ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ. ನನ್ನ ಆಡಳಿತದಲ್ಲಿ ಬಿಜೆಪಿ ಸ್ಟ್ಯಾಂಪ್ ಇರುತ್ತದೆ. ಮೋದಿ, ಅಮಿತ್ ಶಾ, ಬಿ.ಎಸ್.ವೈ. ಆಡಳಿತದ ಬಿಜೆಪಿಯ ಸಿದ್ಧಾಂತದಡಿ ಮಾಡಿದ ಸ್ಟ್ಯಾಂಪ್ ಇರುತ್ತದೆ. ನಾನು ಯಾವುದೇ ವ್ಯಕ್ತಿಯ ಸ್ಟಾಂಪ್ ಆಗಿರುವುದಿಲ್ಲ ಎಂದು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರ ಸರ್ಕಾರವನ್ನು ಜನ ತಿರಸ್ಕರಿಸಿದ್ದರು. ಅವರಿಗೆ ಯಾವ …
Read More »ಬೆಳಗಾವಿಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ.
ಬೆಳಗಾವಿ – ಬೆಳಗಾವಿಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ. ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ದೇವಸ್ಥಾನಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಬಹುದು ಮತ್ತು ಮನೆಗ ಮನೆಗಳಲ್ಲಿ ಮೂರ್ತಿ ಸ್ಥಾಪಿಸಬಹುದು ಎಂದು ತಿಳಿಸಿದ್ದಾರೆ. ಪಕ್ಕದ ಮಹಾರಾಷ್ಟ್ರದಲ್ಲಿ ಕೊರೋನಾ ಏರುತ್ತಿರುವ ಹಿನ್ನೆಲೆಯಲ್ಲಿ ಮತ್ತು ಬೆಳಗಾವಿಯಲ್ಲಿ ಸಧ್ಯ 567 ಸಕ್ರೀಯ ಪ್ರಕರಣಗಳಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಚಿಕ್ಕೋಡಿಯಲ್ಲಿ ಕೊರೋನಾ …
Read More »ಸಚಿವ ಸಂಪುಟ ಪುನರಚನೆ ವರಿಷ್ಠರ ಸೂಚನೆಯಂತೆ ಮಾಡಲಾಗುವುದು: ಬೊಮ್ಮಾಯಿ
ದೆಹಲಿ: ಸಚಿವ ಸಂಪುಟ ಪುನರಚನೆ ಬಗ್ಗೆ ಹೈಕಮಾಂಡ್ ಭೇಟಿ ವೇಳೆ ಯಾವುದೇ ಚರ್ಚೆಯಾಗಿಲ್ಲ. ವರಿಷ್ಠರ ಸೂಚನೆಯಂತೆ ಸಂಪುಟ ರಚನೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಬೊಮ್ಮಾಯಿ, ಸಂಪುಟ ರಚನೆ ವಿಚಾರವಾಗಿ ಹೈಕಮಾಂಡ್ ಸೂಚನೆಗೆ ಕಾಯುತ್ತಿದ್ದೇನೆ. ಮಧ್ಯಾಹ್ನದೊಳಗೆ ಲಿಸ್ಟ್ ಬರುತ್ತೋ ಇಲ್ವೋ ಗೊತ್ತಿಲ್ಲ. ಈ ಬಗ್ಗೆ ನನಗಿನ್ನೂ ಯಾವುದೇ ಕರೆ ಬಂದಿಲ್ಲ. ಸೂಚನೆ ಬಂದ ಕೂಡಲೇ ಸಚಿವರ ಪಟ್ಟಿ ಬಗ್ಗೆ ಚರ್ಚಿಸುತ್ತೇನೆ ಎಂದರು. ಇಂದು ಬೆಂಗಳೂರಿಗೆ …
Read More »ಅಳ್ತಾರೆ, ಗಂಡನ ಜತೆ ಜಗಳವಾಡ್ತಾರೆ ಅನ್ನೋ ಸುದ್ದಿ ಮಾನಹಾನಿ ಆಗತ್ತೇನ್ರಿ? ಶಿಲ್ಪಾ ವಿರುದ್ಧ ಕೋರ್ಟ್ ಗರಂ
ಮುಂಬೈ: ಬ್ಲೂ ಫಿಲ್ಮ್ಂ ಪ್ರಕಣದಲ್ಲಿ ಸಿಲುಕಿರುವ ಉದ್ಯಮಿ ರಾಜ್ ಕುಂದ್ರಾ ಪೊಲೀಸರ ವಶದಲ್ಲಿದ್ದರೆ, ಇತ್ತ ಅವರ ಪತ್ನಿ ನಟಿ ಶಿಲ್ಪಾ ಶೆಟ್ಟಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅವರು ಕೋರ್ಟ್ಗೆ ಅರ್ಜಿ ಸಲ್ಲಿಸಿರುವುದು ಮಾಧ್ಯಮಗಳ ವಿರುದ್ಧ. ಪತಿ ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುರಿತು ಸುಳ್ಳು ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ. ಜತೆಗೆ ಶಿಲ್ಪಾ ಅಳುತ್ತಿದ್ದಾರೆ, ಗಂಡನ ಜತೆ ಜಗಳವಾಡುತ್ತಿದ್ದಾರೆ ಇತ್ಯಾದಿಯಾಗಿ ಮಾನಹಾನಿಯಾಗುವಂಥ ಸುದ್ದಿಗಳನ್ನು …
Read More »ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸಿಡಿ ಭೀತಿ ಶುರು?
