Breaking News

ರಾಜ್ಯ

ವಿದ್ಯುತ್ ಕೊಡದಿದ್ದರೆ ಕ್ರಿಮಿನಾಶಕ ಸೇವಿಸಿ ಕಚೇರಿ ಎದುರು ಆತ್ಮಹತ್ಯೆ

ಸಿಂದಗಿ: ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಕೈಗೆ ಬಂದ ಬೆಳೆಗಳು ಒಣಗುತ್ತಿವೆ. ವಿದ್ಯುತ್ ನೀಡಿ ಇಲ್ಲವೆ, ಕ್ರೀಮಿನಾಶಕ ಸೇವಿಸಿ ಕಚೇರಿ ಎದುರು ಸಾಯುತ್ತೇವೆ ಎಂದು ತಾಲೂಕಿನ ಬ್ಯಾಕೋಡ, ಬನ್ನೆಟ್ಟಿ ಪಿ.ಎ. ಗ್ರಾಮದ ರೈತರು ಹೆಸ್ಕಾಂ ಕಚೇರಿಗೆ ಬೀಗ ಜಡಿದು, ಕೈಯಲ್ಲಿ ಕ್ರೀಮಿನಾಶಕ ಬಾಟಲ್ ಹಿಡಿದು ಗುರುವಾರ ಪಟ್ಟಣದ ಹೆಸ್ಕಾಂ ಉಪವಿಭಾಗ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪಟ್ಟಣದ ಸ್ವಾಮಿ ವಿವೇಕಾನಂದ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ ಬಸವೇಶ್ವರ ವೃತ್ತದ ಮಾರ್ಗವಾಗಿ …

Read More »

ಕೇಸರಿ ಕಂಡರೆ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ? ನನಗೆ ಸಮಾಜದ ಬಗ್ಗೆ ಕಾಳಜಿ ಇದೆ.

ಬೆಂಗಳೂರು: ಕೇಸರಿ ಕಂಡರೆ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ? ನನಗೆ ಸಮಾಜದ ಬಗ್ಗೆ ಕಾಳಜಿ ಇದೆ. ಸಂಘ ಪರಿವಾರದವರು ಅಶಾಂತಿ ನಿರ್ಮಾಣದ ಮೂಲಕ ಸಮಾಜ ಒಡೆಯುವ ಕೆಲಸ ಮಾಡ್ತಾರೆ ಎಂಬ ಭಯವಿದೆ. ಸೌಹಾರ್ದತೆಗೆ ಧಕ್ಕೆಯಾಗಾದ ಮನಸಿಗೆ ನೋವಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟ್ ಮಾಡಿರುವ ಅವರು, ಹಣ, ಅಧಿಕಾರದ ಆಸೆಗೆ ಕಾಂಗ್ರೆಸ್ ಗೆ ದ್ರೋಹ ಮಾಡಿ ಬಿಜೆಪಿ ಪಕ್ಷ ಸೇರಿ ಮಂತ್ರಿಯಾಗಿರುವ ಕೆ. ಸುಧಾಕರ್ ಅಧಿಕಾರದ …

Read More »

ಲಕ್ಷ್ಮಿ ಹೆಬ್ಬಾಳಕರ ಫಲಕಕ್ಕೆ ಸ್ಥಳೀಯರ ಪೂಜೆ!

