ಗದಗ: ಲಕ್ಕುಂಡಿಯಲ್ಲಿ (Lakkundi) ನಿಧಿ ಸಿಕ್ಕ ಗ್ರಾಮದಲ್ಲಿ ಕುಟುಂಬವೊಂದು ನಾಲ್ಕು ಶತಮಾನಗಳಷ್ಟು ಹಳೆಯದಾದ ಈಶ್ವರನ ದೇವಾಲಯದೊಳಗೆ (Temple) ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಹೌದು, ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಈ ಮನೆಯಲ್ಲಿ ಸುಮಾರು 5-6 ಮಂದಿ ವಾಸ ಮಾಡುತ್ತಿದ್ದಾರೆ. ದೇವಸ್ಥಾನದ ಹೊರಭಾಗದಲ್ಲಿ ಮನೆಯಿದೆ. ಅದರೊಳಗೆ ಈ ಐತಿಹಾಸಿಕ ದೇವಾಲಯವಿದೆ. ಈ ದೇವಾಲಯದೊಳಗೆ ನಾಲ್ಕನೇ …
Read More »ವಿಜಯಪುರದಲ್ಲಿ ಟ್ರ್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ
ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು ಪತ್ತೆಯಾಗಿದೆ. ಪತ್ತೆಯಾದ ರಣಹದ್ದಿಗೆ ಟ್ರ್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ವಸ್ತುವನ್ನು ಅಳವಡಿಸಲಾಗಿದೆ. ಜೊತೆಗೆ ಅದರ ಕಾಲಿನಲ್ಲಿ ಗುರುತಿನ ಸಂಖ್ಯೆಯ ಟ್ಯಾಗ್ ಇರುವುದು ಕಂಡುಬಂದಿದೆ. ರಣಹದ್ದು ಕಂಡ ಸ್ಥಳೀಯರು 112ಗೆ ಕರೆ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ರಣಹದ್ದನ್ನು ವಶಕ್ಕೆ ಪಡೆದು, ಝಳಕಿ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ. ನಂತರ ಠಾಣೆಗೆ ಅರಣ್ಯಾಧಿಕಾರಿಗಳು …
Read More »ಗ್ರಾಮದೇವತೆ ಜಾತ್ರೆಯ ನಿಮಿತ್ಯ ಕಾಯಿ ಪೂಜೆ,ಭಂಡಾರದಲ್ಲಿ ಮಿಂದೆದ್ದ ಭಕ್ತರು
ಗ್ರಾಮದೇವತೆ ಜಾತ್ರೆಯ ನಿಮಿತ್ಯ ಕಾಯಿ ಪೂಜೆ,ಭಂಡಾರದಲ್ಲಿ ಮಿಂದೆದ್ದ ಭಕ್ತರು ಗೋಕಾಕ ತಾಲೂಕಿನ ಕೊಣ್ಣೂರಲ್ಲಿರುವ ಗ್ರಾಮದೇವಿ (ದ್ಯಾಮಮ್ಮ) ಜಾತ್ರಾ ಮಹೋತ್ಸವ ಸಮಿತಿ ವತಿಯಿಂದ ಇದೆ ಪೆಬ್ರುವರಿ20 ರಿಂದ 25ರ ತನಕ ಜಾತ್ರೆಯ ಅಂಗವಾಗಿ ಇವತ್ತು ಮರಡಿಮಠದ ಶ್ರೀಗಳು ಆಶಿರ್ವಾದದೊಂದಿಗೆ ಡಿಸಿಸಿ ಬ್ಯಾಂಕ ನಿರ್ದೇಶಕ ಅಮರನಾಥ ಜಾರಾಕಿಹೋಳಿ ಮತ್ತು ಪಟ್ಣದ ಸರ್ವದರ್ಮದ ಹಿರಿಯರ ಹಾಗೂ ಯುವಕರ ಸಮ್ಮುಖದಲ್ಲಿ ಕಾಯಿ ಪೂಜೆ ನೇರವೆರಿಸಲಾಯಿತು. ಬೆಳಿಗ್ಗೆ 10 ಗಂಟೆಗೆ ದೇವಿಯ ಅರ್ಚಕರಾದ ಬಡಿಗೇರ ಮನೆತನದವರು ಹೊಮದಲ್ಲಿ …
Read More »–ಗೋಕಾಕ–ಯರಗಟ್ಟಿ ರಾಜ್ಯ ಹೆದ್ದಾರಿಯ ಲೋಳಸೂರ ಗ್ರಾಮದ ಸಮೀಪ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಿರುವ ನೂತನ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ
ಸಂಕೇಶ್ವರ–ಗೋಕಾಕ–ಯರಗಟ್ಟಿ ರಾಜ್ಯ ಹೆದ್ದಾರಿಯ ಲೋಳಸೂರ ಗ್ರಾಮದ ಸಮೀಪ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಿರುವ ನೂತನ ಸೇತುವೆ ಕಾಮಗಾರಿಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಯಿತು. ಲೋಕೋಪಯೋಗಿ ಇಲಾಖೆಯ ಸಚಿವರಾದ ಶ್ರೀ ಸತೀಶ ಜಾರಕಿಹೊಳಿಯವರ ವಿಶೇಷ ಆಸಕ್ತಿ ಹಾಗೂ ಪ್ರಯತ್ನದಿಂದ ಅಂದಾಜು ರೂ. 43.00 ಕೋಟಿ ವೆಚ್ಚದಲ್ಲಿ ಮಂಜೂರಾದ ಈ ಮಹತ್ವದ ಕಾಮಗಾರಿಯನ್ನು ಶಾಸಕರಾದ ಶ್ರೀ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಸೇರಿ ಇಂದು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಸುತ್ತಮುತ್ತಲಿನ …
Read More »ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ ಕಾಮಗಾರಿಗೆ ಶಾಸಕ ರಾಜು ಕಾಗೆ ಪೂಜೆ ನೆರವೇರಿಸಿದರು.
ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ ಕಾಮಗಾರಿಗೆ ಶಾಸಕ ರಾಜು ಕಾಗೆ ಪೂಜೆ ನೆರವೇರಿಸಿದರು. ಲಕ್ಷಾಂತರ ಭಕ್ತರ ಶ್ರದ್ಧೆ ಸ್ಥಾನವಾಗಿರುವ ಉಗಾರದ ಶ್ರೀ ಪದ್ಮಾವತಿ ಮಂದಿರದ ಸಮುದಾಯ ಭವನ ನಿರ್ಮಿಸಲು ಅಲ್ಪಸಂಖ್ಯಾತ ಇಲಾಖೆಯಿಂದ 50 ಲಕ್ಷ ಹಾಗೂ ಶಾಸಕರ ಅನುದಾನದ 15 ಲಕ್ಷ ರೂಪಾಯ ಹೀಗೆ 65 ಲಕ್ಷ ರೂಪಾಯ್ ಬಳಸಿ ಮಂದಿರದ ಅಂಗಳದಲ್ಲಿ ಆರ್ ಸಿ ಸಿ ಕಾಂಕ್ರೀಟ್ …
Read More »ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡಿದ್ದ ನಗರದ ಸೆಷನ್ಸ್ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದ್ದು, ಪ್ರತಿವಾದಿಗಳಾದ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರಿಗೆ ನೋಟಿಸ್ …
Read More »ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಸಚಿವ ಈಶ್ವರ ಖಂಡ್ರೆ ಅವಿರೋಧ ಆಯ್ಕೆ
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮಹಾಸಭಾದ ಕಚೇರಿಯಲ್ಲಿ ಇಂದು ನಡೆದ ಕಾರ್ಯಕಾರಣಿ ಸಭೆಯಲ್ಲಿ ತಗೆದುಕೊಂಡ ನಿರ್ಣಯದಂತೆ ಯಾವುದೇ ಚುನಾವಣೆ ಇಲ್ಲದೇ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಚಿವ ಈಶ್ವರ ಖಂಡ್ರೆಯವರನ್ನು ಆಯ್ಕೆ ಮಾಡಲು ಕಾರ್ಯಕಾರಣಿ ಸಭೆಯಲ್ಲಿ ಒಮ್ಮತದಿಂದ ನಿರ್ಣಯ ತಗೆದುಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷರಾದ ನಿವೃತ್ತ ಡಿಜಿಪಿ ಶಂಕರ …
