ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಲಾರಿ ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಹರಿದು ಮೂವರು ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ಸೋಮವಾರ ನಡೆದಿದೆ. ಬೆಂಗಳೂರಿನ ಅಬ್ದುಲ್ ರಹಿಮಾನ್ (23), ಮಧು (33) ಮತ್ತು ಅಬ್ಸಾನ್ (33) ಮೃತರು. ಲಾರಿಯ ಚಾಲಕ ಶಿವಮೊಗ್ಗದ ಆಸಿಫ್ ಲಾರಿಯ ಒಳಗಡೆ ಕುಳಿತಿದ್ದರಿಂದ ಪಾರಾಗಿದ್ದಾರೆ. ಆಂಧ್ರಪ್ರದೇಶ ಮೂಲದ ಲಾರಿಯೊಂದು ಹೆದ್ದಾರಿಯಲ್ಲಿ ಕೆಟ್ಟು ನಿಂತಿತ್ತು. ಲಾರಿ ರಿಪೇರಿ …
Read More »ಸುಪ್ರೀಂಕೋರ್ಟ್ನ 9 ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧನೆ
ನವದೆಹಲಿ: ಸುಪ್ರೀಂಕೋರ್ಟ್ಗೆ ನೇಮಕಗೊಂಡಿರುವ ಕರ್ನಾಟಕದ ಬಿ.ವಿ.ನಾಗರತ್ನ ಸೇರಿದಂತೆ 9 ನೂತನ ನ್ಯಾಯಮೂರ್ತಿಗಳಿಗೆ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಅವರು ಮಂಗಳವಾರ ಪ್ರತಿಜ್ಞಾವಿಧಿ ಬೋಧಿಸಿದರು. ಇದರೊಂದಿಗೆ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳ ಒಟ್ಟು ಸಂಖ್ಯೆ 33ಕ್ಕೆ ಏರಿದಂತಾಗಿದೆ. ಸುಪ್ರೀಂಕೋರ್ಟ್ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 9 ನ್ಯಾಯಮೂರ್ತಿಗಳು ಏಕಕಾಲಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ ಓಕಾ, ವಿಕ್ರಮ್ ನಾಥ್, ಜಿತೇಂದ್ರಕುಮಾರ್ ಮಾಹೇಶ್ವರಿ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನ, ಸಿ.ಟಿ.ರವಿಕುಮಾರ್, ಎಂ.ಎಮ.ಸುಂದ್ರೇಶ್, ಬೇಲಾ ಎಂ.ತ್ರಿವೇದಿ ಹಾಗೂ ಪಿ.ಎಸ್.ನರಸಿಂಹ ಅವರು …
Read More »KSRTC ಬಸ್ ತಡೆದು ವಿದ್ಯಾರ್ಥಿಗಳು, ಜನರಿಂದ ಪ್ರತಿಭಟನೆ
ನೆಲಮಂಗಲ: ವಿದ್ಯಾರ್ಥಿಗಳು ಹಾಗೂ ಜನರು ಕೆ.ಎಸ್.ಆರ್.ಟಿ.ಸಿ ಬಸ್ಗಳನ್ನು ತಡೆದು ನೆಲಮಂಗಲದಲ್ಲಿ ಪ್ರತಿಭಟನೆ ನಡೆಸಿದರು. ಕೊರೊನಾ ಆತಂಕದ ನಡುವೆಯೇ ಇತ್ತೀಚೆಗೆ ಶಾಲಾ ಕಾಲೇಜುಗಳನ್ನು ಓಪನ್ ಮಾಡಿದ್ದು, ಪಾಠ ಪ್ರವಚನಗಳು ನಡೆಯುತ್ತಿವೆ. ಆದರೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಸಾರಿಗೆ ವ್ಯವಸ್ಥೆಯಿಂದ ಸಾಕಷ್ಟು ಕಷ್ಟ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಬೆಳಗ್ಗೆ ಸಮಯದಲ್ಲಿ ಶಾಲಾ ಕಾಲೇಜುಗಳಿಗೆ ಹೋಗಲು ಬಸ್ಗಳು ಸರಿಯಾಗಿ ಬರುತ್ತಿಲ್ಲ. ಬರುವಂತಹ ಎಲ್ಲಾ ಬಸ್ಗಳು ಸರ್ವೀಸ್ ರಸ್ತೆಯಲ್ಲಿ ಚಲಿಸದೆ ಹೆದ್ದಾರಿಯಲ್ಲಿ ಸಂಚಾರ ಮಾಡುತ್ತಿವೆ. ಈ …
Read More »ಮೈಸೂರು ಗ್ಯಾಂಗ್ ರೇಪ್ ಸಂತ್ರಸ್ಥೆ ಫೋನ್ ಸ್ವಿಚ್ ಆಫ್
