ಕುಡುಕರಿಗೆ ಗಂಟಲಲ್ಲಿ ಎಣ್ಣೆ ಬಿದ್ದರೆ ಅವರು ಏನು ಮಾಡುತ್ತಾರೆ ಅಂತಾ ಅವರಿಗೆ ಗೊತ್ತೇ ಆಗೋದಿಲ್ಲ. ಇಲ್ಲೊಬ್ಬ ಕುಡುಕ ಮಹಾಶಯ ಫುಲ್ ಟೈಟ್ ಆಗಿ ನಡು ರಸ್ತೆಯಲ್ಲಿ ಡಿಪ್ಸ್ ಹೊಡೆದು ರಂಪಾಟ ಮಾಡಿದ್ದಾನೆ. ಹೌದು ನೀವು ನೋಡುತ್ತಿರುವ ಈ ದೃಶ್ಯ ಕಂಡು ಬಂದಿದ್ದು ಬೆಳಗಾವಿಯ ಕಾಂಗ್ರೆಸ್ ರಸ್ತೆಯಲ್ಲಿ. ನಡು ರಸ್ತೆಯಲ್ಲಿ ಕುಡುಕ ರಂಪಾಟ ಮಾಡಿದ್ದಾನೆ. ಫುಲ್ಟೈಟ್ ಆಗಿ ರಸ್ತೆ ಮಧ್ಯೆ ನಿಂತುಕೊಂಡ ಕುಡುಕ ವಾಹನಗಳನ್ನು ಅಡ್ಡಗಟ್ಟಿ ಹುಚ್ಚಾಟ ಮೆರೆದಿದ್ದಾನೆ. ಫುಲ್ಟೈಟ್ ಆಗಿ …
Read More »ಎಸ್ಐ ನೇಮಕ ಅಕ್ರಮಕ್ಕೆ ಓಎಂಆರ್ ಸಾಕ್ಷ್ಯ!; 50 ಅಭ್ಯರ್ಥಿಗಳ ವಿಚಾರಣೆ ನಡೆಸಿದ ಸಿಐಡಿ, ಮತ್ತೆ 50 ಮಂದಿ ವಿಚಾರಣೆಗೆ ನೋಟಿಸ್..
ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಹಗರಣದ ಸಂಬಂಧ ಬುಧವಾರ 50 ಅಭ್ಯರ್ಥಿಗಳ ವಿಚಾರಣೆ ನಡೆಸಿದ ಸಿಐಡಿ ಅಧಿಕಾರಿಗಳು, ಪ್ರವೇಶ ಪತ್ರದ ಅಸಲು ಪ್ರತಿ ಹಾಗೂ 2ನೇ ಪತ್ರಿಕೆಯ ಓಎಂಆರ್ ಶೀಟ್ ಕಾರ್ಬನ್ ಪ್ರತಿ ಸಂಗ್ರಹಿಸಿದ್ದಾರೆ. ಅವ್ಯವಹಾರ ನಡೆದಿದ್ದಲ್ಲಿ ಕಾರ್ಬನ್ ಪ್ರತಿ ಪರಿಶೀಲನೆಯಿಂದ ದೃಢಪಡಲಿದೆ. ಕಲಬುರಗಿಯಲ್ಲಿ ಠಿಕಾಣಿ ಹೂಡಿರುವ ಸಿಐಡಿಯ ಒಂದು ತಂಡ, ಅಕ್ರಮ ನೇಮಕಾತಿಯಲ್ಲಿ ಭಾಗಿಯಾದವರನ್ನು ಒಬ್ಬರಾದ ಮೇಲೆ ಒಬ್ಬರಂತೆ ಬಂಧಿಸುತ್ತಿದ್ದಾರೆ. ಮತ್ತೊಂದು ತಂಡ, ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾದ …
Read More »ಶೋಷಿತರ ಸಬಲೀಕರಣಕ್ಕೆ ಸಾಲ ಯೋಜನೆ; ಬ್ಯಾಂಕ್ಗಳು ಅರ್ಜಿ ತಿರಸ್ಕರಿಸಿದರೆ ನಿಗಮದಿಂದಲೇ ಆರ್ಥಿಕ ಸಹಾಯ
ಬೆಂಗಳೂರು: ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಶೋಷಿತರಿಗೆ ಸಕಾಲಕ್ಕೆ ಪುನರ್ವಸತಿ ಮತ್ತು ಪರಿಹಾರ ಸಿಗುತ್ತಿಲ್ಲ ಎಂಬ ಕೊರಗು ನಿವಾರಿಸಲು ಸರ್ಕಾರ ಮುಂದಾಗಿದೆ. ಉದ್ಯಮ, ಸೇವೆ, ವ್ಯಾಪಾರ ಯೋಜನೆಯಡಿ ಸಾಲಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಬ್ಯಾಂಕ್ಗಳು ತಿರಸ್ಕರಿಸಿದರೂ ಪರಿಶಿಷ್ಟ ಜಾತಿ ಸಂತ್ರಸ್ತರು ಇನ್ನು ಹೆದರಬೇಕಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದಲೇ ಸಹಾಯಧನದ ಜತೆಗೆ ನೇರ ಸಾಲ ಸೌಲಭ್ಯವೂ ದೊರೆಯಲಿದೆ. ಜಿಲ್ಲಾಧಿಕಾರಿ ಹಂತದಲ್ಲಿ ಈ ಯೋಜನೆ ಅನುಷ್ಠಾನವಾಗಲಿದೆ. ದಲಿತ ಸಂಘಟನೆಗಳ ಧರಣಿಗೆ ಸರ್ಕಾರ ಸ್ಪಂದಿಸಿದ್ದು, ಸಮಾಜ ಕಲ್ಯಾಣ ಇಲಾಖೆ …
