Breaking News

ರಾಜ್ಯ

ಆಂಬ್ಯುಲೆನ್ಸ್ ಒಳಗೆ ರಾಸಲೀಲೆ: 5 ಕಿ.ಮೀ ಚೇಸ್ ಮಾಡಿ ಯುವಕ-ಯುವತಿಯನ್ನು ಹಿಡಿದ ಸಾರ್ವಜನಿಕರು!

  ​ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ತುರ್ತು ಚಿಕಿತ್ಸೆಗಾಗಿ ಬಳಕೆಯಾಗಬೇಕಾದ ಆಂಬ್ಯುಲೆನ್ಸ್, ಅನೈತಿಕ ಚಟುವಟಿಕೆಯ ತಾಣವಾಗಿ ಮಾರ್ಪಟ್ಟಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ​ಘಟನೆಯ ಸಾರಾಂಶ: ​ಅನುಮಾನಾಸ್ಪದ ಚಲನೆ: ಗುರುವಾರ ಚಲಿಸುತ್ತಿದ್ದ ಆಂಬ್ಯುಲೆನ್ಸ್ ಒಂದರ ಕಿಟಕಿಯ ಮೂಲಕ ದಾರಿಹೋಕರೊಬ್ಬರು ಇಣುಕಿ ನೋಡಿದಾಗ, ಒಳಗೆ ಯುವತಿ ಮತ್ತು ಇಬ್ಬರು ಯುವಕರು ಆಕ್ಷೇಪಾರ್ಹ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ​ಸಾರ್ವಜನಿಕರ ಸಾಹಸ: ತಕ್ಷಣವೇ ಕಾರ್ಯಪ್ರವೃತ್ತರಾದ ಜನರು ಸುಮಾರು 5 ಕಿಲೋಮೀಟರ್‌ಗಳವರೆಗೆ ವಾಹನವನ್ನು ಬೆನ್ನಟ್ಟಿ, ಕೊನೆಗೆ …

Read More »

ರಸ್ತೆಗಳ ಅಭಿವೃದ್ಧಿಗೆ ಪಿಎಂಜಿಎಸ್ವೈ ದಿಂದ 7.88 ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಬಾಲಚಂದ್ರ ಜಾರಕಿಹೊಳಿ

ರಸ್ತೆಗಳ ಅಭಿವೃದ್ಧಿಗೆ ಪಿಎಂಜಿಎಸ್ವೈ ದಿಂದ 7.88 ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಪ್ರಧಾನಮಂತ್ರಿ ಗ್ರಾಮೀಣ ಸಡಕ ಯೋಜನೆ ಅಡಿಯಲ್ಲಿ ಅರಭಾವಿ ಕ್ಷೇತ್ರದ ಮೂರು ಹೊಸ ರಸ್ತೆ ಕಾಮಗಾರಿಗಳಿಗಾಗಿ 7.88 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದ್ದಾರೆ. ಈ ಬಗ್ಗೆ ಶುಕ್ರವಾರದಂದು ಮಾಧ್ಯಮಗಳಿಗೆ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಶೀಘ್ರದಲ್ಲಿಯೇ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು …

Read More »

ಮಬನೂರ ಗ್ರಾಮದೇವತೆ ಜಾತ್ರೆ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ

ಮಬನೂರ ಗ್ರಾಮದೇವತೆ ಜಾತ್ರೆ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ. ಸವದತ್ತಿ : ತಾಲೂಕಿನ ಮಬನೂರ ಗ್ರಾಮದೇವತೆ ಜಾತ್ರೆ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿಯಾಗಿ ದೇವಿ ಆಶೀರ್ವಾದ ಪಡೆದರು.   ನಂತರ ಊರಿನ ಹಿರಿಯರು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು.

