Breaking News

ರಾಜ್ಯ

ಗೃಹ ಬಳಕೆ ಸಿಲಿಂಡರ್​ ಬೆಲೆ ಮತ್ತೆ ಏರಿಕೆ TODAYS TOP NEWS

1. ಗೃಹ ಬಳಕೆ ಸಿಲಿಂಡರ್​ ಬೆಲೆ ಮತ್ತೆ ಏರಿಕೆ ಮೊದಲೇ ತೈಲ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಸರ್ಕಾರ ಮತ್ತೆ ಶಾಕ್​ಕೊಟ್ಟಿದೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲಿಯಂ ಕಂಪನಿಗಳು ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಹೆಚ್ಚಿಸಿದ್ದರಿಂದ ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ಬೆಲೆ 860 ರೂಪಾಯಿ ಆಗಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 68 …

Read More »

ಪಾಲಿಕೆ ವೈದ್ಯರು ನಿಮ್ಮ ಮನೆಯ ಬಾಗಿಲಿಗೆ’ ಅಭಿಯಾನಕ್ಕೆ ಚಾಲನೆ

ಬೆಂಗಳೂರು : ಬಿಬಿಎಂಪಿ ಹಮ್ಮಿಕೊಂಡಿರುವ ‘ಪಾಲಿಕೆ ವೈದ್ಯರು ನಿಮ್ಮ ಮನೆಯ ಬಾಗಿಲಿಗೆ’ ಅಭಿಯಾನಕ್ಕೆ ಗೋವಿಂದರಾಜ ನಗರದ ಕಾವೇರಿಪುರ ವಾರ್ಡ್‍ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಶ್ರೀ ವಿ ಸೋಮಣ್ಣ ಅವರು, ಈ ಕಾರ್ಯಕ್ರಮದಡಿಯಲ್ಲಿ ವೈದ್ಯರು ಪ್ರತಿ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ. ಅಲ್ಲದೇ, ಕೋವಿಡ್ ಸೋಂಕಿನ ನಿಯಂತ್ರಣದ ಬಗ್ಗೆ ಸಲಹೆ ನೀಡಲಿದ್ದಾರೆ. ಪ್ರತಿ …

Read More »

ಬಾಲಕಿಗೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅನುಮತಿ

ಕೊಚ್ಚಿ: ತಂದೆಯ ಜತೆಗೆ ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ತೆರಳಲು ಅಪ್ರಾಪ್ತ ವಯಸ್ಕ ಬಾಲಕಿಗೆ ಕೇರಳ ಹೈಕೋರ್ಟ್‌ ಮಂಗಳವಾರ ಅನುಮತಿ ನೀಡಿದೆ. ಕಳೆದ ವರ್ಷ ಇದೇ ಮಾದರಿಯ ಪ್ರಕರಣದಲ್ಲಿ ಹೈಕೋರ್ಟ್‌ ವಿಚಾರಣೆ ನಡೆಸಿ ಇದೇ ತೆರನಾದ ತೀರ್ಪು ನೀಡಿತ್ತು. ಜತೆಗೆ ಕೇರಳ ಸರಕಾರ ಲಸಿಕೆ ಪಡೆದವರ ಜತೆಗೆ ದೇಗುಲಗಳಿಗೆ ಭೇಟಿ ನೀಡಬಹುದು ಎಂಬ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕಿಯ ಪ್ರವೇಶಕ್ಕೆ ಅನುಮತಿ ನೀಡಿದೆ. ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅನುಮತಿ ನೀಡಬೇಕು …

Read More »

ಚಿಕ್ಕಮಗಳೂರು: ಪುರುಷರನ್ನು ಸೆಳೆದು ವಿಡಿಯೋ ಮಾಡ್ತಿದ್ದ 6 ಮಹಿಳೆಯರು ಸೇರಿ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ಚಿಕ್ಕಮಗಳೂರು: ಹನಿಟ್ರ್ಯಾಪ್ ನಡೆಸುತ್ತಿದ್ದ 6 ಮಹಿಳೆಯರು ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ. ಚಿಕ್ಕಮಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಪುರುಷರನ್ನು ಸೆಳೆದು ಮಹಿಳೆಯರು ವಿಡಿಯೋ ಚಿತ್ರೀಕರಿಸುತ್ತಿದ್ದರು. ನಂತರ ಪುರುಷರು ಪೊಲೀಸರ ಸೋಗಿನಲ್ಲಿ ಭೇಟಿ ನೀಡಿ ನಾವು ಕೇಳಿದಷ್ಟು ಹಣ ಕೊಟ್ಟರೆ ದಾಖಲಿಸುವುದಿಲ್ಲ. ಕೊಡದಿದ್ದರೆ ಕೇಸ್ ದಾಖಲಿಸುವುದಾಗಿ ಹೇಳಿ ಹಣ ಪಡೆದು ಬಿಟ್ಟು ಕಳಿಸುವ ನಾಟಕವಾಡುತ್ತಿದ್ದರು. ನಂತರ ಕರೆ ಮಾಡಿ ಹಣ ನೀಡುವಂತೆ ಒತ್ತಡ ಹೇರುತ್ತಿದ್ದರು. ಹಣ ಕೊಡದಿದ್ದರೆ …

