ಕಲಘಟಗಿ:ತಾಲೂಕ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಿಸುವ ಹೆಸರನಲ್ಲಿ ಅನೇಕ ಮರಗಳ ಮಾರಣಹೋಮ ನಡೆದಿದೆ ವಿಷಯ ತಿಳಿದ ಪರಿಸರ ಪ್ರೇಮಿಗಳು ಮತ್ತು ಪಟ್ಟಣದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದಿದ್ದಾರೆ ಪಟ್ಟಣದ ಸರ್ಕಾರಿ ನೌಕರ ಭವನದ ಆವರಣದಲ್ಲಿರುವ 30 ರಿಂದ 50 ವರ್ಷದಿಂದ ಹೆಮ್ಮರವಾಗಿ ಬೆಳೆದು ಉತ್ತಮ ಗಾಳಿ, ಪರಿಸರ ನೀಡುವ ಮರಗಳಿಗೆ ಕೊಡಲಿ ಪೆಟ್ಟು ಹಾಕಿ ಕಡಿಯಲು ಹೊರಟಿರುವದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ ತಾಲ್ಲೂಕ ನೌಕರರ …
Read More »2ನೇ ಮದುವೆ ಕಾರಣಕ್ಕೆ ವಿಚ್ಛೇದಿತ ಪತ್ನಿಗೆ ಜೀವನಾಂಶ ತಪ್ಪಿಸುವಂತಿಲ್ಲ: ಹೈಕೋರ್ಟ್
ಬೆಂಗಳೂರು: “ಇಸ್ಲಾಮಿನಲ್ಲಿ ಮದುವೆ ಎಂಬುದು ಒಂದು ಕರಾರು ಆಗಿದೆ. ಹಾಗಂತ, ಎರಡನೇ ಪತ್ನಿ ಹಾಗೂ ಆಕೆಯಿಂದ ಹುಟ್ಟಿದ ಮಕ್ಕಳ ನಿರ್ವಹಣೆ ಮಾಡಬೇಕಿರುವ ಹಿನ್ನಲೆಯಲ್ಲಿ ವಿಚ್ಛೇದನ ನೀಡಿದ ಮೊದಲ ಪತ್ನಿಗೆ ಜೀವನಾಂಶ ನೀಡುವ ಹೊಣೆಗಾರಿಕೆಯಿಂದ ಪತಿ ತಪ್ಪಿಸಿಕೊಳ್ಳುವಂತಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡುವಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಭುವನೇಶ್ವರಿ ನಗರದ ಎಜಾಜುರ್ ರೆಹ್ಮಾನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಕೃಷ್ಣ ಎಸ್. …
Read More »ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ದಲಿತ ಮುಖಂಡ ಶ್ರೀನಾಥ್ ಪೂಜಾರಿ
ಸಿಂದಗಿಯಲ್ಲಿ ಪಾಕ್ ಧ್ವಜ ಹಾರಿಸಿದ ಆರೋಪಿಗಳಿಗೆ ಜಾಮೀನು ನೀಡಲು ಸಹಕರಿಸಿದ ಹಾಗೂ ನೂತನ ಕ್ರೀಡಾಂಗಣದಲ್ಲಿರುವ ಮಸೀದಿಯನ್ನು ಇಂದಿನ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ರಮೇಶ್ ಭೂಸನೂರರವರು ತೆರವುಗೊಳಿಸುವಾಗ ಇಂದಿನ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಮನಗೂಳಿಯವರು ಯಾವುದೇ ರೀತಿಯ ಪ್ರತಿಭಟನೆ ಮಾಡದೇ ಮೌನ ಸಮ್ಮತಿ ಸೂಚಿಸಿರುವುದು ಮನುವಾದಿ ಮನಸ್ಥಿತಿ ತೋರುತ್ತದೆ. ಪ್ರಸ್ತುತ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಮನಗೂಳಿ ಅವರಿಗೆ ಮುಸ್ಲಿಂ ಮತ ಕೇಳಲು ನಾಚಿಕೆ ಆಗುವುದಿಲ್ಲವೇ..? RSS ಗರಡಿಯಲ್ಲಿ …
Read More »ಅನ್ಯ ಭಾಷೆ ಬಳಸದೆ ನಾಲ್ಕು ನಿಮಿಷ ಕನ್ನಡದಲ್ಲಿ ಮಾತಾಡಿದ್ರೆ ಸಿಗುತ್ತೆ ನಗದು ಬಹುಮಾನ.!
