Breaking News

ರಾಜ್ಯ

ಯಮಕನಮರಡಿ ಮತಕ್ಷೇತ್ರದ ಎಲ್ಲ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿನ ಕಸ ವಿಲೇವಾರಿ ವಾಹನಕ್ಕೆ ಚಾಲನೆ

ಯಮಕನಮರಡಿ: ಎಲ್ಲ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ಯಮಕರನಮಡಿ ಕ್ಷೇತ್ರವನ್ನು ರಾಜ್ಯದಲ್ಲಿ ಮಾದರಿಯನ್ನಾಗಿ ಮಾಡಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಕರೆ ನೀಡಿದರು.     ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ಹಮ್ಮಿಕೊಂಡಿದ್ದ ಯಮಕನಮರಡಿ ಮತಕ್ಷೇತ್ರದ ಎಲ್ಲ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿನ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.     ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ಸದಸ್ಯರು ಸ್ವಚ್ಛತೆ ಕಾರ್ಯಕ್ರಮ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದಾರೆ. …

Read More »

ಟಿಪ್ಪರ್-ಬೈಕ್ ಡಿಕ್ಕಿ: ಸ್ಥಳದಲ್ಲಿಯೇ ಅಂಬೇವಾಡಿ ಯುವಕ ದುರ್ಮರಣ

ಟಿಪ್ಪರ್ ಮತ್ತು ಬೈಕ್ ಮಧ್ಯ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ಬೆಳಗಾವಿಯ ಬಾಕ್ಸೈಟ್ ರೋಡ್‍ನಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ 10.30ರ ಸುಮಾರಿಗೆ ಟಿಪ್ಪರ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಅಂಬೇವಾಡಿಯ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಿಖಿಲ್ ಬಸವಂತ್ ಕಾಟ್ಕರ್(24) ಮೃತ ದುರ್ದೈವಿ. ಟಿಪ್ಪರ್ ಸಂಖ್ಯೆ ಕೆಎ 22ಬಿ 1389ರ ಚಾಲಕ ಬೈಕ್‍ಗೆ ಡಿಕ್ಕಿ ಹೊಡೆದು, ಅಲ್ಲಿಂದ ಪರಾರಿಯಾಗಿದ್ದಾನೆ. ಈ ಘಟನೆ ಸಂಬಂಧ ಗ್ರಾಮಾಂತರ …

Read More »

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೇರಿ ಐವರ ವಿರುದ್ಧ ಸರ್ಕಾರದ ಕಾರ್ಯದರ್ಶಿಗೆ ದೂರು

ಬೆಂಗಳೂರು, ಜ. 13: ಪೊಲೀಸ್ ‘ಸಿಂಗಂ’ ಎಂದು ಕರೆಸಿಕೊಳ್ಳುವ ರವಿ ಡಿ. ಚನ್ನಣ್ಣನವರ್ ಸೇರಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳು ಆರೋಪಿಗಳಿಂದ 50 ಲಕ್ಷ ರೂ. ವಸೂಲಿ ಮಾಡಿರುವ ಗಂಭೀರ ಅರೋಪ ಕೇಳಿ ಬಂದಿದೆ. ಈ ಕುರಿತು ಸಂತ್ರಸ್ತ ವ್ಯಕ್ತಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದ ದೂರನ್ನು ತನಿಖೆ ನಡೆಸುವಂತೆ ಒಳಾಡಳಿತ ಇಲಾಖೆಗೆ ಆದೇಶ ಮಾಡಲಾಗಿದೆ.   ಸದ್ಯ ಸಿಐಡಿಯಲ್ಲಿ ಎಸ್ಪಿಯಾಗಿರುವ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್, ಅಂದಿನ ಡಿವೈಎಸ್ಪಿ …

Read More »

ಪಾಸ್‌ಪೋರ್ಟ್ ಹೊಂದಿರುವವರು ಈಗ ವೀಸಾ ಇಲ್ಲದೆ ಪ್ರಪಂಚದ 60 ದೇಶಗಳಿಗೆ ಭೇಟಿ ನೀಡಬಹುದಾಗಿದೆ.

