Breaking News

ರಾಜ್ಯ

ಖಾನಾಪುರ ಎಡಿಎಲ್ಆರ್ ಕಚೇರಿಯ ಸರ್ವೇಯರ್ ಎಸಿಬಿ ಬಲೆಗೆ

ಖಾನಾಪುರ – ಇಲ್ಲಿಯ ಎಡಿಎಲ್ಆರ್ ಕಚೇರಿಯ ಸರ್ವೇಯರ್ ಒಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ. ತಾಲೂಕಿನ ಸುರಾಪುರದ ಶಶಿಕಾಂತ ತಳವಾರ ಎನ್ನುವವರಿಂದ 6 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಡಿಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆಯಿತು. ಒಟ್ಟೂ 10 ಸಾವಿರ ರೂ. ಲಂಚ ಕೇಳಿದ್ದ ಸರ್ವೇಯರ್ ಶಶಿಕಾಂತ ಮದವಾಲ ಈ ಮೊದಲು 4 ಸಾವಿರ ರೂ. ಪಡೆದಿದ್ದ. ಇದೀಗ ಕಚೇರಿಯಲ್ಲೇ 6 ಸಾವಿರ ರೂ. ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ …

Read More »

ಗಣೇಶೋತ್ಸವಕ್ಕೆ ಹೊಸ ಗೈಡ್ ಲೈನ್; 5 ದಿನದ ಬದಲು 3 ದಿನಕ್ಕೆ ಸೀಮಿತ; ಷರತ್ತಿನ ಮೇಲೆ ಷರತ್ತು ಹಾಕಿದ ಬಿಬಿಎಂಪಿ

ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆ ಇದೀಗ ನಿಫಾ ವೈರಸ್ ಭೀತಿ ಕೂಡ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ಬಿಬಿಎಂಪಿ ಷರತ್ತುಗಳ ಮೇಲೆ ಷರತ್ತು ವಿಧಿಸಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ 5 ದಿನಗಳ ಕಾಲ ಅವಕಾಶ ನೀಡಿತ್ತು. ಆದರೆ ಬಿಬಿಎಂಪಿ ಬೆಂಗಳೂರಿಗೆ ಪ್ರತ್ಯೇಕ ಗಣೇಶೋತ್ಸವ ಗೈಡ್ ಲೈನ್ ಪ್ರಕಟಿಸಿದ್ದು, 3 ದಿನಗಳು ಮಾತ್ರ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿದೆ. ಹೊಸ ಗೈಡ್ ಲೈನ್: ವಾರ್ಡ್ ಗೆ …

Read More »

ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಬುಧವಾರ ಬೆಳಗಾವಿಗೆ

ಬೆಳಗಾವಿ – ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಬುಧವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಸಚಿವರಾದ ನಂತರ ಇದು ಬೆಳಗಾವಿಗೆ ಅವರ ಮೊದಲ ಭೇಟಿಯಾಗಿದೆ. ಕಂಗ್ರಾಳಿಯ ಕೆಎಸ್ ಆರ್ ಪಿ ತರಬೇತಿ ಶಾಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ನಡೆಯಲಿರುವ ಸಶಸ್ತ್ರ ಮೀಸಲು ಪೊಲೀಸ್ ಕಾನ್ ಸ್ಟೆಬಲ್  ಪ್ರಶಿಕ್ಷಣಾರ್ಥಿಗಳ ನಿರ್ಗಮ ಪಥ ಸಂಚಲನ ಕಾರ್ಯಕ್ರಮಕ್ಕೆ ಅರಗ ಜ್ಞಾನೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ …

Read More »

ಮಕ್ಕಳ ಮನೋಸ್ಥಿತಿ ಅರಿತು ಶಿಕ್ಷಣ ನೀಡಿ : ಸಚಿವ ಗೋವಿಂದ ಕಾರಜೋಳ

ಬಾಗಲಕೋಟೆ: ಮಕ್ಕಳ ಭವಿಷ್ಯವನ್ನು ರೂಪಿಸುವ ಶಿಕ್ಷಕರು ಮನೋವಿಜ್ಞಾನಿಯಾಗಿ, ತತ್ವಜ್ಞಾನಿಯಾಗಿ ಮಕ್ಕಳ ಮನಸ್ಥಿತಿ ಅರಿತು ಶಿಕ್ಷಣ ನೀಡುವಂತಾಗಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ಕೇವಲ ಸಂಬಳಕ್ಕಾಗಿ ಕೆಲಸ ಮಾಡದೇ ಉತ್ತಮ ಭವಿಷ್ಯ ನಿರ್ಮಿಕಸುವ ಕಾರ್ಯವಾಗಬೇಕು. …

