Breaking News

ರಾಜ್ಯ

ಯುವತಿ ಆತ್ಮಹತ್ಯೆ ಪ್ರಕರಣ : ASI ಸೇರಿದಂತೆ 8 ಮಂದಿ ವಿರುದ್ದ FIR

ಮೈಸೂರು,ಅ.18- ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ವಂಚಿಸಿದ ಹಿನ್ನಲೆಯಲ್ಲಿ ಡೆತ್‍ನೋಟ್ ಬರೆದಿಟ್ಟು ಯುವತಿ ಸಾವಿಗೆ ಶರಣಾದ ಪ್ರಕರಣ ಸಂಬಂಧ ನಂಜನಗೂಡಿನ ಹುಲ್ಲಹಳ್ಳಿ ಠಾಣೆ ಎಎಸ್‍ಐ ಸೇರಿದಂತೆ 8 ಮಂದಿ ವಿರುದ್ದ ಎಫ್‍ಐಆರ್ ದಾಖಲಾಗಿದೆ. ಎಎಸ್‍ಐ ಎಂ.ಶಿವರಾಜು 8ನೇ ಆರೋಪಿಯಾಗಿದ್ದು ಇವರು ಕರ್ತವ್ಯ ನಿರ್ವಹಿಸುವ ಠಾಣೆಯಲ್ಲೇ ಎಫ್‍ಐಆರ್ ದಾಖಲಾಗಿದೆ. ಯುವತಿ ನ್ಯಾಯ ಕೇಳಿ ಬಂದಾಗ ಸೂಕ್ತವಾಗಿ ಸ್ಪಂದಿಸದೆ ಎಎಸ್‍ಐ ಶಿವರಾಜು ನಿರ್ಲಕ್ಷ್ಯ ವಹಿಸಿದ್ದಾರೆ ಹಾಗೂ ಆರೋಪಿಗಳ ಆಮಿಷಕ್ಕೆ ಬಲಿಯಾಗಿ ಯುವತಿ ನೀಡಿದ ದೂರು …

Read More »

ಕೃಷಿ ಕಾಯ್ದೆ ವಿರುದ್ಧ ಯುವ ರೈತನ ಒಂಟಿ ಹೋರಾಟ, ಸೈಕಲ್ ಮೇಲೆ ಊರೂರು ತಿರುಗಾಟ

ಕಳೆದ ಒಂದು ವರ್ಷದಿಂದ ನಿರಂತರವಾಗಿ ರೈತರ ಪ್ರತಿಭಟನೆಗಳು(Farmers Protest) ಮುಂದುವರಿದಿದೆ. ವಿರೋಧದ ನಡುವೆಯೂ ಕೆಲವರು ರೈತರೊಂದಿಗೆ ಪ್ರತಿಭಟನೆಗಳಲ್ಲಿ ಭಾಗಿಯಾಗಿ ಅವರಿಗೆ ಬೆಂಬಲ ನೀಡಿದರೆ, ಇನ್ನೂ ಕೆಲವರು ಅವರಿಗೆ ಪರೋಕ್ಷವಾಗಿ ಬೆಂಬಲಿಸುತ್ತಿದ್ದಾರೆ. ಇಲ್ಲೊಬ್ಬ ಯುವ ರೈತ ಅನ್ನದಾತರಿಗೆ ಬೆಂಬಲ ಸೂಚಿಸಲು ಕಾಶ್ಮೀರದಿಂದ(Kashmir) ಕನ್ಯಾಕುಮಾರಿಯವರೆಗೆ(Kanya Kumari) ಯಾತ್ರೆ ಹೊರಟಿದ್ದು, ಶನಿವಾರ ಕಾರವಾರಕ್ಕೆ ಭೇಟಿ ನೀಡಿದರು. ಯಾರಿವ ಈ ಯುವ ರೈತ? ಕೇಂದ್ರ ಸರ್ಕಾರ ತಂದಿರುವ ಕೃಷಿ ಮಸೂದೆ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ರೈತರು …

Read More »