ಬೆಂಗಳೂರು: ಇದೀಗ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸಿಡಿ ಭೀತಿ ಶುರುವಾಗಿದೆ. ಆದ್ದರಿಂದ ತಮ್ಮ ವಿರುದ್ಧ ಯಾವುದಾದರೂ ಸಿಡಿಗಳು ಇದ್ದರೆ ಅದು ಎಲ್ಲಿಯೂ ಪ್ರಸಾರವಾಗಬಾರದು ಎಂದು ಕೋರಿ ಬೆಂಗಳೂರಿನ ಸಿವಿಲ್ ಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಇದರ ವಿಚಾರಣೆ ನಡೆಸಿರುವ ಕೋರ್ಟ್, ಸಿಡಿಯನ್ನು ಎಲ್ಲಿಯೂ ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ನೀಡಿದೆ. ಸಿಡಿಯ ಕುರಿತಂತೆ ಮಾತನಾಡಿರುವ ರೇಣುಕಾಚಾರ್ಯ ಅವರು, ಈಗೀಗ ತಂತ್ರಜ್ಞಾನ ಹೇಗಿದೆ ಎಂದರೆ, ಯಾರದ್ದೋ ತಲೆ, ಯಾರದ್ದೋ ಮುಖ, ಯಾರದ್ದೋ …
Read More »ಸಚಿವ ಸಂಪುಟ ರಚನೆ: ‘ವಿಜಯಪುರ ಕಡೆಗಣಿಸಿದರೆ ದೊಡ್ಡ ಶಾಕ್ ಕೊಡುವೆ’-ಯತ್ನಾಳ
ವಿಜಯಪುರ: ವಿಜಯಪುರ ಜಿಲ್ಲೆಗೆ ಗೌರವಯುತವಾಗಿ ಸಚಿವ ಸ್ಥಾನ ಕೊಡಲೇಬೇಕು. ಒಂದು ವೇಳೆ ಜಿಲ್ಲೆಯನ್ನು ಕಡೆಗಣಿಸಿದರೆ ಸಚಿವ ಸಂಪುಟ ವಿಸ್ತರಣೆ ಬಳಿಕ ದೊಡ್ಡ ಶಾಕ್ ಕೊಡಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಎಚ್ಚರಿಕೆ ನೀಡಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ್ಳೆಯವರನ್ನು, ಪ್ರಾಮಾಣಿಕರನ್ನು, ಹಿಂದುತ್ವ ಉಳ್ಳವರನ್ನು, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಶಕ್ತಿಯುಳ್ಳವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು. ನನಗೆ ಹೈಕಮಾಂಡ್ ಮೇಲೆ ವಿಶ್ವಾಸವಿದೆ. ಯಡಿಯೂರಪ್ಪನವರು ಹೇಳಿದ್ದೇ …
Read More »ಮುಖ್ಯಮಂತ್ರಿ ಠಾಕ್ರೆ ಮತ್ತು ವಿರೋಧ ಪಕ್ಷದ ನಾಯಕ ಫಡ್ನವೀಸ್ ಕೊಲ್ಹಾಪುರದಲ್ಲಿ ಏಕಕಾಲಕ್ಕೆ ಪ್ರತ್ಯಕ್ಷರಾಗಿ ಮುಖಾಮುಖಿಯಾದರು!
