Breaking News

ರಾಜ್ಯ

ಸಂಪುಟದಿಂದ ಹೊರಬಿದ್ದವರು..

ಲಕ್ಷ್ಮಣ ಸವದಿ: ಉಪ ಮುಖ್ಯಮಂತ್ರಿಯಾಗಿದ್ದವರು ಹಾಗೂ ಪ್ರಬಲ ಸಮುದಾಯ (ಲಿಂಗಾಯತ)ಕ್ಕೆ ಸೇರಿದವರೂ ಆಗಿದ್ದರು. ಉತ್ತಮ ಪ್ರದರ್ಶನ ತೋರುವ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಪಕ್ಷದ ವಿಶ್ವಾಸ ಉಳಿಸಿಕೊಂಡಿದ್ದರೆ, ಮುಖ್ಯಮಂತ್ರಿಯಾಗಿ ಹೊರಹೊಮ್ಮಬಹು ದಿತ್ತು. ಆದರೆ, ಖಾತೆ ನಿರ್ವಹಣೆಯಲ್ಲಿ ಎಡವಿದರು. ಸಾರಿಗೆ ನೌಕರರ ಮುಷ್ಕರ ನಿರ್ವಹಿಸಿದ ರೀತಿ, ನಷ್ಟದಿಂದ ಹೊರಬರದ ಸಾರಿಗೆ ನಿಗಮಗಳು, ಸಾರಿಗೆ ಇಲಾಖೆಯಲ್ಲಿ ಕೂಡ ಹೇಳಿಕೊಳ್ಳುವಂತಹ ಯಾವುದೇ ಕಾರ್ಯಕ್ರಮಗಳು ಆಗದಿರುವುದು ಮುಳುವಾಯಿತು. ಇದೆಲ್ಲ ದರ ಜತೆಗೆ ಪಕ್ಷದಲ್ಲಿ ಯಡಿಯೂರಪ್ಪ …

Read More »

ರಾಜ್ಯದ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ 30 ಸದಸ್ಯರಿದ್ದಾರೆ.

ಬೆಂಗಳೂರು: ರಾಜ್ಯದ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ 30 ಸದಸ್ಯರಿದ್ದಾರೆ. ಈ ಪೈಕಿ ಅರ್ಧಕ್ಕಿಂತಲೂ ಹೆಚ್ಚು ಮಂದಿ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದವರು. ಈ ಎರಡೂ ಸಮುದಾಯಗಳಿಗೆ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ದೊರಕಿದೆ. ಮುಖ್ಯಮಂತ್ರಿಯೂ ಸೇರಿದಂತೆ ಲಿಂಗಾಯತ ಸಮುದಾಯದ ಹತ್ತು ಜನರು ಸಂಪುಟದಲ್ಲಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮುದಾಯದ ಮೂವರು, ವೀರಶೈವ ಸಾದರ ಲಿಂಗಾಯತ ಸಮುದಾಯದ ಇಬ್ಬರು, ವೀರಶೈವ ಲಿಂಗಾಯತರ ಬಣಜಿಗ ಮತ್ತು ಚತುರ್ಥ ಉಪ ಪಂಗಡಗಳ ತಲಾ …

Read More »

ಸಚಿವ ಸಂಪುಟದ ಜಾತಿ ಹೆಸರಿನ ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡಿದೆ. ಬಿಜೆಪಿ ಸರ್ಕಾರ: ರಮೇಶ್ ಬಾಬು ಕಿಡಿ

ಬೆಂಗಳೂರು : ಕರ್ನಾಟಕದ ಬಿಜೆಪಿ ಸರ್ಕಾರ ಮಂತ್ರಿ ಮಂಡಲ ರಚನೆಯಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ವಿಫಲವಾಗಿದೆ ಎಂದು ಮಾಜಿ ಪರಿಷತ್ ಸದಸ್ಯ ಹಾಗೂ ಬೆಜೆಪಿ ವಕ್ತಾರ ರಮೇಶ್ ಬಾಬು ಕಿಡಿ ಕಾರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯಕ್ಕೆ ಜಾತಿಯ ಸುಳ್ಳು ಮಾಹಿತಿ ನೀಡಿದ್ದಾರೆ. 30 ಜನರ ಸಚಿವ ಸಂಪುಟದಲ್ಲಿ 10 ಜನ ಲಿಂಗಾಯತ ಸಮುದಾಯಕ್ಕೆ ಅವಕಾಶ ನೀಡಿದ್ದಾರೆ. ಮೂರನೇ ಒಂದು ಭಾಗ ಒಂದೇ ಸಮುದಾಯಕ್ಕೆ …

Read More »

ಜಾರಕಿಹೊಳಿ ಕುಟುಂಬವನ್ನು ಹೊರಗಿಟ್ಟು ಸರಕಾರ ರಚಿಸುವ ಸಾಹಸಕ್ಕೆ ಬಿಜೆಪಿ ಹೈಕಮಾಂಡ್ ಕೈಹಾಕಿದೆ.