ಬೆಂಗಳೂರು: ಒಂದೂ ಅನ್ಯ ಭಾಷೆಯ ಪದಗಳನ್ನು ಬಳಸದೇ ನಿರರ್ಗಳವಾಗಿ ಕನ್ನಡದಲ್ಲಿ ನಾಲ್ಕು ನಿಮಿಷಗಳ ಕಾಲ ಕನ್ನಡ ನಾಡು, ನುಡಿ, ಪರಂಪರೆಗೆ ಸಂಬಂಧಿಸಿದ ವಿಷಯಗಳ ಕುರಿತು ವಿಡಿಯೋ ಸೆಲ್ಸಿ ತಗೆದು ಕಳುಹಿಸಿದರೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದಾದ್ಯಂತ 66ನೇ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ. ಎಂದಿನಂತೆ ನವೆಂಬರ್ ಒಂದರಂದು ಮಾತ್ರ ರಾಜ್ಯೋತ್ಸವ ಆಚರಿಸದೇ, …
Read More »ಚುನಾವಣೆಯಲ್ಲಿ ನಾನು ಕಣಕ್ಕಿಳಿಯುತ್ತೇನೆ ಎಂದ ವಾಟಾಳ್ ನಾಗರಾಜ್
ಮೈಸೂರು: ಮುಂದಿನ ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು. ಮುಂಬರುವ ಪರಿಷತ್ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದರು. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಲು ನಡೆಯುವ ಚುನಾವಣೆಯಲ್ಲಿ ನಾನು ಕಣಕ್ಕಿಳಿಯುತ್ತೇನೆ. ಈ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳೇ ಮತದಾರರಾಗಿರುತ್ತಾರೆ. ಎರಡು ಮತ ಚಲಾವಣೆಗೆ ಅವಕಾಶವಿದೆ. ನನಗೊಂದು ಮತ ಕೊಡಿ ಉಳಿದೊಂದು …
Read More »ರಾಜ್ಯ ಸರ್ಕಾರ 9 ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ
ಬೆಂಗಳೂರು: ರಾಜ್ಯ ಸರ್ಕಾರ 9 ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಧರ್ಮೇಂದ್ರ ಕುಮಾರ್ ಮೀನಾ, ಪಾಟೀಲ್ ವಿನಾಯಕ ವಸಂತರಾವ್ ಸೇರಿದಂತೆ ಒಟ್ಟು 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದರ್ಮೇಂದ್ರ ಕುಮಾರ್ ಮೀನಾ-ಎಫ್ ಎಸ್ ಎಲ್ ನಿರ್ದೇಶಕ ಪಾಟೀಲ್ ವಿನಾಯಕ ವಸಂತರಾವ್ -ಬೆಂಗಳೂರು ಉತ್ತರ ವಿಭಾಗ ಎಸ್.ಸವಿತಾ – ಉತ್ತರ ವಿಭಾಗದ ಟ್ರಾಫಿಕ್ ಡಿಸಿಪಿ ನಿಕಮ್ ಪ್ರಕಾಶ್ ಅಮೃತ್ -ನಕ್ಸಲ್ ನಿಗ್ರಹ …
Read More »ಡಿಸಿಸಿ ಬ್ಯಾಂಕ್ ನಿಮ್ಮಪ್ಪನ ಮನೆ ಆಸ್ತಿನಾ?
