ಹೈದರಾಬಾದ್: ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ಗುರುವಾರ ವರದಿಯಾಗಿದೆ. ಆರೋಪಿಯ ಮೃತದೇಹವು ಘಣಪುರ್ ರೈಲ್ವೆ ಹಳಿಯ ಮೇಲೆ ಪತ್ತೆಯಾಗಿದ್ದು, ಪೊಲೀಸರು ಈ ಬಗ್ಗೆ ಮಾಹಿತಿಯನ್ನು ಖಚಿತಪಡಿಸಬೇಕಿದೆ. ಆರೋಪಿಯನ್ನು ಪಲ್ಲಕೊಂಡ ರಾಜು (30) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 9ರಂದು 6 ವರ್ಷದ ಬಾಲಕಿ ಸೈದಾಬಾದ್ನ ಸಿಂಗ್ರೌಣಿ ಕಾಲನಿಯಲ್ಲಿರುವ ತನ್ನ ನಿವಾಸದಿಂದ ನಾಪತ್ತೆಯಾಗಿದ್ದಳು. ಮರುದಿನ ಆಕೆಯ ಮೃತದೇಹವು ಬೆಡ್ಶೀಟ್ನಲ್ಲಿ ಸುತ್ತಿಟ್ಟಿದ್ದ ಸ್ಥಿತಿಯಲ್ಲಿ …
Read More »‘ಮೂವರು ಹೆಂಡಿರು, ಸೊಸೆಯಂದಿರನ್ನಿಟ್ಟುಕೊಂಡಿರೋ ರಾಜು ತಾಳಿಕೋಟಿಗೆ ನನ್ನ ಬಗ್ಗೆ ಮಾತನಾಡೋ ನೈತಿಕ ಹಕ್ಕಿಲ್ಲ’
ವಿಜಯಪುರ: ಮೂವರು ಹೆಂಡಿರು, ಮೂರು ಮೂರು ಸೊಸೆಯಂದಿರನ್ನಿಟ್ಟುಕೊಂಡಿರುವ ರಾಜು ತಾಳಿಕೋಟಿಗೆ ನನ್ನ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ, ಅವನೊಬ್ಬ ಬಕೆಟ್ ಕಲಾವಿದ, ಕಲಿಯುಗದ ಕುಡುಕ ಸ್ಕ್ರಿಪ್ಟ್ ಸಹ ಕದ್ದು ಕ್ಯಾಸೆಟ್ ಮಾಡಿದವ ಎಂದು ಅವನ ಅಳಿಯ ಶೇಕ್ಹುಸೇನ ಮೋದಿ ಆರೋಪಿಸಿದ್ದಾರೆ. ಕಲಿಯುಗದ ಕುಡುಕ ಸ್ಕ್ರಿಪ್ಟ್ ರಾಜು ತಾಳಿಕೋಟಿ ಬರೆದಿದ್ದು ಅಲ್ಲ. ಪಾಪ ಅದನ್ನು ಯಾರೋ ಬರೆದದ್ದು, ಅದನ್ನಿಟ್ಟುಕೊಂಡು ಈತ ಕ್ಯಾಸೆಟ್ ಮಾಡಿದ. ಇದೀಗ ನನಗೆ ದೊಡ್ಡ ದೊಡ್ಡ ನಿರ್ಮಾಪಕರು …
Read More »ಆತ್ಮೀಯ ಗೆಳೆಯನ ಅಗಲಿಕೆ: ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು. ನಿನ್ನೆ ನಿಧನರಾದ ಸ್ನೇಹಿತ ಹಾಘೂ ಸಂಬಂಧಿಕರಾದ ರಾಜು ಪಾಟೀಲ್ ಮನೆಗೆ ನೇರವಾಗಿ ತೆರಳಿದ್ದಾರೆ. ಹುಬ್ಬಳ್ಳಿಯ ಶಕ್ತಿ ನಗರದಲ್ಲಿರುವ ಮೃತ ರಾಜು ಪಾಟೀಲ್ ಮನೆಗೆ ಭೇಟಿ ನೀಡಿದ ಸಿಎಂ, ಸ್ನೇಹಿತನ ನಿಧನಕ್ಕೆ ಕಣ್ಣೀರ ವಿದಾಯ ಹೇಳಿದ್ದಾರೆ. ಬಳಿಕ ಕುಟುಂಬಸ್ಥರ ಜೊತೆ ಮಾತನಾಡಿ ಧೈರ್ಯ ತುಂಬಿದ್ದಾರೆ.
