Breaking News

ರಾಜ್ಯ

ಮಹಿಳಾ ಉದ್ಯೋಗಿಗೆ ಮತ್ತು ಬರಿಸಿ ಚಲಿಸುವ ಕಾರ್ ನಲ್ಲೇ ಗ್ಯಾಂಗ್ ರೇಪ್; ಐವರು ಅರೆಸ್ಟ್

ಚೆನ್ನೈ: ತಮಿಳುನಾಡಿನ ಕಾಂಚೀಪುರಂ ಪೊಲೀಸರು ಚಲಿಸುತ್ತಿದ್ದ ಕಾರ್ ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಐದು ಮಂದಿಯನ್ನು ಬಂಧಿಸಿದ್ದಾರೆ. ಮೊಬೈಲ್ ಫೋನ್ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿರುವ 20 ವರ್ಷದ ಮಹಿಳೆ ಪರಿಚಯಸ್ಥ ವ್ಯಕ್ತಿಯನ್ನು ಭೇಟಿಯಾಗಲು ತೆರಳಿದ್ದು, ಈ ವೇಳೆ ಆಕೆಗೆ ಮತ್ತು ಬರುವ ಪಾನೀಯ ನೀಡಿದ ಪರಿಚಯಸ್ಥ ತನ್ನ ಸ್ನೇಹಿತರೊಂದಿಗೆ ಸೇರಿ ಚಲಿಸುವ ಕಾರ್ ನಲ್ಲಿ ಅತ್ಯಾಚಾರ ಎಸಗಿದ್ದಾನೆ. ಕಾಂಚಿಪುರಂ ನಗರದ ರಸ್ತೆಗಳಲ್ಲಿ ಆರೋಪಿಗಳು ಆಕೆಯ ಮೇಲೆ ಕಾರ್ ನಲ್ಲೇ ಸಾಮೂಹಿಕ …

Read More »

ಜತೆ ಮಹಿಳಾ ಕಾನ್ಸ್​ಟೇಬಲ್​ ಅಶ್ಲೀಲತೆ, ಮಗನ ದುರ್ಬಳಕೆ: ವಿಡಿಯೋ ವೈರಲ್​ ಬೆನ್ನಲ್ಲೇ ಇಬ್ಬರಿಗೂ ಶಾಕ್​!

ಜೈಪುರ: ಮಹಿಳಾ ಕಾನ್ಸ್​ಟೇಬಲ್​ ಜತೆ ಸ್ವಿಮ್ಮಿಂಗ್​ಪೂಲ್​ನಲ್ಲಿ ಅಶ್ಲೀಲ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ರಾಜಸ್ಥಾನದ ಉಪ ಪೊಲೀಸ್​ ವರಿಷ್ಠಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಅಶ್ಲೀಲ ವಿಡಿಯೋ ವೈರಲ್​ ಆದ ಬಳಿಕ ಈ ಕ್ರಮ ತೆಗೆದುಕೊಳ್ಳಲಾಗಿದೆ. ಡಿಎಸ್​ಪಿ ಹಿರಾಲಾಲ್​ ಸೈನಿ ಮತ್ತು ಮಹಿಳಾ ಕಾನ್ಸ್​ಟೇಬಲ್​ ಸ್ವಿಮ್ಮಿಂಗ್​ ಪೂಲ್​ ಒಳಗಡೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು. ಇದು ಅವರ ಖಾಸಗಿ ವಿಚಾರವಾದರೂ ಸೈನಿ ಇನ್ನೊಂದು ಘೋರ ಅಪರಾಧವನ್ನು ಎಸಗಿದ್ದಾರೆ. ಮಹಿಳಾ ಸಿಬ್ಬಂದಿಯ ಮಗನ ಮುಂದೆಯೇ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಇದಕ್ಕೆ …

Read More »

