Breaking News

ರಾಜ್ಯ

ಈರುಳ್ಳಿಗೆ ಕಾಡುತ್ತಿರುವ ಕೊಳೆರೋಗದಿಂದ ಮಣ್ಣಲ್ಲಿ ಮಣ್ಣಾಗುತ್ತಿರುವ ರೈತನ ಕಣ್ಣೀರು..!

ಕಲಾದಗಿ: ಈರುಳ್ಳಿ ಬೆಳೆ ಕೊಳೆರೋಗಕ್ಕೆ ಹಳದಿ ಬಣ್ಣಕ್ಕೆ ಬಾಡಿ ಹೊಲದಲ್ಲಿಯೇ ಕೊಳೆಯುತ್ತಿರುವ ಬೆಳೆಯನ್ನು ರೈತ ನೇಗಿಲು ಹೊಡೆದು ಮಣ್ಣಲ್ಲಿ ಮುಚ್ಚುತ್ತಿದ್ದು ಈ ವೇಳೆ ಬೆಳೆಯೊಂದಿಗೆ ರೈತನ ಕಣ್ಣೀರದಾರೆಯೂ ಮಣ್ಣಲ್ಲಿ ಸೇರಿ ಮಣ್ಣಾಗುತ್ತಿದೆ..! ಹೌದು ಕಲಾದಗಿ ಹೊಬಳಿ ವ್ಯಾಪ್ತಿಯಲ್ಲಿ ರೈತರು ಹೆಚ್ಚಾಗಿ ಈರುಳ್ಳಿ ಬೆಳೆಯನ್ನು ಬೆಳೆದು ಕೃಷಿ ಜೀವನ ನಡೆಸುತ್ತಾರೆ, ಮೇ ತಿಂಗಳಕೊನೆ ವಾರ ಇಲ್ಲವೇ ಜೂನ್ ತಿಂಗಳ ಮೊದಲೆರಡು ವಾರದಲ್ಲಿ ಬಿತ್ತನೆ ಮಾಡಿ ಹುಲುಸು ಬೆಳೆಗೆ ಹಗಲು ರಾತ್ರಿ ಶ್ರಮ …

Read More »

ಮುಖ್ಯಮಂತ್ರಿ ಪದವಿ ಹೋದ ಮೇಲೆ ಸಿದ್ದರಾಮಯ್ಯ ಅವರಿಗೆ ನಿತ್ಯ ಕೆಟ್ಟ ಕನಸು ಬೀಳುತ್ತಿವೆ.: ಈಶ್ವರಪ್ಪ

 : ಮುಖ್ಯಮಂತ್ರಿ ಪದವಿ ಹೋದ ಮೇಲೆ ಸಿದ್ದರಾಮಯ್ಯ ಅವರಿಗೆ ನಿತ್ಯ ಕೆಟ್ಟ ಕನಸು ಬೀಳುತ್ತಿವೆ. ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ ಎಂಬ ಕೆಟ್ಟ ಕನಸು ಬೀಳುತ್ತಿವೆ. ಆದರೆ ಈ ಕನಸು ನನಸಾಗಲು ಸಾಧ್ಯವೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ವ್ಯಂಗ್ಯವಾಡಿದರು. ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಸರಿಯಾಗಿ ಆಡಳಿತ ಮಾಡಿದ್ದರೆ ಮತ್ತೆ ಅಧಿಕಾರಕ್ಕೆ ಅವರೇ ಬರುತ್ತಿದ್ದರು. ಈಗ ಚುನಾವಣೆಗೆ ಎರಡು ವರ್ಷ ಮೊದಲೇ …

Read More »

ಡಿಕೆಶಿ-ಜಮೀರ್ ಅಹ್ಮದ್ ಗೆ ‘ಭಲೇ ಜೋಡಿ’ ಎಂದ ಬಿಜೆಪಿ: ಯಾಕೆ ಗೊತ್ತಾ..?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಗೆ ಭಲೇ ಜೋಡಿ ಅಂತಾ ಬಿಜೆಪಿ ವ್ಯಂಗ್ಯವಾಡಿದೆ. ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ ನಡೆಸಿದ ಬಳಿಕ ಅವರನ್ನು ಭೇಟಿಯಾಗಿದ್ದ ಡಿಕೆಶಿ ಧೈರ್ಯ ತುಂಬಿದ್ದರು. ಶಾಸಕ ಜಮೀರ್ ಅಹ್ಮದ್ ಆಸ್ತಿ ಮೇಲೆ ಇಡಿ ದಾಳಿ ಯಾಕೆ ನಡೆದಿದೆ ಎಂದು ಚರ್ಚಿಸಿದ್ದೇನೆ. ಅವರಿಗೆ ಕೆಲವೊಂದು ಮಾರ್ಗದರ್ಶನ ನೀಡಿದ್ದೇನೆ ಅಂತಾ ಡಿಕೆಶಿ ಹೇಳಿದ್ದರು. ಈ ವಿಚಾರವಾಗಿ ಬುಧವಾರ …

