Breaking News
Home / ರಾಜ್ಯ (page 2322)

ರಾಜ್ಯ

ವಿಶ್ವದ್ಯಂತ ಕೊರೊನಾ ವೈರಸ್ ಭೀತಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ದೇಶದ ಎಲ್ಲಾ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಹಂತ ಹಂತವಾಗಿ ಬಂದ್ ಮಾಡುವ ಬಗ್ಗೆ ಚಿಂತನೆ ನಡೆದಿದೆ.

ಬೆಂಗಳೂರು: ವಿಶ್ವದ್ಯಂತ ಕೊರೊನಾ ವೈರಸ್ ಭೀತಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ದೇಶದ ಎಲ್ಲಾ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಹಂತ ಹಂತವಾಗಿ ಬಂದ್ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಮೊದಲ ಹಂತವಾಗಿ ಇಂದು ಸುಮಾರು 32 ರೈಲುಗಳ ಸಂಚಾರವನ್ನು ನಿಲ್ಲಿಸಲಾಗಿದ್ದು, ನಾಳೆಯಿಂದ ಕೊರೊನಾ ವೈರಸ್ ಹಬ್ಬುತ್ತಿರುವ ಪ್ರಮಾಣವನ್ನು ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು ಎಂದು ಇಲಾಖೆ ಮುಖ್ಯಸ್ಥರು ತಿಳಿಸಿದ್ದಾರೆ. ರೈಲುಗಳ ಸೇವೆಯಲ್ಲಿ ವ್ಯತ್ಯಯದ ವಿಚಾರ ತಿಳಿದ ಸಾರ್ವಜನಿಕರು ಕೂಡ ಗುರುವಾರದಿಂದಲೇ ತಮ್ಮ ತಮ್ಮ ಊರುಗಳಿಗೆ …

Read More »

ಅತ್ಯಾಚಾರಿಗಳ ಕೊರಳಿಗೆ ಸಾವಿನ ಕುಣಿಕೆ ಬೀಳುತ್ತಿದ್ದಂತೆ ದೇಶಾದ್ಯಂತ ಸಂಭ್ರಮ..!!

ನವದೆಹಲಿ:ಏಳು ವರ್ಷಗಳ ಸತತ ಹೋರಾಟದ ಬಳಿಕ ನಿರ್ಭಯಾ ಮೇಲಿನ ಪೈಶಾಚಿಕ ಅತ್ಯಾಚಾರ ಮತ್ತು ಬೀಕರ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನಾಲ್ವರು ನರ ರಾಕ್ಷಸರಿಗೆ ಇಂದು ಮುಂಜಾನೆ ದೆಹಲಿಯ ತಿಹಾರ್ ಜೈಲಿನಲ್ಲಿ ಮರಣದಂಡನೆ ವಿಧಿಸಿರುವುದಕ್ಕೆ ದೇಶಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ.ಪರಮಪಾಪಿಗಳಾದ ಮುಕೇಶ್ ಸಿಂಗ್, ಪವನ್ ಕುಮಾರ್, ವಿನಯ್ ಶರ್ಮ ಮತ್ತು ಅಕ್ಷಯ್ ಕುಮಾರ್‍ಗೆ ಇಂದು ಬೆಳಗ್ಗೆ ಸರಿಯಾಗಿ 5.30ರಲ್ಲಿ ನೇಣಿಗೇರಿಸಲಾಯಿತು. ಕಾನೂನು ಪ್ರಕಾರವಾಗಿಯೇ ಕೀಚಕರ ಸಂಹಾರವಾಗುತ್ತಿದ್ದಂತೆಯೇ ಇಂದು ಬೆಳಗ್ಗೆಯಿಂದಲೇ ದೇಶದ ವಿವಿಧ ನಗರಗಳಲ್ಲಿ …

Read More »

ಸತತವಾಗಿ ೮ನೇ ಬಾರಿಗೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ಪ್ರಭಾಕರ ಕೋರೆ ಆಯ್ಕೆ