Read More »ಒಂದೇ ಸೆಟ್ನಲ್ಲಿ ಡ್ಯಾನ್ಸ್ ಕಿಂಗ್ & ಪವರ್ ಸ್ಟಾರ್ -ಏನ್ ಹೊಸ ಸಮಾಚಾರ..?
ಮನಸೆಲ್ಲಾ ನೀನೇ’ ಖ್ಯಾತಿಯ ನಾಗೇಂದ್ರ ಪ್ರಸಾದ್ ಫಸ್ಟ್ ಟೈಮ್ ಡೈರೆಕ್ಷನ್ ಮಾಡ್ತಿರೋ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಹೀರೊ ಆಗಿ ಅಭಿನಯಿಸುತ್ತಿದ್ದಾರೆ. ಚಿತ್ರದ ಹಾಡೊಂದಕ್ಕೆ ಇಂಡಿಯನ್ ಡ್ಯಾನ್ಸ್ ಕಿಂಗ್ ಪ್ರಭುದೇವ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಜೊತೆಯಾಗಿ ಹೆಜ್ಜೆ ಹಾಕುತ್ತಿದ್ದಾರೆ ಎಂದು ನಾವು ಮೊದಲೇ ಹೇಳಿದ್ವಿ. ಅದರಂತೇ ಇದೀಗ ಪ್ರಭುದೇವ ಹಾಗೂ ಪುನೀತ್ ಜೊತೆಗಿರುವ ಫೋಟೋಗಳು ವೈರಲ್ ಆಗುತ್ತಿವೆ. ಹೌದು, ಚಿತ್ರದ ಸೆಟ್ನಲ್ಲಿ ಪ್ರಭುದೇವ ಹಾಗ ಪುನೀತ್ …
Read More »ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಉಡುಪಿ, ಸೆ.15: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೋಲೀಸರು ಎಸಗಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳ ಮೇಲಿನ ಪ್ರಕರಣವನ್ನ್ನು ಹಿಂಪಡೆಯುವಂತೆ ಆಗ್ರಹಿಸಿ ಸಿಎಫ್ಐ ನೇತೃತ್ವದಲ್ಲಿ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು. ಕುಂದಾಪುರದಲ್ಲಿ ಹಮ್ಮಿಕೊಳ್ಳಲಾದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಎಫ್ಐ ಉಡುಪಿ ಜಿಲ್ಲಾ ಮುಖಂಡ ನವಾಝ್ ಶೇಖ್, ಲಾಠಿ ಏಟಿನ ಮೂಲಕ ವಿದ್ಯಾರ್ಥಿ ಹೋರಾಟವನ್ನು ಹತ್ತಿಕ್ಕುವ ಫ್ಯಾಶಿಸ್ಟ್ ಸರಕಾರದ …
Read More »ಸಾರಿಗೆ ಸಚಿವರ ತವರೂರಲ್ಲಿಯೇ ಬಸ್ಗಾಗಿ ವಿದ್ಯಾರ್ಥಿಗಳ ಪರದಾಟ