Read More »

ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ,

ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ, ಗೋಕಾಕ ಶಹರ ಪೊಲೀಸ್ ಠಾಣೆ ಹಾಗೂ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಆಡಳಿತ ಮಂಡಳಿಯ ಅಧ್ಯಕ್ಷರ ಸಭೆ ಕರೆಯಲಾಗಿದ್ದು ಕಡ್ಡಾಯವಾಗಿ ಹಾಜರಾಗಲು ವಿನಂತಿ.ಈ ಸಭೆಯಲ್ಲಿ ಅಪೇಕ್ಷಿತರು ಶಾಂತಿ ಪಾಲನಾ ಸಮಿತಿ ಸದಸ್ಯರು,ಗೋಕಾಕ ಗ್ರಾಮ ದೇವತೆ ಜಾತ್ರಾ ಕಮಿಟಿ ಹಿರಿಯರು,ಗೋಕಾಕ ನಗರ ಸಭೆ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರಿಗೆ ಆಹ್ವಾನಿಸಲಾಗಿದ್ದು ಸರಿಯಾದ ಸಮಯಕ್ಕೆ ಬಂದು ಸಭೆ ಯಶಸ್ವಿಗಾಗಿ ಸಹಕರಿಸಲು ಗೋಕಾಕ …

Read More »

ಸರ್ಕಾರದ ನಿರ್ಬಂಧವನ್ನು ಪಕ್ಕಕ್ಕಿಟ್ಟು ಗಣೇಶೋತ್ಸವಕ್ಕೆ ಸಿದ್ಧತೆ, 21 ದಿನ ಗಣಪತಿ ಇಟ್ಟು ಅದ್ಧೂರಿ ಗಣೇಶ ಉತ್ಸವ ಮಾಡುತ್ತೇವೆ ಎಂದ ಸಂಘ ಪರಿವಾರ

ರಾಜ್ಯ ಬಿಜೆಪಿ ಸರ್ಕಾರ ಗಣೇಶೋತ್ಸವಕ್ಕೆ ಕೆಲ ನಿರ್ಬಂಧಗಳನ್ನು ವಿಧಿಸಿದೆ. ಆದ್ರೆ, ಸರ್ಕಾರದ ಆದೇಶಕ್ಕೆ ಸಂಘ ಪರಿವಾರವೇ ಸೆಡ್ಡು ಹೊಡೆಯಲು ಅಣಿಯಾಗಿದೆ. ಈ ಮಾತಿಗೆ ಸಾಕ್ಷಿ ಎಂಬಂತೆ ಕೋಟೆನಾಡಿನಲ್ಲಿ ಅದ್ಧೂರಿ‌ ಗಣೇಶೋತ್ಸವಕ್ಕೆ ವೇದಿಕೆ ಸಿದ್ಧಗೊಳ್ಳುತ್ತಿದೆ. ಚಿತ್ರದುರ್ಗ: ಪ್ರತಿ ವರ್ಷ ಕೋಟೆನಾಡಿನಲ್ಲಿ ಗಣೇಶೋತ್ಸವ ನಡೆಯುತ್ತಿತ್ತು. ಆದ್ರೆ ಈ ವರ್ಷ3ನೇ ಅಲೆ ಭೀತಿಯಿಂದ ಗಣೇಶೋತ್ಸವದ ಕೊರೊನಾ ಕರಿನೆರಳು ಬಿದ್ದಿದೆ. ಖಡಕ್ ರೂಲ್ಸ್ ಹೇರಿ ಅದ್ಧೂರಿ ಗಣೇಶೋತ್ಸವಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಹೀಗೆ ಸರ್ಕಾರದ ಟಫ್ …

Read More »

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ನೆರವು ನೀಡಲು ಸಂಪೂರ್ಣ ಸಹಕಾರ : ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಜಾರಿಗೊಳಿಸುತ್ತಿರುವ ಸಾಂದೀಪನಿ ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಬಿಡುಗಡೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು 9,206 ವಿದ್ಯಾರ್ಥಿಗಳಿಗೆ ಮಂಡಳಿಯು 13.77 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡಲಾಗಿದೆ. ಬ್ರಾಹ್ಮಣ ಬುದ್ಧಿವಂತಿಕೆಯೊಂದಿಗೆ ಸ್ಥಿತ ಪ್ರಜ್ಞತೆಯನ್ನು ಹೊಂದಿದ್ದಾರೆ. ಇದರಿಂದ ದೇಶ, ಸಮಾಜಕ್ಕೆ ಅನುಕೂಲವಾಗಿದೆ ಎಂದು ಅಭಿಪ್ರಾಯ ಪಟ್ಟರು. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಕಾರ್ಯಾರಂಭ ಮಾಡಿದ …