Read More »ಹುಬ್ಬಳ್ಳಿ ಗಲಭೆ ಪ್ರದೇಶಕ್ಕೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಭೇಟಿ
ಹುಬ್ಬಳ್ಳಿ: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹಾಗೂ ಕಾರ್ಯದರ್ಶಿ ಮೊಹಮದ್ ನಜೀರ್ ಗುರುವಾರ ಬೆಳಗ್ಗೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಗುರುವಾರ ಭೇಟಿ ನೀಡಿ ನಗರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ನಂತರ ದಿಡ್ಡಿ ಓಣಿಯ ಹನುಮಂತ ದೇವಸ್ಥಾನಕ್ಕೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು. ದೇಗುಲದ ಟ್ರಸ್ಟಿ ಮತ್ತು ಅರ್ಚಕರಿಂದ ಘಟನೆ ಬಗ್ಗೆ ಮಾಹಿತಿ ಪಡೆದರು. ಮುಂದೆ ಹೀಗಾಗದಂತೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಭರವಸೆ …
Read More »ಸ್ನೇಹಿತನ ಶವ ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಾರ್ಗ ಮಧ್ಯೆ ಸ್ಥಳದಲ್ಲೇ ಸಾವು!
ರಾಯಚೂರು: ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಗೆಳೆಯನ ಶವವನ್ನು ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಿತ್ರರು ಮಾರ್ಗಮಧ್ಯೆ ಭೀಕರ ಅಪಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಗೊಲ್ಲಪಲ್ಲಿ ಬಳಿ ಈ ಅಪಘಾತ ಸಂಭವಿಸಿದ್ದು, ಅಂಬರೀಷ್ (30), ಗೋವಿಂದ್ (35) ದೇವರಾಜ್ (34) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರು ಚಾಲಕ ಉಸ್ಮಾನ್ ಪಾಷಾ ಹಾಗೂ ಯಲ್ಲಾಲಿಂಗ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಸಾವಿಗೀಡಾದವರು ಹಾಗೂ ಗಾಯಾಳುಗಳು ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇವರ …
Read More »ಶೌಚಾಲಯದ ಗೋಡೆಯಲ್ಲಿ ಮಾಜಿ ಸಹೋದ್ಯೋಗಿಗಳಿಂದ ಫೋನ್ ನಂಬರ್ , ಉಪನ್ಯಾಸಕಿಗೆ 800 ಅಶ್ಲೀಲ ಕರೆಗಳು!