ಡಾ.ಪ್ರಭಾಕರ ಕೋರೆ ಸತತವಾಗಿ ೮ನೇ ಬಾರಿಗೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗುವುದರ ಮೂಲಕ ಸಂಸ್ಥೆಯ ಇತಿಹಾಸದಲ್ಲಿಯೇ ನೂತನ ದಾಖಲೆ ಬರೆದಿದ್ದಾರೆ. ಕೆಎಲ್‌ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಗುರುವಾರ ಜರುಗಿದ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಸದಸ್ಯರು ಡಾ.ಪ್ರಭಾಕರ ಕೋರೆಯವರನ್ನು ಕಾರ್ಯಾಧ್ಯಕ್ಷರನ್ನಾಗಿ ಪುನರ್‌ಆಯ್ಕೆ ಮಾಡುವ ಮೂಲಕ ಅಭಿನಂದಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರು ಹಾಗೂ ವಿಧಾನ ಪರಿಷತ್‌ನ ಸರ್ಕಾರದ ಮುಖ್ಯಸಚೇತಕರಾದ ಮಹಾಂತೇಶ ಕವಟಗಿಮಠ ಅವರು ಮಾತನಾಡಿ ’ಡಾ.ಕೋರೆಯವರು ಕೆಎಲ್‌ಇ ಸಂಸ್ಥೆಯ ಸಾರಥ್ಯವನ್ನು …

Read More »

ನಿರ್ಭಯಾ ಅತ್ಯಾಚಾರ ಮಾಡಿದ ಪಾಪಿಗಳನ್ನು ನೇಣು ಹಾಕಿದ ವಧಾದಾರ(ಹ್ಯಾಂಗ್‍ಮನ್)ನಿಗೆ ಚಿತ್ರನಟ ಜಗ್ಗೇಶ್ ಒಂದು ಲಕ್ಷ ರೂ. ದೇಣಿಗೆ

ಬೆಂಗಳೂರು,ಮಾ.20- ನಿರ್ಭಯಾ ಅತ್ಯಾಚಾರ ಮಾಡಿದ ಪಾಪಿಗಳನ್ನು ನೇಣು ಹಾಕಿದ ವಧಾದಾರ(ಹ್ಯಾಂಗ್‍ಮನ್)ನಿಗೆ ಚಿತ್ರನಟ ಜಗ್ಗೇಶ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ನಿರ್ಭಯ ಅತ್ಯಾಚಾರಿಗಳಾದ ಮುಕೇಶ್‍ಸಿಂಗ್, ಪವನ್ ಗುಪ್ತಾ, ವಿನಯ್‍ಕುಮಾರ್ ಶರ್ಮಾ, ಅಕ್ಷಯ್ ಕುಮಾರ್‍ನನ್ನು ಗಲ್ಲಿಗೇರಿಸಿದ ಹ್ಯಾಂಗ್‍ಮನ್‍ಗೆ ಒಂದು ಲಕ್ಷ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇಂದು ದೇಣಿಗೆ ನೀಡಿರುವ ಬಗ್ಗೆ ಟ್ವಿಟರ್‍ನಲ್ಲಿ ಜಗ್ಗೇಶ್ ಪ್ರಕಟಿಸಿದ್ದಾರೆ. ನಿರ್ಭಯಾ ಹಂತಕರ ಹ್ಯಾಂಗ್‍ಮನ್‍ಗೆ ನನ್ನ ದೇಣಿಗೆ ದೇವನೊಬ್ಬನಿರುವ, ಅವ ಎಲ್ಲ ನೋಡುತ್ತಿರುವ ಸತ್ಯದ …

Read More »

ಅಂಬೋಲಿ ಬಳಿ ಕಾರಿಗೆ ಬೆಂಕಿ ಹೊತ್ತಿಕೊಂಡು ಮಹಿಳೆ ಸಾವಿಗೀಡಾದ ಪ್ರಕರಣ ಈಗ ವಿಚಿತ್ರ ತಿರುವು ಪಡೆದುಕೊಂಡಿದೆ.

ಅಂಬೋಲಿ ಬಳಿ ಕಾರಿಗೆ ಬೆಂಕಿ ಹೊತ್ತಿಕೊಂಡು ಮಹಿಳೆ ಸಾವಿಗೀಡಾದ ಪ್ರಕರಣ ಈಗ ವಿಚಿತ್ರ ತಿರುವು ಪಡೆದುಕೊಂಡಿದೆ. ಬೆಂಕಿಯಿಂದ ಗಂಭೀರ ಗಾಯಗೊಂಡು ಗೋವಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಕಾರು ಚಾಲನೆ ಮಾಡುತ್ತಿದ್ದ ದುಂಡಪ್ಪ ಪದ್ಮಣ್ಣವರ್ ಮೃತ ಮಹಿಳೆಯ ಪತಿಯಲ್ಲ. ಆತ ಆಕೆಯೊಂದಿಗೆ ರೆಸಾರ್ಟ್ ಗೆ ತೆರಳಿದ್ದ ಎನ್ನುವ ಮಾಹಿತಿ ಬಂದಿದೆ. ಸುಟ್ಟು ಭಸ್ಮವಾದ ಮಹಿಳೆ ರಿಜ್ವಾನಾ (41) ಎನ್ನುವವಳಾಗಿದ್ದು, ಆಕೆ ಬೆಳಗಾವಿಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದಳು ಎನ್ನಲಾಗಿದೆ. ಮಹಿಳೆಯ ಸಂಬಧಿಕರು ಇದೀಗ ಪ್ರಕರಣದ …

