Breaking News

ರಾಜ್ಯ

ಭ್ರಷ್ಟಾಚಾರವೇ ಸರಕಾರದ ಸಾಧನೆ: ಸಿದ್ದು

“ಆಪರೇಷನ್‌ ಕಮಲ’ ಎಂಬ ಅನೈತಿಕ ಮಾರ್ಗದಿಂದ ಅಧಿಕಾರಕ್ಕೇರಿದ ರಾಜ್ಯ ಬಿಜೆಪಿ ಸರಕಾರವು ಭ್ರಷ್ಟಾಚಾರ, ದುರಾಡಳಿತಗಳಿಂದಲೇ ಎರಡು ವರ್ಷಗಳನ್ನು ಪೂರೈಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸರಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ “ಜನಪೀಡಕ ಸರಕಾರ’ ಕಿರುಹೊತ್ತಿಗೆ ಬಿಡುಗಡೆ ಮಾಡಿದ ಅವರು, ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಬಿಜೆಪಿ ಸರಕಾರ ಇದ್ದರೆ ಸ್ವರ್ಗವನ್ನೇ ಸೃಷ್ಟಿಸುತ್ತೇವೆ ಎಂದು ಜನರನ್ನು ನಂಬಿಸಿ ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂದು ಟೀಕಿಸಿದರು. ಕೊರೊನಾ ಸಂಬಂಧಿ ಸಲಕರಣೆ …

Read More »

ಹೈಕಮಾಂಡ್​ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ವರಿಷ್ಠರಿಗೆ ಸಚಿವ ಸಂಪುಟ ರಚನೆಯ ತಲೆನೋವು ಆರಂಭವಾಗಿದೆ. ಪ್ರಮುಖ ಸ್ವಾಮೀಜಿಗಳು ತಮ್ಮ ಸಮುದಾಯಗಳ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಡ ಹೇರುತ್ತಿರುವುದು ಇದಕ್ಕೆ ಕಾರಣ. ಮುಖ್ಯಮಂತ್ರಿ ಬೊಮ್ಮಾಯಿ ತತ್‌ಕ್ಷಣ ಸಚಿವ ಸಂಪುಟ ರಚಿಸುವ ಲೆಕ್ಕಾಚಾರದಲ್ಲಿ ಇದ್ದಂತೆ ಕಾಣಿಸುತ್ತಿಲ್ಲ. ಆಷಾಢ ಮುಗಿ ಯುವವರೆಗೂ ಆಕಾಂಕ್ಷಿಗಳು ಕಾಯ ಬೇಕಾಗ ಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರ ವಾರ ದಿಲ್ಲಿಗೆ ತೆರಳಲಿದ್ದು, ಪ್ರಧಾನಿ ಮೋದಿ, …

Read More »

ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರನ್ನು ರಕ್ಷಿಸಿ, ಸ್ಥಳಾಂತರ ಮಾಡಲಾಗಿದೆ.

ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರನ್ನು ರಕ್ಷಿಸಿ, ಸ್ಥಳಾಂತರ ಮಾಡಲಾಗಿದೆ. ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ 54 ಜನ ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದರು. ಎನ್​ಡಿಆರ್​ಎಫ್​ ತಂಡ ಹಾಗೂ ಸ್ಥಳೀಯ ಪೊಲೀಸರು ಜನರನ್ನು ರಕ್ಷಿಸಿ, ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದಾರೆ. ಕೃಷ್ಣಾ ನದಿಯಿಂದ ಸವದಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಏಕಾಏಕಿ ನೀರು ಬಂದಿದ್ದರಿಂದ ಗ್ರಾಮಸ್ಥರು ಸಿಲುಕಿಕೊಂಡಿದ್ದರು. ಉತ್ತರ ಕನ್ನಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿರುವ …

Read More »

‘ಮಂತ್ರಿಗಿರಿ’ಗಾಗಿ ಹೈಕಮಾಂಡ್​ ಮುಂದೆ ಸೋಮಶೇಖರ್ ರೆಡ್ಡಿ ಲಾಬಿ

ಬಳ್ಳಾರಿ: ಬಿ.ಎಸ್​​ ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಬಸವರಾಜ್​​ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಸದ್ಯದಲ್ಲೇ ಬಸವರಾಜ್​​ ಬೊಮ್ಮಾಯಿ ಹೈಕಮಾಂಡ್​​ ಆದೇಶದ ಮೇರೆಗೆ ಹೊಸ ಸಚಿವ ಸಂಪುಟ ರಚನೆ ಮಾಡಲಿದ್ದಾರೆ. ಹೀಗಾಗಿ ಹಲವರು ಸಚಿವ ಸ್ಥಾನಕ್ಕೆ ಭಾರೀ ಲಾಬಿ ನಡೆಸುತ್ತಿದ್ದಾರೆ. ಈ ಸಾಲಿಗೆ ಈಗ ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಸೇರ್ಪಡೆಗೊಂಡಿದ್ದಾರೆ. ಹೌದು, ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ತನಗೂ ಮಂತ್ರಿ ಸ್ಥಾನಕ್ಕೆ ನೀಡುವಂತೆ ಹೈಕಮಾಂಡ್​​ …

