Breaking News

ರಾಜ್ಯ

ಬಿಸಿಸಿಐ ಜತೆಗಿನ ಜಟಾಪಟಿ ಕೊಹ್ಲಿ ಟೆಸ್ಟ್ ನಾಯಕತ್ವಕ್ಕೆ ಮುಳುವಾಯಿತೇ?

ನವದೆಹಲಿ: ದಕ್ಷಿಣ ಆಫ್ರಿಕಾ ಪ್ರವಾಸದ ಮೊದಲ ಟೆಸ್ಟ್ ಗೆದ್ದರೂ, ಸರಣಿ ಗೆಲುವಿನ ಅಪೂರ್ವ ಅವಕಾಶ ಕೈಚೆಲ್ಲಿದ ಭಾರತ ತಂಡಕ್ಕೆ ಶನಿವಾರ ಸಂಜೆ ಮತ್ತೊಂದು ಆಘಾತ ಎದುರಾಯಿತು. ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವವನ್ನೂ ತ್ಯಜಿಸುವ ಮೂಲಕ ಕ್ರಿಕೆಟ್ ವಲಯದಲ್ಲಿ ಅಚ್ಚರಿ-ಆಘಾತ ಮೂಡಿಸಿದ್ದಾರೆ. ಟೆಸ್ಟ್ ನಾಯಕರಾಗಿ ಇನ್ನಷ್ಟು ಸಮಯ ಮುಂದುವರಿಯುವ ಒಲವು ಹೊಂದಿದ್ದ 33 ವರ್ಷದ ಕೊಹ್ಲಿ ಅವರ ಈ ದಿಢೀರ್ ನಿರ್ಧಾರದ ಹಿಂದಿನ ಕಾರಣ ಏನಿರಬಹುದು ಎಂಬ ಗೊಂದಲ ಅವರ ಅಭಿಮಾನಿಗಳಲ್ಲಿ …

Read More »

ಸರ್ಕಾರಿ ಶಾಲೆಯಲ್ಲಿ ಕಲಿತು ಸತತ ಮೂರು ಹುದ್ದೆಗೆ ಆಯ್ಕೆಯಾಗುವ ಮೂಲಕ ಖಾಸಗಿ ಶಾಲೆಗಳಿಗೆ ಮಾದರಿಯಾದ ಅಲಖನೂರ ಗ್ರಾಮದ ರೈತನ ಮಗಳು ಮಂಜುಳಾ ನಿಲಜಗಿ

ಸರ್ಕಾರಿ ಶಾಲೆಯಲ್ಲಿ ಕಲಿತು ಸತತ ಮೂರು ಹುದ್ದೆಗೆ ಆಯ್ಕೆಯಾಗುವ ಮೂಲಕ ಖಾಸಗಿ ಶಾಲೆಗಳಿಗೆ ಮಾದರಿಯಾದ ಅಲಖನೂರ ಗ್ರಾಮದ ರೈತನ ಮಗಳು ಮಂಜುಳಾ ನಿಲಜಗಿ   ಹೌದು ರಾಯಬಾಗ ತಾಲೂಕಿನ ಅಲಖನೂರ ಸದಾಶಿವ ನಗರದ ಒಬ್ಬ ಯುವತಿ ತಂದೆ ತಾಯಿ ಅನಕ್ಷರಸ್ಥರಿದ್ದರು ಶಿಕ್ಷಕರ ಹಾಗೂ ತಂದೆತಾಯಿಗಳ ಮಾರ್ಗದರ್ಶನದಲ್ಲಿ ಡಿಆರಎಫ, ಆರಎಫಓ ಹಾಗೂ ಎಸಿಎಫ್ ಹೀಗೆ ತರಬೇತಿ ಮುಗಿಸುವ ಮುನ್ನ ಒಂದರಮೇಲೊಂದು ಸತತ ಮೂರು ಉನ್ನತ ಹುದ್ದೆಗಳಿಗೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾಳೆ. …

Read More »

