Breaking News

ರಾಜ್ಯ

ತಾವು ಮಾಡದ ತಪ್ಪಿಗೆ ಅಗ್ನಿಪರೀಕ್ಷೆ ಎದುರಿಸಿ ಬಂದಿದ್ದೇನೆ ಎಂದ ಸಚಿವೆ ಶಶಿಕಲಾ ಜೊಲ್ಲೆ

ನಿಪ್ಪಾಣಿ : ತಾವು ಮಾಡದ ತಪ್ಪಿಗೆ ಅಗ್ನಿಪರೀಕ್ಷೆ ಎದುರಿಸಿ ಬಂದಿದ್ದೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆಯವರು ಭಾವುಕರಾಗಿ ನುಡಿದರು. ನಿಪ್ಪಾಣಿ ಕ್ಷೇತ್ರಕ್ಕೆ ಸಚಿವರಾಗಿ ಮೊದಲಬಾರಿಗೆ ಆಗಮಿಸಿ ಪಕ್ಷದ ಕಚೇರಿಗೆ ಭೇಟಿ ಮಾಡಿ ಪಕ್ಷದ ವತಿಯಿಂದ ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನನಗೆ ಅದ್ದೂರಿ ಸತ್ಕಾರ ಮಾಡಿದ್ದೀರಿ ನಾನು ಇದನ್ನು ಯಾವತ್ತೂ ಮರೆಯುವುದಿಲ್ಲ. ನಮ್ಮೆಲ್ಲರ ಮೇಲೆ ದೊಡ್ಡ ಜವಾಬ್ದಾರಿ ಇದೆ. ನಮ್ಮ ಪ್ರಧಾನಿ ನರೇಂದ್ರ ಮೋದಿಜಿ ಅವರು, ಹಿಂದಿನ ಮುಖ್ಯಮಂತ್ರಿಗಳಾದ …

Read More »

‘ಮುಸ್ಲಿಂ ನಾಯಕ ವೀಕ್ ಆಗ್ಲಿ ಅಂತ ರೇಡ್’ ED ದಾಳಿ ಬಗ್ಗೆ ಸಿದ್ದರಾಮಯ್ಯ ಆಪ್ತನ ಆಕ್ರೋಶ

ಬೆಂಗಳೂರು: ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ರೇಡ್​​ಗೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ಜಮೀರ್ ನಿವಾಸದ ಬಳಿ ಸಿದ್ದರಾಮಯ್ಯ ಆಪ್ತ ಬಳಗದಲ್ಲಿರುವ ಮಾಜಿ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅಶೋಕ್ ಪಟ್ಟಣ್.. ಐಎಂಎ ಪ್ರಕರಣ ನಡೆದು ತುಂಬಾ ದಿನ ಆಯ್ತು.. ಈ ದಾಳಿ ರಾಜಕೀಯ ಪ್ರೇರಿತ ಅಂತ ಗೊತ್ತಾಗುತ್ತಿದೆ.. ತಪ್ಪಿದ್ರೆ ಆವತ್ತೇ ಅರೆಸ್ಟ್ ಮಾಡ್ತಾ ಇದ್ರು.. ಇದು ರಾಜಕೀಯ ಪ್ರೇರಿತ ಎಂದಿದ್ದಾರೆ. ಅಶೋಕ್ ಪಟ್ಟಣ್, …

Read More »

ವಿಸ್ಕಿ ಬಾಟಲ್ ಕಾಣಿಸುತ್ತಿಲ್ಲ ಎಂದು ತನಿಖೆ ಆರಂಭ

ವಿಸ್ಕಿ ಬಾಟಲ್ ಕಾಣಿಸಲಿಲ್ಲ ಎಂದು ಯುಎಸ್ ತನಿಖೆಯು ಬಹಿರಂಗಪಡಿಸಿದೆ. ಖಜಾನೆ ಇಲಾಖೆಯ ಪ್ರಕಾರ, ವಿಸ್ಕಿಯ ಬೆಲೆ $ 5,800 (ರೂ. 4.30 ಲಕ್ಷ) ಮತ್ತು ಜಪಾನ್ ಸರ್ಕಾರವು ಆಗಿನ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊಗೆ 2019 ರಲ್ಲಿ ಉಡುಗೊರೆಯಾಗಿ ನೀಡಿತು. ಅಧಿಕೃತ ಅಂಕಿಅಂಶಗಳಲ್ಲಿ ಬಾಟಲ್ ಕಾಣಿಸದಿರುವುದಕ್ಕೆ ಅಧಿಕಾರಿಗಳು ಪ್ರಸ್ತುತ ಕಾಳಜಿ ವಹಿಸಿದ್ದಾರೆ. ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮತ್ತು ವಿಸ್ಕಿ ಬಾಟಲ್ ಕಾಣೆಯಾದ ಬಗ್ಗೆ ತನಿಖೆ ಆರಂಭಿಸಿದರು. ಪೊಂಪಿಯೊ …