2022 ರಲ್ಲಿ ವಿಶ್ವದ ಅತ್ಯಂತ ಪ್ರಬಲ ಪಾಸ್‌ಪೋಟ್‌ಗಳ ಪೈಕಿ ಭಾರತದ ಶ್ರೇಯಾಂಕವು ಏಳು ಸ್ಥಾನಗಳಿಗೆ ಸುಧಾರಿಸಿ 83 ನೇ ಸ್ಥಾನಕ್ಕೆ ತಲುಪಿದೆ. ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರು ಈಗ ವೀಸಾ ಇಲ್ಲದೆ ಪ್ರಪಂಚದ 60 ದೇಶಗಳಿಗೆ ಭೇಟಿ ನೀಡಬಹುದಾಗಿದೆ. ಭಾರತವು 2022 ರಲ್ಲಿ ತನ್ನ ಪಾಸ್‌ಪೋರ್ಟ್ ಬಲವನ್ನು ಸುಧಾರಿಸಿಕೊಂಡಿದ್ದು, ಕಳೆದ ವರ್ಷದ 90 ನೇ ಸ್ಥಾನದಿಂದ ಏಳು ಸ್ಥಾನಗಳನ್ನು ಮೇಲೇರಿ ಈಗ 83 ನೇ ಸ್ಥಾನಕ್ಕೆ ತಲುಪಿದೆ. ಈಗ ಪೂರ್ವ ವೀಸಾ …

Read More »

ಐದೇ ದಿನಕ್ಕೆ ಮೊಟಕುಗೊಂಡ ಮೇಕೆದಾಟು ಪಾದಯಾತ್ರೆ

ರಾಮನಗರ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾದಯಾತ್ರೆಗೆ ಬ್ರೇಕ್ ಹಾಕಲು ಹೈಕಮಾಂಡ್ ಸೂಚಿಸಿದ ಬೆನ್ನಲ್ಲೇ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಲು ರಾಜ್ಯ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಹೈಕೋರ್ಟ್ ನೋಟೀಸ್, ರಾಜ್ಯ ಸರ್ಕಾರದ ಎಚ್ಚರಿಕೆ, ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆಯಲ್ಲಿ, ಕೊರೊನಾ ಸೋಂಕು ಕಡಿಮೆಯಾದ ಬಳಿಕ ಪಾದಯಾತ್ರೆಯನ್ನು ಮತ್ತೆ ಮುಂದುವರಿಸೋದು, …

Read More »

ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ   

ಗೋಕಾಕ:ನೂತನ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯವರು ಸಂಸ್ಥೆಯ ಚೇರಮನ ಲಖನ ಜಾರಕಿಹೊಳಿ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ನಿಮಿತ್ತ ಅವರನ್ನು ಗುರುವಾರದಂದು ಸತ್ಕರಿಸಿ ,ಗೌರವಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸದಾನಂದ ಕಲಾಲ, ಮುಖ್ಯೋಪಾಧ್ಯಾಯನಿ .ಸಿ.ಬಿ.ಪಾಗದ, ಶಿಕ್ಷಕ ಎಂ.ಸಿ ವಣ್ಣೂರ ಸೇರಿದಂತೆ ಅನೇಕರು ಇದ್ದರು.

Read More »

ಪುನೀತ್ ನಿವಾಸಕ್ಕೆ ಬೇಟಿ ನೀಡಿದ ಕಮಲ್ ಹಾಸನ.

ಬೆಂಗಳೂರು (ಜ.13): ಕನ್ನಡ ಚಿತ್ರರಂಗದ (Sandalwood) ಓನ್ ಆಯಂಡ್ ಓನ್ಲಿ ಯುವರತ್ನ, ಕರ್ನಾಟಕದ ರತ್ನ (Karnataka Rathna), ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಹೃದಯಾಘಾತದಿಂದ ನಮ್ಮನ್ನು ಆಗಲಿದ್ದಾರು. ಅಕ್ಟೋಬರ್ 29, 2021 ಇಡೀ ಭಾರತಕ್ಕೆ (India) ಇದು ಕರಾಳ ದಿನವಾಗಿತ್ತು. ಒಂದೊಂದು ನಿಮಿಷವೂ ಹೇಗಪ್ಪಾ ಕಳೆಯುವುದು ಎನ್ನುವ ಚಿಂತೆ ಕನ್ನಡಿಗರನ್ನು ಕಾಡಿತ್ತು. ಅಪ್ಪುಗೆ ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಾಂತ ಅಭಿಮಾನಿಗಳು ಮತ್ತು ಸ್ನೇಹಿತರಿದ್ದಾರೆ. ಈಗಲೂ ಅವರ ನಿವಾಸಕ್ಕೆ ಆಗಮಿಸಿ …

Read More »

3ನೇ ಡೋಸ್ ಪಡಿಯಲು ನೀವು ಅರ್ಹರೆ.