ಸಿಎಂ ಜೊತೆ ಚರ್ಚಿಸಿ ಹಾಲಿನ ದರ ಏರಿಕೆ, ನಿರ್ಧಾರ: ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ‘ನಂದಿನಿ’ ಹಾಲಿನ ದರ ಏರಿಕೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು’ ಎಂದು ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಕೆಎಂಎಫ್ 2020-21ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ‘ಹಾಲಿನ ದರ ಪ್ರತಿ ಲೀಟರ್‌ಗೆ ₹ 3 ಹೆಚ್ಚಿಸಲು ಎಲ್ಲ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಕೋರಿದ್ದಾರೆ’ ಎಂದು ತಿಳಿಸಿದರು. ‘ಹೆಚ್ಚಿಸಿದರೆ ಲೀಟರ್ ಹಾಲಿಗೆ ಈಗಿರುವ ₹ 37ರಿಂದ …

Read More »

ಪೊಲೀಸರ ಸೂಚನೆ ಕಡೆಗಣಿಸಿ ಭಕ್ತರ ಪಾದಯಾತ್ರೆ

ಇಳಕಲ್‍: ಬಾದಾಮಿಯ ಬನಶಂಕರಿ ದೇವಿ ಜಾತ್ರೆಗೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ನೂರಾರು ಭಕ್ತರನ್ನು ತಡೆಯಲು ಶನಿವಾರ ಪೊಲೀಸರು ಇಡೀ ದಿನ ಕಷ್ಟಪಟ್ಟರು. ಪ್ರತಿವರ್ಷ ಇಳಕಲ್‍ದಿಂದ 10ಸಾವಿರಕ್ಕೂ ಅಧಿಕ ಭಕ್ತರು ಬನಶಂಕರಿ ದರ್ಶನಕ್ಕೆ ಹೋಗುತ್ತಿದ್ದರು. ಈಗ ಕೋವಿಡ್‍ ಕಾರಣ ಪಾದಯಾತ್ರೆಗೆ ನಿರ್ಬಂಧ ಹೇರಿದೆ. ಪೊಲೀಸರು ತಡೆದರೂ ಹೊಲ, ಕಾಲುದಾರಿ ಮೂಲಕ ಸಾಗುತ್ತಿದ್ದುದು ಕಂಡುಬಂದಿತು. ಅಲ್ಲಿಯೂ ತಡೆಯುವ ಪೊಲೀಸರ ಯತ್ನ ಫಲನೀಡಲಿಲ್ಲ. 21ರವರೆಗೆ ಶಾಲೆಗೆ ರಜೆ ಕಾರವಾರ ನಗರ, ಹೊನ್ನಾವರ ‍ಪಟ್ಟಣದ ಪ್ರಾಥಮಿಕ ಶಾಲೆಗಳಿಗೆ …

Read More »

ಮಾಸ್ಕ್ ಹಾಕದ ಯುವಕನನ್ನು ಕೊರಳಪಟ್ಟಿ ಹಿಡಿದು ಎಳೆದೊಯ್ದ ಪೊಲೀಸ್

ಹುಬ್ಬಳ್ಳಿ/ಧಾರವಾಡ: ಕೊರೊನಾ ಪ್ರಕರಣಗಳು ವಿಪರೀತ ಹೆಚ್ಚಳವಾಗುತ್ತಿರುವ ಕಾರಣ ಸರ್ಕಾರ ವೀಕೆಂಡ್​ ಕರ್ಫ್ಯೂ ವಿಧಿಸಿದೆ. ಶನಿವಾರ ವೀಕೆಂಡ್​ ಕರ್ಫ್ಯೂ ಕಾರಣ ಎಲ್ಲೆಡೆಯೂ ಪೊಲೀಸ್ ಗಸ್ತು. ನಗರದಲ್ಲಿ ಯಾವುದೋ ಕಾರಣಕ್ಕೆ ಯುವಕನೊಬ್ಬ ಮಾಸ್ಕ್​ ಇಲ್ಲದೇ ಹೊರಬಂದು ಖಾಕಿ ಕೈಗೆ ಸಿಕ್ಕಿಬಿದ್ದು ಪಡಿಪಾಟಲು ಪಟ್ಟ ಘಟನೆ ನಡೆದಿದೆ. ಹಳೇಹುಬ್ಬಳ್ಳಿ ವ್ಯಾಪ್ತಿಯಲ್ಲಿ ಪೊಲೀಸರು ತಪಾಸಣೆ ಮಾಡುತ್ತಿರುವ ವೇಳೆ ಬೈಕ್​ ಸವಾರನೊಬ್ಬ ಮಾಸ್ಕ್​ ಇಲ್ಲದೇ ಬಂದಿದ್ದಾನೆ. ಇದನ್ನು ಕಂಡಿದ್ದೇ ತಡ ಮುಗಿಬಿದ್ದ ಪೊಲೀಸ್​ ಯುವಕನನ್ನು ಧರಧರನೇ ಎಳೆದುಕೊಂಡು ಹೋಗಿದ್ದಾನೆ. …

