ಬೆಂಗಳೂರು- 40% ಕಮೀಷನ್ ಆರೋಪಕ್ಕೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ಸಚಿವ ಈಶ್ವರಪ್ಪ, ಸಚಿವ ಸ್ಥಾನ ತಲೆದಂಡವಾಗಿರುವ ಬೆನ್ನಲ್ಲೇ ಇದೀಗ ಮತ್ತಿಬ್ಬರು ಸಚಿವರಿಗೆ ಕಂಟಕ ಎದುರಾಗಿದೆ ಎನ್ನಲಾಗುತ್ತಿದೆ. ಬೃಹತ್ ನೀರಾವರಿ ಸಚಿವ ಗೋವಿಂದ ಕಾರಜೋಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ಅವರ ಮೇಲೆ ಇದೇ ಆರೋಪಗಳು ಕೇಳಿಬಂದಿದ್ದು, ಇಲಾಖೆಯಲ್ಲಿ 40% ಕಮೀಷನ್ ಕೊಡದೆ ಯಾವುದೇ ಕೆಲಸಗಳನ್ನು ಮಾಡಿಕೊಡುವುದಿಲ್ಲ ಎಂಬ ಆರೋಪ ಜಗಜ್ಜಾಹೀರವಾಗಿದೆ. ಸದ್ಯದಲ್ಲೇ ಗುತ್ತಿಗೆದಾರರು ಇವರಿಬ್ಬರ ವಿರುದ್ಧ ದಾಖಲೆಗಳ …
Read More »ಬೃಹತ್ ಮರ ಧರೆಗುರುಳಿದ ಬೆಳಗಾವಿಯಲ್ಲಿ ನೂರಾರು ಬೈಕ್ಗಳು ಜಖಂ
ಬೆಳಗಾವಿ :ಬೆಳಗಾವಿಯಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಸುರಿದ ಮಳೆ ದೊಡ್ಡ ಅವಾಂತರವನ್ನೇ ಸೃಷ್ಟಿ ಮಾಡಿತ್ತು. ನಗರದ ವಿವಿಧ ಕಡೆಗಳಲ್ಲಿ ಮರಗಳು ಧರೆಗುರುಳಿದಿದ್ದರಿಂದ ಸಾಕಷ್ಟು ವಾಹನಗಳು ಜಖಂಗೊಂಡಿವೆ. ಹೌದು ಬೆಳಗಾವಿ ನಗರದಲ್ಲಿ ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಿಗೆ ಮಂಗಳವಾರ ಸಾಯಂಕಾಲ ಸುರಿದ ಮಳೆ ಹರ್ಷ ತಂದಿದೆ. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆ ಆರಂಭವಾಯಿತು. ಈ ವೇಳೆ ಮಳೆಗಿಂತ ಗಾಳಿಯ ರಭಸವೇ ಹೆಚ್ಚಾಗಿದ್ದರಿಂದ ಸಿವಿಲ್ ಆಸ್ಪತ್ರೆ ರಸ್ತೆಯಲ್ಲಿರುವ ಬೃಹದಾಕಾರದ …
Read More »ಸಂತೋಷ್ ಆತ್ಮಹತ್ಯೆ ಮಾಡಿದ್ದ ಲಾಡ್ಜ್ ನಲ್ಲಿ ಮತ್ತೋರ್ವ ಯುವಕನ ಆತ್ಮಹತ್ಯೆ!