Read More »ಎಸ್ಎಸ್ಎಲ್ಸಿ ಪರೀಕ್ಷೆ ಓದಿಗಾಗಿ ನಿರಂತರ ವಿದ್ಯುತ್ ಒದಗಿಸಿ: ಸಿಎಂಗೆ ಪತ್ರ ಬರೆದ ಹೊಯ್ಸಳ ಶೌರ್ಯ ಪ್ರಶಸ್ತಿ ವಿಜೇತ ವಿದ್ಯಾರ್ಥಿ
ಉಡುಪಿ: ಹೊಯ್ಸಳ ಶೌರ್ಯ ಪ್ರಶಸ್ತಿ ವಿಜೇತ, ಉಡುಪಿಯ ಮಾಸ್ಟರ್ ದೀಪೇಶ್ ದೀಪಕ್ ಶೆಣೈ, ಎಸ್ಎಸ್ಎಲ್ಸಿ ಪರೀಕ್ಷೆ ಸಂದರ್ಭ ನಿರಂತರ ವಿದ್ಯುತ್ ಸರಬರಾಜು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ದೀಪೇಶ್ ದೀಪಕ್ ಶೆಣೈ, ಉಡುಪಿಯ ಟಿ.ಎ. ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ನಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯಾಗಿದ್ದಾನೆ. ಕಳೆದ ವರ್ಷ ಈತನ ಧೈರ್ಯ ಮತ್ತು ಸಮಯಪ್ರಜ್ಞೆಗೆ ಕರ್ನಾಟಕ ಸರ್ಕಾರದಿಂದ ಅತ್ಯುನ್ನತ ಹೊಯ್ಸಳ ಶೌರ್ಯ ಪ್ರಶಸ್ತಿ ದೊರೆತಿದೆ. ಸದ್ಯ ತಮ್ಮ ಪ್ರದೇಶದಲ್ಲಿ …
Read More »ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಆರ್ ಪ್ರಶ್ನಿಸಿ, ಪ್ರಕರಣದ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ. ಪ್ರಕರಣದಲ್ಲಿ ತಮ್ಮ ವಿರುದ್ಧ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ಆರೋಪಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿದೆ. …
Read More »ದಂಪತಿ ಮಲಗಿದ್ದಲ್ಲೇ ಅನುಮಾನಾಸ್ಪದ ಸಾವು; ಮನೆ, ಮೈಮೇಲಿದ್ದ ಚಿನ್ನಾಭರಣ ಕಳವು
ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಪಟ್ಟಣದ ಭೂತನಗುಡಿ ನಿವಾಸಿಗಳಾದ ಚಂದ್ರಪ್ಪ(80) ಹಾಗೂ ಪತ್ನಿ ಜಯಮ್ಮ(70) ದಂಪತಿಗಳಿಬ್ಬರು ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಚಂದ್ರಪ್ಪ ಮನೆಯ ಬೆಡ್ ರೂಂನಲ್ಲಿ ಮಂಚದ ಮೇಲೆ ಹಾಗೂ ಜಯಮ್ಮ ಅವರು ಹಾಲ್ನ ಮಂಚದ ಮೇಲೆ ಮಲಗಿದ ಸ್ಥಿತಿಯಲ್ಲಿಯೇ ಸಾವನ್ನಪ್ಪಿದವರು. ಈ ದಂಪತಿ ಅನ್ಯೋನ್ಯವಾಗಿದ್ದರು, ಇಬ್ಬರು ಒಟ್ಟಿಗೆ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಕುರಿತು ಭದ್ರಾವತಿಯ ಹಳೇನಗರ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೃದ್ಧ ದಂಪತಿಗೆ ಮೂವರು …
Read More »
Laxmi News 24×7