Read More »

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಡವಟ್ಟಾಗಿದ್ದು ವಿದ್ಯಾರ್ಥಿಯೊಬ್ಬನಿಗೆ 100ಕ್ಕೆ 111 ಅಂಕವನ್ನು ನೀಡಿ ಪಾಸ್‌ ಮಾಡಲಾಗಿದೆ. ಹಿಂದಿ  ವಿಷಯದಲ್ಲಿ ವಿದ್ಯಾರ್ಥಿಗೆ 100 ಅಂಕಗಳಿಗೆ 111 ಅಂಕ ನೀಡಲಾಗಿದೆ. ಅಂಕಪಟ್ಟಿಯಲ್ಲಿರುವ ನೋಂದಣಿ ಸಂಖ್ಯೆಯನ್ನು ಹಾಕಿ ಫಲಿತಾಂಶವನ್ನು ಪಬ್ಲಿಕ್‌ ಟಿವಿ ಪರಿಶೀಲಿಸಿದ್ದು ಈಗಲೂ ವೆಬ್‌ಸೈಟ್‌ನಲ್ಲಿ 111 ಅಂಕವನ್ನೇ ತೋರಿಸುತ್ತಿದೆ. ಹಿಂದಿ ವಿಷಯದಲ್ಲಿ ಥಿಯರಿಯಲ್ಲಿ ವಿದ್ಯಾರ್ಥಿಗೆ 94 ಅಂಕ ಬಂದಿದ್ದರೆ ಕಾಲೇಜು 17 ಆಂತರಿಕ ಅಂಕಗಳನ್ನು ನೀಡಿದೆ. ಇಲ್ಲಿ 80 ಅಂಕಗಳಿಗೆ 94 ಅಂಕ …

Read More »

ತೀಯ ಪಿಯುಸಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ 2ನೇ ರ್ಯಾಂಕ್

ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಂಕಿತ್ ಭೀಮಪ್ಪ ಕಾರತಗಿ ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ 2ನೇ ರ್ಯಾಂಕ್ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾನೆ.‌ ಮೂಲತಃ ಗೋಕಾಕ್ ತಾಲ್ಲೂಕಿನ ರಾಜಾಪುರ ಗ್ರಾಮದ ಅಂಕಿತ್ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ಮತ್ತು ಕನ್ನಡ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಗಳಿಸಿದರೆ, ಇಂಗ್ಲೀಷ ನಲ್ಲಿ ಮಾತ್ರ 98 …

Read More »

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ ಎಸ್‌ಎಸ್‌ಎ ಪಿಯು ಕಾಲೇಜು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ತನ್ನ ಶೈಕ್ಷಣಿಕ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ವಿದ್ಯಾರ್ಥಿಗಳ ಈ ಶ್ರೇಷ್ಠ ಸಾಧನೆ ಕಾಲೇಜಿಗೆ ಹೆಮ್ಮೆ ತಂದಿದೆ. ಈ ಫಲಿತಾಂಶದಲ್ಲಿ ಕು. ಸೋಹಾ ಶೇಖ್ ಅವರು 600ರಲ್ಲಿ 593 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಕು. ಶ್ರಾವಣಿ ಭಂಡಾರಿ …

Read More »

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಒಕ್ಕುಂದ ಗ್ರಾಮದ ವಿದ್ಯಾರ್ಥಿನಿ ಜ್ಯೋತಿ ಮಲ್ಲನಗೌಡ ಪಾಟೀಲ 600ಕ್ಕೆ 586 ಅಂಕ ಗಳಿಸಿ, ಅತ್ಯುತ್ತಮ ಸಾಧನೆಗೈದಿದ್ದಾಳೆ. ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಗಿರುವ ಜ್ಯೋತಿ ಪಾಟೀಲ, ಕನ್ನಡ 100, ಇಂಗ್ಲೀಷ 98, ಭೌತಶಾಸ್ತ್ರ …

Read More »

ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಯಾದವಾಡ ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ 16 ಲಕ್ಷ ರೂ. ಮತ್ತು ಕುಲಗೋಡ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ 10 ಲಕ್ಷ ರೂಪಾಯಿ ದೇಣಿಗೆ*