ಬೆಳಗಾವಿ: ಇಲ್ಲಿನ ಸಹ್ಯಾದ್ರಿ ನಗರದ ಮಹಾಬಲೇಶ್ವರ ಉದ್ಯಾನದ ಅಭಿವೃದ್ಧಿ ಕಾಮಗಾರಿ ವಿವರವನ್ನು ಒಳಗೊಂಡ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಫೋಟೊ ಹೊಂದಿರುವ ಫಲಕಕ್ಕೆ ಸ್ಥಳೀಯರು ತೆಂಗಿನಕಾಯಿ ಒಡೆದು ಬುಧವಾರ ಪೂಜೆ ಸಲ್ಲಿಸಿದ್ದಾರೆ. ಗುತ್ತಿಗೆದಾರರು ಮತ್ತು ಅಧಿಕಾರಿಗಳು ಅಳವಡಿಸಿದ್ದ ಫಲಕದ ಮೇಲೆ ಮಂಗಳವಾರ ಬಿಜೆಪಿ ಗ್ರಾಮೀಣ ಮಂಡಳದ ಅಧ್ಯಕ್ಷ ಧನಂಜಯ ಜಾಧವ ನೇತೃತ್ವದಲ್ಲಿ ಆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬೇರೆಯದಾದ ದೊಡ್ಡ ಫಲಕ ಅಳವಡಿಸಿದ್ದರು. ಅದರಲ್ಲಿ ಪ್ರಧಾನಿ, ಸಂಸದರು ಮೊದಲಾದವರ …

Read More »

ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವಂತೆವಿವಿಧ ಹಳ್ಳಿಗಳ ಮುಖಂಡರು ಒತ್ತಾಯ

ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವಂತೆ ದಿ.ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಅವರನ್ನು ವಿವಿಧ ಹಳ್ಳಿಗಳ ಮುಖಂಡರು ಬುಧವಾರ ಒತ್ತಾಯಿಸಿದರು. ಸಂಸದೆ ಮಂಗಲಾ ಅಂಗಡಿ ಅವರ ಗೃಹ ಕಚೇರಿಯಲ್ಲಿ ಸಂಸದರೊಂದಿಗೆ ಅವರ ಪುತ್ರಿ ಶ್ರದ್ಧಾ ಅವರೊಂದಿಗೆ ಮಾತನಾಡಿದ ಮುಖಂಡರು ಕ್ಷೇತ್ರಕ್ಕೆ ಚುನಾವಣಾ ರಾಜಕಾರಣಕ್ಕೆ ಆಹ್ವಾನಿಸಿದರು. ‘ಸುರೇಶ ಅಂಗಡಿ ಅವರು ಇದ್ದಾಗ ಅವರನ್ನು ಬೆಂಬಲಿಸಿದ್ದೇವೆ. ಕ್ರಿಯಾಶೀಲರಾಗಿರುವ ನೀವು ಗ್ರಾಮೀಣ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಬೆಂಬಲಿಸುವುದಕ್ಕೆ ಸಿದ್ಧವಿದ್ದೇವೆ’ ಎಂದು …

Read More »

ಪೊಲೀಸರ ನಿದ್ದೆಗೆಡಿಸಿದೆ ‘ಯುವತಿಯ ಕೊಳೆತ ಕಾಲು’: ನೀರುಗಂಟಿಗಳಿಗೆ ತಪ್ಪದ ಪೀಕಲಾಟ

ರಾಮನಗರ: ಚನ್ನಪಟ್ಟಣದಲ್ಲಿ ಕುಡಿವ ನೀರಿನ ಓವರ್​ಹೆಡ್ ಟ್ಯಾಂಕ್​ನ ಕೊಳವೆಯಲ್ಲಿ ಮಹಿಳೆಯ ಕೊಳೆತ ಕಾಲು ಪತ್ತೆಯಾದ ಪ್ರಕರಣದ ಜಾಡು ಹಿಡಿಯುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಕೆಲವು ದಿನಗಳ ಹಿಂದೆ ಚನ್ನಪಟ್ಟಣದ ನ್ಯಾಯಾಲಯಗಳ ಸಂಕೀರ್ಣದ ಸಮೀಪವೇ ಇರುವ ಟ್ಯಾಂಕ್​ನ ಕೊಳವೆಯಲ್ಲಿ ಮನುಷ್ಯನ ಕಾಲು ಪತ್ತೆ ಆಗಿತ್ತು. ಈ ಪ್ರಕರಣ ಚನ್ನಪಟ್ಟಣದ ಜನತೆಯಲ್ಲಿ ಆತಂಕ ಉಂಟು ಮಾಡಿದ್ದು ಮಾತ್ರವಲ್ಲದೆ, ಪೊಲೀಸ್ ಇಲಾಖೆಗೆ ಸವಾಲಾಗಿದೆ. ಆದರೆ, ಇದರ ಜಾಡು ಹಿಡಿಯುವುದು ಸವಾಲಿನ ಕೆಲಸವಾಗಿದೆ. ಯುವತಿ ಕಾಲಿರಬಹುದೆಂಬ ಶಂಕೆ?: …