ಉಡುಪಿ: ಕೆಲವು ದಿನಗಳ ಹಿಂದಷ್ಟೇ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಉಡುಪಿಯ ಲಾಡ್ಜ್ ನಲ್ಲಿ ಇಂದು ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆಯ ಶರಣ್ ರಾಜ್ (31 ವ) ಎಂದು ಗುರುತಿಸಲಾಗಿಎ. ಈತ ಮಂಗಳೂರಿನ ಮೆಡಿಕಲ್ ರೆಪ್ ಎಂದು ತಿಳಿದು ಬಂದಿದೆ. ಹೆಸರು ಬದಲಿಸಿದ ಲಾಡ್ಜ್: ಸಂತೋಷ್ ಸಾವನ್ನಪ್ಪಿದ ಶಾಂಭವಿ ಲಾಡ್ಜ್ನ ಹೆಸರನ್ನು ಮಾಲಕರು ಬದಲಾಯಿಸಿದ್ದಾರೆ. …
Read More »ಕೊರೊನಾ ನಾಲ್ಕನೇ ಭೀತಿಯಿಂದ ಖಾಸಗಿ ಶಾಲೆಗಳ ಪ್ರವೇಶಾತಿ 30%ರಷ್ಟು ಕುಸಿತ
ಬೆಂಗಳೂರು, ಏಪ್ರಿಲ್ 19 : ದೇಶದಲ್ಲಿ ಮತ್ತೆ ಕೊರೊನಾ ನಾಲ್ಕನೇ ಭೀತಿ ಶುರುವಾಗಿದ್ದು, ಈಗಾಗಲೇ ದೆಹಲಿ, ಉತ್ತರ ಪ್ರದೇಶ, ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕರ್ನಾಟಕದಲ್ಲೂ ಕೊರೊನಾ ನಾಲ್ಕನೇ ಅಲೆ ಬರಬಹುದು ಎಂಬ ಭೀತಿ ಇರುವುದರಿಂದ ಪೋಷಕರು ಮಕ್ಕಳನ್ನ ಶಾಲೆಗೆ ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಖಾಸಗಿ ಶಾಲೆಗಳಿಗೆ ಭಾರಿ ಹೊಡೆತ ಬಿದ್ದಿದ್ದು, ಮುಂಬರುವ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನ ದಾಖಲಿಸಿಕೊಳ್ಳಲು ಖಾಸಗಿ ಶಾಲೆಗಳು ಹೆಣಗಾಡುತ್ತಿವೆ. ಸಾರ್ವಜನಿಕ ಶಿಕ್ಷಣ …
Read More »ವೇಗವೂ ಇಲ್ಲ, ಸಮಯಪಾಲನೆಯೂ ಇಲ್ಲ…
ಭಾರತೀಯ ರೈಲ್ವೆಯು 15 ನಿಮಿಷಗಳ ಸಮಯ ಪಾಲನೆ ಮಾನದಂಡವನ್ನು ಹೊಂದಿದೆ. ಅಂದರೆ ರೈಲು ತನ್ನ ಗಮ್ಯ ಸ್ಥಳವನ್ನು ನಿಗದಿತ ಸಮಯಕ್ಕಿಂತ 15 ನಿಮಿಷ ವಿಳಂಬವಾಗಿ ತಲುಪಿದರೂ ಅದು ಸರಿಯಾದ ಸಮಯಕ್ಕೆ ಆಗಮಿಸಿದೆ ಎಂದು ಪರಿಗಣಿಸಲಾಗುತ್ತದೆ. ಹೀಗಿದ್ದರೂ ಕೇವಲ ಶೇ.69.23ರಷ್ಟು ರೈಲುಗಳು ಸಮಯಕ್ಕೆ ಸರಿಯಾಗಿ ತಮ್ಮ ಗಮ್ಯವನ್ನು ತಲುಪಿವೆ ಮತ್ತು ಈ ಪ್ರವೃತ್ತಿಯು ಕುಸಿಯುತ್ತಲೇ ಇದೆ. 2008-09ರಲ್ಲಿ ಸರಾಸರಿ ಸುಮಾರು ಶೇ.69ರಷ್ಟು ಎಕ್ಸ್ಪ್ರೆಸ್ ರೈಲುಗಳು ಸಮಯ ಪಾಲನೆಯನ್ನು ಹೊಂದಿದ್ದು,2013-14ರಲ್ಲಿ ಅದು ಶೇ.83ಕ್ಕೆ …
Read More »ಬಿಜೆಪಿ ಅಭ್ಯರ್ಥಿ ಘೋಷಿಸಿಲ್ಲ: ಬಸವರಾಜ ಹೊರಟ್ಟಿ ಅವರು ಸ್ವತಃ ಘೋಷಿಸಿಕೊಂಡಿದ್ದಾರೆ.ಜೋಶಿ