ಮೈಸೂರು,; ಗ್ಯಾಂಗ್ರೇಪ್ಗೆ ಒಳಗಾದ ಸಂತ್ರಸ್ತೆ ಪೊಲೀಸರಿಗೆ ದೊಡ್ಡ ತಲೆ ನೋವಾಗಿದ್ದಾಳೆ. ನಾವು ಫೋನ್ ಮಾಡಿದಾಗ ಕೆಲವು ವಿವರ ನೀಡುವಂತೆ ಸಂತ್ರಸ್ತೆ ಮತ್ತು ಫೋಷಕರಿಗೆ ಪೊಲೀಸರು ತಾಕೀತು ಮಾಡಿ ಮೈಸೂರಿನಿಂದ ಕಳುಹಿಸಿದ್ದರು. ಸದ್ಯ ಮುಂಬೈನಲ್ಲಿರುವ ಯುವತಿ ಮತ್ತು ಫೋಷಕರು ಫೋನ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿಗಳು ಸಿಕ್ಕಿರುವ ಕಾರಣ ಸಂತ್ರಸ್ತೆ ಮುಂದೆ ಐಡೆಂಟಿಫಿಕೇಷನ್ ಪರೇಡ್ ಮಾಡಿಸಬೇಕು. ಆದರೆ, ಸಂತ್ರಸ್ತೆ ಫೋನ್ ಪಿಕ್ ಮಾಡದ ಕಾರಣ ಪೊಲೀಸರು ಮುಂದೇನು ಮಾಡುವುದು ಎಂದು ಚಿಂತಿತರಾಗಿದ್ದಾರೆ. …
Read More »ಯುವತಿಗೆ ಚಾಕು ಇರಿದು, ತಾನು ಕತ್ತು ಕೊಯ್ದುಕೊಂಡ ಯುವಕ
ಉಡುಪಿ: ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು, ಬಳಿಕ ತಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಸಂತೆಕಟ್ಟೆ ಸಮೀಪದ ರೋಬೋಸಾಫ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಆ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಸೌಮ್ಯಶ್ರೀ ವಿಠಲ ಭಂಡಾರಿ (28) ಚಿಕಿತ್ಸೆಗೆ ಸ್ಪಂದಿಸದೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಸಂತೆಕಟ್ಟೆಯ ರೋಬೊ ಸಾಫ್ಟ್ ಕಂಪನಿ ಎದುರು ಸೌಮ್ಯಶ್ರೀ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬೈಕ್ ನಲ್ಲಿ ಬಂದ ಸಂದೇಶ್ ಏಕಾಏಕಿ …
Read More »ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; 20 ದಿನದಲ್ಲಿ ಬಾಕಿ ಪಠ್ಯಪುಸ್ತಕ ಪೂರೈಕೆ
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಶೇಕಡ 54.74 ರಷ್ಟು ಪಠ್ಯಪುಸ್ತಕ ಪೂರೈಕೆ ಮಾಡಲಾಗಿದ್ದು, ಪುಸ್ತಕಗಳ ಮುದ್ರಣ ಕಾರ್ಯ ಪ್ರಗತಿಯಲ್ಲಿದೆ. ಇನ್ನು 20 ದಿನಗಳ ಒಳಗೆ ಮಕ್ಕಳಿಗೆ ಪಠ್ಯ ಪುಸ್ತಕ ಪೂರೈಕೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಹೈಕೋರ್ಟ್ ಗೆ ರಾಜ್ಯ ಸರ್ಕಾರದಿಂದ ಈ ಕುರಿತಾಗಿ ಮಾಹಿತಿ ಸಲ್ಲಿಸಲಾಗಿದೆ. ಈ ಕುರಿತಂತೆ ಸಲ್ಲಿಕೆಯಾಗಿದ್ದ ವಿಚಾರಣೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆದಿದ್ದು, …
Read More »ಕೇರಳದಲ್ಲಿ ಮಹಾಮಾರಿ ಕೊರೊನಾ ಆತಂಕ : 24 ಗಂಟೆಯಲ್ಲಿ19,622 ಪ್ರಕರಣಗಳು ಪತ್ತೆ
ತಿರುವನಂತಪುರಂ : ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 1,17,216 ಕೊರೊನಾ ಪರೀಕ್ಷೆಗಳು ನಡೆದಿದ್ದು, ಬಳಿಕ ಕೇರಳದಲ್ಲಿ 19,622 ಪ್ರಕರಣಗಳು ವರದಿಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ಕೇರಳದಲ್ಲಿ 19,622 ಪ್ರಕರಣಗಳು ವರದಿಯಾಗಿದೆ. ಸದ್ಯ ಕೇರಳದಲ್ಲಿ ಪಾಸಿಟಿವಿಟಿ ರೇಟ್ ಶೇಕಡಾ 16.74 ರಷ್ಟಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನೂ., ಕೇರಳದಲ್ಲಿ 123 ಹೊಸ ಸಾವುಗಳು ವರದಿಯಾಗಿವೆ, ಸಾವಿನ ಸಂಖ್ಯೆ 20673 …
Read More »ಕುರಿ ಸಂತೆ ಎಫೆಕ್ಟ್; ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್.. ಪರದಾಡಿದ ಆಯಂಬುಲೆನ್ಸ್
ರಾಯಚೂರು: ಎಪಿಎಂಸಿ ಮತ್ತು ಪೊಲೀಸ್ ಇಲಾಖೆಯ ನಿರ್ಲಕ್ಷ್ಯಕ್ಕೆ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಆಯಂಬುಲೆನ್ಸ್ ಸಾಗಲು ಪರದಾಡಿದ ಘಟನೆ ಜಿಲ್ಲೆಯ ಜಿಲ್ಲೆಯ ಸಿಂಧನೂರಿನ ಕುಷ್ಟಗಿ ಮುಖ್ಯ ಹೆದ್ದಾರಿಯಲ್ಲಿ ನಡೆದಿದೆ. ಸಿಂಧನೂರು ಪಟ್ಟಣದ ಹೊರ ವಲಯದಲ್ಲಿ ಪ್ರತಿ ಸೋಮವಾರ ಕುರಿ ಸಂತೆ ನಡೆಯುತ್ತದೆ. ಕುರಿ ಸಂತೆ ಹಿನ್ನೆಲೆ ಅಪಾರ ಪ್ರಮಾಣದಲ್ಲಿ ಕುರಿ ವ್ಯಾಪಾರಸ್ಥರು, ಗ್ರಾಹಕರು ಸ್ಥಳದಲ್ಲಿ ಜಮಾಯಿಸುತ್ತಾರೆ. ಪರಿಣಾಮ ಸಂತೆಯ ದಿನ ಇಡೀ ರಸ್ತೆ ಒಂದು ಕಿಲೋ …
Read More »ವಿಜಯಪುರ ಅತ್ಯಾಚಾರಿ ಆತ್ಮಹತ್ಯೆ: ನಾಲ್ವರು ಪೊಲೀಸರ ಅಮಾನತು
ವಿಜಯಪುರ, ಆಗಸ್ಟ್ 30: ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿ ಪೊಲೀಸ್ ಠಾಣೆ ಶೌಚಾಲಯದಲ್ಲೇ ನೇಣಿಗೆ ಶರಣಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಂದಗಿ ಠಾಣೆಯ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಮೇರೆಗೆ ಪೊಲೀಸರ ಅಮಾನತು ಮಾಡಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳ ನಿಯಮದ ಪ್ರಕಾರ ಕ್ರಮ ಕೈಗೊಂಡಿದ್ದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸಬ್ ಇನ್ಸ್ಪೆಕ್ಟರ್ ಸಂಗಮೇಶ್ ಹೊಸಮನಿ, …
Read More »ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಧ್ವನಿ ಎತ್ತಿದ RTI ಕಾರ್ಯಕರ್ತನ ಮೇಲೆ ಹಲ್ಲೆ
ಬೆಂಗಳೂರು: ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಅರ್ಜಿ ಸಲ್ಲಿಸಿದ್ದ RTI ಕಾರ್ಯಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸರ್ಜಾಪುರದ ಸೋಂಪುರ ಬಳಿ ನಡೆದಿದೆ. ಮಾಡ್ರನ್ ಸ್ಪೇಸ್ ಕಂಪನಿಯ ಯತೀಶ್ ಮತ್ತು ಮಂಜುನಾಥ್ ಅಕ್ರಮ ಕಟ್ಟಡ ಕಾಮಗಾರಿ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿ RTI ಕಾರ್ಯಕರ್ತ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ರು. ಅರ್ಜಿ ಪರಿಶೀಲಿಸಿ ಎಚ್ಚೆತ್ತುಕೊಂಡ ಅಧಿಕಾರಿಗಳು, ಡ್ರೀಮ್ಸ್ ಇನ್ ಪ್ರಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಗೆ ಸಂಬಂಧಿಸಿದ ಸೋಂಪುರದ ಸರ್ವೆ …
Read More »
Laxmi News 24×7