ಬೆಂಗಳೂರು(ಜ.13): ಮುನ್ನೆಚ್ಚರಿಕೆ ಡೋಸ್‌ (Booster Dose) ಪಡೆಯಲು ಅರ್ಹರಾಗಿರುವ ಬಗ್ಗೆ ಹಾಗೂ ಲಸಿಕೆ(Vaccine) ಪಡೆಯಲು ಎಷ್ಟು ದಿನ ಕಾಯಬೇಕು ಎಂಬ ಬಗ್ಗೆ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಪಡೆಯುವ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. selfregistration.cowin.gov.in/ ಈ ಕೊಂಡಿಗೆ ಹೋಗಿ ನೀವು ಮೊದಲೆರಡು ಡೋಸ್‌ ಲಸಿಕೆ ಪಡೆಯುವಾಗ ನೀಡಿದ್ದ ದೂರವಾಣಿ ಸಂಖ್ಯೆಯನ್ನು(Mobile Number) ನೀಡಿದರೆ ಮುನ್ನೆಚ್ಚರಿಕೆ ಡೋಸ್‌ ಪಡೆಯಲು ನೀವು ಅರ್ಹರೇ ಮತ್ತು ಲಸಿಕೆ ಪಡೆಯಲು ಇನ್ನೆಷ್ಟು ದಿನ ಕಾಯಬೇಕು ಎಂಬ ಮಾಹಿತಿ ಲಭಿಸುತ್ತದೆ. …

Read More »

ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಮನವಿ ಮಾಡಿಕೊಂಡಿದ್ದರು.

ಬೆಂಗಳೂರು(ಜ.13): ಹಲವು ವಿರೋಧಗಳ ನಂತರ ಹೈಕಮಾಂಡ್ ಸೂಚನೆಯಂತೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೈಗೊಂಡಿದ್ದ ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ, ಬದ್ಧ, ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಮನವಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ಸದ್ಯದ ಮಟ್ಟಿಗೆ ಹಿಂಪಡೆದಿದ್ದಾರೆ. ನಮಗೆ ಜನರ ಹಿತ ಮುಖ್ಯ . ನಮ್ಮ ಪಾದಯಾತ್ರೆಯಿಂದ ಕೊರೊನಾ ಉಲ್ಭಣ ಆಗಬಾರದು …

Read More »

ಬೆಳಗಾವಿ ಜಿಲ್ಲೆಯಲ್ಲಿ ಜ.17ರಿಂದ ಶಾಲೆ ಆರಂಭ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ: ಜಿಲ್ಲೆಯಾದ್ಯಂತ 1ರಿಂದ 9ನೇ ತರಗತಿಯವರೆಗಿನ ಶಾಲೆಗಳನ್ನು ಜ.17ರಿಂದ ಪುನರಾರಂಭಿಸುವಂತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಬುಧವಾರ ಆದೇಶ ಹೊರಡಿಸಿದ್ದಾರೆ. ‘ಜಿಲ್ಲೆಯಲ್ಲಿ ಕೊರೊನಾ ವೈರಾಣು ಹರಡುವಿಕೆ ತಡೆಯುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲ ಮಾಧ್ಯಮದ ಶಾಲೆಗಳನ್ನು ಜ.19ವರೆಗೆ ತೆರೆಯದಂತೆ ಆದೇಶಿಸಲಾಗಿತ್ತು. ಬುಧವಾರ ನಡೆದ ವಿಡಿಯೊ ಸಂವಾದದಲ್ಲಿ ಶಿಕ್ಷಣ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿ ನೀಡಿದ ನಿರ್ದೇಶನದ ಅನ್ವಯ ಆದೇಶವನ್ನು ಪರಿಷ್ಕರಿಸಲಾಗಿದೆ’ ಎಂದು ತಿಳಿಸಿದ್ದಾರೆ.  

Read More »