Read More »

ರಾಜ್ಯದ ಮಕ್ಕಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ‘ಆರೋಗ್ಯ ನಂದನ’ ಯೋಜನೆ ಜಾರಿ

ಮಕ್ಕಳ ಆರೋಗ್ಯ ತಪಾಸಣೆಗೆ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರವೇ ಚಾಲನೆ ನೀಡಲಿದ್ದಾರೆ. ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಮಕ್ಕಳ ಆರೋಗ್ಯತಪಾಸಣೆ ಉದ್ದೇಶದಿಂದ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿ, ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ …

Read More »

ಗೋವಾದಲ್ಲಿ ಜಾರಿಗೆ ತಂದ ‘ಹರ್ ಘರ್ ನಲ್’ ಯೋಜನೆ ಸಂಪೂರ್ಣ ವಿಫಲ : ಮಹಾದೇವ್ ನಾಯ್ಕ ವಾಗ್ದಾಳಿ

ಪಣಜಿ: ಮುಂಬರುವ ಐದು ವರ್ಷಗಳಲ್ಲಿ ಗೋವಾ ರಾಜ್ಯದಲ್ಲಿನ ಪ್ರತಿಯೊಂದು ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತದೆಯೇ…? ಎಂಬುದನ್ನು ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರಿಂದ ಖಚಿತಪಡಿಸಿಕೊಳ್ಳಲು ಸಾಧ್ಯವೇ..? ಮಳೆಗಾಲದಲ್ಲಂತೂ ಗೋವಾ ರಾಜ್ಯದ ಜನರು ಕೊಳಕು ಕುಡಿಯುವ ನೀರಿನ ಪೂರೈಕೆಯಿಂದ ಜನತೆ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಸಾವಂತ್ ರವರ ಹರ್ ಘರ್ ನಲ್ ಯೋಜನೆ ಸಂಪೂರ್ಣ ವಿಫಲವಾಗಿದ್ದು, ಜನರು ಕುಡಿಯುವ ನೀರಿಗಾಗಿ ಬಾವಿಗಳನ್ನು ಅವಲಂಭಿಸಿರುವಂತಾಗಿದೆ ಎಂದು ಆಮ್ ಆದ್ಮಿ ನಾಯಕ ಮಹಾದೇವ್ ನಾಯ್ಕ ವಾಗ್ದಾಳಿ …

Read More »

ಉಪ ಮುಖ್ಯಮಂತ್ರಿ ಹುದ್ದೆ ಪರಿಕಲ್ಪನೆಗೆ ಎಳ್ಳು-ನೀರು ಬಿಡಲು ಬಿಜೆಪಿ ತೀರ್ಮಾನ!

ಬೆಂಗಳೂರು: ಪಕ್ಷ ಸಂಘಟನೆ ಬಲಪಡಿಸುವುದು, ಗುಂಪುಗಾರಿಕೆ, ಜಾತಿಯತೆ ಆರ್ಭಟ ತಡೆಯುವ ಉದ್ದೇಶದಿಂದ ಇನ್ನು ಮುಂದೆ ಉಪ ಮುಖ್ಯಮಂತ್ರಿ ಹುದ್ದೆ ಪರಿಕಲ್ಪನೆಗೆ ಎಳ್ಳು- ನೀರು ಬಿಡಲು ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ. ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಅವರ ಕಾಲದಲ್ಲಿ ಮೂವರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಲಾಗಿತ್ತು. ಪಕ್ಷದ ಸಂಘಟನೆ ಗಿಂತಲೂ ಹೆಚ್ಚಾಗಿ, ಯಡಿಯೂರಪ್ಪ ಅವರನ್ನು ನಿಯಂತ್ರಣ ಮಾಡುವ ಉದ್ದೇಶವೇ ಇದರಲ್ಲಿ ಅಡಗಿತ್ತು ಎಂಬುದು ಬಿಜೆಪಿಯ ಮೂಲಗಳಿಂದಲೇ ಸ್ಪಷ್ಟವಾಗಿದೆ. ಯಡಿಯೂರಪ್ಪ ಅವರ …

