ಬೆಂಗಳೂರು: ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಶಾಲೆಗಳು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರು ನಗರದ ಮಲ್ಲೇಶ್ವರಂ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಇವತ್ತು ಕೊರೊನಾದಿಂದ ಮಕ್ಕಳಿಗೆ ಸ್ವಾತಂತ್ರ್ಯ ಸಿಕ್ಕಿದೆ. ಸೋಂಕು ಇಳಿಕೆಯಾಗುತ್ತಿದಂತೆ ಶಾಲೆಗಳ ಸಂಖ್ಯೆಯನ್ನು ಹೆಚ್ಚು ಮಾಡ್ತೇವೆ. ಕೊರೊನಾ ಕಡಿಮೆಯಾದ ಕಾರಣದಿಂದ ಶಾಲೆ ಆರಂಭ ಮಾಡಲಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ನೋಡಿ ಬಹಳ ಸಂತೋಷವಾಯಿತು. ಭೇಟಿ ವೇಳೆ …
Read More »ಹಾನಗಲ್ ಉಪಚುನಾವಣೆ; ಪ್ರತಿಷ್ಠೆಯಾಗಿ ಸ್ವೀಕರಿಸಿದ ಬೊಮ್ಮಾಯಿ.. ಸೈಲೆಂಟ್ ಆದ್ರಾ ಕಾಂಗ್ರೆಸ್ಸಿಗರು?
ಹಾವೇರಿ: ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಷ್ಠೆ ಕಣವಾಗಿ ಸ್ವೀಕರಿಸದ್ದೇ ತಡ ಸ್ಥಳೀಯ ಕಾಂಗ್ರೆಸ್ ನಾಯಕರು ಫುಲ್ ಸೈಲೆಂಟ್ ಆಗಿದ್ದಾರೆ. ಉಪಚುನಾವಣೆಯಲ್ಲಿ ಹಾನಗಲ್ ಟಿಕೆಟ್ಗಾಗಿ ಮಾಜಿ ಸಚಿವ ಮನೋಹರ ತಹಶೀಲ್ದಾರ್ ಮತ್ತು ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಶ್ರೀನಿವಾಸ ನಡುವೆ ಭಾರೀ ಪೈಪೋಟಿ ನಡೆದಿತ್ತು. ಇಬ್ಬರು ತಮ್ಮ ಬೆಂಬಲಿಗರನ್ನು ಕರೆದುಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನೆಗಳಿಗೆ …
Read More »ಆಯುಧ ಸ್ವಚ್ಛ ಮಾಡುವ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದು ಪೇದೆ ಸಾವು!
ದಾವಣಗೆರೆ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆಯೊಬ್ಬರು ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಸಶಸ್ತ್ರ ಮೀಸಲು ಪಡೆಯ ಚೇತನ್ (28 ವ) ಸಾವನ್ನಪ್ಪಿದ ಪೊಲೀಸ್ ಕಾನ್ಸ್ ಸ್ಟೇಬಲ್. ದಾವಣಗೆರೆ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಘಟನೆ ಸಂಭವಿಸಿದೆ. ಬೆಳಗಿನ ತರಬೇತಿ ಮುಗಿಸಿ ಆಯುಧ ಸ್ವಚ್ಛ ಮಾಡಿವ ವೇಳೆ ಈ ಅವಘಡ ನಡೆದಿದೆ. ತೀವ್ರವಾಗಿ ಗಾಯಗೊಂಡ ಚೇತನ್ ಅವರನ್ನು ಸಿಟಿ ಸೆಂಟ್ರಲ್ ಆಸ್ಪತ್ರೆ …