ಬೆಳಗಾವಿ – ಪಕ್ಷ ಯಾವುದೇ ಇರಲಿ, ಸರಕಾರ ಯಾವುದೇ ಬರಲಿ. ಆದರೆ ಗೋಕಾಕದ ಜಾರಕಿಹೊಳಿ ಸಹೋದರರಲ್ಲಿ ಒಬ್ಬರು ಸಂಪುಟದಲ್ಲಿರಲೇಬೇಕು. ಇದು ಕಳೆದ ಸುಮಾರು 2 ದಶಕದಿಂದಲೂ ನಡೆದು ಬಂದ ಪದ್ಧತಿ. ಆದರೆ 2004ರಿಂದೀಚೆಗೆ ಇದೇ ಮೊದಲ ಬಾರಿಗೆ ಕುಟುಂಬದ ಮೂವರು ಶಾಸಕರಿದ್ದರೂ, ಬಿಜೆಪಿಯವರೇ ಇಬ್ಬರಿದ್ದರೂ ಯಾರೊಬ್ಬರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳದೆ ಸರಕಾರ ಅಸ್ಥಿತ್ವಕ್ಕೆ ಬಂದಿದೆ. ಜಾರಕಿಹೊಳಿ ಕುಟುಂಬವನ್ನು ಹೊರಗಿಟ್ಟು ಸರಕಾರ ರಚಿಸುವ ಸಾಹಸಕ್ಕೆ ಬಿಜೆಪಿ ಹೈಕಮಾಂಡ್ ಕೈಹಾಕಿದೆ. 2004ರಿಂದ ಅಧಿಕಾರಕ್ಕೆ ಬಂದ …

Read More »

ಕಾಮುಕ ಶಿಕ್ಷಕನಿಗೆ ಗ್ರಾಮಸ್ಥರಿಂದ ಧರ್ಮದೇಟು,ನರ್ಸ್ ಗೆ ಅಶ್ಲೀಲ ಮೆಸೇಜ್ ಮಾಡಿದ ಮಾಸ್ತರ್…

ಕಿತ್ತೂರು : ಕಿತ್ತೂರು ಚೆನ್ನಮ್ಮನ ನಾಡು ಚೆನ್ನಮ್ಮನ ನಾಡಿನಲ್ಲಿ ಹೆಣ್ಣಿಗೆ ಸಿಗಬೇಕಾದ ಮರ್ಯಾದೆಯನ್ನು ಇಂದು ಒಬ್ಬ ಶಿಕ್ಷಕ ಅವರ್ ಮರ್ಯಾದೆ ತೆಗೆಯೋಅಂತ ಕೆಲಸವನ್ನ ಮಾಡಿದ್ದಾನೆ ಕಿತ್ತೂರು ಚೆನ್ನಮ್ಮನ ನಾಡಿನಲ್ಲಿ ಇಂತದೊಂದು ಘಟನೆ ಶಿಕ್ಷಕನಿಂದ ನಡೆದಿದೆ . ಹೌದು ಕಿತ್ತೂರು ತಾಲೂಕಿನ ದೇವಾಂಗ ಸರಕಾರಿ ಪ್ರಾಥಮಿಕ ಶಾಲೆಯ ಪ್ರಧಾನ ಶಿಕ್ಷಕ ಸುರೇಶ್ ಚವಲಗಿ ಎಂಬ ಕಾಮುಕ ಶಿಕ್ಷಕ ಕಿತ್ತೂರು ತಾಲೂಕಿನ ಸರ್ಕಾರಿ ಆಸ್ಪತ್ರೆ ಯಲ್ಲಿ ಕೆಲಸ ಮಾಡುವ ನರ್ಸ್ ಗೆ ಅಶ್ಲೀಲ …

Read More »

29 ನೂತನ ಸಚಿವರಿಗೆ ಕೋವಿಡ್ ಹಾಗೂ ನೆರೆ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿ ಆದೇಶ

ಬೆಂಗಳೂರು: 29 ನೂತನ ಸಚಿವರಿಗೆ ಕೋವಿಡ್ ಹಾಗೂ ನೆರೆ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿ ಆದೇಶ ಹೊರಡಿಸಲಾಗಿದೆ. ಇದು ಕೋವಿಡ್ ಹಾಗೂ ನೆರೆ ನಿರ್ವಹಣೆಗೆ ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಜಿಲ್ಲಾ ಉಸ್ತುವಾರಿ ಅಲ್ಲ. ನಾಳೆಯಿಂದಲೇ ಸಚಿವರು ತಮ್ಮ ತಮ್ಮ ಜಿಲ್ಲೆಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ವಿತರಣೆ ಕಾರ್ಯಗಳಲ್ಲಿ ತೊಡಗಲಿದ್ದಾರೆ. ಯಾವ ಸಚಿವರಿಗೆ ಯಾವ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ ಇಲ್ಲಿದೆ ಸಂಪೂರ್ಣ ಮಾಹಿತಿ.   ಗೋವಿಂದ ಕಾರಜೋಳ- …

