ಬೆಳಗಾವಿ: ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರು ಇಲ್ಲಿನ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರುಕ್ಮಿಣಿ ನಗರದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಗುರುವಾರ ಪರಿಶೀಲಿಸಿದರು. ಸಮುದಾಯ ಭವನ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮಂಜೂರಾದ ಮನೆಗಳು ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ನಿರ್ಮಿಸಲಾಗಿರುವ ಮನೆಗಳನ್ನು ಪರಿಶೀಲಿಸಿದರು. ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದರು. ವಸತಿ ಗೃಹಗಳ ನಿರ್ಮಾಣ ಹಾಗೂ ವಿವಿಧ ಕಾಮಗಾರಿಗಳ …
Read More »ಪಾಕಿಸ್ತಾನದಿಂದ 7 ಸಾವಿರ ನಾಗರಿಕರು ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಕೆ ! – ಕೇಂದ್ರ ಸರಕಾರದ ಮಾಹಿತಿ
ನವ ದೆಹಲಿ : 2016 ರಿಂದ 2020 ನೆಯ ಇಸವಿಯ ನಡುವೆ 4 ಸಾವಿರದ 177 ವಿದೇಶಿಯರಿಗೆ ಭಾರತೀಯ ಪೌರತ್ವ ನೀಡಲಾಗಿದ್ದು, 10 ಸಾವಿರದ 635 ಅರ್ಜಿಗಳು ಬಾಕಿ ಇವೆ. ಬಾಕಿ ಉಳಿದಿರುವ ಅರ್ಜಿಗಳ ಪೈಕಿ ಅತಿ ಹೆಚ್ಚು ಅಂದರೆ 7 ಸಾವಿರದ 306 ಅರ್ಜಿಗಳು ಪಾಕಿಸ್ತಾನಿ ಪ್ರಜೆಗಳಿಂದ ಬಂದಿದ್ದರೆ, 1 ಸಾವಿರದ 152 ಅರ್ಜಿಗಳು ಅಫ್ಘಾನಿಸ್ತಾನದಿಂದ ಬಂದಿವೆ ಎಂದು ಕೇಂದ್ರ ಗೃಹರಾಜ್ಯಸಚಿವ ನಿತ್ಯಾನಂದ ರಾಯ ಇವರು ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
Read More »ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ -ಕನ್ನಡ ಪರ ಸಂಘಟನೆಗಳು ಘೋಷಣೆ
ಬೆಳಗಾವಿ: ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿ ಎಂಇಎಸ್ ನಡೆಸುತ್ತಿರುವ ಪುಂಡಾಟವನ್ನ ಖಂಡಿಸಿ ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡಪರ ಸಂಘಟನೆಗಳು ಘೋಷಣೆ ಮಾಡಿವೆ. ನೈತಿಕ ಬೆಂಬಲ ಬೇಡ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ವಿವಿಧ ಕನ್ನಡಪರ ಸಂಘಟನೆಗಳು ಸಭೆ ನಡೆಸಿದ್ದವು. ಸಭೆ ಬಳಿಕ ವಾಟಾಳ್ ನಾಗರಾಜ್, ಸುದ್ದಿಗೋಷ್ಟಿ ನಡೆಸಿ ಬಂದ್ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕನ್ನಡಿಗರಿಗೆ ಅಪಮಾನ ಆಗಿದೆ. ಹಾಗಾಗಿ …
Read More »ಡಿ.25 ರಿಂದ ಡಿ.27 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಹಾಗೂ ಉಪಚುನಾವಣೆಗಳ ಹಿನ್ನಲೆಯಲ್ಲಿ ಡಿ.25 ರಿಂದ ಡಿ.27 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳ 6 ಗ್ರಾಮಪಂಚಾಯಿತಿಗಳಲ್ಲಿ ಜರುಗುವ ಸಾರ್ವತ್ರಿಕ ಚುನಾವಣೆ ಹಾಗೂ 9 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಜರುಗುವ ಉಪಚುನಾವಣೆಗೆ ಡಿಸೆಂಬರ್ 27 ರಂದು ಮತದಾನ ಜರುಗಲಿದೆ. ಆದ್ದರಿಂದ ಡಿ.25 ರ ಮದ್ಯರಾತ್ರಿ 11.59 ರಿಂದ ಡಿ. 27 ರ ಮದ್ಯರಾತ್ರಿ 11.59 ರವರೆಗೆ ಮತದಾನ ಜರುಗಲಿರುವ …