Read More »

ಕಾನೂನು ಹೋರಾಟದಲ್ಲಿ ರಿಲಯನ್ಸ್‌ ವಿರುದ್ಧ ಅಮೆಜಾನ್‌ಗೆ ಜಯ

ನವದೆಹಲಿ: ಭಾರತದ ಆನ್‌ಲೈನ್‌ ವ್ಯಾಪಾರದ ಪ್ರತಿ ಸ್ಪರ್ಧಿಗಳಾದ ಮುಕೇಶ್‌ ಅಂಬಾನಿ ಮತ್ತು ಜೆಫ್ ಬೆಜೋಸ್‌ ನಡುವಿನ ಕಾನೂನು ಹೋರಾಟದಲ್ಲಿ ಜೆಫ್ ಗೆ ಜಯದಕ್ಕಿದೆ. ಫ್ಯೂಚರ್‌ ಗ್ರೂಪ್‌ನ ರಿಟೇಲ್‌ ಆಸ್ತಿಯನ್ನು ಖರೀದಿಸುವ 3.4 ಶತ ಕೋಟಿ ಡಾಲರ್‌ ಮೊತ್ತದ ಒಪ್ಪಂದವನ್ನು ರಿಲಯನ್ಸ್‌ ಕಂಪನಿ ಮುಂದುವರಿ ಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ. ಇದರಿಂದಾಗಿ ಅಮೆಜಾನ್‌ಗೆ ದೊಡ್ಡ ಯಶಸ್ಸುಸಿಕ್ಕಂತಾಗಿದೆ. ತನ್ನ ಪಾಲುದಾರ ಸಂಸ್ಥೆ ಫ್ಯೂಚರ್‌ ಗ್ರೂಪ್‌ ವಿರುದ್ಧ ಅಮೆಜಾನ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ತನ್ನ ರಿಟೇಲ್‌ …

Read More »

ಆಸ್ತಿ ಗಳಿಕೆ ವಿಚಾರವಾಗಿ ಐಟಿ ಬದಲು ಇಡಿ ತನಿಖೆ ಆಶ್ಚರ್ಯ ಮೂಡಿಸಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಇಡಿ ಅಧಿಕಾರಿಗಳು ಐಎಂಎ ವಿಚಾರಕ್ಕೆ ದಾಳಿ ಮಾಡಿಲ್ಲ, ಆಸ್ತಿ ವಿಚಾರವಾಗಿ ದಾಳಿ ಮಾಡಿದ್ದಾರೆ ಎಂದು ನಮ್ಮ ಶಾಸಕರಾದ ಜಮೀರ್ ಅಹಮದ್ ಹೇಳಿದ್ದಾರೆ. ಆಸ್ತಿ ಗಳಿಕೆ ವಿಚಾರವಾಗಿ ಆದಾಯ ಇಲಾಖೆ (IT) ಬದಲು ಜಾರಿ ನಿರ್ದೇಶನಾಲಯ (ED) ದಾಳಿ ಮಾಡಿರುವುದು ಅಚ್ಚರಿ ಮೂಡಿಸಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ದಾಳಿಗೂ …

Read More »

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ವಿದೇಶಿ ಪ್ರಜೆ ಸೇರಿ ನಾಲ್ವರು ಬಂಧನ, ₹6 ಕೋಟಿ ಮೌಲ್ಯದ ಡ್ರಗ್ಸ್​ ವಶ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ಭರ್ಜರಿ ಕಾರ್ಯಾಚರಣೆಯಲ್ಲಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆದಿದ್ದಾರೆ. ಇನ್ನು, ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ವಿದೇಶಿ ಪ್ರಜೆ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. 15 ಕೆಜಿ ಹಶೀಶ್ ಎಣ್ಣೆ, 10 ಕೆಜಿ ಗಾಂಜಾ, ಎಕ್ಸ್​​ಟಸಿ ಮಾತ್ರೆ ಜಪ್ತಿ ಮಾಡಲಾಗಿದೆ. ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಿಂಗ್​​ ಪಿನ್​ ಈಗ ಸಿಸಿಬಿ ಪೊಲೀಸರ …

Read More »