Read More »

ಬೊಮ್ಮಾಯಿ ಸಂಪುಟದ 29 ಮಂದಿ ಮಂತ್ರಿಗಳಾಗಿ ಪ್ರಮಾಣವಚನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ  29 ಮಂದಿ ಶಾಸಕರು ಇಂದು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಧ್ಯಾಹ್ನ 2:15ಕ್ಕೆ ನಡೆದ ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶಾಸಕರಿಗೆ ಪ್ರಮಾಣವಚನ ಬೋಧಿಸಿದರು.   ಮೂರು ದಿನಗಳಿಂದ ದೆಹಲಿಯಲ್ಲಿಯೇ ಉಳಿದುಕೊಂಡಿದ್ದ ಸಿಎಂ ಬೊಮ್ಮಾಯಿ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಎಲ್ಲರಿಗೂ ಶುಭ ಕೋರಿದರು. ಈ ಬಾರಿ ಯಾವುದೇ …

Read More »

ಹೊಸ ಸಂಪುಟದಲ್ಲಿ ಬೆಂಗಳೂರಿಗೆ ಬಂಪರ್..! , 13 ಜಿಲ್ಲೆಗಳಿಗೆ ಯಾವುದೇ ಸಚಿವ ಸ್ಥಾನ ದೊರೆತಿಲ್ಲ.

ಬೆಂಗಳೂರು, ಆ.4- ಬೊಮ್ಮಾಯಿ ಸಂಪುಟದಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ಸಿಕ್ಕಿದೆ. ಸಂಪುಟದಲ್ಲಿ ಏಳು ಮಂದಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ರಾಜ್ಯದ ಆರು ಜಿಲ್ಲೆಗಳಿಗೆ ತಲಾ ಎರಡು ಸಚಿವ ಸ್ಥಾನಗಳನ್ನು ನೀಡಿದರೆ ಬೆಂಗಳೂರು ನಗರ ಜಿಲ್ಲೆಗೆ 7 ಸಚಿವ ಸ್ಥಾನ ನೀಡಲಾಗಿದೆ. ಮುಂಬರುವ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು 7 ಶಾಸಕರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಆರ್.ಅಶೋಕ್, ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಮುನಿರತ್ನ, ವಿ.ಸೋಮಣ್ಣ, ಗೋಪಾಲಯ್ಯ , ಅಶ್ವತ್ಥನಾರಾಯಣ್ ಅವರನ್ನು ಮತ್ತೆ …

Read More »

9 ರ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮನುಕುಲವೇ ತಲೆ ತಗ್ಗಿಸುವಂತಿದೆ. ದುಷ್ಕರ್ಮಿಗಳು 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ ಮಾಡಿ, ಬಳಿಕ ಬಲವಂತವಾಗಿ ಸುಟ್ಟು ಹಾಕಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಜೊತೆಗೆ ಆಕೆ ವಿದ್ಯುತ್​ ಶಾಕ್​ನಿಂದ ಸಾವನ್ನಪ್ಪಿದ್ದಾಳೆ ಎಂದು ಆರೋಪಿಗಳು ಬಾಲಕಿಯ ಪೋಷಕರಿಗೆ ಹೇಳಿದ್ದಾರೆ. ಇಷ್ಟೇ ಅಲ್ಲದೇ, ಪೊಲೀಸರಿಗೆ ಈ ವಿಷಯ ತಿಳಿಸದಂತೆಯೂ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಈ ಪೈಶಾಚಿಕ …

Read More »

ಮೋದಿ ಭಕ್ತರಿಗೆ ಮೋದಿಯಿಂದಲೇ ಪಂಗನಾಮ ; ಸಿದ್ದರಾಮಯ್ಯ

ಬೆಂಗಳೂರು, ; ದೇಶದಲ್ಲಿ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಯುವಕರಿಗೆ ಉದ್ಯೋಗ ಇಲ್ಲ, ಬಡತನ ಪ್ರಮಾಣ ಮಿತಿಮೀರಿದೆ, ಹಸಿವಿನಿಂದ ಸತ್ತವರ ಬಗ್ಗೆ, ದೇಶದ ಜಿಡಿಪಿ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾತನಾಡುವುದಿಲ್ಲ , ಅದನ್ನು ಬಿಟ್ಟು ಪಾಕಿಸ್ತಾನ, ರಾಮಮಂದಿರ ಮುಂತಾದ ಭಾವನಾತ್ಮಕ ವಿಚಾರಗಳ ಬಗ್ಗೆಯಷ್ಟೇ ಜನರ ಗಮನ ಸೆಳೆಯುತ್ತಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಪದ್ಮನಾಭ ನಗರದಲ್ಲಿ ಆಯೋಜಿಸಿದ್ದ ದಿನಸಿ ಕಿಟ್ ಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ …

Read More »