Read More »

ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾದ ‘ಕಿತ್ತೂರು ಕರ್ನಾಟಕ ‘ಘೊಷಣೆ ಕುರಿತು ಸಂಪುಟದಲ್ಲಿ ರ್ಚಚಿಸಿ ನಿರ್ಧಾರ : ಬೊಮ್ಮಾಯಿ ಭರವಸೆ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾದ ‘ಕಿತ್ತೂರು ಕರ್ನಾಟಕ ‘ಘೊಷಣೆ ಕುರಿತು ಸಂಪುಟದಲ್ಲಿ ರ್ಚಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈದರಾಬಾದ್-ಕರ್ನಾಟಕ ಭಾಗವನ್ನು ‘ಕಲ್ಯಾಣ ಕರ್ನಾಟಕ’ ಎಂದು ಘೊಷಣೆ ಮಾಡಿರುವಂತೆ ಬೆಳಗಾವಿ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೊಷಿಸುವ ಕುರಿತು ಸಚಿವ ಸಂಪುಟದಲ್ಲಿ ರ್ಚಚಿಸಲಾಗುವುದು. ಆ ಬಳಿಕ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು. ಅ.23ರಿಂದ …

Read More »

ಮಹರ್ಷಿ ವಾಲ್ಮೀಕಿ ಜಯಂತಿ ವೇಳೆ ಝಳಪಳಿಸಿದ ತಲ್ವಾರ್, ಮಚ್ಚು ಲಾಂಗ್..!

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಗೌಡಗೇರಾ ಗ್ರಾಮದಲ್ಲಿ ವಾಲ್ಮೀಕಿ ಜಯಂತಿ ಪ್ರಯುಕ್ತ ತಲ್ವಾರ್, ಮಚ್ಚು ಕೈಯಲ್ಲಿ ಹಿಡಿದು ಯುವಕರು ಕುಣಿದು ಕುಪ್ಪಳಿಸಿದ್ದಾರೆ. ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಡಿಜೆ ಮೆರವಣಿಗೆ ಆಯೋಜನೆ ಮಾಡಿರುವುದಲ್ಲದೆ ಶಸ್ತ್ರಾಸ್ತ್ರ ಬಳಕೆ ಪ್ರದರ್ಶನ ನಿಷೇಧ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ. ಮೆರವಣಿಗೆಯುದ್ದಕ್ಕೂ ತಲ್ವಾರ್ ಹಿಡಿದು ಯುವಕರು ಸ್ಟೆಪ್ ಹಾಕಿದ್ದಾರೆ. ಪೊಲೀಸ್ ಇಲಾಖೆಯ ಆದೇಶಕ್ಕಿಲ್ಲ ಕವಡೆಕಾಸಿನ ಕಿಮ್ನತ್ತು ಇಲ್ಲ ಎನ್ನುವಂತಹ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ. ಕೆಂಬಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

Read More »

