Breaking News

ರಾಜ್ಯ

ಕೃಷ್ಣಾ ನದಿ ಪ್ರವಾಹ: ಕುಲಹಳ್ಳಿ ಗ್ರಾಮದ 100 ಕುಟುಂಬಗಳು ಸ್ಥಳಾಂತರ

ಬನಹಟ್ಟಿ: ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ರಬಕವಿ ಬನಹಟ್ಟಿ ತಾಲ್ಲೂಕಿನ ಕುಲಹಳ್ಳಿ ಗ್ರಾಮದ 100 ಕ್ಕೂ ಹೆಚ್ಚು ಕುಟುಂಬಗಳ ಅಂದಾಜು ೩೦೦ ಕ್ಕೂ ಹೆಚ್ಚು ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ. ಗ್ರಾಮದ ಮೋರೆ ಮತ್ತು ಗಸ್ತಿ ಪ್ರದೇಶದ ಜನರು ಪ್ರವಾಹದಿಂದ ತೊಂದರೆಗೆ ಒಳಗಾಗಿದ್ದಾರೆ. ಅದೇ ರೀತಿಯಾಗಿ ನದಿ ತೀರದ ತೋಟ ಹಾಗೂ ಹೊಲಗಳಲ್ಲಿ ವಾಸವಿದ್ದ ಜನರನ್ನು ಕೂಡಾ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ. ಮೋರೆ ಮತ್ತು ಗಸ್ತಿ …

Read More »

ಕೃಷ್ಣಾ ಪ್ರವಾಹಕ್ಕೆ ಬದುಕು ದುಸ್ತರ..

ಬಾಗಲಕೋಟೆ: ಕೃಷ್ಣಾ ನದಿ ಈ ಬಾರಿ ಉಗ್ರ ರೂಪ ತಾಳಿದ ಪರಿಣಾಮ ಪ್ರವಾಹ ಅಕ್ಷರಶಃ ನದಿ ಪಾತ್ರದ ಜನರ ಬದುಕನ್ನು ಬರ್ಬರವಾಗಿಸಿ ಬಿಟ್ಟಿದೆ. ಕಣ್ಣು ಹಾಯಿಸಿದ ಕಡೆಯೆಲ್ಲ ಪ್ರವಾಹ, ಭೀಕರ ಮಳೆ ಜಿಲ್ಲೆಯನ್ನು ಆಘಾತಕ್ಕೆ ತಳ್ಳಿದೆ. ಪ್ರವಾಹದ ರಣ ಕೇಕೆಗೆ ಗ್ರಾಮಗಳು ಜಲಾವೃತಗೊಂಡರೆ, ಗ್ರಾಮಕ್ಕೆ ಗ್ರಾಮಗಳೆ ನಡುಗಡ್ಡೆಯಾಗಿ ಹೋಗಿವೆ. ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತಮದಡ್ಡಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದ್ದು ಅಪಾರ ಹಾನಿ ಉಂಟು ಮಾಡಿದೆ. ಜನಜೀವನವನ್ನು ಸಂಪೂರ್ಣ ಅಸ್ಯವ್ಯಸ್ತಗೊಳಿಸಿದೆ. ಸಂತ್ರಸ್ಥರಿಗಾಗಿ …

Read More »

15 ಲಕ್ಷ ರೂ ಲಂಚ ಪಡೆಯುವಾಗ ತಹಸೀಲ್ದಾರ್‌ ಲೋಕಾಯುಕ್ತ ಬಲೆಗೆ

ಬೀದರ್​: ಲಂಚ ಪಡೆಯುತ್ತಿದ್ದರು ಎನ್ನಲಾದ ವೇಳೆ ತಹಶಿಲ್ದಾರ್ ಎಸಿಬಿ ಬಲೆಗೆ ಬಿದ್ದ ಘಟನೆ ಬೀದರ್​ನಲ್ಲಿ ನಡೆದಿದೆ. ತಹಶಿಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ನಗರದ ಲೀಲಾಧರ್​ ಎನ್ನುವವರಿಗೆ ಚಿದ್ರಿ ಸರ್ವೆ ನಂಬರ್​ನಲ್ಲಿನ 15ರ ಭೂಮಿ ಮುಟೆಷನ್ ಮಾಡಲು ತಹಶೀಲ್ದಾರ್​ ಗಂಗಾದೇವಿ ಅವರು 20 ಲಕ್ಷ ನೀಡುವಂತೆ ಡಿಮ್ಯಾಂಡ್​ ಮಾಡಿದ್ದರು ಎನ್ನಲಾಗಿದೆ. 15 ಲಕ್ಷ ಕೊಡುವದಾಗಿ ಒಪ್ಪಿಕೊಂಡಿದ್ದ ಲೀಲಾಧರ್​ ಎಸಿಬಿಗೆ ಮಾಹಿತಿ ನೀಡಿದ್ದರು. 15 ಲಕ್ಷ ಹಣವನ್ನು ತಹಶೀಲ್ದಾರ ತಮ್ಮ …

