Breaking News

ರಾಜ್ಯ

ಶೂ ಹಾಕಿಕೊಂಡೇ ದೇಗುಲ ಪ್ರವೇಶಿಸಿ ದೇವರ ದರ್ಶನ ಪಡೆದ ಸಚಿವ ಪ್ರಭು ಚೌಹಾಣ್

ಹಾವೇರಿ:ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಎಡವಟ್ಟು ಮಾಡಿಕೊಂಡಿದ್ದಾರೆ.ದೇಗುಲದ ಒಳಗೇ ಶೂ ಹಾಕಿಕೊಂಡು ದೇವರ ದರ್ಶನ ಪಡೆದಿದ್ದಾರೆ.ಹಾವೇರಿ‌ ಜಿಲ್ಲೆಯ ಶಿಗ್ಗಾವಿಯ ಬಂಕಾಪುರ ಪಟ್ಟಣದಲ್ಲಿ ನಡೆದಿರುವ ಘಟನೆ . ಬಂಕಾಪುರದ ಪ್ರಸಿದ್ಧ ನಗರೇಶ್ವರ ದೇವಾಲಯದ ಒಳಗೆ ಶೂ ಹಾಕಿಕೊಂಡು ಹೋಗಿ ದೇವರ ದರ್ಶನ ಪಡೆದ ಚೌಹಾಣ್ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಮುಖ್ಯಮಂತ್ರಿಯವರ ಆದೇಶದ ಮೇರೆಗೆ ಜಿಲ್ಲೆಯು ಪ್ರವಾಸ ಕೈಗೊಂಡಿರುವ ಪಶು ಸಂಗೋಪನೆ ಸಚಿವರಾದ ಪ್ರಭು ಚೌಹಾಣ್ ರವರು ಹಾವೇರಿ ಪ್ರವಾಸದಲ್ಲಿ ಇದ್ದಾರೆ. ಈ ಮಧ್ಯೆ …

Read More »

ನಿಂತಿದ್ದ ಲಾರಿಗೆ ಪೊಲೀಸ್​ ಜೀಪ್​ ಡಿಕ್ಕಿ: ಡಿಎಸ್ಪಿ ಗೆ ಗಂಭೀರ ಗಾಯ

ಯಾದಗಿರಿ: ನಿಂತ ಲಾರಿಗೆ ಹಿಂಬದಿಯಿಂದ ಪೊಲೀಸ್​ ಜೀಪ್​ ಡಿಕ್ಕಿ ಹೊಡೆದ ಪರಿಣಾಮ ಜೀಪ್​ನಲ್ಲಿದ್ದ ಡಿಎಸ್ಪಿ ಗಂಭೀರವಾಗಿ ಗಾಯಗೊಂಡ ಘಟನೆ ಶಹಾಪುರದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.   ಬೆಳಗಿನ ಜಾವ ಘಟನೆ ನಡೆದಿದೆ ಎನ್ನಲಾಗಿದ್ದು, ನೈಟ್ ರೌಂಡ್ಸ್ ನಲ್ಲಿದ್ದ ಸುರಪುರ ಡಿಎಸ್ಪಿ ವೆಂಕಟೇಶ ಉಗಿಬಂಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನುಳಿದಂತೆ ಪೊಲೀಸ್ ವಾಹನದಲ್ಲಿದ್ದ ಕಾರು ಚಾಲಕ ಹಾಗೂ ಪೊಲೀಸ್ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಗೊಂಡ ಡಿಎಸ್ಪಿ ಯನ್ನು ಕಲಬುರಗಿ …

Read More »

ಹುಣಸೂರು: ಮರದ ದಿಮ್ಮಿ ತುಂಬಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಡಿಕ್ಕಿ, ಬಸ್‌ ಚಾಲಕನಿಗೆ ಗಂಭೀರ ಗಾಯ

ಹುಣಸೂರು: ರಸ್ತೆ ಪಕ್ಕದಲ್ಲಿ ನಿಂತಿದ್ದ ಮರದ ದಿಮ್ಮಿಗಳನ್ನು ತುಂಬಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದ್ದು, ಬಸ್‌ ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಕಲ್ಬೆಟ್ಟ ಬಳಿ ನಡೆದಿದೆ. ಬಸ್‌ ಚಾಲಕ ಎಚ್‌.ಬಿ.ಮಹದೇವ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮರದ ದಿಮ್ಮಿಗಳನ್ನು ತುಂಬಿದ್ದ ಲಾರಿ ಹುಣಸೂರಿನ ಕಡೆ ಹೊರಟಿತ್ತು. ಈ ವೇಳೆ ಕಲ್ಬೆಟ್ಟದ ಬಳಿ ನಿಂತಿತ್ತು. ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ …

Read More »

ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಒತ್ತಾಯ; ಶೆಟ್ಟರ್ ಮನೆಮುಂದೆ ಶ್ರೀರಾಮ ಸೇನೆ ಪ್ರತಿಭಟನೆ

ಹುಬ್ಬಳ್ಳಿ: ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಒತ್ತಾಯಿಸಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆ ಮುಂದೆ ಶ್ರೀರಾಮ ಸೇನೆ ಪ್ರತಿಭಟನೆ ನಡೆಸಿದೆ. ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿದ್ದಾರೆ. ಸರ್ಕಾರಕ್ಕೆ ಇಲ್ಲದ ಕೋವಿಡ್ ನಿಯಮ ಗಣೇಶನಿಗೆ ಯಾಕೆ ಎಂದು ಮುತಾಲಿಕ್ ಪ್ರಶ್ನೆ ಮಾಡಿದ್ದಾರೆ. ಬಿಜೆಪಿಯ ರ್ಯಾಲಿಗಳಲ್ಲಿ ಕೋವಿಡ್ ನಿಯಮಗಳೇ ಇಲ್ಲ. ಆದ್ರೆ ಗಣೇಶನಿಗೆ ಮಾತ್ರ ನಿಯಮ ಪಾಲನೆ ಇದೆ. ಇಂದು ಸಿಎಂ ಜೊತೆಗಿನ …

Read More »

ಮಹಿಳೆಯರಿಗೆ ಸಿಹಿ ಸುದ್ದಿ: ಹೆಂಡತಿಯ ಆಸ್ತಿ ಅಥವಾ ಬಡ್ಡಿ ಗಳಿಕೆಯಲ್ಲಿ ಪತಿಗೆ ಅವಕಾಶವಿಲ್ಲ, MWPಕಾಯ್ದೆ ಬಗ್ಗೆ ತಿಳಿದರಲಿ

ವಿವಾಹಿತ ಮಹಿಳೆಯರ ರಕ್ಷಣಾ ಕಾಯ್ದೆಯನ್ನು (ಎಂಡಬ್ಲ್ಯುಪಿ ಕಾಯ್ದೆ) ವಿವಾಹಿತ ಮಹಿಳೆಯರನ್ನು ರಕ್ಷಿಸಲು ವಿನ್ಯಾಸಗೊಳಿಸಲಾಗಿದೆ.ಅಂದ ಹಾಗೇ ಎಂಡಬ್ಲ್ಯೂಪಿ ಕಾಯ್ದೆಯನ್ನು 1874 ರಲ್ಲಿ ಮಾಡಲಾಗಿದ್ದು, ವಿವಾಹಿತ ಮಹಿಳೆಯರಿಗೆ ಸಂಬಳ, ಗಳಿಕೆ, ಆಸ್ತಿ, ಹೂಡಿಕೆ ಮತ್ತು ಉಳಿತಾಯದ ಮಾಲೀಕತ್ವದ ಹಕ್ಕುಗಳನ್ನು ನೀಡುವ ಅಧಿಕಾರವನ್ನು ಈ ಕಾನೂನು ಹೊಂದಿದೆ. ಹೆಂಡತಿಯ ಯಾವುದೇ ಆದಾಯ ಅಥವಾ ಹೂಡಿಕೆಯ ಹಕ್ಕನ್ನು ಗಂಡನಿಗೆ ನೀಡುವ ಹಾಗಿಲ್ಲ ಅಂತ ಈ ಕಾಯ್ದೆಯಲ್ಲಿ ಹೇಳಲಾಗಿದೆ. ಎಂಡಬ್ಲ್ಯೂಪಿ ಕಾಯ್ದೆಯ ಪ್ರಕಾರ, ಹೂಡಿಕೆ, ಉಳಿತಾಯ, ಸಂಬಳ …

Read More »

ಮೈಸೂರಲ್ಲಿ ಗ್ಯಾಂಗ್​ ರೇಪ್​: ನಮ್ಮಲ್ಲೊಬ್ಬನಿಗೆ ಲೈಂಗಿಕ ಚಟವಿತ್ತು. ಬೆಚ್ಚಿಬೀಳಿಸುತ್ತೆ ಆರೋಪಿಗಳ ಮಾತು

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳು ಎರಡು ವರ್ಷದಿಂದಲೂ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಯುವ ಜೋಡಿಗಳನ್ನು ಪೀಡಿಸಿದ್ದು ಮಾತ್ರವಲ್ಲ, ಅವರ ಬಳಿ ಸಿಕ್ಕಿದ್ದನ್ನೆಲ್ಲ ದೋಚುತ್ತಿದ್ದಾರೆ. ಬಂಧಿತ ಐವರು ಆರೋಪಿಗಳಲ್ಲಿ ಒಬ್ಬನಿಗೆ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಚಟವಿತ್ತು. ಒಬ್ಬ ಮಹಿಳೆಯರ ಮೇಲೆ ಆತ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರೆ, ಇನ್ನುಳಿದವರು ಚಿನ್ನಾಭರಣ ಮತ್ತು ಹಣಕ್ಕೆ ಆಸೆ ಬೀಳುತ್ತಿದ್ದರು ಎಂಬ ಅಂಶ ತನಿಖೆಯಲ್ಲಿ ಬಯಲಾಗಿದೆ. ಕೃತ್ಯ ಎಸಗಿರುವುದಾಗಿ ಆರೋಪಿಗಳೆಲ್ಲರೂ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ. ವಯಸ್ಸಿನ ವ್ಯತ್ಯಾಸವನ್ನೇ …

Read More »

ಬಸ್‍ಗೆ ದಾರಿ ಬಿಡದೇ ಬೈಕ್‍ನಲ್ಲಿ ಯುವಕನ ಪುಂಡಾಟ – ಹಿಡಿದು ಥಳಿಸಿದ ಸಾರ್ವಜನಿಕರು

ಹಾಸನ : ಸಾರಿಗೆ ಬಸ್‍ಗೆ ದಾರಿ ಬಿಡದೇ ಪುಂಡಾಟ ಮೇರೆದ ಯುವಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ವೈ.ಎನ್.ಪುರ ಬಳಿ ನಡೆದಿದೆ. ಬೈಕ್‍ನಲ್ಲಿ ಹೋಗುತ್ತಿದ್ದ ಯುವಕ ತನ್ನ ಹಿಂದೆ ಸಾರಿಗೆ ಬಸ್ ಬರುತ್ತಿದ್ದರು ಕೂಡ ಬೈಕ್ ನಲ್ಲಿ ವೀಲ್ಹಿಂಗ್ ಮಾಡುತ್ತಾ ಬಸ್‍ಗೆ ಅಡ್ಡ ಬರುತ್ತಿದ್ದ. ಡ್ರೈವರ್ ಹಾರ್ನ್ ಮಾಡಿದರೂ ಕೂಡ ರಸ್ತೆ ಒಂದು ಬದಿಯಿಂದ ಮತ್ತೊಂದು ಬದಿಗೆ ಜಿಗ್‍ಜಾಗ್ ಮಾದರಿಯಲ್ಲಿ ಬೈಕ್ ಚಲಾಯಿಸಲಾರಂಭಿಸಿದ್ದಾನೆ. ಇದರಿಂದ …

Read More »

ಒಂದು ವರ್ಷದಿಂದ ಇವರು ಬಾಯಿ ಮುಚ್ಚಿದ್ರು: ಡಿಕೆಶಿ ವಿರುದ್ಧ ಅನಿಲ್ ಬೆನಕೆ ವಾಗ್ದಾಳಿ

ಒಂದುವರ್ಷದಿಂದ ಇವರು ಬಾಯಿ ಮುಚ್ಚಿಕೊಂಡಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ ಸುರೇಶ್ ಅಂಗಡಿ ಅವರ ಅಮಾನವೀಯ ಅಂತ್ಯಸಂಸ್ಕಾರ ಮಾಡಿತು ಎಂಬ ಡಿಕೆಶಿ ಆರೋಪ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸನ್ಮಾನ್ಯ ಸುರೇಶ ಅಂಗಡಿ ಕೊರೊನಾದಿಂದ ಮೃತಪಟ್ಟು ಒಂದು ವರ್ಷವಾಯಿತು. ಒಂದು ವರ್ಷದಿಂದ ಇವರು ಬಾಯಿ ಮುಚ್ಚಿದ್ರು. ಇವರು ಡಿ.ಕೆ ಶಿವಕುಮಾರ್ …

Read More »

ಭ್ರಷ್ಟಾಚಾರದಲ್ಲಿ ರಾಜ್ಯ ಸರಕಾರ ನಂ.1: ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಕೋವಿಡ್‌ ಸಂದರ್ಭದ ಭ್ರಷ್ಟಾಚಾರದಲ್ಲಿ ರಾಜ್ಯ ಸರಕಾರ ರಾಷ್ಟ್ರದಲ್ಲೇ ಮೊದಲ ಸ್ಥಾನದಲ್ಲಿದೆ. ಚಿಕಿತ್ಸೆ, ಔಷಧ, ಶವಸಂಸ್ಕಾರಕ್ಕೂ ಕ್ಯೂ ನಿಲ್ಲಿಸಿದರು. ಸಂಕಷ್ಟದ ಸಂದರ್ಭದಲ್ಲಿ ಆಸ್ತಿ ತೆರಿಗೆ ಸೇರಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ ಜನರನ್ನು ಕಿತ್ತು ತಿನ್ನುವ ಕೆಲಸವನ್ನು ಸರಕಾರ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಆಡಳಿತವಿದ್ದರೆ ಎರಡೇ ವರ್ಷಕ್ಕೆ ಮುಖ್ಯಮಂತ್ರಿಯನ್ನು ಬದಲಾಯಿಸಿದ್ದು ಯಾಕೆ? ರಾಜೀನಾಮೆ ನೀಡುವ ಮೊದಲು ಮುಖ್ಯಮಂತ್ರಿಗಳು ಬಹಿರಂಗವಾಗಿ …

Read More »

ಬಿಜೆಪಿಯವರು ಕ್ಷಮಾ ಯಾತ್ರೆ ಮಾಡಲಿ: ಸಲೀಂ ಅಹ್ಮದ್ ಟೀಕೆ

ಕಲಬುರ್ಗಿ: ‘ನಾಲ್ವರು ಕೇಂದ್ರ ಸಚಿವರು ಈಚೆಗೆ ಜನಾಶೀರ್ವಾದ ಯಾತ್ರೆ ನಡೆಸಿದರು. ಕೋವಿಡ್‌ ಸಂದರ್ಭದಲ್ಲಿ ಸಮರ್ಪಕವಾಗಿ ಬೆಡ್‌, ಆಮ್ಲಜನಕ, ರೆಮ್‌ಡೆಸಿವಿರ್ ಚುಚ್ಚುಮದ್ದು ನೀಡದೇ ವಿಫಲರಾಗಿದ್ದಕ್ಕೆ ಜನರ ಕ್ಷಮೆ ಕೇಳಲು ಕ್ಷಮಾ ಯಾತ್ರೆ ಮಾಡಬೇಕಿತ್ತು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಟೀಕಿಸಿದರು. ‘ರಾಜ್ಯದಲ್ಲಿ ಜನರು ಕೋವಿಡ್‌ನಿಂದ ಸಂಕಷ್ಟದಲ್ಲಿದ್ದು, ಬೆಲೆ ಏರಿಕೆಯಿಂದಲೂ ತತ್ತರಿಸಿದ್ದಾರೆ. ಅಚ್ಛೆ ದಿನ್ ಭರವಸೆ ನೀಡಿ ಅತ್ಯಂತ ಕೆಟ್ಟ ದಿನಗಳಲ್ಲಿ ನರಳುವಂತೆ ಮಾಡಿದ್ದಕ್ಕೆ, ₹ 13 ಸಾವಿರ ಕೋಟಿ ಜಿಎಸ್‌ಟಿ …

Read More »