Read More »

ಶಾಲೆಗೆ ಪುನರಾಗಮನ

ಬೆಂಗಳೂರು: ಉಡುಪಿ ಜಿಲ್ಲೆಯ ಸಹಿತ ರಾಜ್ಯಾದ್ಯಂತ ಸೋಮವಾರ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾರಂಭವಾಗಿದೆ. ಹಲವು ದಿನ ಗಳಿಂದ ಮನೆಯಲ್ಲೇ ಕಾಲಕಳೆದಿದ್ದ ಮಕ್ಕಳು ಉತ್ಸಾಹದಿಂದ ಪಾಠ ಆಲಿಸಿದರು. ಆದರೆ ಕೋವಿಡ್‌ ಸೋಂಕು ಹೆಚ್ಚಿರುವ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಇನ್ನೂ ಆರಂಭವಾಗಿಲ್ಲ. ಮೊದಲ ದಿನ ಭೌತಿಕ ಹಾಜರಾತಿ ಕಡಿಮೆಯಿತ್ತು. ಭೌತಿಕ ತರಗತಿಗೆ ಹಾಜರಾತಿ ಕಡ್ಡಾಯ ವಲ್ಲದ ಕಾರಣ ಅರ್ಧಕ್ಕಿಂತಲೂ ಕಡಿಮೆ ಹಾಜರಾತಿ ಇತ್ತು. …

Read More »

200 ಕೋಟಿ ಸುಲಿಗೆ ಪ್ರಕರಣ: ‘ಮದ್ರಾಸ್ ಕೆಫೆ’ ನಟಿ ಬಂಧನ

ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ, ರೂಪದರ್ಶಿ ಲೀನಾ ಮರಿಯಾ ಪೌಲ್ ಅವರನ್ನು ದೆಹಲಿ ಪೊಲೀಸರು ಬಂಧಿಸಿರುವ ವಿಚಾರ ಹೊರಬಿದ್ದಿದೆ. ಉದ್ಯಮಿಯೊಬ್ಬರ ಪತ್ನಿಯಿಂದ 200 ಕೋಟಿ ಸುಲಿಗೆ ಮಾಡಲು ಯತ್ನಿಸಿರುವ ಕೇಸ್‌ನಲ್ಲಿ ತನ್ನ ಬಾಯ್‌ಫ್ರೆಂಡ್‌ಗೆ ಸಹಾಯ ಮಾಡಿರುವ ಆರೋಪದಲ್ಲಿ ನಟಿಯನ್ನು ಭಾನುವಾರ (ಸೆಪ್ಟೆಂಬರ್ 5) ಅರೆಸ್ಟ್ ಮಾಡಲಾಗಿದೆ ಎಂದು ತಿಳಿದಿದೆ. ಪಿಟಿಐನಲ್ಲಿ ವರದಿಯ ಪ್ರಕಾರ, ಆರೋಪಿಗಳ ವಿರುದ್ಧ ಮಹಾರಾಷ್ಟ್ರ ಎಂಸಿಒಸಿಎ (Maharashtra Control of Organised Crime (MCOCA) ಕಾಯ್ದೆ ಜಾರಿ …

Read More »

ವಿಜಯಪುರ ಜಿಲ್ಲೆಯಾದ್ಯಂತ ವರುಣನ ಆರ್ಭಟ

ವಿಜಯಪುರ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ಭಾರೀ ಮಳೆ ಸುರಿಯತೊಡಗಿದೆ. ಸೋಮವಾರ ಮಧ್ಯಾಹ್ನ ಆರಂಭವಾದ ಮಳೆ ಎಡಬಿಡದೆ ಸುರಿಯತೊಡಗಿದ್ದು, ಇಡೀ ಜಿಲ್ಲೆ ಮಳೆನಾಡಿನಂತಾಗಿದೆ. ವಿಜಯಪುರ, ಬಸವನ ಬಾಗೇವಾಡಿ, ತಾಳಿಕೋಟೆ, ದೇವರ ಹಿಪ್ಪರಗಿ, ತಿಕೋಟಾ, ಬಬಲೇಶ್ವರ, ಹೊರ್ತಿ, ಕೊಲ್ಹಾರ, ಇಂಡಿ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗತೊಡಗಿದೆ. ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು, ಜನ, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹೊಲಗಳಲ್ಲಿ ನೀರು ನಿಂತಿದ್ದು, ಬೆಳೆಗೆ ಸಮಸ್ಯೆಯಾಗುವ ಆತಂಕ ಎದುರಾಗಿದೆ. ಭಾರೀ ಮಳೆಯಿಂದ …

Read More »