ಸವಲತ್ತು ರಹಿತ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸಲು ಮಾಜಿ ಮೇಯರ ವಿಜಯ ಮೋರೆ ಮನವಿ ಸಾರ್ವಜನಿಕರು ಪ್ರತಿನಿತ್ಯ ತಾವುಗಳು ಮನೆಗೆ ಕೊಂಡುಕೊಳ್ಳುವ ಪತ್ರಿಕೆಗಳನ್ನು ಹಾಳು ಮಾಡದೆ ಒಟ್ಟುಗೂಡಿಸಿ ಪ್ರತಿ ಎರಡು ತಿಂಗಳಿಗೊಮ್ಮೆ ರದ್ದಿಯನ್ನು ಶಾಂತಾಯಿ ವಿದ್ಯಾ ಆಧಾರದವರಿಗೆ ನೀಡಿದರೆ ಸೌಕರ್ಯ ವಂಚಿತ ಬಡ ವಿದ್ಯಾರ್ಥಿಗಳ ಅನುಕೂಲವಾಗುತ್ತದೆ ಎಂದು ಮಾಜಿ ಮೇಯರ ವಿಜಯ ಮೋರೆ ಹೇಳಿದರು ಸವಲತ್ತು ರಹಿತ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸಲು ಶಾಂತಾಯಿ ವಿದ್ಯಾ ಆಧಾರ್ ತನ್ನ ಕಾರ್ಯವನ್ನು ಮುಂದುವರೆಸಿದೆ ಸಂಸ್ಥೆಯು …
Read More »ಮಧ್ಯವರ್ಜನ ಶಿಬಿರಗಳಲ್ಲಿ ಪಾಲ್ಗೊಂಡು ಉತ್ತಮ ಜೀವನ ನಡೆಸಿ: ಮಲ್ಲಗೌಡ ಪಾಟೀಲ್
ಮಧ್ಯವರ್ಜನ ಶಿಬಿರಗಳಲ್ಲಿ ಪಾಲ್ಗೊಂಡು ಉತ್ತಮ ಜೀವನ ನಡೆಸಿ: ಮಲ್ಲಗೌಡ ಪಾಟೀಲ್ ಸಲಹೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1951ನೇ ಮಧ್ಯವರ್ಜನ ಶಿಬಿರ ಕಾರ್ಯಕ್ರಮ ಬೆಳಗಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ದಶಕಗಳಿಂದ ಮಧ್ಯವರ್ಜನ ಶಿಬಿರ ನಡೆಸಿ ಕುಡಿತದ ಚಟಕ್ಕೆ ಬಲಿಯಾದವರನ್ನು ಸರಿ ದಾರಿಗೆ ತರುತ್ತಿರುವುದು ಶ್ಲಾಘನೀಯ ಕೆಲಸ ಎಂದು ಕೆಪಿಸಿಸಿ ಸದಸ್ಯರಾದ ಮಲ್ಲಗೌಡ ಕಲ್ಲಗೌಡ ಪಾಟೀಲ್ ಅವರು ಹೇಳಿದರು. ತಾಲೂಕಿನ ಕಡೋಲಿ ವಲಯದಲ್ಲಿ ಛತ್ರಪತಿ ಶಿವಾಜಿ …
Read More »ಪ್ಲಾಸ್ಟಿಕ್ ಕೈ ಚೀಲದ ಬದಲು ಕಾಂಪೋಸ್ಟಬಲ್ ಕ್ಯಾರಿ ಬ್ಯಾಗ್ ಉತ್ಪಾದನೆಗೆ ಪ್ರೋತ್ಸಾಹ ನೀಡಲು ಸರ್ಕಾರದ ನಿರ್ಧಾರ
ಬೆಂಗಳೂರು: ಪ್ಲಾಸ್ಟಿಕ್ ಕೈ ಚೀಲಗಳ ಬದಲು ಕರಗುವ “ಕಾಂಪೋಸ್ಟಬಲ್ ಕ್ಯಾರಿ ಬ್ಯಾಗ್” ಗಳ ಉತ್ಪಾದನೆಗೆ ಆದ್ಯತೆ ನೀಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಈ ವಿಷಯ ತಿಳಿಸಿದ್ದಾರೆ. ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಕುರಿತು ಅರಣ್ಯ ಇಲಾಖೆ ಹೊರಡಿಸಿರುವ ಅಧಿಸೂಚನೆಗಳಲ್ಲಿ “ಪ್ಲಾಸ್ಟಿಕ್ ಬ್ಯಾಗ್” ಎಂಬ ಪದದ ವ್ಯಾಖ್ಯಾನಕ್ಕೆ ತಿದ್ದುಪಡಿ ಮಾಡಲು …
Read More »ಹೃದಯಾಘಾತಗಳಿಂದ ಹೆಚ್ಚು ಸಾವಾಗುತ್ತಿದೆ ಎಂಬುದು ಸುಳ್ಳು: ವೈದ್ಯಕೀಯ ಸಚಿವರ ಸ್ಪಷ್ಟನೆ
