Home / ರಾಜ್ಯ (page 2312)

ರಾಜ್ಯ

ಆಹಾರ, ತರಕಾರಿ ಸುಗಮ ಸರಬರಾಜಿಗೆ ವ್ಯವಸ್ಥೆ – ಡಿಸಿ ಕೆ.ಬಿ ಶಿವಕುಮಾರ್

ಶಿವಮೊಗ್ಗ: ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಪ್‍ಕಾಮ್ಸ್ ನೆರವಿನಿಂದ ಪ್ರತಿ ವಾರ್ಡಿನಲ್ಲಿ ತರಕಾರಿ ಮಾರಾಟ ಮಾಡಲು ಹಾಗೂ ಪ್ಯಾಕ್ಡ್ ಆಹಾರ ಮನೆ ಬಾಗಿಲಿಗೆ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ತರಕಾರಿ, ಹಾಲು ಹಣ್ಣು, ಮೀನು, ಮಾಂಸ, ದಿನಸಿ ವಸ್ತುಗಳಂತಹ ಅವಶ್ಯಕ ವಸ್ತುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೋಳಿ ಜ್ವರ …

Read More »

ಜನರು ಮನೆಯಿಂದ ಹೊರ ಬರದಂತೆ ಚಿಕ್ಕೋಡಿ ಪೊಲೀಸರಿಂದ ಹೊಸ ಪ್ಲಾನ್

ಚಿಕ್ಕೋಡಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14ರವರೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಿಸಿದ್ದಾರೆ. ಆದರೆ ಅನೇಕರು ತರಕಾರಿ ಖರೀದಿಗೆ ಅಂತ ಮನೆಯಿಂದ ಹೊರ ಬರುತ್ತಿದ್ದಾರೆ. ಹೀಗಾಗಿ ಚಿಕ್ಕೋಡಿ ಪೊಲೀಸರು ಪ್ಲಾನ್ ಮಾಡಿ ಮನೆಯಿಂದ ಜನರು ಹೊರ ಬರದಂತೆ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಪೊಲೀಸರು ತಳ್ಳುವ ಗಾಡಿ ಅಥವಾ ಆಟೋಗಳಲ್ಲಿ ತರಕಾರಿ ಮಾರುವ ಒಟ್ಟು 12 ಜನರ ಹೆಸರು ಹಾಗೂ ಮೊಬೈಲ್ ನಂಬರ್ ಪಡೆದುಕೊಂಡಿದ್ದಾರೆ. ಅವರಿಗೆ ನಗರದ ವಿವಿಧ …

Read More »

ಕರ್ಫ್ಯೂ ಪಾಲಿಸಿದರೆ ಮಾತ್ರ ವೈರಾಣು ಹರಡುವುದನ್ನು ನಿಯಂತ್ರಿಸಬಹುದು: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿರುವ 21 ದಿನಗಳ ಕರ್ಫ್ಯೂಗೆ ಸಾರ್ವಜನಿಕರು ಬೆಂಬಲಿಸಬೇಕು. ಸ್ವಯಂ ನಿಯಂತ್ರಣವನ್ನು ಹೇರಿಕೊಂಡು ಅನಗತ್ಯವಾಗಿ ಮನೆಯಿಂದ ಹೊರಬರದೆ ವೈರಾಣು ಹರಡುವುದನ್ನು ನಿಯಂತ್ರಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಮನವಿ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣದಲ್ಲಿ ಅಗ್ನಿಶಾಮಕದಳದಿಂದ ನಡೆಸಲಾದ ಡಿಸ್‍ಇನ್ಫೆಕ್ಷನ್ ಸ್ವಚ್ಛತಾ ಕಾರ್ಯ ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಅಕ್ಷರಶಃ ಕರ್ಫ್ಯೂವನ್ನು ಪಾಲಿಸಿದಾಗ ಮಾತ್ರ …

Read More »

