ರೈಲ್ವೇ ಟಿಕೆಟ್ ಪರೀಕ್ಷಕರ (ಟಿಟಿಇ) ಕೈಬ್ಯಾಗ್ ಕದ್ದ ಕಳ್ಳನೊಬ್ಬ, ಅದರಲ್ಲಿದ್ದ ಸಮವಸ್ತ್ರ ಹಾಗೂ ಚಲನ್ ಪುಸ್ತಕ ಬಳಸಿಕೊಂಡು ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸಿ ಅವರಿಂದ ದಂಡದ ಹೆಸರಿನಲ್ಲಿ ದುಡ್ಡು ಕಿತ್ತ ಘಟನೆ ಹೌರಾ-ಅಮೃತಸರ ಮೇಲ್ ರೈಲೊಂದರಲ್ಲಿ ಜರುಗಿದೆ. ಬರೇಲಿ ನಿಲ್ದಾಣದಲ್ಲಿ ಟಿಟಿಇ ಕೈಬ್ಯಾಗ್ ಕದ್ದ ಗೋವಿಂದ್ ಸಿಂಗ್ ಎಂಬ ಈತನ ಈ ಆಟ ಹೆಚ್ಚು ಕಾಲ ನಡೆಯಲಿಲ್ಲ. ಬ್ಯಾಗಿನ ಮಾಲೀಕರಾದ ಜಸ್ವಂತ್ ಸಿಂಗ್ ಪೊಲೀಸರಿಗೆ ದೂರು ಕೊಟ್ಟ ಸ್ವಲ್ಪ ಹೊತ್ತಿನಲ್ಲೇ …
Read More »ಕೆಲವೇ ಗಂಟೆಗಳಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ
ಕರ್ನಾಟಕ ರಾಜ್ಯ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ (SSLC Result 2021) ಪ್ರಕಟಣೆಗೆ ಸಿದ್ಧವಾಗಿದ್ದು, ಇಂದು ಲಭ್ಯವಾಗಲಿದೆ. ಮಧ್ಯಾಹ್ನ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ನಿಗದಿಪಡಿಸಲಾದ ಸುದ್ದಿಗೋಷ್ಠಿಯಲ್ಲಿ ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಲಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ. …
Read More »ಕೆಆರ್ಎಸ್ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ: ಎಸ್ಪಿಗೆ ಮನವಿ
ದಾವಣಗೆರೆ: ಪೊಲೀಸರ ದಬ್ಬಾಳಿಕೆ ಮತ್ತು ದೌರ್ಜನ್ಯದ ವಿರುದ್ಧ ದೂರು ನೀಡಲು ಹೋದ ಕೆಆರ್ಎಸ್ ಪಕ್ಷದ ಪದಾಧಿಕಾರಿಗಳನ್ನು ಸುಳ್ಳು ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಕೆಆರ್ಎಸ್ ಪಕ್ಷದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಅವರಿಗೆ ದೂರು ನೀಡಲಾಗಿದೆ. ದಾವಣಗೆರೆಯ ಆಸ್ಪತ್ರೆಯೊಂದರಲ್ಲಿ ವ್ಯಾಕ್ಸಿನ್ ಕೊಡುವಲ್ಲಿ ಆಗುತ್ತಿದ್ದ ಅವ್ಯವಹಾರ, ಅವ್ಯವಸ್ಥೆ, ಮತ್ತು ಬೆಳಿಗ್ಗೆ ಐದು ಗಂಟೆಯಿಂದ ಕಾಯುತ್ತಿದ್ದವರಿಗೆ ಕೊಡದೆ ಬೇರೆಯವರಿಗೆ ಲಸಿಕೆ ನೀಡುತ್ತಿರುವ ಬಗ್ಗೆ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ವಿಡಿಯೊ ಮಾಡಲಾಗುತ್ತಿತ್ತು. …
Read More »ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ
ಮೈಸೂರು : ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು(ಸೋಮವಾರ, ಆಗಸ್ಟ್ 9) ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ನಾಡದೇವತೆಯ ದರ್ಶನ ಪಡೆಯಲು ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಪೂರ್ಣ ಕುಂಭ ಸ್ವಾಗತ ಮಾಡಲಾಯಿತು. ತದನಂತರ ದೇವಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಮೈಸೂರಿನಲ್ಲಿಂದು ಸಿಎಂ ಪ್ರವಾಸ : ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸಚಿವರುಗಳಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ವಿ.ಸೋಮಣ್ಣ, …
Read More »ಗೃಹ ಇಲಾಖೆಯಲ್ಲಿ ಅಮೂಲಾಗ್ರ ಸುಧಾರಣೆ ತರುತ್ತೇನೆ: ಅರಗ ಜ್ಞಾನೇಂದ್ರ
ತುಮಕೂರು: ಗೃಹ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆ ತರಲು ಪ್ರಯತ್ನ ಪಡುತ್ತೇನೆ ಎಂದು ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆ ಜವಾಬ್ದಾರಿ ನನಗೆ ಹೊಸದು. ನಾಳೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸುತ್ತೆನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ತೆಗೆದುಕೊಳ್ಳುತ್ತೇನೆ ಎಂದರು. ಪೊಲೀಸ್ ಇಲಾಖೆ ಸಶಕ್ತವಾಗಿ ಕೆಲಸ ಮಾಡುವ ಹಾಗೆ ಶಕ್ತಿ ತುಂಬಬೇಕೆಂದು ಯೋಚನೆ ಮಾಡಿದ್ದು, …
Read More »ಕಂಬಳ ಭೀಷ್ಮ ಗುರುಪುರ ಕೆದುಬರಿ ಗುರುವಪ್ಪ ಅಪಘಾತದಲ್ಲಿ ನಿಧನ
ಮಂಗಳೂರು: ಕಂಬಳ ಕ್ಷೇತ್ರದ ಹಿರಿಯ ಭೀಷ್ಮ, ಕೃಷಿಕ, ಸರಳಜೀವಿ ಕೆದುಬರಿ ಗುರುವಪ್ಪ ಪೂಜಾರಿ (78) ಭಾನುವಾರ ಸಂಜೆ ಮಂಗಳೂರಿನ ಗುರುಪುರ ಸಮೀಪದ ಕುಕ್ಕುದಕಟ್ಟೆ ಬಳಿ ರಸ್ತೆ ಅಪಘಾತದಲ್ಲಿ ನಿಧನರಾದರು. ಕುಕ್ಕುದಕಟ್ಟೆಯಲ್ಲಿರುವ ಡೈರಿಗೆ ಹಾಲು ಹಾಕಲು ತನ್ನ ಸ್ಕೂಟಿಯಲ್ಲಿ ಸಾಗುತ್ತಿದ್ದ ವೇಳೆ ಕಾರು ಹಾಗೂ ಸ್ಕೂಟಿ ಮಧ್ಯೆ ಈ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ …
Read More »ಭಾರತ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದೆಯೇ?
ಭಾರತವು ಮೊದಲ ಬಾರಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದೆ. ಜಗತ್ತಿನ ಜುಟ್ಟು ಈಗ ಭಾರತದ ಕೈಯಲ್ಲಿದೆ. ಪಾಕಿಸ್ತಾನ, ಟರ್ಕಿ ದಿಗ್ಭ್ರಾಂತಿಗೆ ಒಳಗಾಗಿವೆ’ ಎಂಬ ಬರಹದ ಪೋಸ್ಟರ್ಗಳು ಕಳೆದ ಮೂರ್ನಾಲ್ಕು ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ‘ನಮೋ ಹಿಂದೂಸ್ತಾನಿ’, ‘ನಮೋ ಇಂಡಿಯಾ’ ಸೇರಿದಂತೆ ವಿವಿಧ ಫೇಸ್ಬುಕ್ ಪೇಜ್ಗಳಲ್ಲಿ ಈ ಪೋಸ್ಟರ್ಗಳು ಷೇರ್ ಆಗುತ್ತಿವೆ. ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದು ಇದೇ ಮೊದಲಲ್ಲ ಎಂದು ಆಲ್ಟ್ …