ಹಾವೇರಿ: ರಾಜ್ಯದಲ್ಲಿ ಹೃದಯಾಘಾತಗಳಿಂದ ಹೆಚ್ಚು ಸಾವುಗಳಾಗುತ್ತಿವೆ ಎಂಬ ತಪ್ಪು ಸಂದೇಶ ಹೋಗಿದೆ. ಹೃದಯಾಘಾತಗಳಿಂದ ಹೆಚ್ಚು ಸಾವಾಗುತ್ತಿದೆ ಎಂಬುದು ಸುಳ್ಳು ಎಂದು ವೈದ್ಯಕೀಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಹಾವೇರಿ ತಾಲೂಕಿನ ನಲೋಗಲ್ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಜಿಟಿಟಿಸಿ ತರಬೇತಿ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೃದಯಾಘಾತ ಪ್ರಕರಣಗಳ ಬಗ್ಗೆ ವಿಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಎರಡು ದಿನಗಳ ಹಿಂದೆ ಜಂಟಿ ಸುದ್ದಿಗೋಷ್ಠಿ ನಡೆಸಿದ್ದೇವೆ. ಈ ಬಗ್ಗೆ …
Read More »ಮಾಜಿ ಯೋಧ ಸಂತರಾಮ ಪರಶರಾಮ ಸಂತಾಜೀ ನಿಧನ
ಮಾಜಿ ಯೋಧ ಸಂತರಾಮ ಪರಶರಾಮ ಸಂತಾಜೀ ನಿಧನ ಬೆಳಗಾವಿ ತಾಲೂಕಿನ ಹಲಗಾ ಮರಗಾಯಿ ಗಲ್ಲಿ ಮೂಲದ ಸದ್ಯ ಬೆಳಗಾವಿಯ ಟೀಚರ್ಸ್ ಕಾಲನಿಯ ರಹಿವಾಸಿ ಮಾಜಿ ಯೋಧ ಸಂತರಾಮ ಪರಶರಾಮ ಸಂತಾಜೀ (63) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಮೃತರು ಪತ್ನಿ, ಪುತ್ರಿ, ಅಳಿಯ, ಪುತ್ರ ಸೊಸೆ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ
Read More »ಸೇತುವೆ ನಿರ್ಮಾಣವಾಗಿ ಸುಮಾರು ದಶಕಗಳು ಕಳೆದಿವೆ ಜೀವ ಕೈಯಲ್ಲೇ ಹಿಡಿದುಕೊಂಡೇ ಜನಸಂಚಾರ
ಜೀವ ಕೈಯಲ್ಲೇ ಹಿಡಿದುಕೊಂಡೇ ಜನಸಂಚಾರ ಈ ಸೇತುವೆ ನಿರ್ಮಾಣವಾಗಿ ಸುಮಾರು ದಶಕಗಳು ಕಳೆದಿವೆ ಈ ಸೇತುವೆ ಅತ್ಯಂತ ಅವಶ್ಯಕವಾಗಿದ್ದು ಈ ಸೇತುವೆಯನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಿದರೆ ಈ ಭಾಗದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ ಈ ಕೂಡಲೇ ತಟ್ಟಿ ಹಳ್ಳದ ಸೇತುವೆಯನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಿ ಜನರಿಗೆ ಅನುಕೂಲ ಕಲ್ಪಿಸಬೇಕೆಂದು ಗಡಿನಾಡು ಹಿತರಕ್ಷಣ ವೇದಿಕೆಯ ಅಧ್ಯಕ್ಷ ಬಸವರಾಜ್ ಬಂಗಿ ಆಗ್ರಹಿಸಿದ್ದಾರೆ ಈ ಕುರಿತು ಮಾತನಾಡಿರುವ ಅವರು ಕಿತ್ತೂರು ಗ್ರಾಮದಿಂದ 12 ಕಿಲೋಮೀಟರ್ …
Read More »ಬಾಗಲಕೋಟೆಗೆ ಅಂಟಿದ ಕೊಲ್ಕತ್ತಾದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣ. ಪ್ರಕರಣದ ಎ1 ಆರೋಪಿ ಬಾಗಲಕೋಟೆ ಮೂಲದ ಪರಮಾನಂದ