ಗ್ರಾಮಕ್ಕೆ ಯಾರೂ ಬರುವಂತಿಲ್ಲ, ಹೋಗುವಂತಿಲ್ಲ :ಊರಿಗೆ ದಿಗ್ಭಂಧನ

ಗದಗ: ಕೊರೊನಾ ವೈರಸ್ ಹರಡುವುದನ್ನ ತಡೆಗಟ್ಟಲು ಜಿಲ್ಲೆಯ ಕೊಟುಮಚಗಿ ಹಾಗೂ ರೋಣ ತಾಲೂಕಿನ ಗುನಗುಂಡಿ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ದಿಗ್ಭಂಧನ ಹಾಕಿಕೊಂಡಿದ್ದಾರೆ. ಇಡೀ ದೇಶವೇ ಲಾಕ್‍ಡೌನ್ ಮಾಡಬೇಕೆಂಬ ಪ್ರಧಾನಿ ಮೋದಿ ಅವರ ಮನವಿಗೆ ಗದಗ ಜಿಲ್ಲೆ ಕೊಟುಮಚಗಿ ಗ್ರಾಮದ ಜನರು ಸಖತ್ ರೆಸ್ಪಾನ್ಸ್ ಮಾಡಿದ್ದಾರೆ. ಇಂದಿನಿಂದ ಏಪ್ರಿಲ್ 14 ರವರೆಗೆ ಕೊಟುಮಚಗಿ ಗ್ರಾಮಕ್ಕೆ ಬೇರೆ ಗ್ರಾಮಗಳ ಜನರು ಬರುವಂತಿಲ್ಲ. ಈ ಗ್ರಾಮದ ಜನರು ಸಹ ಬೇರೆ ಕಡೆ ಹೋಗುವಂತಿಲ್ಲ ಎಂದು …

Read More »

21 ದಿನಗಳ ಲಾಕ್‌ಡೌನ್‌ನಿಂದಾಗಿ ಭಾರತ 9 ಲಕ್ಷ ಕೋಟಿ ನಷ್ಟ ಅನುಭವಿಸಲಿದೆ; ಆತಂಕ ವ್ಯಕ್ತಪಡಿಸಿದ ಆರ್ಥಿಕ ತಜ್ಞರು

ಮುಂಬೈ (ಮಾರ್ಚ್‌ 25); ಕೊರೋನಾ ಸೋಂಕು ಹಬ್ಬದಂತೆ ತಡೆಯುವ ಸಲುವಾಗಿ ರಾಷ್ಟ್ರವ್ಯಾಪಿ ಕರೆ ನೀಡಿರುವ 21`ದಿನಗಳ ಲಾಕ್‌ಡೌನ್‌ನಿಂದಾಗಿ ಭಾರತ ಸುಮಾರು 120 ಬಿಲಿಯನ್ (ಭಾರತೀಯ ಹಣದಲ್ಲಿ 9 ಲಕ್ಷ) ಕಳೆದುಕೊಳ್ಳಲಿದೆ. ಅಂದರೆ ಅಂದಾಜು ಭಾರತದ ಶೇ. 4 ರಷ್ಟು ಜಿಡಿಪಿ ನಷ್ಟವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್‌ ಅನ್ನು ಘೋಷಿಸುವ ಅಗತ್ಯವಿದೆ ಎಂದು ಆರ್ಥಿಕ ತಜ್ಞರು ಸೂಚನೆ ನೀಡಿದ್ದಾರೆ. ಏಪ್ರಿಲ್ 3 ರಂದು ತನ್ನ ಮೊದಲ ದ್ವಿ-ಮಾಸಿಕ ನೀತಿ …

Read More »

ಕತ್ರಿನಾ ಪಾತ್ರೆ ತೊಳೆಯುವ ವಿಡಿಯೋ ನೋಡಿ ನಮ್ಮ ಮನೆಗೂ ಬನ್ನಿ ಎಂದ ಬಾಲಿವುಡ್​ ನಟ ಅರ್ಜುನ್​ ಕಫೂರ್,