Read More »

ಯೋಗೀಶ್ ಗೌಡ ಕೊಲೆ ಕೇಸ್​: ಧಾರವಾಡಕ್ಕೆ ಭೇಟಿ ನೀಡದಂತೆ ವಿನಯ್​ ಕುಲಕರ್ಣಿಗೆ ಸುಪ್ರೀಂನಿಂದ ಷರತ್ತುಬದ್ಧ ಜಾಮೀನು

ನವದೆಹಲಿ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಬುಧವಾರ (ಆಗಸ್ಟ್ 11) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದರೂ ಕುಲಕರ್ಣಿಗೆ ಸದ್ಯ ಜೈಲಿನಿಂದ ಬಿಡುಗಡೆ ಇಲ್ಲ ಎಂದು ವರದಿ ವಿವರಿಸಿದೆ. ಯೋಗಿಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕಳೆದ 9 ತಿಂಗಳಿನಿಂದ ಜೈಲಿನಲ್ಲಿದ್ದು, ಜಾಮೀನು ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡಕ್ಕೆ ಭೇಟಿ ನೀಡದಂತೆ …

Read More »

ಆನಂದ್ ಸಿಂಗ್ ರಾಜೀನಾಮೆ ಹೈಡ್ರಾಮ: ಯಾವ ಒತ್ತಡಕ್ಕೂ ಸೊಪ್ಪು ಹಾಕದಿರಲು ಸಿಎಂಗೆ ಹೈಕಮಾಂಡ್​ ಸಲಹೆ

ಬೆಂಗಳೂರು: ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಸಚಿವ ಆನಂದ್​ ಸಿಂಗ್​, ತನ್ನ ಬೇಡಿಕೆ ಈಡೇರಿಸಿಕೊಳ್ಳಲು ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದಾರೆ. ಅತ್ತ ಯಾವುದೇ ಒತ್ತಡಕ್ಕೂ ಸೊಪ್ಪು ಹಾಕಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ದು, ಬೊಮ್ಮಾಯಿ ಸಂಪುಟದತ್ತ ಎಲ್ಲರ ಚಿತ್ತ ಮೂಡಿದೆ. ಯಾವುದೇ ಕಾರಣಕ್ಕೂ ಖಾತೆ ಬದಲಾವಣೆ ಮಾಡಬೇಡಿ. ಈಗ ಖಾತೆ ಬದಲಾವಣೆ ಮಾಡಿದರೆ ಮತ್ತೊಬ್ಬರು ಖಾತೆ ಕ್ಯಾತೆ ತೆಗೆಯುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರು ಮತ್ತು ಆರ್​ಎಸ್​ಎಸ್​ನಿಂದ ಸಿಎಂಗೆ ಸಲಹೆ ಬಂದಿದೆ. …

Read More »

ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಜತೆಗೆ ರಾಜಕೀಯಕ್ಕೇ ನಿವೃತ್ತಿ ಘೋಷಿಸಲು ಸಜ್ಜಾದ ಆನಂದ್ ಸಿಂಗ್!

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ಆನಂದ್ ಸಿಂಗ್ ನಿರ್ಧರಿಸಿದ್ದಾರೆ. ಈಗಾಗಲೇ ಸ್ಪೀಕರ್ ಭೇಟಿಗೆ ಅವಕಾಶ ಕೇಳಿದ್ದು, ಇನ್ನು ಕೆಲವೇ ಗಂಟೆಯಲ್ಲಿ ಬೆಂಗಳೂರಿಗೆ ಆಗಮಿಸಿ ರಾಜೀನಾಮೆ ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಮಾತ್ರವಲ್ಲ, ರಾಜಕೀಯಕ್ಕೂ ನಿವೃತ್ತಿ ಘೋಷಣೆ ಮಾಡಲಿದ್ದಾರೆ. ಬೈ ಎಲೆಕ್ಷನ್ ನಡೆದರೂ ಅದಕ್ಕೂ ನಿಲ್ಲದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಆನಂದ್​ ಸಿಂಗ್​ಗೆ ಪ್ರವಾಸೋದ್ಯಮ ಖಾತೆ ಸಿಕ್ಕಿದೆ. ತಾನು ಕೇಳಿದ್ದ ಖಾತೆಯನ್ನು ಕೊಟ್ಟಿಲ್ಲ …