Read More »ಹೊಸ ಡಿಜಿಟಲೀಕರಣ ನೀತಿ ಹಾಗೂ ಆರ್ ಆಯಂಡ್ ಡಿ ಪಾಲಿಸಿ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಹೊಸ ಡಿಜಿಟಲೀಕರಣ ನೀತಿಯ ಜತೆಗೆ ಸಂಶೋಧನೆ ಮತ್ತು ಅಭಿವೃದ್ಧಿ ಪಾಲಿಸಿಯನ್ನು ಜಾರಿಗೆ ತರಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, 2021-22ನೇ ಸಾಲಿನ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸ ಡಿಜಿಟಲೈಸೇಷನ್ ಪಾಲಿಸಿ (ಹೊಸ ಡಿಜಿಟಲೀಕರಣ ನೀತಿ)ಯನ್ನು ಜಾರಿಗೆ ತರಲಿದ್ದೇವೆ. ಬ್ರಾಡ್ಬ್ಯಾಂಡ್ ಹಾಗೂ ಇಂಟರ್ ನೆಟ್ ವ್ಯವಸ್ಥೆಯನ್ನು ಗ್ರಾಹಕರ …
Read More »ಭಯ, ಆತಂಕವಿಲ್ಲದೇ ಶಾಲೆಗೆ ಬನ್ನಿ: ಉಮೇಶ್ ಕತ್ತಿ
ಚಿಕ್ಕೋಡಿ: ಭಯ, ಆತಂಕವಿಲ್ಲದೇ ಶಾಲೆಗೆ ಬನ್ನಿ ಎಂದು ವಿದ್ಯಾರ್ಥಿಗಳಲ್ಲಿ ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ ಕತ್ತಿ ಮನವಿ ಮಾಡಿಕೊಂಡಿದ್ದಾರೆ. ಎಲ್ಲ ಮುನ್ನೆಚ್ಚರಿಕೆ ಕ್ರಮಗಳಿಂದ ಇಂದಿನಿಂದ ಶಾಲಾ ಕಾಲೇಜುಗಳನ್ನ ಆರಂಭಿಸಲಾಗಿದ್ದು, ಯಾವುದೇ ಭಯ, ಆತಂಕವಿಲ್ಲದೇ ವಿದ್ಯಾರ್ಥಿಗಳು ಶಾಲೆಗೆ ಬರಬೇಕು. ಇಂದಿನಿಂದ ಶಾಲಾ ಕಾಲೇಜುಗಳು ಆರಂಭವಾದ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಗುಡಸ್ ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಉತ್ಸಾಹ ತುಂಬುವ ಕಾರ್ಯ ಮಾಡಿದರು. ಕೊರೊನಾ ಕುರಿತು ಸಕಲ ಮುನ್ನೆಚ್ಚರಿಕೆ …
Read More »ಪಕ್ಷ ಸಂಘಟನೆಗೆ ಮಮತಾ ಬ್ಯಾನರ್ಜಿಯೇ ಸ್ಫೂರ್ತಿ: ಎಚ್.ಡಿ. ಕುಮಾರಸ್ವಾಮಿ