ಹುಬ್ಬಳ್ಳಿ: ‘ವಿಧಾನ ಪರಿಷತ್ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿ ಘೋಷಿಸಿಲ್ಲ. ಪಕ್ಷವನ್ನು ಸೇರುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸ್ವತಃ ಘೋಷಿಸಿಕೊಂಡಿದ್ದಾರೆ. ಅವರ ಸೇರ್ಪಡೆ ಕುರಿತು ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಘಟಕದ ಅಧ್ಯಕ್ಷರು ತೀರ್ಮಾನಿಸುತ್ತಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಸೋಮವಾರ ಈ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಪಕ್ಷದೊಳಗೆ ನಡೆದ ಆಂತರಿಕ ಚರ್ಚೆಯ ಕುರಿತು …
Read More »ವಿಧಾನಸಭಾ ಚುನಾವಣೆಗೆ 50 ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ: ಶ್ರೀ ಬ್ರಹ್ಮಾನಂದ ಸರಸ್ವತಿ
ಭಟ್ಕಳ: ರಾಜಕೀಯ ಕ್ಷೇತ್ರ ಸಂಪೂರ್ಣ ಹಾಳಾಗಿದ್ದು ರಾಜ್ಯಾಂಗದ ವ್ಯವಸ್ಥೆಯೇ ದಿಕ್ಕು ತಪ್ಪಿದೆ, ರಾಜ್ಯಾಂಗದಲ್ಲಿ ಸಮಗ್ರ ಬದಲಾವಣೆ ತರಲು ಮುಂದಿನ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ನಾನೂ ಸೇರಿದಂತೆ 50 ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ ಎಂದು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಹೇಳಿದ್ದಾರೆ. ಶಿರಾಲಿಯ ಹಳೇಕೋಟೆ ಹನುಮಂತ ದೇವಸ್ಥಾನದ ಶಿಲಾಮಯ ದೇಗುಲ ಸಮರ್ಪಣೆ, ಶ್ರೀ ದೇವರ ಪುನರ್ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಇಂದು ಶಾಸಕನಾಗುವವನ್ಜು ತಾನೆಷ್ಟು …
Read More »ಗೋವಾ ಗಡಿ ದಾಟಲು ಕರ್ನಾಟಕ ಪ್ರವಾಸಿಗರಿಗೆ 10 ಸಾವಿರ ರೂ. ದಂಡ
ಪಣಜಿ: ಗೋವಾಗೆ ಟ್ಯಾಕ್ಸಿಯಲ್ಲಿ ಹೋಗುವ ಕರ್ನಾಟಕದ ಪ್ರವಾಸಿಗರು ಗಡಿ ದಾಟುವುದಕ್ಕೆ ವಿಶೇಷ ಪರವಾನಗಿ ಪಡೆಯಲು ಪ್ರತಿ ವಾಹನಕ್ಕೆ 10,262 ರೂ. ದಂಡ ಪಾವತಿಸಬೇಕಾಗಿದೆ. ಗೋವಾ ಸರ್ಕಾರದ ಈ ನಡೆ ಕರ್ನಾಟಕದ ಪ್ರವಾಸಿಗರು ಗೋವಾಗೆ ತೆರಳದೆ ರಾಜ್ಯಕ್ಕೆ ವಾಪಸಾಗುತ್ತಿದ್ದಾರೆ. ಗೋವಾದ ಮೊಲ್ಲೆಮ್ ಚೆಕ್ಪೋಸ್ಟ್ನಲ್ಲಿ ಗುರುವಾರದಿಂದ ಶನಿವಾರ ರಾತ್ರಿಯವರೆಗೆ 40 ಟ್ಯಾಕ್ಸಿಗಳನ್ನು ತಡೆಹಿಡಿಯಲಾಗಿದೆ ಎಂದು ಕರ್ನಾಟಕ ಪ್ರವಾಸೋದ್ಯಮ ವೇದಿಕೆಯ ಉಪಾಧ್ಯಕ್ಷ ಎಂ ರವಿ ತಿಳಿಸಿದ್ದಾರೆ. ಸಾಮಾನ್ಯವಾಗಿ, ವಿಶೇಷ ಪರವಾನಗಿ ಪಡೆಯಲು ರೂ. 100 ಅಥವಾ …
Read More »ಸಂತ್ರಸ್ತರಿಗೆ ಕೆಎಸ್ಆರ್ಟಿಸಿ ಸಂಸ್ಥೆ ಪರಿಹಾರ ನೀಡಿ, ಸೀಜ್ ಆಗಿದ್ದ ಬಸ್ ಮರಳಿ ವಶಕ್ಕೆ ಪಡೆದುಕೊಂಡಿದೆ.