Read More »

ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು : ಸಿಎಂ ಬೊಮ್ಮಾಯಿ

ಬೆಂಗಳೂರು : ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಬೇಕು ಮತ್ತು ಅಪರಾಧವನ್ನು ಸಂಪೂರ್ಣವಾಗಿ ಸದೆಬಡಿಯುವ ಕೆಲಸ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಸಿಎಂ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ. ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಜೂಜು, ಡಾರ್ಕ್ವೆಬ್‌ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವಂತಿಲ್ಲ. ಭೂ ವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ಮಾದಕ ವಸ್ತುಗಳ …

Read More »

ಮಾಸ್ಕ್ ಧರಿಸದ್ದಕ್ಕೆ ದಂಡ ವಿಧಿಸಿದ ಅಧಿಕಾರಿಗೆ ಹಿಗ್ಗಾಮುಗ್ಗ ಥಳಿಸಿದ ಮಹಿಳೆ; ವಿಡಿಯೋ ವೈರಲ್

ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮಹಿಳೆಯೊಬ್ಬರಿಗೆ ದಂಡ ವಿಧಿಸಿದ ಅಧಿಕಾರಿಯೇ ಆಕೆಯಿಂದ ಒದೆ ತಿಂದಿರುವ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಕೊವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಿಲ್ಲ ಎಂದು ದಂಡ ವಿಧಿಸಿದ್ದಕ್ಕೆ ಆ ಅಧಿಕಾರಿಯ ಕೆನ್ನೆಗೆ ಹೊಡೆದು, ಕಾಲಿನಲ್ಲಿ ಒದ್ದು, ಆತನ ಕೂದಲನ್ನು ಹಿಡಿದು ಎಳೆದಾಡಿರುವ ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಸಂಬಂಧ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ನವದೆಹಲಿಯಲ್ಲಿ ನಡೆದ ಈ ಘಟನೆಯ ವಿಡಿಯೋ ನೋಡಿದ ನೆಟ್ಟಿಗರು …

Read More »

7 ಮಕ್ಕಳ ತಂದೆ, 67 ವರ್ಷದ ವ್ಯಕ್ತಿ ಪ್ರೀತಿಗೆ ಬಿದ್ದ 19ರ ಹುಡುಗಿ.!

ಪ್ರೀತಿ ಕುರುಡು ಎನ್ನುತ್ತಾರೆ. ಅದಕ್ಕೆ ವಯಸ್ಸಿನ ಮಿತಿಯಿಲ್ಲ, ಜಾತಿಯ ಗಡಿಯಿಲ್ಲ. ಇದಕ್ಕೆ ಹರಿಯಾಣದ ಪಲ್ವಾಲ್‌ನಲ್ಲಿ ನಡೆದ ಘಟನೆ ಉತ್ತಮ ನಿದರ್ಶನ. 19 ವರ್ಷದ ಹುಡುಗಿ 7 ಮಕ್ಕಳ ತಂದೆಯಾಗಿರುವ 67 ವರ್ಷದ ವ್ಯಕ್ತಿಯ ಪ್ರೀತಿಗೆ ಬಿದ್ದಿದ್ದಾಳೆ. ಇಷ್ಟೇ ಅಲ್ಲ ಇಬ್ಬರೂ ಮದುವೆಯಾಗಿದ್ದಾರೆ. ನಂತ್ರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಗೆ ಹೋಗಿ, ತಮಗೆ ರಕ್ಷಣೆ ಬೇಕೆಂದು ಮನವಿ ಸಲ್ಲಿಸಿದ್ದಾರೆ. ವರದಿ ಪ್ರಕಾರ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಈ ಬಗ್ಗೆ …

Read More »

ಬೆಳಗಾವಿ, ಹುಬ್ಬಳ್ಳಿ -ಧಾರವಾಡ ಹಾಗೂ ಕಲಬುರಗಿ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು – ಬೆಳಗಾವಿ ಸೇರಿದಂತೆ 3 ಮಹಾನಗರ ಪಾಲಿಕೆಗಳ ಚುನಾವಣೆ ಘೋಷಣೆಯಾಗಿದೆ. ಬೆಳಗಾವಿ, ಹುಬ್ಬಳ್ಳಿ -ಧಾರವಾಡ ಹಾಗೂ ಕಲಬುರಗಿ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಸೆಪ್ಟಂಬರ್ 3ರಂದು ಚುನಾವಣೆ ನಡೆಯಲಿದ್ದು, ಸೆಪ್ಟಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

Read More »