ನಡುರಸ್ತೆಯಲ್ಲಿ ಮಹಿಳೆಯ ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡ

ಧಾರವಾಡ: ನಡುರಸ್ತೆಯಲ್ಲಿಯೇ ಜೆಡಿಎಸ್ ಮುಖಂಡನೋರ್ವ ಮಹಿಳೆಯ ಕೈಹಿಡಿದು ಎಳೆದಾಡಿರುವ ಘಟನೆ ಧಾರವಾಡ ಜಿಲ್ಲೆ ಸತ್ತೂರ ಬಡಾವಣೆಯಲ್ಲಿ ನಡೆದಿದೆ. ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ ಮಹಿಳೆಯ ಕೈಹಿಡಿದು ಎಳೆದಾಡಿದ್ದಾರೆ. ಮಹಿಳೆಯ ಕೈ ಹಿಡಿದು ಎಳೆದಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸತ್ತೂರು ನಿವಾಸಿಯಾಗಿರುವ ಮಹಿಳೆ ಮನೆಯತ್ತ ಹೋಗುತ್ತಿದ್ದರು. ಈ ವೇಳೆ ಜೆಡಿಎಸ್ ಮುಖಂಡ ಮಹಿಳೆ ಕೈ ಹಿಡಿದು ಎಳೆದಾಡಿದ್ದು, ಘಟನೆ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾಗಿರಿ ಠಾಣೆಯಲ್ಲಿ ಮಹಿಳೆ …

Read More »

ಕೌಶಲಾಭಿವೃದ್ಧಿ ಕೇಂದ್ರಕ್ಕೆ ಉಪಕರಣ ಖರೀದಿಯಲ್ಲಿ ಅಕ್ರಮ: ಸಿಬಿಐ ತನಿಖೆಗೆ ಕಾಂಗ್ರೆಸ್‌ ಆಗ್ರಹ

ಬೆಂಗಳೂರು: ಉನ್ನತ ಶಿಕ್ಷಣ ಸಚಿವಾಲಯ ವ್ಯಾಪ್ತಿಯಲ್ಲಿ ಬರುವ ಕೌಶಲಾಭಿವೃದ್ಧಿ ಕೇಂದ್ರದ ಲ್ಯಾಬ್‌ ಉಪಕರಣ ಖರೀದಿಯಲ್ಲಿ ಇಲಾಖೆಯ ಅಧಿಕಾರಿಗಳು ಅಕ್ರಮ ಟೆಂಡರ್‌ ನಡೆಸಿದ್ದು, ಸುಮಾರು 34 ಕೋಟಿ ರೂ. ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಎಚ್‌.ಎಂ.ರೇವಣ್ಣ ಹಾಗೂ ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ, ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು. ಉನ್ನತ ಶಿಕ್ಷಣ ಸಚಿವರಾದ ಡಾ| ಅಶ್ವತ್ಥ್ ನಾರಾಯಣ್‌ ಅವರ …

Read More »

ಬಿಜೆಪಿ ಸೇರಲು ಹಣದ ಆಮಿಷವಿತ್ತು: ಶ್ರೀಮಂತ ಪಾಟೀಲ್‌

ಕಾಗವಾಡ: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುವಾಗ ಹಣದ ಆಮಿಷ ಬಂದಿತ್ತು. ಆದರೆ ಹಣಕ್ಕೆ ಬೇಡಿಕೆ ಇಡದೆ ಕ್ಷೇತ್ರ ಹಾಗೂ ಜನರ ಸೇವೆ ಮಾಡಲು ಒಳ್ಳೆಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್‌ ಹೇಳಿದ್ದಾರೆ. ಶನಿವಾರ ಐನಾಪುರ ಪಟ್ಟಣದಲ್ಲಿ ಒಂದು ಕೋಟಿ ರೂ. ಅನುದಾನದಡಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದಾಗ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ ಸೇರುವಾಗ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದರಿಂದ ಯಡಿಯೂರಪ್ಪನವರ ಸಂಪುಟದಲ್ಲಿ …

Read More »