ಮಹಾರಾಷ್ಟ್ರದ ಮುಖ್ಯಮಂತ್ರಿ ಉಧವ್ ಠಾಕ್ರೆ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಶುಕ್ರವಾರ ಬೆಳಗ್ಗೆ ಕೊಲ್ಹಾಪುರದಲ್ಲಿ ಏಕಕಾಲಕ್ಕೆ ಪ್ರತ್ಯಕ್ಷರಾಗಿ ಜನರಲ್ಲಿ ಆಚ್ಚರಿ ಮೂಡಿಸಿದರು. ಇಬ್ಬರು ನಾಯಕರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ನಗರಕ್ಕೆ ಆಗಮಿಸಿದ್ದರು. ಮುಖಾಮುಖಿಯಾದ ನಂತರ ಅವರಿಬ್ಬರು ಪ್ರವಾಹ ಪರಿಸ್ಥಿತಿ ಮತ್ತು ಪುನರ್ವಸತಿ ವಿಷಯಗಳ ಬಗ್ಗೆ ಚರ್ಚಿಸಿದರು. ‘ಅವರು ಅಲ್ಲಿಗೆ ಹೋಗಿದ್ದು ಗೊತ್ತಿತ್ತು, ನಾನು ಸಹ ಅದೇ ಸ್ಥಳಕ್ಕೆ ಭೇಟಿ ನಿಡುತ್ತಿದ್ದರಿಂದ ಅವರಿಗೆ ಅಲ್ಲೇ …
Read More »ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಮುಂದಾಗಿದ್ದ 6 ಕೋಟಿ ರೂ. ಮೌಲ್ಯದ ರಕ್ತ ಚಂದನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣ ಬೆಂಗಳೂರು: ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಮುಂದಾಗಿದ್ದ 6 ಕೋಟಿ ರೂ. ಮೌಲ್ಯದ ರಕ್ತ ಚಂದನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇಲ್ಲಿನ ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ(ಕೆಐಎಬಿ) ಕಾರ್ಗೋ ಟರ್ಮಿನಲ್ನಲ್ಲಿ ರಕ್ತ ಚಂದನ ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ತ ಚಂದನವನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿತ್ತು. ಅನುಮಾನಗೊಂಡು ಏರ್ ಕಾರ್ಗೋ ಕಸ್ಟಮ್ಸ್ ಅಧಿಕಾರಿಗಳು, …
Read More »ಅನೈತಿಕ ಸಂಬಂಧ ಪ್ರಶ್ನೆ ಮಾಡಿದ್ದಕ್ಕೆ ಗಂಡ ತನ್ನ ಹೆಂಡತಿಯನ್ನೇ ಕೊಲೆ ಮಾಡಿದ ಪತಿ
ಕೊಪ್ಪಳ: ಅನೈತಿಕ ಸಂಬಂಧ ಪ್ರಶ್ನೆ ಮಾಡಿದ್ದಕ್ಕೆ ಗಂಡ ತನ್ನ ಹೆಂಡತಿಯನ್ನೇ ಕೊಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ. ಮೊಬೈಲ್ ಚಾರ್ಜರ್ ಬಳಸಿ ಮಡದಿ ಮಂಜುಳಾ (25) ಕತ್ತು ಬಿಗಿದು ಮಂಜುನಾಥ್ ಕಟ್ಟಿಮನಿ ಎಂಬಾತ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಮಂಜುಳಾ ಪತಿ ಮಂಜುನಾಥ್ ಕಟ್ಟಿಮನಿ ಬೇರೊಬ್ಬ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇದೇ ವಿಷಯಕ್ಕೆ ಗಂಡ ಹೆಂಡತಿ ಮದ್ಯೆ ಪದೇ ಪದೇ ಗಲಾಟೆ ಆಗ್ತಿತ್ತು ಎಂದು …
Read More »ಇಬ್ಬರು ಮಹಿಳೆಯರ ಹತ್ಯೆ, ಕೊಳೆತ ಸ್ಥಿತಿಯಲ್ಲಿ ಪತ್ತೆ
ದಾವಣಗೆರೆ, ಜುಲೈ 30; ಇಬ್ಬರು ಮಹಿಳೆಯಯನ್ನು ಕೊಲೆ ಮಾಡಿರುವ ಘಟನೆ ದಾವಣಗೆರೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆಯನ್ನು ನಡೆಸಿದ್ದಾರೆ. ದಾವಣಗೆರೆ ನಗರದ ಹೊರಭಾಗದ ಆಂಜನೇಯ ಕಾಟನ್ ಮಿಲ್ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಕೊಲೆಯಾದವರನ್ನು ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಬೆನಕನಹಳ್ಳಿ ಗ್ರಾಮದವರಾದ ಗೌರಮ್ಮ (34) ಹಾಗೂ ರಾಧಿಕಾ (32) ಎಂದು ಗುರುತಿಸಲಾಗಿದೆ. ಆಂಜನೇಯ ಕಾಟನ್ ಮಿಲ್ ಬಡಾವಣೆಯ …
Read More »
Laxmi News 24×7