Read More »

ವಾರದ ಹಿಂದೆ ಪ್ರವಾಹ ಹಾಗೂ ಮಳೆಯಿಂದಾಗಿ ಲೋಳಸೂರ ಸೇತುವೆ ಸಂಪೂರ್ಣ ಜಲಾವೃತ: 10 ದಿನಗಳೊಳಗೆ ಸೇತುವೆ ದುರಸ್ತಿಗೊಳಿಸಿ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ : ಪ್ರವಾಹದಿಂದಾಗಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಲೋಳಸೂರ ಸೇತುವೆಯ ದುರಸ್ತಿ ಕಾರ್ಯವನ್ನು ಕೈಗೊಂಡು ೧೦ ದಿನಗಳೊಳಗಾಗಿ ಜನಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಬುಧವಾರ ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಅಧಿಕಾರಿಗಳ ತಂಡಕ್ಕೆ ಹದಗೆಟ್ಟಿರುವ ಸೇತುವೆ ಹಾಗೂ ರಸ್ತೆ ದುರಸ್ತಿ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ನಿರ್ದೇಶನ ನೀಡಿದ್ದಾರೆ. ವಾರದ ಹಿಂದೆ ಪ್ರವಾಹ ಹಾಗೂ ಮಳೆಯಿಂದಾಗಿ ಲೋಳಸೂರ ಸೇತುವೆ …

Read More »

ಗಾಯಗೊಂಡ ತಂದೆ, ಮಗಳನ್ನು ಭಾರಿ ಮಳೆಯಲ್ಲಿ ಸುರಕ್ಷಿತ ಜಾಗಕ್ಕೆ ತಲುಪಿಸಿದ ಮುಂಬೈ ಪೊಲೀಸ್

ಪ್ರತಿವರ್ಷ ಮುಂಬೈಯಲ್ಲಿ ಬೀಳುವ ಭಾರಿ ಮಳೆ ವಾತಾವರಣವನ್ನು ನೋಡಲು ಎಷ್ಟು ಸುಂದರ ಗೊಳಿಸುತ್ತದೆಯೋ, ಅಷ್ಟೇ ಭಯಾನಕವಾಗಿಯೂ ಸಹ ಇರುತ್ತದೆ. ಈ ಭಾರಿ ಮಳೆ ಬೀಳುವುದರಿಂದ ರಸ್ತೆಗಳೆಲ್ಲಾ ಜಲಾವೃತಗೊಂಡಿವೆ. ರಸ್ತೆಯಲ್ಲಿ ನಡೆದು ಕೊಂಡು ಹೋಗಿ ಸುರಕ್ಷಿತವಾಗಿ ಒಂದು ಜಾಗಕ್ಕೆ ಸೇರುವುದೇ ಸುಮಾರು ಜನರಿಗೆ ಒಂದು ದೊಡ್ಡ ಸವಾಲಿನ ಕೆಲಸವಾಗಿದೆ. ಇಂತಹ ಮಳೆಯಲ್ಲಿ ಅನೇಕರಿಗೆ ರಸ್ತೆ ಕಾಣದೆ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆಗಳು ಸಹ ನಡೆದಿವೆ. ಮೊಣಕಾಲು ಉದ್ದಕ್ಕೆ ನೀರು ನಿಂತಿದ್ದರೆ ನಡೆದು …

Read More »

ಬಿ.ಎಸ್​.ಯಡಿಯೂರಪ್ಪ ಕೆಳಗಿಳಿದರು ಅದಕ್ಕೆ ಗಡ್ಡ ತೆಗೆದೆ; ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಾನಾ ಬಗೆಯ ಚರ್ಚೆಗಳು ನಡೆದಿದ್ದು, ಅನೇಕ ಶಾಸಕರು ಈ ಬಗ್ಗೆ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು. ಅದರಲ್ಲೂ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಬದಲಾವಣೆಗಾಗಿ ಗಡ್ಡ, ತಲೆ ಕೂದಲು ಬಿಟ್ಟಿದ್ದು, ಹರಕೆ ಹೊತ್ತಿದ್ದರು ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿತ್ತು. ಈ ವಿಚಾರವಾಗಿ ಗಡ್ಡ ಬಿಟ್ಟಿರಲ್ಲಾ ಎಂದು ಕೇಳಿದ್ದ ಪ್ರಶ್ನೆಗೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ …

Read More »

ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಬಾರದು : ಬಸವನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು : ಕರ್ನಾಟಕದ 30 ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.   ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಲ್ಲ. ಬಿ.ಎಸ್.ಯಡಿಯೂರಪ್ಪ ಕುಟುಂಬದಿಂದ ದೂರ ಉಳಿದು ಕೆಲಸ ಮಾಡುತ್ತಾರೆ. ರಾಜ್ಯದಲ್ಲಿ ಬದಲಾವಣೆ ಆಗುತ್ತೆ ನೋಡುತ್ತೀರಿ. ಬಿಜೆಪಿ ಶಾಸಕರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತಾರೆ. ಹೈಕಮಾಂಡ್ …

Read More »

ಸಿಎಂ ಬೊಮ್ಮಾಯಿಯವರ ನೇತೃತ್ವದಲ್ಲಿ ಸಚಿವ ಸಂಪುಟ ಒಂದು ವಾರದಲ್ಲೇ ರಚನೆಯಾಗಲಿದೆ

ಬೆಂಗಳೂರು : ಇಂದು ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿ ಪರಮಾಣ ವಚನ ಸ್ವೀಕರಿಸಿದ್ದಾರೆ. ಇಂತಹ ಸಿಎಂ ಬೊಮ್ಮಾಯಿಯವರ ನೇತೃತ್ವದಲ್ಲಿ ಸಚಿವ ಸಂಪುಟ ಒಂದು ವಾರದಲ್ಲೇ ರಚನೆಯಾಗಲಿದೆ   ಈ ಕುರಿತಂತೆ ರಾಜಭವನದಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಮಾಜಿ ಸಚಿವ ಆರ್ ಅಶೋಕ್, ಇಂದು ಸಂಜೆ ನೂತನ ಸಿಎಂ ಆದಂತ ಬಸವರಾಜ ಬೊಮ್ಮಾಯಿಯವರು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ …

Read More »

ರೈತರ ಮಕ್ಕಳಿಗೆ ಶಿಷ್ಯ ವೇತನ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ನಂತರ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ನೂತನ ಮುಖ್ಯಮಂತ್ರಿಗಳು ತಮ್ಮ ಕೊಠಡಿಯಲ್ಲಿ ಸರಳವಾಗಿ ಪೂಜೆ ಸಲ್ಲಿಸಿದರು. ನಂತರ ಅಧಿಕಾರಿಗಳ ಜೊತೆ ಕಡತ ಪರಿಶೀಲನೆ ನಡೆಸಿದರು. ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸರ್ಕಾರದ  ಹೊಸ ಯೋಜನೆಗಳನ್ನು ಘೋಷಣೆ ಮಾಡಿದರು ಸಿಎಂ …

Read More »

ನಿರಾಣಿ, ಬೆಲ್ಲದ್‍ಗೆ ಸಿಎಂ ಕುರ್ಚಿ ತಪ್ಪಿದ್ದು ಹೇಗೆ?

ಬೆಂಗಳೂರು: ಸಿಎಂ ರೇಸ್‍ನಲ್ಲಿದ್ದ ಬೆಲ್ಲದ್, ನಿರಾಣಿ ಪೈಕಿ ಒಬ್ಬರನ್ನು ಹೈಕಮಾಂಡ್ ಅಂತಿಮಗೊಳಿಸಲಿದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ ಕ್ಲೈಮ್ಯಾಕ್ಸ್‍ನಲ್ಲಿ ಇವರಿಬ್ಬರಿಗೂ ಸಿಎಂ ಪಟ್ಟ ತಪ್ಪಿದ್ದು ಲಾಬಿ ಮಾಡದ ಬೊಮ್ಮಾಯಿ ಅವರಿಗೆ ಒಲಿದಿದೆ. ಮುಖ್ಯಮಂತ್ರಿ ರೇಸ್‍ನಲ್ಲಿದ್ದ ನಿರಾಣಿ ಮತ್ತು ಬೆಲ್ಲದ್ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಅಷ್ಟೇ ಅಲ್ಲದೇ ಇವರಿಬ್ಬರೂ ವಾರಣಾಸಿಗೆ ತೆರಳಿ ಗಂಗೆಯಲ್ಲಿ ಸ್ನಾನ ಮಾಡಿ ಕಾಶಿ ವಿಶ್ವನಾಥನ ದರ್ಶನ ಮಾಡಿದ್ದರು. ಹೀಗಾಗಿ ನಿರಾಣಿ ಮತ್ತು ಬೆಲ್ಲದ್ …

Read More »