ಸಿದ್ದರಾಮಯ್ಯ ಕೋಡಿಮಠ ಶ್ರೀ ಭೇಟಿಯಾದರೆ ತಪ್ಪೇನು?: ಎಚ್ಕೆ

ಗದಗ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಡಿಮಠದ ಸ್ವಾಮೀಜಿ ಬಳಿ ಭವಿಷ್ಯ ಕೇಳಿದ್ದರೆ ತಪ್ಪೇನು? ಒಂದೊಮ್ಮೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಪೂಜ್ಯರು ಭವಿಷ್ಯ ನುಡಿದಿದ್ದರೆ ಸಂತಸದ ಸಂಗತಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಎಚ್‌.ಕೆ.ಪಾಟೀಲ್‌ ಅವರು ಸಚಿವ ಗೋವಿಂದ ಕಾರಜೋಳರಿಗೆ ತಿರುಗೇಟು ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸ್ವಾಮೀಜಿಗಳನ್ನು ಭೇಟಿ ಮಾಡುವುದು ಹೊಸದೇನೂ ಅಲ್ಲ. ಮಠಮಾನ್ಯಗಳ ಬಗ್ಗೆ ಅಪಾರ ಗೌರವ ಹೊಂದಿರುವ …

Read More »

ದೆಹಲಿ :121 ವರ್ಷಗಳಲ್ಲೇ ಅತ್ಯಂತ ಭೀಕರ ಮಳೆ; ಇಂದು ಕೂಡ ಮಳೆಯಾಗುವ ಸಾಧ್ಯತೆ

ದೆಹಲಿ: ಶತಮಾನದಲ್ಲೇ‌ ಕಂಡು ಕೇಳರಿಯದ ಮಳೆ‌ ನಿನ್ನೆ(ಸೆಪ್ಟೆಂಬರ್ -11) ಒಂದೇ ದಿನ ದೆಹಲಿಯಲ್ಲಿ ಸುರಿದಿದೆ. ಮಹಾ ಮಳೆಯಲ್ಲಿ ಸಿಲುಕಿ ದೆಹಲಿ ತತ್ತರಿಸಿದ್ದು, ಪ್ರತಿಯೊಂದು ಏರಿಯಾದಲ್ಲೂ ಮಳೆ ನೀರು ತುಂಬಿ ಹೋಗಿತ್ತು. ಇನ್ನು ದೆಹಲಿ ರಸ್ತೆಗಳು ನದಿಯಂತಾಗಿದ್ದು, ಸವಾರರು ಪರದಾಡಿದ್ರು. ಈ ಮಧ್ಯೆ ಇವತ್ತು ಕೂಡ ಭಾರಿ ಮಳೆಯಾಗುವ ಎಚ್ಚರಿಕೆ ನೀಡ್ಲಾಗಿದೆ. ನಿನ್ನೆ ಸುರಿದ ಮಹಾ ಮಳೆಗೆ ರಾಷ್ಟ್ರ ರಾಜಧಾನಿ ತತ್ತರಿಸಿದೆ. ದೆಹಲಿ ಹೃದಯ ಭಾಗವೂ ಸೇರಿದಂತೆ ರಾಷ್ಟ್ರ ರಾಜಧಾನಿಯ ಹೊರ …

Read More »

ಇನ್ಮುಂದೆ `ಟ್ರಾಫಿಕ್ ರೂಲ್ಸ್’ ಬ್ರೇಕ್ ಮಾಡಿದ್ರೆ ದುಬಾರಿ ದಂಡ!

ಬೆಂಗಳೂರು : ಸಾರ್ವಜನಿಕರೇ ಗಮನಿಸಿ, ಇನ್ಮುಂದೆ ಸಂಚಾರ ನಿಯಮ ಉಲ್ಲಂಘಿಸುವ ಮುನ್ನ ಎಚ್ಚರ ವಹಿಸಿ, ಇಲ್ಲವಾದರೆ, ಭಾರಿ ದಂಡದ ಕಟ್ಟಬೇಕಾದೀತು. ಹೌದು ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ಟ್ರಾಫಿಕ್ ಪೊಲೀಸರು ಮತ್ತೊಮ್ಮೆ ಬಿಸಿ ಮುಟ್ಟಿಸಲು ಸಜ್ಜಾಗಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಕಾನೂನಿನ ಕಲಂ ಆಧಾರದ ಮೇಲೆ ವಿಧಿಸುವ ದಂಡದ ವಿವರಗಳನ್ನು ಪೊಲೀಸರು ಪ್ರಕಟಿಸಿದ್ದಾರೆ.   ಈ ಕುರಿತಂತೆ ಬೆಂಗಳೂರು ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಕುಲ್‌ದೀಪ್ ಕುಮಾರ್ ಆರ್ …