ಕೋರೋನಾ ವೈರಸ್​ ಭೀತಿಯಿಂದಾಗಿ ಮನೆಯಲ್ಲಿಯೇ ವಾಸವಾಗಿರುವ ನಟಿ ಕತ್ರಿನಾ ಕೈಫ್​  ಇತ್ತೀಚೆಗೆ ಪಾತ್ರೆ ತೊಳೆಯುತ್ತಿರುವ ವಿಡಿಯೋವನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಗಮನಿಸಿದ ಬಾಲಿವುಡ್​ ನಟ ಅರ್ಜುನ್​ ಕಫೂರ್, ಕತ್ರಿನಾರ​ ಕಾಲೆಳೆದಿದ್ದಾರೆ. ಕೊರೋನಾದಿಂದಾಗಿ ದೇಶವೇ ಸಂಫೂರ್ಣ ಲಾಕ್​ ಡೌನ್​ ಆಗಿದೆ. ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿಗಳು ಕೂಡ ಮನೆಯಲ್ಲಿ ಕುಳಿತು ಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಈ ಸಂದರ್ಭದಲ್ಲಿ ಬಾಲಿವುಡ್​ ಸೆಲೆಬ್ರಿಟಿಗಳು ಮನೆಯಲ್ಲಿ ಮಾಡುತ್ತಿರುವ ಕೆಲಗಳನ್ನು, ದೈನಂದಿನ ದಿನಚರಿಗಳನ್ನು ಸಾಮಾಜಿಕ ತಾಣದಲ್ಲಿ ವಿಡಿಯೋ …

Read More »

ಕೊರೋನಾ ವಿರುದ್ಧ ಹೋರಾಟಕ್ಕೆ 6 ತಿಂಗಳ ಸಂಬಳ ನೀಡಿದ ಕುಸ್ತಿಪಟು..!

ದೇಶದಾದ್ಯಂತ ಕೊರೋನಾ ಭೀತಿ ಆವರಿಸಿದೆ. ಈ ಸಾಂಕ್ರಾಮಿಕ ಸೋಂಕು ಹರಡದಂತೆ ತಡೆಯಲು ಈಗಾಗಲೇ ಕೇಂದ್ರ ಸರ್ಕಾರ 21 ದಿನಗಳ ಕಾಲ ದೇಶದಲ್ಲಿ ಲಾಕ್​ಡೌನ್ ಹೇರಿದೆ. ತ್ತ ಕೊರೋನಾ ಭೀತಿಯಿಂದ ಕ್ರೀಡಾಕೂಟಗಳು ರದ್ದಾಗಿವೆ. ಕ್ರಿಕೆಟರುಗಳು ಸೇರಿದಂತೆ ಎಲ್ಲಾ ಕ್ರೀಡಾಪಟುಗಳು ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಹಾಗೆಯೇ ತಮ್ಮ ಅಭಿಮಾನಿಗಳಿಗೆ ಮನೆಯಿಂದ ಹೊರ ಬರದಂತೆ ಮನವಿ ಮಾಡುತ್ತಿದ್ದಾರೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಪಣ ತೊಟ್ಟಿರುವ ಕೇಂದ್ರ ಸರ್ಕಾರದ ಜೊತೆ ಅನೇಕರು ಕೈಜೋಭಾರತದ ಹೆಸರಾಂತ ಕುಸ್ತಿಪಟುವಾಗಿರುವ …

Read More »

ಕೊರೋನಾ ಲಾಕ್ ಡೌನ್ ; ಬೀದಿಗೆ ಬಿದ್ದ ದಿನಗೂಲಿ ಕಾರ್ಮಿಕರು

ರಾಮನಗರ(ಮಾ.25): ವಿಶ್ವದೆಲ್ಲೆಡೆ ಕೊರೋನಾ ಭೀತಿಗೆ ಎಲ್ಲಾ ವ್ಯವಹಾರ, ವ್ಯಾಪಾರ, ವಹಿವಾಟು ಸಂಪೂರ್ಣ ಸ್ಥಗಿತವಾಗಿದೆ. ಶೇರು ಮಾರುಕಟ್ಟೆಯಲ್ಲೂ ಕೂಡ ಸೆನ್ಸೆಕ್ಸ್ ಊಹಿಸಲಾಗದ ಮಟ್ಟಕ್ಕೆ ಕುಸಿದಿದೆ. ಆದರೆ ಕೊರೋನಾ ದಿಂದಾಗಿ ದಿನಗೂಲಿ ಕಾರ್ಮಿಕರ ಜೀವನವೂ ಬೀದಿಗೆ ಬಿದ್ದಿದೆ. ರಾಮನಗರ – ಚನ್ನಪಟ್ಟಣ ನಗರದಲ್ಲಿ ಸರಿಸುಮಾರು 3 ಸಾವಿರಕ್ಕೂ ಹೆಚ್ಚು ಜನ ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರು ವಾಸ ಮಾಡುತ್ತಿದ್ದಾರೆ. ಆದರೆ ಅವರೆಲ್ಲರ ಬದುಕು ಮಾತ್ರ ನಿಜಕ್ಕೂ ಶೋಚನೀಯವಾಗಿದೆ. ಪ್ರತಿ ಯುಗಾದಿ ಹಬ್ಬವನ್ನ ಅದ್ದೂರಿಯಾಗಿ ಆಚರಣೆ …