ಸಿದ್ದರಾಮಯ್ಯ, ಎಚ್‌ಡಿಕೆಗೆ ಯಾರನ್ನು ಟೀಕಿಸುತ್ತಿದ್ದೇವೆ ಎಂಬ ಅರಿವಿಲ್ಲ: ಹೆಬ್ಬಾರ

ಶಿರಸಿ: ರಾಜಕೀಯವಾಗಿ ಹತಾಶರಾಗಿರುವ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಆರ್‌ಎಸ್‌ಎಸ್ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು. ನಗರದಲ್ಲಿ ಸೋಮವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ಅವರಿಬ್ಬರಿಗೆ ತಾವು ಯಾರನ್ನು ಟೀಕಿಸುತ್ತಿದ್ದೇವೆ ಎಂಬ ಅರಿವಿಲ್ಲ’ ಎಂದು ಲೇವಡಿ ಮಾಡಿದರು. ‘ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಪರಸ್ಪರ ಟೀಕಿಸಿಕೊಳ್ಳುತ್ತಾರೆ. ಒಮ್ಮೆಲೆ ಸಂಘ ಪರಿವಾರದ ಮೇಲೆ ಹರಿಹಾಯುತ್ತಾರೆ. ಇದು ಅವರಿಬ್ಬರೂ ಗೊಂದಲ್ಲಿದ್ದಾರೆ ಎಂಬುದನ್ನು ಸಾಬೀತುಪಡಿಸುತ್ತಿದೆ’ ಎಂದರು. ‘ವಿಜಯದಶಮಿ ಮುಗಿಯಲಿ ಎಂದು …

Read More »

ತಹಶೀಲ್ದಾರರ ಕಚೇರಿಯ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕೆಂದು ಮನವಿ: ಸತೀಶ ಜಾರಕಿಹೊಳಿ ಫೌಂಡೇಶನ್

ಗೋಕಾಕ :17-10-2021 ರಂದು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ದಿನಾಂಕ ಗೋಕಾಕ ತಹಶೀಲ್ದಾರರ ಕಚೇರಿಯ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೆವು, ಕಚೇರಿಯ ಒಳಗಡೆ ಮತ್ತು ಹೊರಗಡೆ ಬಹಳ ಕಸ ಮತ್ತು ಗುಟಕಾ ಪಾಕೇಟ ತಿಂದು ಉಗುಳಿದ ಗಲಿಜು ಇವನೆಲ್ಲಾ ಸ್ವಚ್ಛತೆಯನ್ನು ಮಾಡಿರುತ್ತೇವೆ. ಇನ್ನು ಮುಂದೆ ತಮ್ಮ ತಹಶೀಲ್ದಾರರ ಕಚೇರಿಯ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ. ಸ್ವಚ್ಛತೆಗೆ ತಾವು ಕೆಲವು ನಿಯಮಗಳನ್ನು ಕಚೇರಿಯ ಆವರಣದಲ್ಲಿ ಜಾರಿಗೆ ತರಬೇಕು. ಕಸದ ಡಬ್ಬಿ …

Read More »

ಹಾಸನ: ಕುಡಿದ ಅಮಲಿನಲ್ಲಿ ಬಾರ್ ಮುಂದೆ ನಿಂತಿದ್ದ ವ್ಯಕ್ತಿಯ ಮೇಲೆ ಕಾರು ಹತ್ತಿಸಿ ಹತ್ಯೆ

ಹಾಸನ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಕಾರು ಹತ್ತಿಸಿ ಓರ್ವನ ಹತ್ಯೆಗೆ ಕಾರಣವಾಗಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ಶಿವರ ಗ್ರಾಮದಲ್ಲಿ ಘಟನೆ ನಡೆದಿದೆ. ಎಂ. ಶಿವರ ಗ್ರಾಮದ ಬಾರ್ ಮುಂದೆ ನಿಂತಿದ್ದಾಗ ಹೊಂಗೇಹಳ್ಳಿಯ ನವೀನ್ ಎಂಬಾತನಿಂದ ಈ ಕುಕೃತ್ಯ ನಡೆದಿದೆ. ಬಾರ್ ಮುಂದೆ ನಿಂತಿದ್ದ ನಂದೀಶ್​, ಗಿರೀಶ್ ಮತ್ತಿರರ ಮೇಲೆ ಕಾರು ಚಲಾಯಿರುವ ಆರೋಪಿ ಹಂತಕನಾಗಿದ್ದಾನೆ. ಘಟನೆಯಲ್ಲಿ ನಂದೀಶ್ (48) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಡಿದ ಅಮಲಿನಲ್ಲಿ …

Read More »