ಮಂಗಳೂರು: ಮಹಿಳಾ ಉಪನ್ಯಾಸಕಿಯೊಬ್ಬರ ಫೋನ್ ನಂಬರ್ ಮತ್ತು ಇ- ಮೇಲ್ ಐಡಿಯಿರುವ ಫೋಸ್ಟರ್ ನ್ನು ಸಾರ್ವಜನಿಕ ಶೌಚಾಲಯದ ಗೋಡೆ ಮೇಲೆ ಹಾಕಿದ ಆರೋಪದ ಮೇರೆಗೆ ಬಂಟ್ವಾಳದ ಖಾಸಗಿ ಕಾಲೇಜ್ ವೊಂದರ ಮೂವರು ಸಿಬ್ಬಂದಿ ಬಂಧನವಾಗುವ ಸಾಧ್ಯತೆಯಿದೆ. ಖಾಸಗಿಯ ಕಾಲೇಜಿನ ಪ್ರಕಾಶ್ ಶೆಣೈ, ಅರ್ಥಶಾಸ್ತ್ರ ಉಪನ್ಯಾಸಕ ಪ್ರದೀಪ್ ಪೂಜಾರಿ ಮತ್ತು ಹೆಬ್ರಿಯ ತಾರನಾಥ ಬಿಎಸ್ ಶೆಟ್ಟಿ ಆರೋಪಿಗಳು ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನಷ್ಟು ಜನರಿದ್ದು, ಶೀಘ್ರದಲ್ಲಿಯೇ ಬಂಧನವಾಗುವ ಸಾಧ್ಯತೆಯಿದೆ. ಈ …
Read More »ಗೃಹ, ವಾಹನ ಸಾಲಗಾರರಿಗೆ ಬಿಗ್ ಶಾಕ್ : ಸಾಲದ `EMI’ ಏರಿಕೆ!
ನವದೆಹಲಿ:ಕಳೆದ ಕೆಲವು ದಿನಗಳಲ್ಲಿ ಹಲವಾರು ಬ್ಯಾಂಕ್ಗಳು ತಮ್ಮ ಕನಿಷ್ಠ ವೆಚ್ಚದ ನಿಧಿ ಆಧಾರಿತ ಸಾಲ ದರಗಳನ್ನು (MCLR) ಹೆಚ್ಚಿಸಿವೆ.ಆದ್ದರಿಂದ ಕಾರ್ಪೊರೇಟ್, ಗೃಹ ಮತ್ತು ವಾಹನ ಸಾಲದ ದರಗಳು ಹೆಚ್ಚಾಗುವ ಸಾಧ್ಯತೆಯಿದೆ. ಎಸ್ಬಿಐ, ಬ್ಯಾಂಕ್ ಆಫ್ ಬರೋಡಾ, ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್ ಕಳೆದ ಕೆಲವು ದಿನಗಳಲ್ಲಿ ಏಪ್ರಿಲ್ 12 ರಿಂದ ದರಗಳನ್ನು ಹೆಚ್ಚಿಸಿವೆ. ಎಸ್ಬಿಐ ತನ್ನ ಎಂಸಿಎಲ್ಆರ್ ಅನ್ನು ಎಲ್ಲಾ ಅವಧಿಗಳಲ್ಲಿ 10 ಬೇಸಿಸ್ ಪಾಯಿಂಟ್ಗಳು …
Read More »ಬಗೆದಷ್ಟೂ ಬಯಲಾಗುತ್ತಿದೆ ಪಿಎಸ್ಐ ನೇಮಕಾತಿ ಅಕ್ರಮ; ಮತ್ತೋರ್ವ ಕಿಂಗ್ ಪಿನ್ ಮಂಜುನಾಥ ಮೇಳಕುಂದಿ ನಾಪತ್ತೆ
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಬಗೆದಷ್ಟು ಆಳಕ್ಕೆ ಹೋಗ್ತಿದೆ. ಅಕ್ರಮದ ಮತ್ತೋರ್ವ ಕಿಂಗ್ ಪಿನ್ ಮಂಜುನಾಥ ಮೇಳಕುಂದಿ ನಾಪತ್ತೆಯಾಗಿದ್ದಾರೆ. ಕಲಬುರಗಿ ನೀರಾವರಿ ಇಲಾಖೆಯ ಸಹಾಯಕ ಇಂಜನೀಯರ್ ಮಂಜುನಾಥ ಮೇಳಕುಂದಿ ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದಾರೆ. ಕಲಬುರಗಿ ನಗರದ ಎನ್ಜಿಒ ಕಾಲೋನಿ ನಿವಾಸಿ ಮಂಜುನಾಥ, ಕಲಬುರಗಿ ಜಿಲ್ಲೆಯ ಸೇಡಂ ನಿವಾಸಿ ವಿರೇಶ್ ಅನ್ನೋ ಅಭ್ಯರ್ಥಿಯಿಂದ ಬರೋಬ್ಬರಿ 39 ಲಕ್ಷ ಹಣ ಪಡೆದಿದ್ದ. ವಿರೇಶ್, ಅಕ್ರಮವಾಗಿ …