Read More »

ಚಲಿಸುತ್ತಿದ್ದ ಬಸ್‌ ಡ್ರೈವರ್‌ಗೆ ಫಿಟ್ಸ್‌… ಈ ಮಹಿಳೆ ತೋರಿದ ಧೈರ್ಯಕ್ಕೆ ಎಲ್ಲ ಪ್ರಯಾಣಿಕರು ಸೇಫ್‌..!

ಪುಣೆ (ಮಹಾರಾಷ್ಟ್ರ): ಚಲಿಸುತ್ತಿದ್ದ ಮಿನಿ ಬಸ್‌ ಚಾಲಕನಿಗೆ ಫಿಟ್ಸ್‌ ಬಂದ ಹಿನ್ನೆಲೆಯಲ್ಲಿ ಕೂಡಲೇ ಆತನ ನೆರವಿಗೆ ಬಂದ ಮಹಿಳೆಯೊಬ್ಬರು ಬಸ್‌ ಅನ್ನು ಚಾಲನೆ ಮಾಡಿ ಮಕ್ಕಳು ಸಹಿತ ಅದರಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಬಸ್ಸಿನಲ್ಲಿದ್ದ ಮಕ್ಕಳು ಹಾಗೂ ಮಹಿಳೆಯರು ಪುಣೆ ಸಮೀಪದ ಶಿರೂರ್‌ನಲ್ಲಿ ಇರುವ ಕೃಷಿ ಪ್ರವಾಸಿ ಕೇಂದ್ರಕ್ಕೆ ಭೇಟಿ ನೀಡಿ ವಾಪಸ್‌ ಬರುತ್ತಿದ್ದಾಗ ಬಸ್‌ನ ಚಾಲಕನಿಗೆ ಮೂರ್ಛೆ ಬಂದು ಏಕಾಏಕಿ …

Read More »

ಒಂದು ಕಡೆ ಕುಡಿಯೋಕ್ಕೆ ನೀರಿಲ್ಲ ಇನ್ನೊಂದು ಕಡೆ ನೀರು ಚರಂಡಿ ಪಾಲು ಕ್ರಮ ಕೈಗೊಳ್ಳ ದಿದ್ದರೆ ಜನ ನಿಮ್ಮ ಕಚೇರಿಗೆ ನುಗ್ಗೋದು ಗ್ಯಾರಂಟಿ

ವಾಲಮನ್‍ಗಳ ಮುಷ್ಕರದಿಂದ ಬೆಳಗಾವಿ ನಗರದಾಧ್ಯಂತ ನೀರು ಪೂರೈಕೆ ಆಗದೇ ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಆದರೆ ಮತ್ತೊಂದೆಡೆ ಸ್ಮಾರ್ಟಸಿಟಿ ಅಧಿಕಾರಿಗಳ ಬೇಜವಾಬ್ದಾರಿಯಿಂದ ಕುಡಿಯುವ ನೀರಿನ ಪೈಪ್‍ಲೈನ್ ಒಡೆದು ಒಂದು ವಾರದಿಂದ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಹೌದು ಬೆಳಗಾವಿಯಲ್ಲಿ ಸಧ್ಯ ನೀರಿಗಾಗಿ ಹಾಹಾಕಾರ ಶುರುವಾಗಿದೆ. ವಾಲಮನ್‍ಗಳ ಧರಣಿಯಿಂದ ಜನ ನೀರಿಗಾಗಿ ಕೊಡಗಳನ್ನು ಹಿಡಿದುಕೊಂಡು ಬೀದಿ, ಬೀದಿ ಸುತ್ತುತಿದ್ದಾರೆ. ಆದರೆ ಇದೇ ನಗರದಲ್ಲಿ ಸಿವಿಲ್ ಆಸ್ಪತ್ರೆ ಮುಂಭಾಗದ ರಸ್ತೆಯ ಡಾ.ಭಾತೆ ಕ್ಲಿನಿಕ್ ಬಳಿ …

