ಬೆಳಗಾವಿಯ ಖಾಸಗಿ ಹೋಟೆಲ್ ಒಂದು ಬಿರಿಯಾನಿ ಜಾಹೀರಾತಿನಲ್ಲಿ ಹಿಂದೂ ಸಂತರಿಗೆ ಅಪಮಾನ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಂಘಟನೆಗಳು ಪೊಲೀಸರಿಗೆ ದೂರು ನೀಡಿವೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ವಿಕ್ರಂ ಆಮ್ಟೆ ಅವರಿಗೆ ದೂರು ಸಲ್ಲಿಕೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೋಟೆಲ್ ಬಂದ್ ಮಾಡಲಾಗಿದ್ದು, ಸ್ಥಳಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜಾಹಿರಾತು ವಿವಾದ ಸೃಷ್ಟಿಸುತ್ತಿದ್ದಂತೆಯೇ ಪೋಸ್ಟ್ ಡಿಲೀಟ್ ಮಾಡಿ, ಹೊಟೆಲ್ ಕ್ಷಮೆಯಾಚಿಸಿದೆ. …
Read More »ಅಧಿವೇಶನ ಬೆಂಗಳೂರಲ್ಲಿಯೋ ಅಥವಾ ಬೆಳಗಾವಿಯಲ್ಲಿಯೋ ಎಂಬುದನ್ನೂ ಸರ್ಕಾರ ತಿಳಿಸಲಿದೆ.
ಬೆಂಗಳೂರು: “ರಾಜ್ಯಸಭೆಯಲ್ಲಿ ಈಚೆಗೆ ನಡೆದ ಘಟನೆ ಅತ್ಯಂತ ವಿಷಾದಕರ. ಹೊಣಗೇಡಿತನದಿಂದ ವರ್ತಿಸಿದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು’ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಜ್ಯಸಭೆ ಸಭಾಪತಿ ಹಾಗೂ ಲೋಕಸಭಾಧ್ಯಕ್ಷರನ್ನು ಆಗ್ರಹಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಗಳು ಪ್ರಜಾಪ್ರಭುತ್ವದ ದೇಗುಲಗಳು. ಅಲ್ಲಿ ಈ ರೀತಿ ಬೇಜವಾಬ್ದಾರಿತನದಿಂದ ನಡೆದುಕೊಳ್ಳುವುದು ಅಕ್ಷಮ್ಯ. ಆದ್ದರಿಂದ ಈ ಸಂಬಂಧ ಕ್ರಮಕ್ಕೆ ಆಗ್ರಹಿಸಿ ಸಭಾಪತಿ ಹಾಗೂ ಸಭಾಧ್ಯಕ್ಷರು ಇಬ್ಬರಿಗೂ ಪತ್ರ ಬರೆಯಲಾಗುವುದು. ಅಗತ್ಯಬಿದ್ದರೆ ನಿಯಮಾವಳಿಗಳಲ್ಲಿ ತಿದ್ದುಪಡಿ ತಂದು …
Read More »ಟ್ವಿಟರ್ ಇಂಡಿಯಾ ಎಂಡಿ ಅಮೆರಿಕಕ್ಕೆ ಎತ್ತಂಗಡಿ
ನ್ಯೂಯಾರ್ಕ್: ಟ್ವಿಟರ್ ಇಂಡಿಯಾ ಮತ್ತು ಕೇಂದ್ರ ಸರ್ಕಾರ ನಡುವಿನ ಮುಸುಕಿನ ಗುದ್ದಾಟ ಮತ್ತೊಂದು ಘಟ್ಟ ತಲುಪಿದೆ. ಭಾರತದಲ್ಲಿ ಟ್ವಿಟರ್ ಕಾರ್ಯಾಚರಣೆ ನಿರ್ವಹಣೆಗೆ ಯಾವುದೇ “ಕಂಟ್ರಿ ಡೈರೆಕ್ಟರ್'(ದೇಶೀಯ ನಿರ್ದೇಶಕ)ರನ್ನು ನಿಯೋಜಿಸದೆ ಇರಲು ಸಾಮಾಜಿಕ ಜಾಲತಾಣ ಸಂಸ್ಥೆ ತೀರ್ಮಾನಿಸಿದೆ. ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಷ್ ಮಹೇಶ್ವರಿ ಅವರನ್ನು ಅಮೆರಿಕಕ್ಕೆ ದಿಢೀರ್ ಎತ್ತಂಗಡಿ ಮಾಡಿದೆ. ಅಲ್ಲದೆ, ಮನೀಷ್ಗೆ ಸ್ಯಾನ್ ಫ್ರಾನ್ಸಿಸ್ಕೋದ ಹಿರಿಯ ನಿರ್ದೇಶಕ ಹುದ್ದೆಯನ್ನೂ ನೀಡಲಾಗಿದೆ. ಲೀಡರ್ಶಿಪ್ ಕೌನ್ಸಿಲ್ ಮಾರ್ಗದರ್ಶನದಂತೆ ಪ್ರಮುಖ …