ಹುಬ್ಬಳ್ಳಿ: ‘ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ನನಗೆ ಸ್ಫೂರ್ತಿ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಟಿಎಂಸಿಯ ಸುಮಾರು 60ರಿಂದ 70 ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆಯಿತು. ಆದರೂ, ಮಮತಾ ಅವರು ಏಕಾಂಗಿಯಾಗಿ ಹೋರಾಡಿ ಚುನಾವಣೆಯಲ್ಲಿ ಮತ್ತೆ ಗೆದ್ದು ಬಂದರು. ಪಕ್ಷ ಕಟ್ಟಲು ಅವರಿಗಿಂತ ಸ್ಫೂರ್ತಿ ಬೇಕೇ’ ಎಂದರು. …
Read More »ಕೋವಿಡ್ ನಿಂದ ರೈಲ್ವೆಗೆ 36000 ಕೋಟಿ ನಷ್ಟ
ಮುಂಬೈ: ಕೊರೊನಾದಿಂದಾಗಿ ಭಾರತೀಯ ರೈಲ್ವೆ ಇಲಾಖೆಗೆ 36,000 ಕೋಟಿ ರೂಪಾಯಿ ನಷ್ಟವಾಗಿರುವುದಾಗಿ ರೈಲ್ವೆ ಇಲಾಖೆ ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಹೇಳಿದ್ದಾರೆ. ಸರಕು ರೈಲುಗಳೇ ನಮಗೆ ನಿಜವಾದ ಆದಾಯ ತಂದು ಕೊಡುತ್ತಿರುವುದು ಎಂದು ಅವರು ತಿಳಿಸಿದ್ದಾರೆ. ಭಾನುವಾರದಂದು ಮಹಾರಾಷ್ಟ್ರದ ಜಲ್ನಾ ರೈಲು ನಿಲ್ದಾಣದ ಅಂಡರ್ ಪಾಸ್ ಗುದ್ದಲಿ ಪೂಜೆ ನೆರವೇರಿಸಿದ ಅವರು, “ಪ್ಯಾಸೆಂಜರ್ ರೈಲುಗಳಿಂದ ಯಾವಾಗಲೂ ಲಾಭ ಸಿಗುವುದಿಲ್ಲ. ಟಿಕೆಟ್ ದರ ಹೆಚ್ಚಿಸಿದರೆ ಜನರಿಗೆ ತೊಂದರೆಯೆಂದು ದರ ಹೆಚ್ಚಳ ಮಾಡಿಲ್ಲ. ಕೊರೊನಾದಿಂದಾಗಿ ಇಲಾಖೆಗೆ …
Read More »ಮುಂದುವರಿದ ಕಾಬುಲ್ ಕಾರ್ಮೋಡ: ಏರ್ಪೋರ್ಟ್ನಲ್ಲಿ ಸಾವಿರಾರು ಜನರು ಅತಂತ್ರ; ಹಿಂಸೆ ನಡುವೆಯೂ ದೇಶ ತೊರೆಯಲು ಯತ್ನ
ಐಸಿಸ್ ದಾಳಿ ಆತಂಕ ತಾಲಿಬಾನಿಗಳ ಪೈಶಾಚಿಕ ಆಳ್ವಿಕೆಗೆ ಹೆದರಿ ಕಾಬುಲ್ ವಿಮಾನ ನಿಲ್ದಾಣಕ್ಕೆ ಜನಪ್ರವಾಹವೇ ಹರಿದುಬರುತ್ತಿದೆ. ಬಹುತೇಕರು ಅನ್ನಾಹಾರವಿಲ್ಲದೆ ನಿತ್ರಾಣರಾಗಿದ್ದಾರೆ. ಈ ನಡುವೆ, ಐಸಿಸ್ ಉಗ್ರರು ಏರ್ಪೋರ್ಟ್ ಮೇಲೆ ದಾಳಿ ನಡೆಸಬಹುದು ಎಂಬ ಸುಳಿವು ಸಿಕ್ಕ ಕಾರಣ, ಅವರ ದಾರಿ ತಪ್ಪಿಸುವುದಕ್ಕಾಗಿ ವಿಮಾನದಲ್ಲಿರುವ ಹೀಟ್-ಸೀಕಿಂಗ್ ಟೆಕ್ನಾಲಜಿಯನ್ನು ಬಳಸಿ ಜ್ವಾಲೆ ಉಗುಳುವಂತೆ ಮಾಡಲಾಗಿದೆ. ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನ ಹಾರಾಟ ಸ್ಥಗಿತವಾಗಿದ್ದರೂ, ಸೇನಾ ವಿಮಾನಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ತೆರಳಲು ಧಾವಂತ ಎಲ್ಲರಲ್ಲೂ …