Read More »

ಶೋಕಿಗಾಗಿ ಕಳ್ಳತನ- ಚಿನ್ನಾಭರಣ ಮಾರಿ ಗೋವಾ ಟ್ರಿಪ್ ಮಾಡುತ್ತಿದ್ದವರು ಅಂದರ್

ಮೈಸೂರು: ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಸದಸ್ಯರನ್ನು ಮೈಸೂರು ಉದಯಗಿರಿ ಠಾಣೆಯ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮೂವರು ಖತರ್ನಾಕ್ ಮನೆಗಳ್ಳರು ಸೇರಿದಂತೆ 6 ಜನರ ಬಂಧಿಸಿದ್ದು, ಸೈಯದ್ ಅಲೀಂ (30) ಉಮ್ಮರ್ ಪಾಷಾ (30) ವಸೀಂ ಪಾಷಾ (27) ಬಂಧಿತ ಮನೆಗಳ್ಳರು. ಕಳುವು ಮಾಲುಗಳನ್ನು ಮಾರಾಟ ಮಾಡಲು ಸಹಕರಿಸಿದ ಮಂಜುನಾಥ್, ಆಧಿಲ್ ಪಾಷಾ ಹಾಗೂ ಅರ್ಧ ಬೆಲೆಗೆ ಚಿನ್ನಾಭರಣ ಖರೀದಿಸುತ್ತಿದ್ದ ದೇವೇಂದ್ರ ಸಿಂಗ್ ನನ್ನು ಬಂಧಿಸಲಾಗಿದೆ. ಒಟ್ಟು 7 ಮನೆ …

Read More »

ಸಿದ್ದಾಪುರ ತಾಲೂಕಿನಲ್ಲಿ ಹೆಚ್ಚುತ್ತಿರುವ ಮಂಗನಕಾಯಿಲೆ (ಕೆ.ಎಫ್.ಡಿ)ಯಿಂದ ಜನರು ಭಯಪಟ್ಟು ಊರು ಬಿಡುತ್ತಿದ್ದಾರೆ:ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವಕ್ಷೇತ್ರ

ಕಾರವಾರ: ಕೊರೊನಾ ವೈರಸ್‍ಗೆ ರಾಜ್ಯದ ಜನ ಭಯಗೊಂಡಿದ್ದರೆ ಇತ್ತ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವಕ್ಷೇತ್ರ ಸಿದ್ದಾಪುರ ತಾಲೂಕಿನಲ್ಲಿ ಹೆಚ್ಚುತ್ತಿರುವ ಮಂಗನಕಾಯಿಲೆ (ಕೆ.ಎಫ್.ಡಿ)ಯಿಂದ ಜನರು ಭಯಪಟ್ಟು ಊರು ಬಿಡುತ್ತಿದ್ದಾರೆ. ಹೌದು. ಉತ್ತರ ಕನ್ನಡ ಜಿಲ್ಲೆಯ ಜನರೀಗ ಕೆ.ಎಫ್.ಡಿ ವೈರಸ್‍ಗೆ ಭಯಪಟ್ಟು ಊರು ತೊರೆಯುತಿದ್ದಾರೆ. ವಿಧಾನಸಭಾ ಸ್ಪೀಕರ್ ಕಾಗೇರಿಯವರ ಸ್ವಕ್ಷೇತ್ರ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬಾಳಗೋಡು, ಮಳಗುಳಿ, ಹನುಮನಜಡ್ಡಿ, ಹೊನ್ನೆಗಟಗಿ, ತ್ಯಾಗಲಿಗಳಲ್ಲಿ 200ಕ್ಕೂ ಹೆಚ್ಚು ಮಂಗಗಳು ಈ ವರ್ಷ ಸಾವನ್ನಪ್ಪಿದ್ದು ಇವುಗಳಲ್ಲಿ …

Read More »