70ನೇ ವಯಸ್ಸಲ್ಲಿ ಮಗುವನ್ನು ಹೆತ್ತಳಾ ಈ ತಾಯಿ! ಮುದ್ದು ಕಂದನ ಕಂಡು ಕುಣಿದುಕುಪ್ಪಳಿಸಿದ ದಂಪತಿ

ಗಾಂಧಿನಗರ (ಗುಜರಾತ್‌): ಕೆಲ ತಿಂಗಳ ಹಿಂದಷ್ಟೇ ಪಂಜಾಬ್‌ನ 70 ವರ್ಷದ ಆಸುಪಾಸಿನ ಮಹಿಳೆಯೊಬ್ಬರು ಮಗುವನ್ನು ಹೆತ್ತು ಭಾರಿ ಸುದ್ದಿಮಾಡಿದ್ದರು. ಇದೀಗ ಅದೇ ವಯಸ್ಸಿನ ಇನ್ನೋರ್ವ ಮಹಿಳೆ ಮೊದಲ ಕಂದನನ್ನು ಪಡೆದಿದ್ದಾರೆ. ಮುದ್ದು ಕಂದನನ್ನು ನೋಡಿ ಈ ದಂಪತಿ ಕುಣಿದು ಕುಪ್ಪಳಿಸಿದ್ದಾರೆ. ಗುಜರಾತ್‍ನ ಕಛ್‍ನ ಜೀವುಬೆನ್ ವಾಲಾಭಾಯಿ ರಬರಿ ಅವರು ಮಗುವನ್ನು ಹೆತ್ತವರು. ರಾಪರ್ ತಾಲ್ಲೂಕಿನ ಮೋರಾ ಗ್ರಾಮದ ನಿವಾಸಿಯಾಗಿರುವ ಈ ದಂಪತಿಗೆ ಮದುವೆಯಾಗಿ 45ನೇ ವಯಸ್ಸಿಗೆ ಈ ಮಗು ಜನಿಸಿದೆ. …

Read More »

ಬೆಳೆ ವಿಮೆ ಸೌಲಭ್ಯ : ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ

ದಾವಣಗೆರೆ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ ಜಾರಿಗೊಳಿಸಿದ್ದು, ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ ಮತ್ತು ಪಡೆಯದ ರೈತರು ನೋಂದಾಯಿಸಿಕೊಳ್ಳಬಹುದು ಎಂದು ಜಂಟಿಕೃಷಿ ನಿರ್ದೇಶಕರು ಸೂಚನೆ ನೀಡಿದ್ದಾರೆ. ಬೆಳೆಸಾಲ ಪಡೆದ ರೈತರಿಗೆ ಬೆಳೆಸಾಲ ಮಂಜೂರು ಮಾಡುವಾಗ, ಕಡ್ಡಾಯವಾಗಿ ಬೆಳೆವಿಮೆಗೆ ಒಳಪಡಿಸಲಾಗುವುದು, ಬೆಳೆ ಸಾಲ ಪಡೆಯದ ಇಚ್ಚೆಯುಳ್ಳ ರೈತರು ಅರ್ಜಿಯೊಂದಿಗೆ ಭೂಮಿ …

Read More »

ದೆಹಲಿ ಸರ್ಕಾರ ರೈತರಿಗೆ ಪ್ರತಿ ಹೆಕ್ಟೇರ್‌ಗೆ 50 ಸಾವಿರ ಪರಿಹಾರ ನೀಡಿದ-ಅರವಿಂದ ಕೇಜ್ರಿವಾಲ್

ಹೊಸದಿಲ್ಲಿ: ಅಕಾಲಿಕ ಮಳೆಗೆ ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್‌ಗೆ 50,000 ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಘೋಷಿಸಿದ್ದಾರೆ. ಪರಿಹಾರದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ದೆಹಲಿ ಸಿಎಂ ಹೇಳಿದರು. ಬೆಳೆ ಕಳೆದುಕೊಂಡ ರೈತರಿಗೆ ಪ್ರತಿ ಹೆಕ್ಟೇರ್‌ಗೆ 50 ಸಾವಿರ ಪರಿಹಾರ ನೀಡುವುದಾಗಿ ನಾನು ಆದೇಶ ಹೊರಡಿಸಿದ್ದೇನೆ ಎಂದು ಅವರು ಹೇಳಿದರು. ಕಂದಾಯ ಅಧಿಕಾರಿಗಳು ನಡೆಸಿದ ಸಮೀಕ್ಷೆಯ …

Read More »