Read More »ಸಾರ್ವಜನಿಕ ಗಣೇಶೋತ್ಸವ ರದ್ದು ಮಾಡಬೇಡಿ
ಭಕ್ತಿ ಹಾಗೂ ಭಾವೈಕ್ಯತೆ ಹಿನ್ನೆಲೆಯಲ್ಲಿ ಬಾಲ ಗಂಗಾಧರ ತಿಲಕರ ಮುಂದಾಳತ್ವದಲ್ಲಿ ಹುಟ್ಟಿ ಬೆಳೆದ ಸಾರ್ವಜನಿಕ ಗಣೇಶೋತ್ಸವ ಎಲ್ಲರ ಅಚ್ಚುಮೆಚ್ಚಿನ ಹಬ್ಬ. ಅಲ್ಲದೆ ಅದು ಶ್ರದ್ಧಾ ಭಾವನೆಗಳ ಜೊತೆಗೆ ಸಾಮಾಜಿಕ ಸುಧಾರಣೆಯ ಅಭಿಯಾನವೂ ಆಗಿದೆ. ದೇಶದಾದ್ಯಂತ ಅನೇಕ ಕಲಾವಿದರೂ, ಉದ್ಯಮ ರಂಗದವರೂ ಈ ಉತ್ಸವದ ಮೇಲೆ ಅವಲಂಬಿತರಾಗಿದ್ದಾರೆ. ಉದಯೋನ್ಮುಖ ಕಲಾವಿದರಿಗೆ ಪ್ರತಿಭೆ ಪ್ರದರ್ಶಿಸಲು ಈ ಉತ್ಸವವು ವೇದಿಕೆಯಾಗಿದೆ. ಕರೊನಾದಿಂದಾಗಿ ಈಗಾಗಲೇ ಹಲವಾರು ಉದ್ಯಮಗಳು ನೆಲಕಚ್ಚಿವೆ. ಕರೊನಾ ಸೋಂಕಿನ ಮೂರನೇ ಅಲೆ ಬರುವ …
Read More »ಮುಂಬರುವ ೩ ವರ್ಷಗಳಲ್ಲಿ ಭಾರತದ ರಸ್ತೆಗಳು ಅಮೆರಿಕದ ರಸ್ತೆಗಳಂತೆ ಆಗಲಿವೆ ! – ಕೇಂದ್ರ ಸಚಿವ ನಿತಿನ ಗಡಕರಿ
(ಗುಜರಾತ) – ಮುಂಬರುವ ೩ ವರ್ಷಗಳಲ್ಲಿ ಭಾರತದಲ್ಲಿ ಅಮೆರಿಕದ ರಸ್ತೆಗಳ ಗುಣಮಟ್ಟವಿರುವ ರಸ್ತೆಗಳು ಕಾಣಲು ಸಿಗಲಿವೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ ಗಡಕರಿ ಅವರು ಹೇಳಿದರು. ಅವರು ಆನ್ಲೈನ್ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಬನಾಸಕಾಂಠಾ ಜಿಲ್ಲೆಯ ದಿಸಾ ನಗರದಲ್ಲಿ ೩.೭೫ ಕಿ.ಮೀ. ಉದ್ದದ ನಾಲ್ಕು ಪಥದ ಮೇಲ್ಸೇತುವೆಯನ್ನು ಆನ್ಲೈನ್ ಮುಖಾಂತರ ಗಡಕರಿಯವರು ಉದ್ಘಾಟಿಸಿದರು. ದೇಶದಾದ್ಯಂತ ರಸ್ತೆ ನಿರ್ಮಾಣ ಕಾರ್ಯವು ಭರದಿಂದ ಸಾಗಿದೆ. ಪ್ರಸ್ತುತ, ಭಾರತದಲ್ಲಿ ಪ್ರತಿದಿನ …
Read More »ಮಂಜು ತಂದೆ-ತಾಯಿ ಬಳಿ ಮದುವೆ ಬಗ್ಗೆ ಮಾತಾಡಿದ್ದೇನೆ’; ಎಲ್ಲರ ಮುಂದೆ ವಿಷಯ ತಿಳಿಸಿದ ದಿವ್ಯಾ ಸುರೇಶ್
ಬಿಗ್ ಬಾಸ್ ಕನ್ನಡ ಸೀಸನ್ 8ರ ಫಿನಾಲೆಯನ್ನು (Bigg Boss Finale) ಕಿಚ್ಚ ಸುದೀಪ್ ಅವರು ತುಂಬಾ ಲವಲವಿಕೆಯಿಂದ ನಡೆಸಿಕೊಟ್ಟಿದ್ದಾರೆ. ಯಾರು ವಿನ್ನರ್ ಎಂಬುದನ್ನು ತಿಳಿಸುವುದರ ಜೊತೆಗೆ ಹಲವು ವಿಚಾರಗಳು ಈ ವೇದಿಕೆಯಲ್ಲಿ ಚರ್ಚೆ ಆಗಿವೆ. ಹತ್ತು ಹಲವು ತಮಾಷೆಯ ಮಾತುಗಳ ಮೂಲಕ ಇಡೀ ವಾತಾವರಣವನ್ನು ಸುದೀಪ್ ರಂಗಾಗಿಸಿದ್ದಾರೆ. ಈ ವೇಳೆ ಮಂಜು ಪಾವಗಡ ಮತ್ತು ಅರವಿಂದ್ ಕೆಪಿ ಅವರ ಮದುವೆ ಬಗ್ಗೆ ಒಂದು ಪ್ರಶ್ನೆ ಎದುರಾಯಿತು. ಅದಕ್ಕೆ ಸಂಬಂಧಪಟ್ಟಂತೆ …
Read More »
Laxmi News 24×7