*ಡಾಲ್ಮಿಯಾ ಸಿಮೆಂಟ್ ಭಾರತ ಲಿ.., ಸಮಾಜಮುಖಿ ಕಾರ್ಯಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಫೀದಾ* *ಮೂಡಲಗಿ*- ಸಿಮೆಂಟ್ ವಲಯದಲ್ಲಿ ಹೆಸರುವಾಸಿಯಾಗಿರುವ ಡಾಲ್ಮಿಯಾ ಸಿಮೆಂಟ್ ಭಾರತ ಲಿ.., (ಡಿಸಿಬಿಎಲ್) ಯಾದವಾಡ ಯೂನಿಟ್ ಈ ಭಾಗದ ರೈತರು ಮತ್ತು ಸಾರ್ವಜನಿಕರ ಹಿತಕ್ಕೆ ಅನುಗುಣವಾಗಿ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯವಾಗಿದೆ. ಯಾದವಾಡ ಮತ್ತು ಕುಲಗೋಡದಲ್ಲಿ ನಿರ್ಮಾಣವಾಗುತ್ತಿರುವ ಬಸವೇಶ್ವರ ಪುತ್ಥಳಿ ಹಾಗೂ ಅಂಬೇಡ್ಕರ್ ಪ್ರತಿಮೆಗೆ ಒಟ್ಟು 26 ಲಕ್ಷ ರೂಪಾಯಿಗಳನ್ನು ದೇಣಿಗೆಯನ್ನಾಗಿ ನೀಡುತ್ತಿರುವುದು ಸಂತಸವನ್ನುಂಟು ಮಾಡಿದೆ ಎಂದು …

Read More »

ಪ್ರತಿಯೊಂದು ಕೆಲಸ ಮಾಡಲು ಪೋಲಿಸರಿಗೆ ಸಾರ್ವಜನಿಕರ ಸಹಕಾರಬೇಕು

ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಗೋಕಾಕ ಉಪ ವಿಭಾಗದಲ್ಲಿ ಸುಮಾರು 5 ವರ್ಷಗಳ ಹಿಂದಿನಿಂದ ಕಳೆದುಹೋದ ಮೊಬೈಲಗಳನ್ನು,ಕಳ್ಳತನವಾಗಿದ್ದ ಪಂಪಸೇಟ್ ಮತ್ತು ಆಭರಣಗಳನ್ನು ಪತ್ತೆ ಹಚ್ಚಿ ಬೆಳಗಾವಿ ಎಸ್, ಪಿ, ಕೆ.ರಾಮರಾಜನ್ ಇವರು ವಾರಸುದಾರರಿಗೆ ಮರಳಿ ಹಸ್ತಾಂತರಿಸಿದರು. ನಂತರ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬೆಳಗಾವಿ ಎಸ್, ಪಿ ಕೆ ರಾಮರಾಜನ್ ಇವರು ಪ್ರತಿಯೊಂದು ಕೆಲಸಗಳನ್ನು ಪೋಲಿಸ್ ಇಲಾಖೆಯವರು ಮಾಡಬೇಕಾದರೆ ಅದಕ್ಕೆ ಸಾರ್ವಜನಿಕರ ಸಹಕಾರ ಅವಶ್ಯಬೇಕೆಂದು ಮಾದ್ಯಮದ ಮೂಲಕ …

Read More »

ಸವದಿ ಬಿಜೆಪಿ ಬರಲು ಬಿಡಲ್ಲ ; ಬಂದರೂ ನಾವೇನಂತ ತೋರಿಸುತ್ತೇವೆ – ಗುಡುಗಿದ ರಮೇಶ್‌ ಜಾರಕಿಹೊಳಿ

  ಅಥಣಿ : ಬಿಜೆಪಿ ತೊರೆದು ಕಾಂಗ್ರೆಸ್ ನಿಂದ ಶಾಸಕರಾದ ಲಕ್ಷ್ಮಣ ಸವದಿ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಮರಳಿ ಬರುವುದಿಲ್ಲ, ಒಂದು ವೇಳೆ ಬಿಜೆಪಿಗೆ ಬಂದರೆ ನಾವು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಮಂಗಳವಾರ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕ ಲಕ್ಷ್ಮಣ ಸವದಿ ಅವರು ಪಕ್ಷವನ್ನು ಬಿಟ್ಟು ಬಿಜೆಪಿ ನಾಯಕರ ಬಗ್ಗೆ ಮತ್ತು ಮತಕ್ಷೇತ್ರದ ಜನರಿಗೆ …

Read More »