ನನ್ನ ಮೌನವನ್ನು ನನ್ನ ವೀಕ್‍ನೆಸ್ ಎಂದುಕೊಳ್ಳಬೇಡಿ:ಯುವಕನ ಚಳಿ ಬಿಡಿಸಿದ ನಮಿತಾ

ಹೈದರಾಬಾದ್: ಬಹುಭಾಷಾ ನಟಿ ನಮಿತಾಗೆ ಯುವಕನೊಬ್ಬ ಅವರ ಪೋರ್ನ್ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದ. ಇದೀಗ ಆ ಪೋಲಿ ಯುವಕನನ್ನು ನಮಿತಾ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕ ನಾನು ನಿಮ್ಮ ಪೋರ್ನ್ ವಿಡಿಯೋಗಳನ್ನು ನೋಡಿದ್ದೇನೆ. ಹೀಗಾಗಿ ಅವುಗಳನ್ನು ಸಾಮಾಜಿಕ ಜಾಣತಾಣಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಬ್ಲಾಕ್‍ಮೇಲ್ ಮಾಡಿದ್ದನಂತೆ. ಈ ಬಗ್ಗೆ ನಮಿತಾ ಇನ್‍ಸ್ಟಾಗ್ರಾಂನಲ್ಲಿ ಆತನ ಫೋಟೋ ಹಾಕಿ ನಡೆದ ಘಟನೆಯ ಬಗ್ಗೆ ವಿವರಿಸಿದ್ದಾರೆ. ಇನ್‍ಸ್ಟಾಗ್ರಾಂ ಪೋಸ್ಟ್‌ನಲ್ಲಿ ಏನಿದೆ? “ಎಲ್ಲರಿಗೂ …

Read More »

ಬೇಸಿಗೆಯಲ್ಲೂ ಬರಡು ಭೂಮಿಯಲ್ಲಿ ಕೇವಲ 790 ಅಡಿಗೆ ನೀರು

ಬೆಂಗಳೂರು: ಈಗಾಗಲೇ ಬೇಸಿಗೆ ಆರಂಭವಾಗಿ ಕುಡಿಯುವ ನೀರಿಗೆ ಅನೇಕ ಕಡೆ ಸಮಸ್ಯೆ ಶುರುವಾಗಿದೆ. ಸುಮಾರು 1000 ದಿಂದ 1500 ಅಡಿಗಳಷ್ಟು ಬೋರ್‌ವೆಲ್‌ ಕೊರೆದರೂ ನೀರು ಸಿಗುವುದು ತುಂಬಾ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ನೆಲಮಂಗಲ ತಾಲೂಕಿನ ಅವೇರಹಳ್ಳಿ ರೈತನೊಬ್ಬ ಬೋರ್‌ವೆಲ್‌ ಕೊರೆಸಿದ್ದು, ಗಗನದೆತ್ತರಕ್ಕೆ ನೀರು ಚಿಮ್ಮಿದೆ. ಅವೇರಹಳ್ಳಿ ಪ್ರಕಾಶ್ ಕೊಳವೆ ಬಾವಿ ಕೊರೆಸಿ ಸಂತಸಪಟ್ಟಿದ್ದಾರೆ. ಸುಮಾರು 1500 ಅಡಿ ಕೊರೆದರೂ ನೀರು ಸಿಗದ ಬರಡು ಭೂಮಿಯಲ್ಲಿ ಕೇವಲ 790 ಅಡಿಗೆ ನೀರು …

Read More »

ಜನರಿಂದ ಜನರಿಗಾಗಿ ಭಾನುವಾರ ಜನತಾ ಕರ್ಫ್ಯೂ – ಮೋದಿ

ಜನರೇ ಸ್ವಯಂ ಕರ್ಫ್ಯೂ ವಿಧಿಸಿಕೊಳ್ಳಬೇಕು ಅದಷ್ಟು ಜನ ಮನೆಯಲ್ಲಿರಿ, ಹೊರಗಡೆ ಬರಬೇಡಿ ವೈದ್ಯರು, ನರ್ಸ್‍ಗಳು, ಮಾಧ್ಯಮಗಳಿಗೆ ಧನ್ಯವಾದ   ನವದೆಹಲಿ: ಜನರಿಂದ, ಜನರಿಗಾಗಿ, ಜನರಿಗೋಸ್ಕರ ಜನರೇ ಈ ಭಾನುವಾರ ಸ್ವಯಂ ಕರ್ಫ್ಯೂ ವಿಧಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ದೇಶದ ಪ್ರಜೆಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೊರೊನಾ ವೈರಸ್ ದೇಶವ್ಯಾಪಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ 8 ಗಂಟೆಗೆ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಇಂದು ಪರಿಸ್ಥಿತಿ ಎರಡನೇ ಮಹಾಯುದ್ಧದ ಸನ್ನಿವೇಶಕ್ಕಿಂತ ಗಂಭೀರವಾಗಿದೆ. ಮುಂದಿನ ಕೆಲವು …

Read More »