Read More »

ಉಲ್ಟಾ ಮಚ್ಚೆ ಹೇಳಿಕೆ ನಿಜವಾಗಲಿ; ಸಿ.ಟಿ. ರವಿ ಶೀಘ್ರ ಸಂಪುಟ ಸಚಿವರಾಗಲಿ; ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಏನು ಹೇಳುತ್ತಾರೆ ಅದು ಉಲ್ಟಾ ಆಗುತ್ತೆ, ಅವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ ಎಂದು ವಾಗ್ದಾಳಿ ನಡೆಸಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಸಿ.ಟಿ. ರವಿ ಶೀಘ್ರ ಸಂಪುಟ ಸಚಿವರಾಗಲಿ ಎಂದಿದ್ದಾರೆ. ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಸಿ.ಟಿ. ರವಿ ಶೀಘ್ರ ಸಚಿವರಾಗಲಿ ಎಂದು ಹಾರೈಸುತ್ತೇನೆ. ಆ ಮೂಲಕ ನನ್ನ ನಾಲಿಗೆ ಮೇಲೆ ಉಲ್ಟಾ …

Read More »

ಆಫ್ಘಾನ್​​ನಿಂದ ತಾಯ್ನಾಡಿಗೆ 120 ಮಂದಿ ಭಾರತೀಯರು- ರಣಾಂಗಣದಂತಾದ ಅಫ್ಘಾನಿಸ್ತಾನದಿಂದ ರಕ್ಷಣೆಯೇ ರೋಚಕ

ಅಫ್ಘಾನಿಸ್ತಾನವನ್ನ ಇದೀಗ ತಾಲಿಬಾನಿಗಳು ವಶಪಡಿಸಿಕೊಂಡು ತಮ್ಮದೇ ಸರ್ಕಾರ ರಚಿಸಲು ಬೇಕಾದ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಮಾನವ ಹಕ್ಕುಗಳಿಗೆ ಮಾರಕವಾದ ಸಿದ್ಧಾಂತಗಳನ್ನ ನಂಬಿರುವ ತಾಲಿಬಾನಿಗಳು ಅಫ್ಘಾನಿಸ್ತಾನದ ಜನರನ್ನ ಹಿಂಸಿಸಲು ಮುಂದಾಗಬಹುದು ಎಂಬ ಆತಂಕ ಜಗತ್ತಿನಾದ್ಯಂತ ಮನೆಮಾಡಿದೆ. ಈ ಮಧ್ಯೆ ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್ ಒಬ್ಬರ ಮಾತುಗಳು ಎಂಥವರ ಹೃದಯವನ್ನೂ ಹಿಂಡುವಂತಿದೆ.   : ಸರ್ಕಾರಿ ಅಧಿಕಾರಿಗಳಿಗೆ ‘ಸಾರ್ವತ್ರಿಕ ಕ್ಷಮಾದಾನ’ ಕೋರಿದ ತಾಲಿಬಾನಿಗಳು   ತಾಲಿಬಾನಿಗಳು ನನ್ನನ್ನು ಕೊಲ್ತಾರೆ, ನಮ್ಮ ಕುಟುಂಬವನ್ನು ಕೊಲ್ತಾರೆ.. …

Read More »

ಏನೇ ಮಾಡಿದರೂ ನೇರವಾಗಿ ಮಾಡುತ್ತೇನೆ; ಸ್ಪೀಕರ್ ಭೇಟಿ ಅವಶ್ಯಕತೆಯಿಲ್ಲ; ಆನಂದ್ ಸಿಂಗ್

ಕಾರವಾರ: ಖಾತೆ ಹಂಚಿಕೆ ವಿಚಾರದಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ರಾಜೀನಾಮೆ ಕೊಡುವ ವಿಚಾರ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆನಂದ್ ಸಿಂಗ್, ತಮ್ಮ ಮುಂದಿನ ನಡೆ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ನಾನು ಮಾತಿನ ಮೇಲೆ ನಿಲ್ಲುವ ವ್ಯಕ್ತಿ. ಕೆಲವರ ಟೀಕೆಗಳಿಗೆ ಪ್ರತಿಕ್ರಿಯಿಸಲು ಇಚ್ಛಿಸಲ್ಲ. ನನ್ನ ಆತ್ಮಸಾಕ್ಷಿಗೆ ನಾನು ಉತ್ತರ ಕೊಡಬೇಕಾಗಿದೆ ಎಂದು ಹೇಳಿದರು. ಇಂದು ಸ್ಪೀಕರ್ ಕಾಗೇರಿ …

Read More »