ಬೀದರ್: ನಗರದ ಕೊಳಚೆ ನೀರಿನಿಂದ ಮಲಿನವಾದ ಭೂಮಿ; ತರಕಾರಿ ಬೆಳೆಯಲಾಗದೆ ಕಂಗಾಲಾದ ರೈತರು

ಬೀದರ್: ಐತಿಹಾಸಿಕ ಬೀದರ್ ಕೋಟೆಯೊಳಗೊಂದು ಪುಟ್ಟ ಊರಿದೆ. ಈ ಊರಲ್ಲಿರುವ ಇನ್ನೂರು ಎಕರೆಯಷ್ಟು ಜಮೀನಿನಲ್ಲಿ ರೈತರು ತರಕಾರಿ ಬೆಳೆಸುತ್ತಾ ನೆಮ್ಮದಿಯಿಂದಿದ್ದರು. ಇಲ್ಲಿ ಬೆಳೆಸುವ ಪುದಿನಾ, ಪಾಲಕ್ ಸೊಪ್ಪಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿತ್ತು. ಆದರೀಗ ಆ ರೈತರಿಗೆ ತರಕಾರಿ ಬೆಳೆಯೋಕೆ ಸಾಧ್ಯವಾಗುತ್ತಿಲ್ಲ ಯಾಕೆ ಅಂತೀರಾ ಈ ವರದಿ ನೋಡಿ. ನಗರದ ಗಲೀಜು ನೀರು ಗ್ರಾಮದ ಹೊಲಕ್ಕೆ ಬರುತ್ತಿದೆ. ಇದರಿಂದ ಇಲ್ಲಿರುವ ಬಾವಿಯ ನೀರು ಮಲಿನವಾಗುತ್ತಿದೆ. ಕುಡಿಯೋ ನೀರು ಸೇರಿ ಕೃಷಿಗೂ ಇದರಿಂದ …

Read More »

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಯುವಕರು ಕ್ವಾರಿಗೆ ಒಬ್ಬ ಯುವಕ ಪಾರಾಗಿದ್ದಾನೆ. ಇನ್ನಿಬ್ಬರು ಸಾವನ್ನಪ್ಪಿದ್ದಾರೆ.

ಬೆಳಗಾವಿ: ಸೆಲ್ಫಿ ತೆಗೆದುಕೊಳ್ಳುವಾಗ ಕ್ವಾರಿಗೆ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ರಾಜಹಂಸಘಡ ಬಳಿ ನಡೆದಿದೆ. ಬೆಳಗಾವಿಯ ಸರ್ವೋದಯ ಕಾಲೊನಿಯ ಗಣೇಶ ಕಾಂಬಳೆ (17), ಆನಂದವಾಡಿಯ ತೇಜಸ್ ಯಲಕಪಾಟಿ (19) ಮೃತ ದುರ್ದೈವಿಗಳು. ಘಟನೆಯಲ್ಲಿ ಮೂವರ ಪೈಕಿ ಒಬ್ಬ ಯುವಕ ಪಾರಾಗಿದ್ದಾನೆ. ಈ ಸಂಬಂಧ ಬೆಳಗಾವಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೋಟೋ ಶೂಟ್​ಗೆಂದು ಕ್ವಾರಿಯಲ್ಲಿ ಯುವಕರು ಇಳಿದಿದ್ದರು. ಈ ವೇಳೆ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಯುವಕರು …

Read More »

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ನಿರ್ಧಾರ!

ಬೆಂಗಳೂರು: ಪೆಟ್ರೋಲ್ (Petrol), ಡೀಸೆಲ್ (Diesel) ಬೆಲೆ ಏರಿಕೆ ಖಂಡಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಲಾರಿ ಮಾಲೀಕರ ಸಂಘ (Lorry Owners Association) ನಿರ್ಧರಿಸಿದೆ. ರಾಜ್ಯಾದ್ಯಂತ ಲಾರಿ ಮುಷ್ಕರದ ಬಗ್ಗೆ ಲಾರಿ ಮಾಲೀಕರ ಸಂಘ ಅಕ್ಟೋಬರ್ 23ರಂದು ತೀರ್ಮಾನ ಕೈಗೊಳ್ಳಲಿದೆ. ಅಕ್ಟೋಬರ್ 23ರ ರೊಳಗೆ ರಾಜ್ಯ ಸರ್ಕಾರ ಡೀಸೆಲ್ ಮೇಲೆ ವಿಧಿಸಿರುವ ವ್ಯಾಟ್ ಕಡಿಮೆ ಮಾಡಿದರೆ ಮಾತ್ರ ಲಾರಿಗಳು ರಸ್ತೆಗೆ ಇಳಿಯುತ್ತವೆ. ಇಲ್ಲವಾದಲ್ಲಿ ಗೂಡ್ಸ್ ವೆಹಿಕಲ್ಗಳ ಓಡಾಟ ರಾಜ್ಯಾದ್ಯಂತ ನಿಲ್ಲುತ್ತವೆ …

