ಜೈಪುರ: 6 ವರ್ಷದ ಮಗುವಿನ ಮುಂದೆಯೇ ಹಿರಿಯ ಪೊಲೀಸ್ ಅಧಿಕಾರಿ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಲೈಂಗಿಕ ಸಂಪರ್ಕ ನಡೆಸಿದ ಮಹಿಳಾ ಕಾನ್ಸ್ಟೇಬಲನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಮಧ್ಯಾಹ್ನ ಮಹಿಳಾ ಪೇದೆಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದು, ಸೆಪ್ಟೆಂಬರ್ 17ರವರೆಗೆ ಆಕೆಯನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ. ಮಹಿಳಾ ಪೇದೆ ಜೊತೆ ದೈಹಿಕ ಸಂಪರ್ಕ ನಡೆಸಿದ್ದ ಹಿರಿಯ ಅಧಿಕಾರಿಯನ್ನು ಇದಕ್ಕೂ ಮುನ್ನವೇ ಪೊಲೀಸರು ಬಂಧಿಸಿದ್ದಾರೆ. ಇಬ್ಬರ ಬಂಧನ ಬೆನ್ನಲ್ಲೇ ವೀಡಿಯೋದಲ್ಲಿದ್ದ ಅಜ್ಮಲ್ …
Read More »ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು 25 ವರ್ಷದ ಮೊಹ್ಮದಶಾಯಿದ ಅಬ್ದುಲಹಮೀದ ಮುಲ್ಲಾ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ಆರೋಪಿ ಬೆಳಗಾವಿ ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಬಂಧಿತನಿಂದ ನಾಲ್ಕು ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಎಪಿಎಂಸಿ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ ಹಿರೇಮಠ, ಪಿಎಸ್ ಐ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು …
Read More »ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ ಜ್ವರ, ಕೆಮ್ಮು, ನೆಗಡಿ ಸಮಸ್ಯೆ; ಮಕ್ಕಳ ತಜ್ಞರ ಜೊತೆ ಸಭೆ
ಮಹಾಮಾರಿ ಕೊರೊನಾ ಮೂರನೇ ಅಲೆ ಭೀತಿ ನಡುವೆ ಹೇಗೋ ಶಾಲೆಗಳು ಆರಂಭವಾಗಿವೆ. ಮಕ್ಕಳೆಲ್ಲ ಮತ್ತೆ ಹೊರಗಡೆ ಕಾಲಿಡ್ತಿವೆ. ಆದ್ರೆ ಈಗ ಬೆಂಗಳೂರಿನ ಬಹುತೇಕ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಸಮಸ್ಯೆ ಕಂಡು ಬರುತ್ತಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ಜ್ವರ, ಕೆಮ್ಮು, ನೆಗಡಿ ಇರುವ ಮಕ್ಕಳಿಗೆ ಕೊರೊನಾ ಟೆಸ್ಟ್ ಮಾಡಿಸಿದರೆ ಕೊರೊನಾ ಲಕ್ಷಣಗಳಿದ್ದರೂ ಮಕ್ಕಳಿಗೆ ಕೊವಿಡ್ ನೆಗೆಟಿವ್ ವರದಿ ಬರುತ್ತಿದೆ. ಕೆಲವು ಮಕ್ಕಳ ರಕ್ತ ಪರೀಕ್ಷೆ ನಡೆಸಿದಾಗ …
Read More »ಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದ ರೈತರಿಗೆ ಬೆಳೆ ವಿಮೆ ಸೌಲಭ್ಯಪಡೆದುಕೊಳ್ಳುವ ಪಾಠ ಹೇಳಿಕೊಡುವ ಮೂಲಕ ರೈತಾಪಿ ಸಮುದಾಯದ ಅಭಿವೃದ್ಧಿಗೆ ಮಾಜಿ ಸಚಿವ ಸಿ.ಎಂ. ಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿಂದು ಸಂತಾಪ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು , ಉದಾಸಿ ಆಗಲಿಕೆ ನನ್ನ ಪಾಲಿಗೆ ಬಹಳ ದೊಡ್ಡ ನಷ್ಟವಾಗಿದೆ. ತಂದೆ ಸಮಾನ ರಾಗಿದ್ದ ಉದಾಸಿ ನನ್ನ ರಾಜಕೀಯ ಜೀವನದ ಬೆಳವಣಿಗೆಯಲ್ಲೂ ಬಹಳ ಪ್ರಮುಖ …
Read More »ಕೊಯ್ನಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ
ಚಿಕ್ಕೋಡಿ: ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿರುವ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಭಾನುವಾರ 10 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಿದ್ದ ಕೊಯ್ನಾ ಆಡಳಿತ ಮಂಡಳಿ ಸದ್ಯ 40 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ನೀರು ಬಿಡುಗಡೆ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರಿನಲ್ಲಿ ಏರಿಕೆಯಾಗಿದ್ದು, ಯಡೂರು – ಕಲ್ಲೋಳ ಸೇತುವೆ ಜಲಾವೃತಗೊಂಡಿದೆ. ಈಗಾಗಲೇ ಕೃಷ್ಣಾ ನದಿ …
Read More »ದೊಣ್ಣೆಯಿಂದ ಹೊಡೆದು ಅಪ್ಪನನ್ನೇ ಕೊಂದ ಮಗ!
ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನ ನಡುವೆ ಜಗಳವಾಗಿದ್ದು, ದೊಣ್ಣೆಯಿಂದ ಹೊಡೆದು ಮಗನೇ ಅಪ್ಪನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪದಲ್ಲಿ ನಡೆದಿದೆ. ಕೊಲೆಯಾದವರನ್ನು ಕುಮಾರನಾಯ್ಕ (55) ಎಂದು ಗುರುತಿಸಲಾಗಿದೆ. ಇವರನ್ನು ಮಗ ಮಧು (28) ಕೊಲೆ ಮಾಡಿದ್ದಾನೆ. ಭಾನುವಾರ ರಾತ್ರಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಮಧು ತನ್ನ ತಂದೆಗೆ ದೊಣ್ಣೆಯಿಂದ ಹೊಡೆದಿದ್ದಾನೆ. ದೊಣ್ಣೆಯಿಂದ ಹೊಡೆದ ರಭಸಕ್ಕೆ ಕುಮಾರನಾಯ್ಕನ ಕಿವಿಯಲ್ಲಿ ರಕ್ತಸ್ರಾವ …
Read More »ರಸ್ತೆ ವಿಸ್ತರಣೆಯ ಸಂದರ್ಭದಲ್ಲಿ ಮಧ್ಯಭಾಗಕ್ಕೆ ಬಂದ ವಿದ್ಯುತ್ ಕಂಬವನ್ನು ತೆರವುಗೊಳಿಸದೇ ಕಾಂಕ್ರಿಟ್
ಚಿತ್ರದುರ್ಗ: ರಸ್ತೆ ವಿಸ್ತರಣೆಯ ಸಂದರ್ಭದಲ್ಲಿ ಮಧ್ಯಭಾಗಕ್ಕೆ ಬಂದ ವಿದ್ಯುತ್ ಕಂಬವನ್ನು ತೆರವುಗೊಳಿಸದೇ ಕಾಂಕ್ರಿಟ್ ಕಾಮಗಾರಿಯನ್ನು ಗುತ್ತಿಗೆದಾರ ಪೂರ್ಣಗೊಳಿಸಿದ್ದಾರೆ. ಇದರ ಫೋಟೊ ಹಾಗೂ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿ ಇಂತಹದೊಂದು ಲೋಪ ಕಂಡುಬಂದಿದೆ. ರಸ್ತೆಯ ಮಧ್ಯಭಾಗದ ವಿದ್ಯುತ್ ಕಂಬಗಳು ಅಪಘಾತಕ್ಕೆ ಆಹ್ವಾನ ನೀಡುವಂತಿವೆ. ತುರುವನೂರು ರಸ್ತೆಯ ವಿಸ್ತರಣೆ ಕಾಮಗಾರಿಯನ್ನು ₹ 7 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಒಂದೂವರೆ ವರ್ಷದಿಂದ ಕಾಮಗಾರಿ …
Read More »ಒಂದೂವರೆ ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿದ ತಾಯಿ!