Read More »

ಹಾಸನದಲ್ಲಿ ಹೆಚ್ಚಿದ ಕೊರೋನಾ ಭೀತಿ; ಇಡೀ ಊರಿಗೆ ಊರೇ ಹೋಮ್ ಐಸೋಲೇಷನ್​ನಲ್ಲಿ!

ಹಾಸನ (ಮಾ. 25): ಹಾಸನದಲ್ಲಿ ಮತ್ತೆ ಕೊರೋನಾ ಭೀತಿ ಹೆಚ್ಚಾಗಿದ್ದು, ಇಲ್ಲಿನ ಒಂದು ಊರಿಗೆ ಊರೇ ಹೋಂ ಐಸೋಲೇಷನ್​ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಹಾಸನದ ಅರಕಲಗೂಡು ತಾಲೂಕಿನ ರಾಂಪುರ ಗ್ರಾಮದ 75 ಜನರಿಗೆ ಹೋಮ್ ಐಸೋಲೇಷನ್​ನಲ್ಲಿರುವಂತೆ ಸೂಚನೆ ನೀಡಲಾಗಿದೆ. ಈ ಊರಿನ ಯಾರೂ ಮನೆಯಿಂದ ಹೊರಗೆ ಹೋಗದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಇಲ್ಲಿನ ಗ್ರಾಮಸ್ಥರ ಕೈಗೆ ಸೀಲ್ ಹಾಕಿದ್ದಾರೆ. ಮಸ್ಕತ್, ದುಬೈ, ಮಂಗಳೂರಿನಿಂದ ಬಂದಿರುವ 75 ಮಂದಿ ಈ ಗ್ರಾಮದಲ್ಲಿದ್ದಾರೆ. …

Read More »

ದೇಶಾದ್ಯಂತ 21 ದಿನಗಳ ಲಾಕ್ ಡೌನ್ – ವಿದೇಶದಿಂದ ಬೆಂಗಳೂರಿಗೆ ಬಂದ 14 ಸಾವಿರ ಜನರ ಪತ್ತೆ ಹಚ್ಚಿದ ಪೊಲೀಸರು

ಬೆಂಗಳೂರು(ಮಾ.25) : ಕೊರೋನಾ ಭೀತಿಯ ಹಿನ್ನೆಲೆ ದೇಶಾದ್ಯಂತ  21 ದಿನಗಳ ಲಾಕ್​​​ಡೌನ್​​​​ ಮಾಡಲಾಗಿದೆ. ವಿದೇಶದಿಂದ ಬೆಂಗಳೂರಿಗೆ ಬಂದಿದ್ದ ಜನರನ್ನು ಪೊಲೀಸರು ಹಾಗೂ ಬಿಬಿಎಂಪಿ ಸಿಬ್ಬಂದಿಗಳು ಪತ್ತೆ ಮಾಡಿದ್ದಾರೆ.  ಕರ್ಪ್ಯೂ ಇರುವುದರಿಂದ ಪೊಲೀಸರು ತೀವ್ರ ಕಟ್ಟೆಚ್ಚರವನ್ನು ವಹಿಸಲಾಗಿದೆ. ವಿದೇಶದಿಂದ ಬೆಂಗಳೂರಿಗೆ ಬಂದಿದ್ದ 14 ಸಾವಿರ ಜನರನ್ನು ಬಿಬಿಎಂಪಿ ಸಿಬ್ಬಂದಿಗಳು ಹಾಗೂ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಫೆಬ್ರವರಿ 13 ರಿಂದ ಮಾರ್ಚ್ 19ರ ಅವಧಿಯಲ್ಲಿ ಬಂದಿದ್ದವರಿಗೆ ಸ್ಟಾಂಪಿಂಗ್ ಮಾಡಲಾಗಿದೆ. ಇವರೆಲ್ಲರು ಬಿಬಿಎಂಪಿ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ …

Read More »