Read More »

ಜಿಲ್ಲಾಸ್ಪತ್ರೆಯಲ್ಲಿ ರೋಗಿಗೆ ಇಂಜೆಕ್ಷನ್​ ಕೊಟ್ಟ ಸೆಕ್ಯೂರಿಟಿ ಗಾರ್ಡ್​; ಅಂಥ ಪರಿಸ್ಥಿತಿ ಏನಿತ್ತು ಎಂಬುದು ನೆಟ್ಟಿಗರ ಪ್ರಶ್ನೆ

ಅಂಗುಲ್​: ಅನಾರೋಗ್ಯವೆಂದು ಆಸ್ಪತ್ರೆಗೆ ಬಂದ ರೋಗಿಗೆ ಆ ಹಾಸ್ಪಿಟಲ್​​ನ ಸೆಕ್ಯೂರಿಟಿ ಗಾರ್ಡ್​ ಇಂಜೆಕ್ಷನ್​ ಕೊಟ್ಟಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಈ ಘಟನೆ ನಡೆದದ್ದು ಓಡಿಶಾದ ಅಂಗುಲ್​ ಜಿಲ್ಲಾ ಪ್ರಧಾನ ಆಸ್ಪತ್ರೆಯಲ್ಲಿ. ಅಲ್ಲಿ ವೈದ್ಯರು, ಪ್ಯಾರಾಮೆಡಿಕಲ್​ ಸಿಬ್ಬಂದಿ ಇದ್ದಾಗ್ಯೂ ಕೂಡ ಸೆಕ್ಯೂರಿಟಿ ಗಾರ್ಡ್​ ಇಂಜೆಕ್ಷನ್​ ನೀಡಿದ್ದಾರೆ. ವಿಡಿಯೋ ವೈರಲ್​ ಆದ ಬೆನ್ನಲ್ಲೇ ಸ್ಥಳೀಯ ಮಾಧ್ಯಮವೊಂದು ಆಸ್ಪತ್ರೆಯ ಎಡಿಎಂಒ ಮಾನಸ್​ ರಂಜನ್​ ಬಿಸ್ವಾಲ್​​ ಅವರನ್ನು ಮಾತನಾಡಿಸಿದೆ. ಹೀಗೆ …

Read More »

ನಾಳೆ 2020-21ನೇ ಸಾಲಿನ ನೀಟ್ ಪರೀಕ್ಷೆ; 16 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ

ಬೆಂಗಳೂರು: ದೇಶದಾದ್ಯಂತ ನಾಳೆ 2020-21ನೇ ಸಾಲಿನ ನೀಟ್ ಪರೀಕ್ಷೆ ನಡೆಯಲಿದೆ. ವೈದ್ಯಕೀಯ & ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳಿಗೆ ನಡೆಯುವ ಪರೀಕ್ಷೆ ಇದಾಗಿದ್ದು ನಾಳೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5ರವರೆಗೆ ಪರೀಕ್ಷೆ ನಡೆಯಲಿದೆ. ಒಟ್ಟು 201 ಪ್ರಮುಖ ನಗರಗಳಲ್ಲಿ ನಾಳೆ ಪರೀಕ್ಷೆ ನಡೆಯಲಿದೆ. ಕರ್ನಾಟಕದಲ್ಲಿ ಒಟ್ಟು 9 ನಗರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾಂ, ದಾವಣಗೆರೆ, ಧಾರವಾಡ, ಗುಲ್ಬರ್ಗಾ, ಹುಬ್ಬಳ್ಳಿ, ಮೈಸೂರು, ಮಂಗಳೂರು ಮತ್ತು ಉಡುಪಿ …

Read More »