ಬಳ್ಳಾರಿ: ಸಾರಿಗೆ ಸಚಿವ ಶ್ರೀರಾಮುಲು ತವರೂರಲ್ಲಿಯೇ ವಿದ್ಯಾರ್ಥಿಗಳು ಬಸ್ಗಳಿಗಾಗಿ ಪರದಾಟ ನಡೆಸಿದ ಘಟನೆ ನಡೆದಿದೆ. ಸಮಯಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ, ಒಂದೇ ಬಸ್ನಲ್ಲಿ ನೂರಾರು ವಿದ್ಯಾರ್ಥಿಗಳು ಪ್ರಯಾಣ ಮಾಡಲು ಹರಸಾಹಸ ಪಡುತ್ತಿದ್ದಾರೆ. ಬಸ್ ಅವ್ಯವಸ್ಥೆಯಿಂದ ವಿದ್ಯಾರ್ಥಿಗಳು ನರಕ ದರ್ಶನ ಅನುಭವಿಸುತ್ತಿದ್ದು ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ. ಬಳ್ಳಾರಿಯಿಂದ ಹಡ್ಲಿಗಿ ಮಾರ್ಗವಾಗಿ ಸಂಚಾರ ಮಾಡುವ ಬಸ್ನಲ್ಲಿ ಸಾಮಾಜಿಕ ಅಂತರವಿಲ್ಲದೆ ಪ್ರಯಾಣ ಮಾಡುತ್ತಿರುವ ವಿದ್ಯಾರ್ಥಿಗಳು ಬಸ್ ಬಾಗಿಲಲ್ಲಿ ನೇತಾಡುತ್ತ ಸಂಚಾರ …
Read More »ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸಾವಿರಾರು ಟನ್ ಕಬ್ಬು ಬೆಳೆ ನಾಶ
ಚಿಕ್ಕೋಡಿ: ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸಾವಿರಾರು ಟನ್ ಕಬ್ಬು ಬೆಳೆ ನಾಶವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದಲ್ಲಿ ನಡೆದಿದೆ. ಯಡೂರವಾಡಿ ಮತ್ತು ಮಾಂಜರಿವಾಡಿ ಗ್ರಾಮಕ್ಕೆ ಸೇರಿದ 15 ಕ್ಕೂ ಹೆಚ್ಚು ರೈತರ ಜಮೀನುಗಳ ಕಬ್ಬಿನ ಬೆಳೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸಲು ಸ್ಥಳೀಯರ ಹರಸಾಹಸ ಪಡುತ್ತಿದ್ದಾರೆ.. ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಬೆಳೆ ಹಾನಿಯಿಂದ 15 …
Read More »ವೆಂಟಿಲೇಟರ್ ಬೆಡ್ ಸಿಗದೆ ಸಂಬಂಧಿಕರನ್ನು ಕಳೆದುಕೊಂಡೆ: ಬಿಜೆಪಿ ಶಾಸಕ ಹರತಾಳು ಹಾಲಪ್ಪ
ಬೆಂಗಳೂರು: ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಪಕ್ಷಾತೀತವಾಗಿ ಶಾಸಕರು ಆಕ್ರೋಶ ತೋಡಿಕೊಂಡ ಘಟನೆಗೆ ಬುಧವಾರ ವಿಧಾನಸಭೆ ಸಾಕ್ಷಿಯಾಯಿತು. ಶೂನ್ಯ ವೇಳೆ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಅವರಿಗೆ ಬೆಲೆ ಏರಿಕೆ ಚರ್ಚೆಗೆ ಸ್ಪೀಕರ್ ಕಾಗೇರಿ ಸಿದ್ದರಾಮಯ್ಯ ಅವರನ್ನು ಕರೆದರು. ಆಗ ಎದ್ದು ನಿಂತ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ, ನನ್ನ ವಿಷಯವೊಂದಿತ್ತು ಎಂದು ನೆನಪಿಸಿದರು. ಆಗ ಹೌದೌದು ಎನ್ನುತ್ತ ಅವಕಾಶ ನೀಡಿದರು. ಬಳಿಕ ಮಾತನಾಡಿದ ಹಾಲಪ್ಪ ಅವರು, ಪಾರ್ಶ್ವವಾಯು ರೋಗಿಗೆ …
Read More »ಹುಬ್ಬಳ್ಳಿ: ಗಾಯತ್ರಿ ತಪೋವನ ಬಳಿ ತಾಯಿ-ಮಗು ಉದ್ಯಾನ
ಹುಬ್ಬಳ್ಳಿ: ತಡಸ ಗಾಯಿತ್ರಿ ತಪೋವನದ ಬಳಿ ಸುಮಾರು 20 ಎಕರೆ ಜಾಗದಲ್ಲಿ ತಾಯಿ-ಮಗುವಿನ ಕಲಾಕೃತಿ ಉದ್ಯಾನವನ ನಿರ್ಮಾಣಗೊಳ್ಳಲಿದ್ದು, ಗೊಟಗೋಡಿ ರಾಕ್ ಗಾರ್ಡನ್ ನಿರ್ಮಾತೃ ದಾಸನೂರು ಕುಟುಂಬದಿಂದ ಮತ್ತೂಂದು ಮೈಲುಗಲ್ಲಾಗಲಿದೆ. ಈಗಾಗಲೇ ರಾಕ್ ಗಾರ್ಡನ್ನಲ್ಲಿ ನಮ್ಮ ಹಳ್ಳಿ ಸೊಗಡು ಸೇರಿದಂತೆ ಮಗುವಿನ ಜನನದಿಂದ ಹಿಡಿದು ಅವನ ಅಂತ್ಯದವರೆಗೂ ತೋರಿಸಿದ್ದಾರೆ. ವರನಟ ಡಾ| ರಾಜಕುಮಾರ ಕಲಾಕೃತಿ, ರೈತನ ಸೊಬಗು ತೋರಿಸುವ ಕಲಾಕೃತಿ ರಾಕ್ ಗಾರ್ಡನ್ನಲ್ಲಿ ಇಡಲಾಗಿದ್ದು ಎಲ್ಲರ ಮನಸೆಳೆದಿರುವುದು ಇತಿಹಾಸ. ಅಂತಹ ಮತ್ತೂಂದು …
Read More »ಹುಟ್ಟುಹಬ್ಬದ ದಿನದಂದೇ ವಿದ್ಯುತ್ ಸ್ಪರ್ಶಿಸಿ ಮಗು ಸಾವು
ಚಾಮರಾಜನಗರ: ತಾಲ್ಲೂಕಿನ ಕೆಂಗಾಕಿ ಗ್ರಾಮದಲ್ಲಿ ಮೂರು ವರ್ಷ ಹೆಣ್ಣು ಮಗುವೊಂದು ಹುಟ್ಟುಹಬ್ಬದ ದಿನವಾದ ಬುಧವಾರ ವಿದ್ಯುತ್ ಸ್ಪರ್ಶದಿಂದಾಗಿ ಮೃತಪಟ್ಟಿದೆ. ಗ್ರಾಮದ ಸಿದ್ಧಲಿಂಗಸ್ವಾಮಿ ಎಂಬುವವರ ಮಗಳು ನಿವೇದಿತಾ ಮೃತಪಟ್ಟ ದುರ್ದೈವಿ. ಬುಧವಾರವೇ ಆಕೆಯ ಹುಟ್ಟುಹಬ್ಬ ಇತ್ತು. ‘ಸಿದ್ಧಲಿಂಗಸ್ವಾಮಿ ಅವರ ಜಮೀನಿನಲ್ಲಿ ಮಧ್ಯಾಹ್ನ 3.30ರ ಸುಮಾರಿಗೆ ಘಟನೆ ನಡೆದಿದೆ. ಆಟವಾಡುತ್ತಿದ್ದ ಮಗು ಜಮೀನಿನಲ್ಲಿದ್ದ ಪಂಪ್ ಸ್ಟಾರ್ಟರ್ ಹತ್ತಿರ ಹೋಗಿದೆ. ಹೇಗೆ ವಿದ್ಯುತ್ ಸ್ಪರ್ಶ ಆಯಿತು ಎಂಬುದು ಪೋಷಕರಿಗೂ ಗೊತ್ತಿಲ್ಲ. ಅಸ್ವಸ್ಥಗೊಂಡಿದ್ದ ಮಗುವನ್ನು ಕಬ್ಬಳ್ಳಿಯ …
Read More »
Laxmi News 24×7