Read More »ಕಬೀರ್ ಖಾನ್ ನಿರ್ದೇಶನದ ’83’ ಸಿನಿಮಾ ಡಿಸೆಂಬರ್ 24 ರಂದು ತೆರೆಗೆ ಅಪ್ಪಳಿಸಲು ಸಖಲ ಸಿದ್ಧತೆ
ಕಬೀರ್ ಖಾನ್ ನಿರ್ದೇಶನದ ’83’ ಸಿನಿಮಾ ಡಿಸೆಂಬರ್ 24 ರಂದು ತೆರೆಗೆ ಅಪ್ಪಳಿಸಲು ಸಖಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಎಲ್ಲರಿಗೂ ತಿಳಿದಿರುವಂತೆ ’83’ ಸಿನಿಮಾ 1983 ರಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ವಿರುದ್ಧ ವರ್ಲ್ಡ್ ಕಪ್ ಗೆದ್ದ ಕಥೆ. ’83’ ಸಿನಿಮಾದಲ್ಲಿ ನಟ ರಣವೀರ್ ಸಿಂಗ್ ಅವರು ಕಪಿಲ್ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ಪಡುಕೋಣೆ ಒಂದು ಪಾತ್ರ ಮಾಡಿದ್ದು 83 ಸಿನಿಮಾಗೆ ಹಣ ಕೂಡ ಹಾಕಿದ್ದಾರೆ. ಈಗ …
Read More »ಸರ್ಕಾರಿ ಚಿಂತಾಮಣರಾವ್ ಶಾಲೆಯ ಶತಮಾನೋತ್ಸವ
ಬೆಳಗಾವಿ ;ಪಟವರ್ಧನ ಸಂಸ್ಥಾನದ ರಾಜಲಕ್ಷ್ಮೀ ರಾಜೆ ಪಟವರ್ಧನ ಅವರು ತಮ್ಮ ಆಸ್ತಿಯನ್ನು ಶಾಲೆಗೆ ದಾನ ನೀಡಿ ಇತಿಹಾಸದ ಭಾಗವಾಗಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸರ್ಕಾರಿ ಚಿಂತಾಮಣರಾವ್ ಶಾಲೆಯ ಶತಮಾನೋತ್ಸವ ಸವಿನೆನಪಿಗಾಗಿ ಸಭಾಭವನ ಉದ್ಘಾಟನೆ ಹಾಗು ಗುರುಸ್ಮರಣೆ ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನು ಅವರು ಹೇಳಿದರು. ಇತಿಹಾಸದ ಒಂದು ಭಾಗವಾಗಿರಬೇಕು. ಇಲ್ಲದಿದ್ದರೆ ಹೊಸ ಇತಿಹಾಸವನ್ನು ರಚನೆ ಮಾಡಿರಬೇಕು. . ಇಲ್ಲಿ ಈ ಶಾಲೆಯಲ್ಲಿ ಕಲಿತಿರುವ ಶಾಸಕ ಅಭಯ ಪಾಟೀಲರು ಇಷ್ಟೊಂದು …
Read More »ಕಿತ್ತೂರ ಪಟ್ಟಣ ಪಂಚಾಯತ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ಬಹಿರಂಗ ಪ್ರಚಾರ ಸಭೆ
ಕಿತ್ತೂರ ಪಟ್ಟಣ ಪಂಚಾಯತ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ಬಹಿರಂಗ ಪ್ರಚಾರ ಸಭೆ ಜರುಗಿತು. ಬೆಳಗಾವಿ ಗ್ರಾಮೀಣ ಶಾಸಕರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್, ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀ ವಿನಯ ನಾವಲಗಟ್ಟಿ, ಕೆಪಿಸಿಸಿ ಸಂಯೋಜಕರಾದ ಶ್ರೀ ಬಂಗಾರೇಶ ಹಿರೇಮಠ, ಬ್ಲಾಕ್ ಅಧ್ಯಕ್ಷರಾದ ಸಂಗನಗೌಡ ಪಾಟೀಲ, ಕಾಂಗ್ರೆಸ್ ಮುಖಂಡರಾದ ಶ್ರೀ ಶಂಕರ ಹೊಳಿ ಬಾಬಾಸಾಹೇಬ ಪಾಟೀಲ, ಹಬೀಬ ಶಿಲೇದಾರ, ಅರುಣಕುಮಾರ ಬಿಕ್ಕಣ್ಣವರ್, …