Read More »

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಹುಬ್ಬಳ್ಳಿ: ಪರ್ಯಾಯ ಆದಾಯ ಮೂಲವಾಗಿ ಆರಂಭಿಸಿರುವ ಸಾರಿಗೆ ಸಂಸ್ಥೆಯ “ನಮ್ಮ ಕಾರ್ಗೋ’ ಸೇವೆಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಟ್ರ್ರ್ಯಾಕಿಂಗ್‌ ವ್ಯವಸ್ಥೆ ಇರುವುದರಿಂದ ವಿಶ್ವಾಸಾರ್ಹತೆ ಮೂಡಿಸಿದೆ. ಪ್ರತಿ ತಿಂಗಳು ಆದಾಯದ ಪ್ರಮಾಣ ಹೆಚ್ಚುತ್ತಿದ್ದರೂ ಸದ್ಯ ಪ್ರಮುಖ ಸ್ಥಳಗಳಿಗೆ ಮಾತ್ರ ಈ ಸೌಲಭ್ಯವಿದೆ. ನಾಲ್ಕು ಸಂಸ್ಥೆಗಳ ಅತೀ ದೊಡ್ಡ ಸಾರಿಗೆ ಜಾಲಕ್ಕೆ ಹೋಲಿಸಿದರೆ ನಿರೀಕ್ಷಿತ ಆದಾಯವೇನಲ್ಲ. ಕೋವಿಡ್‌ ಲಾಕ್‌ಡೌನ್‌, ನೌಕರರ ಮುಷ್ಕರ, ಡೀಸೆಲ್‌ ದರ, ಬಿಡಿ ಭಾಗಗಳ ಏರಿಕೆ, ಸರ್ಕಾರಗಳಿಂದ ಬಾರದ ಬಾಕಿ …

Read More »

ಸಿದ್ದರಾಮಯ್ಯನವರೇ ನೀವೂ ಸೀರೆ ಉಟ್ಟುಕೊಳ್ಳಲು ಹಾನಗಲ್‌ ಕ್ಷೇತ್ರಕ್ಕೆ ಬಂದ್ರಾ? ಎಂದ ಸಂಸದ ಶಿವಕುಮಾರ ಉದಾಸಿ

ಹಾವೇರಿ: ‘ವಿರಾಟನಗರ’ ಎನಿಸಿರುವ ಹಾನಗಲ್‌ ಪಟ್ಟಣದ ಜನರು ಮೂರು ಲೋಕದ ಗಂಡು ಅರ್ಜುನನಿಗೇ ಸೀರೆ ಉಡಿಸಿದ್ದರು. ಸಿದ್ದರಾಮಯ್ಯನವರೇ ನೀವೂ ಸೀರೆ ಉಟ್ಟುಕೊಳ್ಳಲು ಹಾನಗಲ್‌ ಕ್ಷೇತ್ರಕ್ಕೆ ಬಂದ್ರಾ? ಎಂದು ಸಂಸದ ಶಿವಕುಮಾರ ಉದಾಸಿ ವ್ಯಂಗ್ಯವಾಡಿದರು. ಹಾನಗಲ್‌ ಪಟ್ಟಣದಲ್ಲಿ ಭಾನುವಾರ ಬಿಜೆಪಿ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿ, ಹಾನಗಲ್‌ ಕ್ಷೇತ್ರದ ಜನರು ಜಾಣರಿದ್ದಾರೆ. ಅವರಿಗೆ ಯಾರನ್ನು ಮನೆಗೆ ಕಳುಹಿಸಬೇಕು, ಯಾರನ್ನು ವಿಧಾನಸೌಧಕ್ಕೆ ಕಳುಹಿಸಬೇಕು ಎಂದು ಚೆನ್ನಾಗಿ ಗೊತ್ತಿದೆ. ಕಡ್ಡಿನಾ ಗುಡ್ಡ ಮಾಡೋದೂ, …

Read More »