Read More »ಅವಾಚ್ಯ ಪದ ಬಳಕೆ ಮಾಡಿದ್ದು ಬಿ ಕೆ ಹರಿ ಪ್ರಸಾದ್ ವಿರುದ್ದ ಮಾತ್ರ ಎಂದ ಈಶ್ವರಪ್ಪ
ಶಿವಮೊಗ್ಗ: ಪ್ರಪಂಚದಲ್ಲಿ ಜನಾನುರಾಗಿ ನಾಯಕರಲ್ಲಿ ಪ್ರಧಾನಿ ಮೋದಿ ಸಹ ಒಬ್ಬರು. ಪ್ರಪಂಚವೇ ಮೋದಿ ಅವರನ್ನ ಒಪ್ಪಿಕೊಳ್ಳುತ್ತಿದೆ. ಹೀಗಿರುವಾಗ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಸುಲಭ್ ಶೌಚಾಲಯಕ್ಕೆ ಮೋದಿ ಹೆಸರಿಡಿ ಎಂದು ಹೇಳುತ್ತಾರೆ. ಹೀಗಾಗಿಯೇ ಅವರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದು. ಈಡೀ ಕಾಂಗ್ರೆಸ್ ನಾಯಕರ ವಿರುದ್ಧ ಬಳಸಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದರು. ನಗರದಲ್ಲಿ ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ದೇಶದ ಗೌರವಾನ್ವಿತ ಪ್ರಧಾನಿ …
Read More »ರೋಗಗ್ರಸ್ಥ ನಿಗಮಗಳನ್ನು ಲಾಭದತ್ತ ಕೊಂಡೊಯ್ಯಲು ಸಚಿವ ಮುರುಗೇಶ್ ನಿರಾಣಿ ಯೋಜನೆ
ಬೆಂಗಳೂರು: ರೋಗಗ್ರಸ್ಥ ನಿಗಮಗಳಲ್ಲಿ ಬಂಡವಾಳವನ್ನು ಹಿಂತೆಗೆದುಕೊಂಡು ಪುನಶ್ಚೇತನಗೊಳಿಸಿ ಲಾಭದತ್ತ ಕೊಂಡೊಯ್ಯಲು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದರು. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶುಕ್ರವಾರ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಡಿಯಲ್ಲಿ ಮಾತನಾಡಿದ ಅವರು, ಕಲಬುರಗಿಯ ಸಿಮೆಂಟ್ ಕಾರ್ಪೋರೇಷನ್, ಮೈಶುಗರ್, ಮೈಸೂರು ಪೇಪರ್ ಮಿಲ್ಸ್ ಸೇರಿದಂತೆ ಹಲವಾರು ನಿಗಮಗಳು ಮತ್ತು ಸಂಸ್ಥೆಗಳು ನಷ್ಟದ ಹಾದಿಯಲ್ಲಿವೆ. ತಾವು ಎರಡು ದಿನಗಳ ಹಿಂದೆ ದೆಹಲಿಗೆ …
Read More »ಚಾಮುಂಡಿ ಬೆಟ್ಟದ ತಪ್ಪಲಿನ ಸಾವಿರಾರು ಎಕರೆ ಭೂಮಿ ಮತ್ತೆ ರಾಜಮನೆತನದ ವಶಕ್ಕೆ
ಬೆಂಗಳೂರು- ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಸಾವಿರಾರು ಎಕರೆ ಭೂಮಿಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಪ್ರಯತ್ನದಲ್ಲಿ ರಾಜ್ಯ ಸರ್ಕಾರ ಕೈ ಚೆಲ್ಲಿದೆ. ಮೈಸೂರಿನ ಸರ್ವೆ ನಂಬರ್ 4 ರ ಭೂಮಿ ಸ್ವಾಮ್ಯತೆಯ ಬಿ ಖರಾಬ್ ನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಈ ಮೂಲಕ ಮೈಸೂರು ರಾಜ ಮನೆತನ ಸೇರಿದಂತೆ ಅಲ್ಲಿನ ಭೂ ಮಾಲೀಕರು ಕಾನೂನು ಹೋರಾಟದಲ್ಲಿ ಜಯ ಗಳಿಸಿದ್ದಾರೆ. ಮೈಸೂರಿನ ಸರ್ವೆ ನಂಬರ್ 4 ಮಾತ್ರವಲ್ಲದೆ, ಚೌಡಳ್ಳಿ ಸರ್ವೆ …
Read More »ಮೊದಲು ನಮ್ಮ ಕನ್ನಡ ತಾಯಿ ಉಳಿಸಿಕೊಂಡರೆ ಭಾರತ ಮಾತೆ ಉಳಿಸಿಕೊಳ್ಳಬಹುದು: ಸಿಟಿ ರವಿಗೆ ಎಚ್ಡಿಕೆ ತಿರುಗೇಟು