Read More »ಸ್ನೇಹಕ್ಕೆ ಬದ್ಧ, ಸಮರಕ್ಕೆ ಸಿದ್ಧ : ಎಂಇಎಸ್ ಪುಂಡರಿಗೆ ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ
ಬೆಳಗಾವಿ : ಸ್ನೇಹಕ್ಕೆ ಬದ್ಧ, ಸಮರಕ್ಕೆ ಸಿದ್ಧ ಎನ್ನುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂಇಎಸ್ ಪುಂಡರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, ‘ಸೂರ್ಯಚಂದ್ರರಿವವರೆಗೂ ಬೆಳಗಾವಿ ನಮ್ಮದೇ ಆಗಿರುತ್ತೆ. ಬೆಳಗಾವಿಯಲ್ಲಿ ಎಂದೆಂದಿಗೂ ಕನ್ನಡಿಗನೇ ಸಾರ್ವಭೌಮನಾಗಿರತ್ತಾನೆ. ಯಾಕಂದ್ರೆ, ಬೆಳಗಾವಿ ಕರ್ನಾಟಕದ ಮತ್ತೊಂದು ಶಕ್ತಿಕೇಂದ್ರ. ಹಾಗಾಗಿನೇ ಇಲ್ಲಿ ಸುವರ್ಣಸೌಧ ನಿರ್ಮಿಸಲಾಗಿದೆ’ ಎಂದರು. ಇನ್ನು ಈ ವೇಳೆ ಎಂಇಎಸ್ ಪುಂಡರಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ,’ …
Read More »ಎಂಇಎಸ್ ಪುಂಡಾಟ, ಸಂಘಟನೆ ನಿಷೇಧದ ಬಗ್ಗೆ ʼಸಿಎಂ ಬೊಮ್ಮಾಯಿʼ ಹೇಳಿದ್ದೇನು ಗೊತ್ತಾ? ಇಲ್ಲಿದೆ ಮಾಹಿತಿ..!
ಬೆಳಗಾವಿ : ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಮೇರೆ ಮೀರುತ್ತಿದ್ದು, ಸಂಘಟನೆ ನಿಷೇಧಿಸುವಂತೆ ಕನ್ನಡ ಸಂಘಟನೆಗಳು ಸೇರಿ ಹಲವು ಪಕ್ಷಗಳು ಸರ್ಕಾರವನ್ನ ಒತ್ತಾಯಿಸಿವೆ. ಇನ್ನು ಅನೇಕ ಕನ್ನಡ ಸಂಘಟನೆಗಳು, ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ, ಇದೇ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಘೋಷಿಸಿವೆ. ಸಧ್ಯ ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ್ದು, ಸ್ನೇಹಕ್ಕೆ ಬದ್ಧ, ಸಮರಕ್ಕೆ ಸಿದ್ಧ ಎನ್ನುವ ಮೂಲಕ ಎಂಇಎಸ್ ಪುಂಡರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ …
Read More »ಕಾವಿಧಾರಿಗಳಿಬ್ಬರ ಬೇಡಿಕೆ ಕೇಳಿ ಗೃಹ ಸಚಿವರೇ ತಬ್ಬಿಬ್ಬು! ಒಪ್ಪಲೂ ಆಗದೆ, ನಿರಾಕರಿಸಲೂ ಆಗದೆ ಪರದಾಡಿದ್ರು.
ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ದೌಡಾಯಿಸಿದ್ದ ಕಾವಿಧಾರಿಗಳಿಬ್ಬರ ಬೇಡಿಕೆ ಕೇಳಿ ಗೃಹ ಸಚಿವ ಆರಗ ಜ್ಞಾನೇಂದ್ರ ತಬ್ಬಿಬ್ಬಾದ ಪ್ರಸಂಗವಿದು. ಮಂಗಳವಾರ ಸುವರ್ಣ ವಿಧಾನಸೌಧದಲ್ಲಿ ಗೃಹ ಸಚಿವರ ಕೊಠಡಿಗೆ ಧಾವಿಸಿದ ಸ್ವಾಮೀಜಿಗಳಿಬ್ಬರು ಲಿಖಿತ ಮನವಿಯೊಂದನ್ನು ಸಲ್ಲಿಸಿ, ತಮ್ಮ ಕಾರುಗಳಿಗೆ ಸೈರನ್ ಬೇಕೆಂಬ ಬೇಡಿಕೆಯಿಟ್ಟರು ಎಂದು ಮೂಲಗಳು ತಿಳಿಸಿವೆ. ಸ್ವಾಮೀಜಿಗಳಿಬ್ಬರ ಬೇಡಿಕೆ ಕೇಳಿ ಅಚ್ಚರಿಗೊಂಡ ಸಚಿವರು, ನನ್ನ ಕಾರಿಗೇ ಸೈರನ್ ಇಲ್ಲ. ನಿಮ್ಮ ಕಾರರಿಗೆ ಏಕೆ ಬೇಕು ಎಂದು ಪ್ರಶ್ನಿಸಿದರು ಎನ್ನಲಾಗಿದೆ. ಮಾರ್ಗಮಧ್ಯೆ ಸಂಚಾರ ದಟ್ಟಣೆಯಿಂದ …
Read More »
Laxmi News 24×7