Read More »ನಮ್ಮವರು ಪಾರು : ಅಫ್ಘಾನ್ನಿಂದ 392 ಮಂದಿ ವಾಪಸ್; ಕಾರ್ಯಾಚರಣೆಗೆ ಯಶ
ಕಾಬೂಲ್/ಹೊಸದಿಲ್ಲಿ/ಲಂಡನ್: ಅಫ್ಘಾನಿಸ್ಥಾನದಲ್ಲಿ ತಾಲಿಬಾನಿ ಕಪಿಮುಷ್ಠಿ ಯಿಂದ 392 ಮಂದಿ ಭಾರತೀಯರನ್ನು ಪಾರು ಮಾಡಿ ಸ್ವದೇಶಕ್ಕೆ ಕರೆತರುವಲ್ಲಿ ಭಾರತ ಸರಕಾರ ಯಶಸ್ವಿಯಾಗಿದೆ. ಈ ಪೈಕಿ ಏಳು ಮಂದಿ ಕನ್ನಡಿಗರಿದ್ದಾರೆ. ಮೂವರು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಸ್ವದೇಶಾಗಮನಕ್ಕೆ ಸಿದ್ಧರಾಗಿದ್ದಾರೆ. ಅಫ್ಘಾನಿಸ್ಥಾನವು ತಾಲಿಬಾನ್ ವಶವಾಗಿ 8 ದಿನಗಳು ಕಳೆದಿವೆ. ರವಿವಾರದ ವರೆಗೆ ಒಟ್ಟು 392 ಮಂದಿ ಭಾರತಕ್ಕೆ ಆಗಮಿಸಿದ್ದಾರೆ. ಇವರಲ್ಲಿ 23 ಮಂದಿ ಅಫ್ಘಾನಿ ಹಿಂದೂಗಳು ಮತ್ತು ಸಿಕ್ಖರಿದ್ದಾರೆ. ರವಿವಾರ 257 ಮಂದಿ ಆಗಮಿಸಿದ್ದಾರೆ. 168 …
Read More »ಗೋವಾದಲ್ಲಿ ಆಲ್ಕೋಹಾಲ್ ಮ್ಯೂಸಿಯಂ!
ಪಣಜಿ: ಪ್ರವಾಸಿ ರಾಜ್ಯ ಗೋವಾದಲ್ಲಿ ಮೊದಲ ಆಲ್ಕೋಹಾಲ್ ಮ್ಯೂಸಿಯಂ ತೆರೆಯಲಾಗಿದೆ. ಸ್ಥಳೀಯ ವಿಶೇಷ ಮದ್ಯವೆನಿಸಿಕೊಂಡಿರುವ ಫೆನ್ನಿಯ ಪ್ರಸಿದ್ಧತೆಯನ್ನು ದೇಶ ವಿದೇಶಕ್ಕೆ ಹರಡಿಸುವ ಉದ್ದೇಶದೊಂದಿಗೆ ಈ ಮ್ಯೂಸಿಯಂ ತೆರೆಯಲಾಗಿದೆ. ಉದ್ಯಮಿ ನಂದನ್ ಕುಡcಡ್ಕರ್ “ಆಲ್ ಎಬೌಟ್ ಆಲ್ಕೋಹಾಲ್’ ಹೆಸರಿನ ಮ್ಯೂಸಿಯಂ ತೆರೆದಿದ್ದಾರೆ. ಕಾಂಡೋಲಿಮ್ ಬೀಚ್ ಗ್ರಾಮದ ಬಳಿ ಈ ಮ್ಯೂಸಿಯಂ ಇದೆ. ಇದರಲ್ಲಿ ವಿಶೇಷವಾಗಿ ಪೆನ್ನಿಗೆ ಸಂಬಂಧಪಟ್ಟ ಸಾಮಗ್ರಿಗಳನ್ನು ಪ್ರದರ್ಶಿಸಲಾಗುವುದು. ಹಿಂದಿನ ಕಾಲದಲ್ಲಿ ಪೆನ್ನಿಯನ್ನು ಸಂಗ್ರಹಿಸುಡುತ್ತಿದ್ದ ಬೃಹದಾಕಾರದ ಹೂಜಿಗಳು, ಪೆನ್ನಿಗೆ ಸಂಬಂಧಿಸಿದ …
Read More »
Laxmi News 24×7