Read More »ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಯಿಂದ ಕಮಲ್ಪಂತ್ out ‘: ಅಲೋಕ್ ಕುಮಾರ್ ಗೆ in
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಮರು ನೇಮಕ ಮಾಡುವ ಸಾಧ್ಯತೆಯಿದೆ ಎನ್ನಲಾಗಿದ್ದು, ಈ ಮೂಲಕ ರಾಜ್ಯ ಸರ್ಕಾರ ಸಿಲಿಕಾನ್ ಸಿಟಿ ಬೆಂಗಳೂರಿಗೆ ಖಡಕ್ ಐಪಿಎಸ್ ಅಧಿಕಾರಿಗೆ ಕೆಲ ವಹಿಸಲು ಮುಂದಾಗಿದೆ ಎನ್ನಲಾಗಿದೆ. ಸಾಮನ್ಯವಾಗಿ ಬೆಂಗಳೂರಿನ ಪೊಲೀಸ್ ಕಮಿಷನರ್ಗಳನ್ನು ಪ್ರತಿ ವರ್ಷ ಬದಲಾಯಿಸಲಾಗುತ್ತದೆ. ಆದರೆ ಸದ್ಯ ಇರುವ ಕಮಲ್ ಪಂತ್ ಅವರನ್ನು ಕೋವಿಡ್ ಬಳಿಕ ನಡೆದ ಕಾರಣಗಳಿಂದಾಗಿ ಇನ್ನೂ ಅಧಿಕಾರದಲ್ಲಿ …
Read More »ಪುಂಡರೇ ನಷ್ಟ ತುಂಬಲಿ; ಗಲಭೆಕೋರರಿಂದಲೇ ದಂಡ ವಸೂಲಿಗೆ ಹೆಚ್ಚಿದ ಒತ್ತಡ
ಕೋಮು ಸಹಿತ ಎಲ್ಲ ಗಲಭೆ ಸಂದರ್ಭಗಳಲ್ಲಿ ಸಾರ್ವಜನಿಕ ಮತ್ತು ಸರಕಾರದ ಆಸ್ತಿಪಾಸ್ತಿಗಳಿಗೆ ಹಾನಿಯಾದರೆ ಅದರ ನಷ್ಟ ವಸೂಲಿಯನ್ನು ಗಲಭೆಕೋರರಿಂದಲೇ ಮಾಡುವ ಪ್ರಕ್ರಿಯೆ ಚುರುಕಾಗಬೇಕು ಎಂಬ ಆಗ್ರಹ ರಾಜ್ಯದಲ್ಲಿ ತೀವ್ರವಾಗತೊಡಗಿದೆ. ಹುಬ್ಬಳ್ಳಿ ಗಲಭೆ ಬೆನ್ನಲ್ಲೇ ಈ ಬೇಡಿಕೆ ಹೆಚ್ಚಿದೆ. ಸಾರ್ವಜನಿಕ ಹಾಗೂ ಸರಕಾರದ ಆಸ್ತಿಗೆ ನಷ್ಟ ವುಂಟಾದರೆ ಗಲಭೆಕೋರರು ಮತ್ತು ಪ್ರತಿ ಭಟನಕಾರರಿಗೆ ದಂಡ ವಿಧಿಸಬೇಕು. ಇದಕ್ಕೆ ಪೂರಕವಾಗಿ ಚಾಲ್ತಿಯಲ್ಲಿರುವ ಕಾನೂನನ್ನು ಮತ್ತಷ್ಟು ಕಠಿನಗೊಳಿಸಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂಬ ಆಗ್ರಹ ಕೇಳಿಬರುತ್ತಿದೆ. ಈ …
Read More »
Laxmi News 24×7