ಸಾಂಗ್ಲಿ (ಮಹಾರಾಷ್ಟ್ರ): 2015ರಲ್ಲಿ ಮಹಾರಾಷ್ಟ್ರದಲ್ಲಿ ನಡೆದಿದ್ದ ಬಸ್ ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಜಪ್ತಿ ಮಾಡಿ, ಸಾವನ್ನಪ್ಪಿದ್ದ ಕುಟುಂಬಸ್ಥರಿಗೆ ಬಸ್ ಹಸ್ತಾಂತರ ಮಾಡಲಾಗಿತ್ತು. ಆದ್ರೆ ಸಂತ್ರಸ್ತರಿಗೆ ಇಂದು ಕೆಎಸ್ಆರ್ಟಿಸಿ ಪರಿಹಾರ ನೀಡಿ ಮರಳಿ ಬಸ್ ಪಡೆದುಕೊಂಡಿದೆ. ಪ್ರಕರಣದ ವಿವರ: 2015ರಲ್ಲಿ ಮೀರಜ್ನಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದು ಭಾನುದಾಸ್ ಬೋಸಲೆ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ತಮಗೆ ಪರಿಹಾರ ನೀಡುವಂತೆ ಬೋಸಲೆ ಕುಟುಂಬ ಸಾಂಗ್ಲಿ ನ್ಯಾಯಾಲಯದಲ್ಲಿ ದಾವೆ …
Read More »ಈ ಬಾರಿ ದ್ವಿತೀಯ ಪಿಯು ಪರೀಕ್ಷೆ ಸುಲಭ.
ಕರೊನಾ ಕಾರಣಕ್ಕೆ ಕಳೆದ ವರ್ಷ ಪರೀಕ್ಷೆ ಇಲ್ಲದೆಯೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿತ್ತು. ಈ ವರ್ಷ ಪರೀಕ್ಷೆ ನಡೆಸುತ್ತಿದ್ದರೂ ಉತ್ತೀರ್ಣರಾಗುವುದು ಅಷ್ಟೇನು ಕಷ್ಟವಲ್ಲ. ಏಕೆಂದರೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸುಲಭ ಮಾದರಿಯಲ್ಲಿ ಪೂರ್ವಶಿಕ್ಷಣ ಇಲಾಖೆ ಪ್ರಶ್ನೆಗಳನ್ನು ರೂಪಿಸುತ್ತಿದೆ. ಕೋವಿಡ್ನಿಂದಾಗಿ ಈ ಬಾರಿ ಕಡಿಮೆ ಶೈಕ್ಷಣಿಕ ದಿನಗಳು ಲಭ್ಯವಾದ ಹಿನ್ನೆಲೆಯಲ್ಲಿ ಹಾಗೂ ಕಳೆದ ವರ್ಷ ಪಿಯು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಿರುವ ಹಿನ್ನೆಲೆಯಲ್ಲಿ ಈ ಬಾರಿ ಸುಲಭ ವಿಧಾನದಲ್ಲಿ ಪಾಸ್ ಆಗುವ …
Read More »
Laxmi News 24×7