ಚಿಕ್ಕಬಳ್ಳಾಪುರ: ಡಿಸಿಸಿ ಬ್ಯಾಂಕ್ ನಿಮ್ಮ ಅಪ್ಪನ ಅಸ್ತಿನಾ..? ಹೀಗಂತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷ ಆಗಿದೆ. ಈಗಲೂ ಕೆಲ ಸ್ವಾರ್ಥಿಗಳು ಡಿಸಿಸಿ ಬ್ಯಾಂಕ್ ಕೋಚಿಮುಲ್ ಕಪಿಮುಷ್ಠಿಯಲ್ಲಿ ಇಟ್ಕೊಂಡು ರಾಜಕಾರಣ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡ್ತಿದ್ದಾರೆ. ಇದಕ್ಕೆ ನಮ್ಮ ಸರ್ಕಾರ ಇರೋವರೆಗೂ ಅವಕಾಶ ಕೊಡೋದಿಲ್ಲ ಅಂತ ನೇರವಾಗಿ ಹೇಳ್ತೇನೆ ಅಂತ ಸವಾಲು ಹಾಕಿದರು …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಗೋಕಾಕ:ನಾಡಿನಾದ್ಯಂತ ವಾಲ್ಮೀಕಿ ಜಯಂತಿ ಆಚರಣೆ ನಡೀತಿದೆ ಇಂದು ಶ್ರೀ ಸಂತೋಷ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಇರುವ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೂಡ ಸಿಬ್ಬಂದಿ ವರ್ಗ ಹಾಗೂ ಸಾಹುಕಾರರು ಸೇರಿ ವಾಲ್ಮೀಕಿ ಜಯಂತಿ ಆಚರಣೆ ಯನ್ನ ಅತ್ಯಂತ ಸರಳ ರೀತಿಯಲ್ಲಿ ಮಾಡಲಾಯಿತು ಈ ಒಂದು ಸಂಧರ್ಭದಲ್ಲಿ ಕಾರ್ಖಾನೆಯ ಸಿಬ್ಬಂದಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರು …
Read More »ಡ್ರಗ್ಸ್ ಪ್ರಕರಣದಲ್ಲಿ ಶಾರೂಕ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಜಾ
ಮುಂಬೈ, ಅಕ್ಟೋಬರ್ 20: ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ NDPS ಕೋರ್ಟ್ ತಿರಸ್ಕರಿಸಿದೆ. ಆರ್ಯನ್ ಖಾನೆ ಜೊತೆಗೆ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಗಳನ್ನೂ ಕೋರ್ಟ್ ತಿರಸ್ಕರಿಸಿದೆ. “ಮುಂಬೈ NDPS ಕೋರ್ಟ್ ನೀಡಿದ ಆದೇಶ ಪ್ರತಿಗಾಗಿ ಅರ್ಜಿ ಸಲ್ಲಿಸಿದ್ದು, ಇಂದೇ ಹೈಕೋರ್ಟ್ ಮೊರೆ ಹೋಗಲಾಗುವುದು. ಒಂದು ವೇಳೆ ಇಂದು …
Read More »‘ಕರ್ನಾಟಕದಿಂದ ಗೋವಾಗೆ ಪ್ರತಿದಿನ 2 ಟನ್ ದನದ ಮಾಂಸ’
ಪಣಜಿ: ಕರ್ನಾಟಕದಿಂದ ಪ್ರತಿದಿನ 2,000 ಕೆಜಿಗೂ ಹೆಚ್ಚು ದನ ಮತ್ತು ಎಮ್ಮೆಯ ಮಾಂಸ ಗೋವಾಗೆ ಬರುತ್ತದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಹೇಳಿದ್ದಾರೆ. ಗೋವಾ ವಿಧಾನಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ. ‘ಕಳೆದ ಆರು ತಿಂಗಳಲ್ಲಿ ಕರ್ನಾಟಕದಿಂದ ಗೋವಾಗೆ 388 ಟನ್ಗಳಷ್ಟು ದನ ಮತ್ತು ಎಮ್ಮೆಯ ಮಾಂಸವನ್ನು ತರಿಸಿಕೊಳ್ಳಲಾಗಿದೆ. ಕರ್ನಾಟಕದಲ್ಲಿನ ವ್ಯಾಪಾರಿಗಳು ಪ್ರತಿದಿನ ಗೋವಾಗೆ ದನದ ಮಾಂಸ ಕಳುಹಿಸುತ್ತಾರೆ’ ಎಂದು ಅವರು ವಿಧಾನಸಭೆಗೆ …
Read More »
Laxmi News 24×7