Read More »

ನಾಳಿಂದ ಮತ್ತ ಸಾಲಿ ಶುರು : ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ

ಸೋಮವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಎಲ್ಲಾ ಶಾಲೆಗಳು ಆರಂಭವಾಗುತ್ತವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ತಿಳಿಸಿದ್ದಾರೆ. ಹೌದು ಯಾವ ಶಾಲೆಯಲ್ಲಿ ಶೇ.10ಕ್ಕಿಂತ ಹೆಚ್ಚು ಕೊರೊನಾ ಕೇಸ್‍ಗಳು ಕಂಡು ಬರುತ್ತವೆಯೋ ಆ ಶಾಲೆಗಳಿಗೆ ಮಾತ್ರ ರಜೆ ನೀಡಲಾಗುವುದು. ಬೇರೆ ಶಾಲೆಗಳು ಎಂದಿನಂತೆ ನಡೆಯಲಿವೆ. ರಾಜ್ಯ ಸರ್ಕಾರದ ಆದೇಶದಂತೆ ಪೂರ್ಣ ತಾಲೂಕು, ಜಿಲ್ಲೆಗೆ ರಜೆ ಘೋಷಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು. ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಜ.11ರಿಂದ 18ವರೆಗೆ ಒಂದು …

Read More »

ಜನೇವರಿ 26 ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ರಾಜ್ಯದ ಸ್ತಬ್ಧಚಿತ್ರ

ನವದೆಹಲಿ-   ಕೊರೊನಾ ಪ್ರಕರಣಗಳು ದೇಶದಲ್ಲಿ ನಿರಂತರವಾಗಿ ಏರುಗತಿಯಲ್ಲಿ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜ.26ಕ್ಕೆ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಕೇವಲ 24,000 ಜನರು ಮಾತ್ರ ಪಾಲ್ಗೊಳ್ಳಲು ಅನುಮತಿ ನೀಡಲಾಗಿದೆ.   ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ.       …

Read More »

TRP ಲಿಸ್ಟ್​ ರಿಲೀಸ್​: ಟಾಪ್​ 5 ಲಿಸ್ಟ್​ನಲ್ಲಿರೋ ಕನ್ನಡದ ಧಾರಾವಾಹಿಗಳು ಯಾವುವು..?

ಧಾರಾವಾಹಿಯ ತಂಡದವರು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ಹೊಸ ವರ್ಷದ ಮೊದಲ ವಾರದ ಟಿಆರ್​ಪಿ ಲಿಸ್ಟ್​ ಹೊರ ಬಂದಿದ್ದು, ನಿಮ್ಮ ಕುತೂಹಲದ ಕಣ್ಗಳಿಗೆ ಉತ್ತರ ಇಲ್ಲಿದೇ. ಒಂದೊಳ್ಳೆಯ ಕಂಟೆಂಟ್​ನ್ನ ಜನರಿಗೆ ತಲುಪಿಸಲು ಸಾಕಷ್ಟು ಪರಿಶ್ರಮಪಡುವ ಧಾರಾವಾಹಿಗಳು ಏನೇ ಎಫರ್ಟ್​ ಹಾಕಿದ್ರು ಕೊನೆಯದಾಗಿ ಆ ಸೀರಿಯಲ್​ ಎಷ್ಟರಮಟ್ಟಿಗೆ ವೀಕ್ಷಕರು ಮನ ಗೆದ್ದಿದೆ ಅನ್ನೋದು ಇಂಪಾರ್ಟಂಟ್​. ಟಾಪ್​ 5 ಲಿಸ್ಟ್​ನಲ್ಲಿ ಯಾವೆಲ್ಲ ಸೀರಿಯಲ್​ಗಳು ಸ್ಥಾನ ಪಡೆದುಕೊಂಡಿವೆ ಎಂಬುದ್ರ ಬಗ್ಗೆ ಮಾಹಿತಿ ಇಲ್ಲಿದೇ ನೋಡಿ. ​ …

Read More »