Read More »

ಪಂಚಮಸಾಲಿ ಶ್ರೀ ರಾಜ್ಯಾದ್ಯಂತ ಅಭಿಯಾನ, ಸತ್ಯಾಗ್ರಹದ ಎಚ್ಚರಿಕೆ

ಬೆಂಗಳೂರು: ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ನೀಡಿದ್ದ ಭರವಸೆಗಳ ಬಗ್ಗೆ ಮತ್ತೆ ನೆನಪಿಸಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಸರ್ಕಾರಕ್ಕೆ ಅಂತಿಮ ಗಡುವಿನ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಂಚಮಸಾಲಿ ಶ್ರೀಗಳು, 2ಎ ಮೀಸಲಾತಿಗಾಗಿ ಆಗ್ರಹಿಸಿ ಆಗಸ್ಟ್ 15ರಿಂದ ಸೆ.30ರವರೆಗೆ ರಾಜ್ಯಾದ್ಯಂತ ಅಭಿಯಾನ ನಡೆಸಲಾಗುತ್ತದೆ. ಚಾಮರಾಜನಗರ ಜಿಲ್ಲೆ ಮಲೈಮಹದೇಶ್ವರ ಬೆಟ್ಟದಿಂದ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು, …

Read More »

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವೃದ್ಧ.

      ಬೆಳಗಾವಿ : ಬೆಳಗಾವಿಯ ಹಳೆ ಗಾಂಧಿನಗರದ ಬಳಿಯಿರುವ ರೈಲು ಹಳಿಯ ಮೇಲೆ ವೃದ್ಧನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.     ಬೆಳಗಾವಿಯ ಹಳೆ ಗಾಂಧಿನಗರ ಹೈವೆ ಸೇತುವೆ ಹತ್ತಿರ ಇರುವ ರೈಲು ಹಳಿಯ ಮೇಲೆ ಆ ವೃದ್ಧ ಬೆಳಿಗ್ಗೆಯಿಂದ ಕುಳಿತಿದ್ದನಂತೆ, ಮಧ್ಯಾಹ್ನ 3:15 ರ ವೇಳೆಗೆ ಬೆಳಗಾವಿ – ಶೇಡಬಾಳ ರೈಲು ಸಾಂಬ್ರಾ ಕಡೆಯಿಂದ ಬರುತ್ತಿದ್ದಂತೆಯೇ ತಕ್ಷಣ ಹಳಿಯ …

Read More »

ಪಾಶ್ಚಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ

    ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಪಾಶ್ಚಾಪುರ, ಮಾವನೂರ, ಪರಕನಟ್ಟಿ, ಗುಮಚಿನಮರಡಿ, ಕಣವಿನಹಟ್ಟಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು.   ಹಾನಿಯ …

Read More »

ಕಡೋಲಿ, ಕಾಕತಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹ ಹಾನಿ ಪರಿಶೀಲಿಸಿದ ರಾಹುಲ್ ಜಾರಕಿಹೊಳಿ

    ಬೆಳಗಾವಿ: ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಜಾಪರವಾಡಿ, ಕಡೋಲಿ, ದೇವಗಿರಿ ಹಾಗೂ ಕಾಕತಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಕಾಕತಿ, ಹೊನಗಾ, ಜಮನಾಳ, ಕೆಂಚನಟ್ಟಿ, ಬೈಲೂರ, ಮಳವಳ್ಳಿ, ಹೊಸವಂಟಮುರಿ ಗ್ರಾಮಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಇಂದು ಭೇಟಿ ನೀಡಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದರು. ಈ ಗ್ರಾಮಗಳಲ್ಲಿ ಪ್ರವಾಹ ಹಾಗೂ ಮಳೆಯಿಂದಾಗಿ ಮನೆ, ಬೆಳೆ, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದ್ದು, ಇವುಗಳನ್ನು …

Read More »

ಪಾಶ್ಚಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ

    ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಪಾಶ್ಚಾಪುರ, ಮಾವನೂರ, ಪರಕನಟ್ಟಿ, ಗುಮಚಿನಮರಡಿ, ಕಣವಿನಹಟ್ಟಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು.   ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು.   …

Read More »

ಪ್ರೀತಿಸಿ ಮದ್ವೆಯಾದ ಒಂದೇ ತಿಂಗಳಲ್ಲಿ ಮಹಿಳಾ ಕಾನ್ಸ್​​ಟೇಬಲ್ ಆತ್ಯಹತ್ಯೆ; ಹಲವು ಅನುಮಾನ

ಬೆಂಗಳೂರು: ನವವಿವಾಹಿತ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ. ನೇತ್ರಾ ಮೃತ ಮಹಿಳಾ ಸಂಚಾರಿ ಪೊಲೀಸ್ ಕಾನ್ಸ್‌ಟೇಬಲ್. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​ ಆಗಿದ್ದ ನೇತ್ರಾ, ಕಳೆದ ತಿಂಗಳು ಪ್ರೀತಿಸಿ ಎರಡೂ ಮನೆಯವರನ್ನ ಒಪ್ಪಿಸಿ ಮದುವೆಯಾಗಿದ್ದರು. ಆದ್ರೆ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »