅಲ್ಪಸಂಖ್ಯಾತರನ್ನು ಕೀಳಾಗಿ ನೋಡುತ್ತಿರುವ ಬೆಳವಣಿಗೆಗಳು ಮುಂದುವರೆದಿದ್ದರೂ ಕೂಡ ಇದಾವುದಕ್ಕೂ ಗಮನಕೊಡದೆ ಇತರರಿಗಿಂತ ತಾವು ಯಾವುದರಲ್ಲೂ ಕಡಿಮೆ ಇಲ್ಲ ಎಂಬುದನ್ನು ದೀಪಾ ಬುದ್ಧೆ ಎಚ್.ಜಿ. ದೀಪಾ (32) ತೋರಿಸಿಕೊಟ್ಟಿದ್ದಾರೆ. ತಾನು ‘ತೃತೀಯ ಲಿಂಗಿ’ ಎಂದೇ ಘೋಷಿಸಿಕೊಂಡಿರುವ ದೀಪಾ ಬುದ್ಧೆಯವರು, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯಾಗಿಯೇ ಪಿಹೆಚ್ಡಿ ಆರಂಭಿಸಿದ್ದಾರೆ. ಜತೆಗೆ ಪಿಹೆಚ್ಡಿ ಮಾಡುತ್ತಿರುವ ‘ಕರ್ನಾಟಕದ ಮೊದಲ ಲೈಂಗಿಕ ಅಲ್ಪಸಂಖ್ಯಾತೆ’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಹೆಗ್ಗವಾಡಿಪುರ …
Read More »ಸಾರ್. ‘ಬ್ಯಾಗ್’ನಲ್ಲಿ ಏನ್ ಇದೆ.? ಅಂದ ‘KSRTC ಬಸ್ ಕಂಡಕ್ಟರ್’: ಮುಂದೆ ಆಗಿದ್ದೇನು ಗೊತ್ತಾ.?
ಬೆಂಗಳೂರು: ಸಾರಿಗೆ ಬಸ್ ಗಳಲ್ಲಿ ಸ್ಪೋಟಕ, ನಿಷೇಧಿತ ಸಾಮಗ್ರಿಗಳನ್ನು ಸಾಗಿಸೋದು ಅಪರಾಧವಾಗಿದೆ. ಒಂದು ವೇಳೆ ಹೀಗೆ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ರೇ.. ಅವರ ವಿರುದ್ಧ ಕೇಸ್ ಫಿಕ್ಸ್.. ಜೈಲೂಟ ಕಾಯಂ. ಇದೇ ಕಾರಣದಿಂದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ( KSRTC Bus ) ಅನುಮಾನಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದಂತ ಪ್ರಯಾಣಿಕನೊಬ್ಬನನ್ನು ಕಂಡಕ್ಟರ್, ಸಾರ್.. ಬ್ಯಾಗ್ ನಲ್ಲಿ ಏನ್ ಇದೆ.. ಅಂತ ಕೇಳಿದ್ದೇ ತಡ.. ಮುಂದೆ ಆಗಿದ್ದೇ ಬೇರೆಯಾಗಿತ್ತು. ಅದೇನ್ …
Read More »ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ!
ನೆಲಮಂಗಲ: ಮದ್ವೆಯಾಗಿ ಇಬ್ಬರು ಮಕ್ಕಳಿದ್ದರೂ ಈತನಿಗೆ ನಾದಿನಿ ಮೇಲಿತ್ತು ಮೋಹ. ಇದಕ್ಕೆ ಅಡ್ಡಿಯಾದ ಪತ್ನಿಯನ್ನೇ ಕೊಂದ ಗಂಡ ಸುಳ್ಳು ಕಥೆ ಕಟ್ಟಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಇಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದ ಭುವನೇಶ್ವರಿ ಬಡಾವಣೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಆಲೂರು ಗ್ರಾಮದ ಶ್ವೇತಾ (30) ಮೃತ ದುರ್ದೈವಿ. ಹಿರಿಯೂರು ತಾಲೂಕಿನ ಕುರುಬರಹಳ್ಳಿ ಚೌಡೇಶ್ (35) ಆರೋಪಿ. 9 ವರ್ಷಗಳ ಹಿಂದೆ ಶ್ವೇತಾ …
Read More »ರಾಜ್ಯದ ಮೊದಲ ಸಿಎಂ ಕೆ.ಸಿ.ರೆಡ್ಡಿ ಪ್ರತಿಮೆ ವಿಧಾನಸೌಧದ ಆವರಣದಲ್ಲಿ ಅನಾವರಣವಾಗಲಿದೆ: C.M . ಬೊಮ್ಮಾಯಿ
ಬೆಂಗಳೂರು,ಮೇ5-ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪುನಃ ಅನಾವರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೆ.ಸಿ.ರೆಡ್ಡಿ ಅವರ 120ನೇ ಜನ್ಮದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಅವರು ಮಾತನಾಡಿದರು. ಈಗಾಗಲೇ ಕೆ.ಸಿ.ರೆಡ್ಡಿ ಅವರ ಪ್ರತಿಮೆ ಸಿದ್ದಗೊಂಡಿದೆ. ಇದನ್ನು ಅನಾವರಣಗೊಳಿಸುವುದಷ್ಟೇ ಬಾಕಿ ಇದೆ. ಆದಷ್ಟು ಶೀಘ್ರ ವಿಧಾನಸೌಧಕ್ಕೆ ತಂದು ಅನಾವರಣ ಮಾಡಲು ಇಂದೇ ಕಾರ್ಯಾದೇಶ ಮಾಡುವುದಾಗಿ ತಿಳಿಸಿದರು. ಈ …
Read More »
Laxmi News 24×7