ಕರ್ನಾಟಕ-ಮಹಾರಾಷ್ಟ್ರ ಜಲ ವಿವಾದ: ಮಾತುಕತೆ ಮೂಲಕ ಪರಿಹರಿಸಿಕೊಳ್ಳಲು ಪವಾರ್-ಬೊಮ್ಮಾಯಿ ಚರ್ಚೆ

ಬೆಂಗಳೂರು, ಆ. 6: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಿರಿಯ ರಾಜಕೀಯ ಮುತ್ಸದ್ದಿ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಶುಕ್ರವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಉಭಯ ನಾಯಕರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. `ಕರ್ನಾಟಕ ರಾಜ್ಯ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವಿನ ನೀರು ಹಂಚಿಕೆ ವಿಷಯದ ಕುರಿತು ಇಬ್ಬರು ಮುಖಂಡರು ಸಮಾಲೋಚನೆ …

Read More »

ಆಗಸ್ಟ್ 23ರಿಂದ ಶಾಲಾ -ಕಾಲೇಜು ಆರಂಭ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದ್ದು, ಆಗಸ್ಟ್ 23ರಿಂದ 9, 10 ಹಾಗೂ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ತಿಳಿಸಿದರು. ಸಿಎಂ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿ ಕೋವಿಡ್‌ ನಿರ್ವಹಣೆ ಮತ್ತು ಶಾಲೆ ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಯಿತು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ …

Read More »

ಕೆಲಸ ಮಾಡುತ್ತಿದ್ದ ಅಂಗಡಿಯಿಂದಲೇ ಚಿನ್ನ ಕದ್ದು ಅಡವಿಟ್ಟ ಖದೀಮ ಈಗ ಪೊಲೀಸರ ಅತಿಥಿ

ಹುಣಸೂರು: ಐಷಾರಾಮಿ ಜೀವನಕ್ಕೆ ಮಾರು ಹೋಗಿದ್ದ ಯುವಕನೊರ್ವ ಕೆಲಸ ಮಾಡತ್ತಿದ್ದ ಚಿನ್ನಾಭರಣದ ಅಂಗಡಿಯಲ್ಲೇ ಚಿನ್ನಾಭರಣ ಕದ್ದು,ಅಡವಿಟ್ಟಿದ್ದ ಘಟನೆಯನ್ನು ಹುಣಸೂರು ನಗರ ಠಾಣೆ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಣಸೂರು ನಗರದ ಜೆಎಲ್‌ ಬಿ ರಸ್ತೆಯ ಪೃಥ್ವಿ ಜ್ಯುವಲರ್‍ಸ್ ಅಂಗಡಿಯಲ್ಲಿ ನಡೆದಿದ್ದು, ತಾಲೂಕಿನ ರತ್ನಪುರಿಯ ಶಿವರಾಮ್ ಎಂಬಾತನೇ ಅನ್ನ ಹಾಕಿದ ಮನೆಗೆ ಕನ್ನ ಹಾಕಿ ಬಂಧನಕ್ಕೊಳಗಾದಾತ. ಈತನಿಂದ ಸುಮಾರು 25 ಲಕ್ಷರೂ ಬೆಲೆ ಬಾಳುವ 503 ಗ್ರಾಂ.ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಹುಣಸೂರು ತಾಲೂಕಿನ ರತ್ನಪುರಿ …

Read More »

ಪೊದೆಯಲ್ಲಿ ಬಚ್ಚಿಟ್ಟಿದ್ದ 146 ಚೀಲ ಅನ್ನಭಾಗ್ಯ ಅಕ್ಕಿ ವಶ

ಚಿತ್ರದುರ್ಗ: ರಾಂಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಪೊದೆಯಲ್ಲಿ ಬಚ್ಚಿಟ್ಟಿದ್ದ 146 ಚೀಲ ಅನ್ನಭಾಗ್ಯದ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದ ಬಳಿ ಅಕ್ಕಿ ಜಪ್ತಿ ಮಾಡಲಾಗಿದ್ದು, ಆರೋಪಿ ರಾಮು ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಂಪುರ ಪಿಎಸ್‌ಐ ಗಾದಿಲಿಂಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಲಕ್ಷಾಂತರ ಬೆಲೆ ಬಾಳುವ ಚಿನ್ನ, ನಗದು ಕಳವು ಇನ್ನು ಬೆಂಗಳೂರಿನ ಬಾಗಲಗುಂಟೆ ಬಳಿಯ ಕಲ್ಯಾಣನಗರದಲ್ಲಿ …

Read More »