ರಾಮನಗರ: ಮೊದಲು ನಮ್ಮ ಕನ್ನಡ ತಾಯಿ ಉಳಿಸಿಕೊಂಡರೆ, ಭಾರತ ಮಾತೆಯನ್ನು ಉಳಿಸಿಕೊಳ್ಳಬಹುದು ಎನ್ನುವ ಮೂಲಕ ಮೇಕೆದಾಟು ವಿಚಾರದಲ್ಲಿ ನಾನು ಭಾರತದ ಪರ ಎಂದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇಕೆದಾಟು ವಿಚಾರವಾಗಿ ರಾಷ್ಟ್ರಪತಿಗಳು ಹಾಗೂ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಅಲ್ಲದೆ, ಮುಖ್ಯಮಂತ್ರಿಗಳ ಬಳಿ ಸಮಯ …
Read More »ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ, ಇತರರಿಗೂ ಕರೆ ಕೊಡುತ್ತೇನೆ: ಸಿಎಂ ಬೊಮ್ಮಾಯಿ
ಉಡುಪಿ: ಇಂದು ವಲ್ಡ್ ಆರ್ಗನ್ ಡೊನೇಶನ್ ಡೇ. ಇತ್ತೀಚೆಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಜೀವ ಉಳಿಸಬಹುದು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ. ನಿಮ್ಮಿಂದ ಇನ್ನೊಂದು …
Read More »ರಾಹುಲ್ ಇನ್ ಸ್ಟಾಗ್ರಾಂ ಖಾತೆಯೂ ಬ್ಲಾಕ್..? ಕ್ರಮ ಕೈಗೊಳ್ಳುವಂತೆ ಫೇಸ್ ಬುಕ್ ಗೆ NCPCR ಪತ್ರ
ನವ ದೆಹಲಿ : ಟ್ವೀಟರ್ ಖಾತೆಯ ಬ್ಲಾಕ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಿಗೆ, ನ್ಯಾಶನಲ್ ಕಮಿಷನ್ ಫಾರ್ ಪ್ರೊಟೆಕ್ಶನ್ ಆಫ್ ಚೈಲ್ಡ್ ರೈಟ್ಸ್ (ಎನ್ ಸಿ ಪಿ ಸಿ ಆರ್) ಫೇಸ್ ಬುಕ್ ಸಂಸ್ಥೆ ರಾಹುಲ್ ಗಾಂಧಿ ಅವರ ಿನ್ ಸ್ಟಾಗ್ರಾಂ ಖಾತೆಯನ್ನು ಬ್ಲಾಕ್ ಮಾಡುವಂತೆ ಒತ್ತಾಯಿಸಿದೆ. ಆಗಸ್ಟ್ 4 ರಂದು ಎನ್ ಸಿ ಪಿ ಸಿ ಆರ್, ದೆಹಲಿಯ ದಲಿತ ಅಪ್ರಾಪ್ತೆಯ …
Read More »ಪಂಚಮಸಾಲಿ ಸಮಾಜ ಮಾತ್ರವಲ್ಲ ಇತರೆ ಸಮಾಜದ ಮೀಸಲು ಬೇಡಿಕೆಯೂ ಈಡೇರಲಿ: ಯತ್ನಾಳ್
ವಿಜಯಪುರ: ಶೋಷಿತ ಸಮುದಾಯಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಅಧಿಕಾರವನ್ನು ಪ್ರಧಾನಿ ಮೋದಿ ಅವರು ಕೇಂದ್ರದ ಬದಲಾಗಿ ರಾಜ್ಯ ಸರ್ಕಾರಕ್ಕೆ ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆಪಗಳನ್ನು ಹೇಳದೇ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ಮಾತ್ರವಲ್ಲ ಮೀಸಲು ಬೇಡಿಕೆ ಇರುವ ಎಲ್ಲ ಸಮುದಾಯಗಳಿಗೆ ಮೀಸಲು ಬೇಡಿಕೆ ಈಡೇರಿಸಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹಿಸಿದ್ದಾರೆ. ಶುಕ್ರವಾರ ನಗರದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ …
Read More »
Laxmi News 24×7