ಬಾಗಲಕೋಟೆ: ಒಂದು ವರ್ಷದ ಮಗುವಿನೊಂದಿಗೆ ತಾಯಿಯೊಬ್ಬರು ಬಾವಿಗೆ ಹಾರಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ರಾಘಾಪುರದಲ್ಲಿ ನಡೆದಿದೆ. ಹಂಸನೂರ ಗ್ರಾಮದ ಫಕೀರವ್ವ (26) ಎಂಬಾಕೆ ತನ್ನ ಒಂದು ವರ್ಷದ ಮಗುವಿನೊಂದಿಗೆ ಬಾವಿಗೆ ಜಿಗಿದಿದ್ದಾರೆ. ಮಗು ಶಿವಾನಿ ಸಾವಿಗೀಡಾಗಿದ್ದು, ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಫಕೀರವ್ವಳಿಗಾಗಿ ಬಾವಿಯಲ್ಲಿ ಹುಡುಕಾಟ ಮುಂದುವರಿಸಿದ್ದಾರೆ. ಫಕೀರವ್ವ ಹೆರಿಗೆಗಾಗಿ ತನ್ನ ಅಜ್ಜಿಯ ಊರು ರಾಘಾಪುರಕ್ಕೆ ಬಂದಿದ್ದಳು. ಹೆರಿಗೆ ಬಳಿಕ ಗಂಡನ ಮನೆಯವರು ಆಕೆಯನ್ನು ಕರೆದುಕೊಂಡು ಹೋಗಲು …
Read More »ಗಂಡನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾಯಿಸಿ, ಶವವನ್ನ ಕಸದಂತೆ ಚರಂಡಿಗೆ ಹಾಕಿದ ತುಮಕೂರು ಮಹಿಳೆ
ಕಳೆದ 8 ವರ್ಷಗಳಿಂದ ಪ್ರತಿನಿತ್ಯ ಜಗಳವಾಗುತ್ತಿತ್ತು. ಅಲ್ಲದೆ ಅನ್ನಪೂರ್ಣಗೆ ಅಕ್ರಮ ಸಂಬಂಧ ಇತ್ತು, ಇದೇ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ತುಮಕೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ ಘಟನೆ ತುಮಕೂರಿನ ಬಡ್ಡಿಹಳ್ಳಿಯಲ್ಲಿ ನಡೆದಿದೆ. ಪತಿ ನಾರಾಯಣ(52) ಹತ್ಯೆಗೈದ ಪತ್ನಿ ಅನ್ನಪೂರ್ಣ, ಶವವನ್ನು ಚರಂಡಿಗೆ ಎಸೆದಿದ್ದಾಳೆ. ಸದ್ಯ ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲಮಂಗಲ ಬಳಿಯ ಟೋಲ್ನಲ್ಲಿ ಪತಿ …
Read More »ಜೋಕುಮಾರ ತರ್ತಾನಾ ಮಳೆ..! ಮಳೆ-ಬೆಳೆಯ ಪ್ರತೀಕ ಜೋಕುಮಾರನ ಹಬ್ಬ
ಬನಹಟ್ಟಿ : ನಮ್ಮದು ಸಂಪ್ರದಾಯ ಸಂಸ್ಕೃತಿಯ ನೆಲೆಬೀಡು, ಗ್ರಾಮೀಣ ಪ್ರದೇಶದಲ್ಲಿ ಹಿಂದಿನಿಂದ ಆಚರಿಸುತ್ತಾ ಬಂದ ಕೆಲ ಧಾರ್ಮಿಕ ಆಚರಣೆಗಳು ಇಂದಿಗೂ ನಮ್ಮಲ್ಲಿ ಪ್ರಸ್ತುತ ಎನ್ನುವುದಕ್ಕೆ ಉತ್ತರ ಕರ್ನಾಟಕದ ಜೋಕುಮಾರನ ಹಬ್ಬ ಕೂಡಾ ಒಂದು. ಹಿಂದಿನಿಂದ ತಮ್ಮ ಹಿರಿಯರು ಆಚರಿಸುತ್ತಾ ಬಂದ ಈ ಜೋಕುಮಾರನ ಹಬ್ಬ ಉತ್ತರ ಕರ್ನಾಟಕದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಚಾಲ್ತಿಯಲ್ಲಿದೆ. ಭಾದ್ರಪದ ಮಾಸದ ಅಷ್ಟಮಿಯಂದು ಹುಟ್ಟುವ ಜೋಕುಮಾರ ಜೋ ಎಂಬ ಮುನಿಯ ಮಗನು, ಜೇಷ್ಠಾ ದೇವಿಯ ಮಗನೆಂದು …
Read More »
Laxmi News 24×7