ಬಾಗಲಕೋಟೆಗೆ ಅಂಟಿದ ಕೊಲ್ಕತ್ತಾದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣ. ಪ್ರಕರಣದ ಎ1 ಆರೋಪಿ ಬಾಗಲಕೋಟೆ ಮೂಲದ ಪರಮಾನಂದ ಕೊಲ್ಕತ್ತಾದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಜೋಕಾ ಐಐಎಂ ಎಂ.ಬಿ.ಎ ಎರಡನೇ ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಎ1 ಆರೋಪಿ ಬಾಗಲಕೋಟೆ ಮೂಲದ ಪರಮಾನಂದ ಟೋಪಣ್ಣವರ ಎಂಬ ಯುವಕನಾಗಿದ್ದಾನೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ನಿವಾಸಿಯಾದ ಪರಮಾನಂದ ಟೋಪಣ್ಣವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. …
Read More »ಪರಪ್ಪನ ಅಗ್ರಹಾರ ಕೈದಿಯಿಂದ ‘ಉತ್ತಮರ ಸಂಗ’ ಹಾಡು ಹಾಡಿಸಿದ ಪ್ರೇಮಕವಿ ಕೆ.ಕಲ್ಯಾಣ್
ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಭಾಗಿಯಾಗಿ, ಜೈಲು ಸೇರಿದ್ದ ಶಿಕ್ಷಾಬಂಧಿಯಲ್ಲಿದ್ದ ಸುಪ್ತ ಪ್ರತಿಭೆ ಗುರುತಿಸಿ ಅವರಿಂದ ಪರಪ್ಪನ ಅಗ್ರಹಾರ ಜೈಲಧಿಕಾರಿಗಳು ತತ್ವಪದ ಹಾಡಿಸಿದ್ದಾರೆ. ಗೀತ ರಚನೆಕಾರ ಹಾಗೂ ಸಂಗೀತ ನಿರ್ದೇಶಕ ಕೆ.ಕಲ್ಯಾಣ್ ಅವರ ಸಾಹಿತ್ಯದಲ್ಲಿ ಮೂಡಿಬಂದ ‘ಉತ್ತಮರ ಸಂಗ’ ಎಂಬ ಹಾಡನ್ನು ಕೈದಿ ಅರುಣ್ ಆಚಾರ್ ಹಾಡಿದ್ಧಾರೆ. ಈ ಹಾಡಿನ ಮೇಕಿಂಗ್ ವಿಡಿಯೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯು ಬೆಂಗಳೂರು ಕೇಂದ್ರ ಕಾರಾಗೃಹದ ಹೊರ ಆವರಣದಲ್ಲಿ ನಿರ್ಮಿಸಿರುವ …
Read More »ನೆಲ್ಯಾಡಿ ಬಳಿ ಮತ್ತೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಸ್ಥಗಿತ
ನೆಲ್ಯಾಡಿ ಬಳಿ ಮತ್ತೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಸ್ಥಗಿತ ನೆಲ್ಯಾಡಿ(ದಕ್ಷಿಣ ಕನ್ನಡ): ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಇಂದು ಮತ್ತೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲಾ ಮಣ್ಣಿನಿಂದ ಮುಚ್ಚಿಹೋಗಿದೆ. ಇದರಿಂದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಂಚಾರ ಸ್ಥಗಿತವಾಗಿದೆ. ಈ ಪ್ರದೇಶದಲ್ಲಿ ರಸ್ತೆಯ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಅತ್ಯಂತ ಎತ್ತರದ ಗುಡ್ಡವನ್ನು ಯಾವುದೇ ಮುನ್ನೆಚ್ಚರಿಕೆಯ ಕ್ರಮವಿಲ್ಲದೇ ಕತ್ತರಿಸಲಾಗಿದೆ. ಪರಿಣಾಮವಾಗಿ ಮಳೆ ಬರುತ್ತಿದ್ದಂತೆ ಮಣ್ಣು …
Read More »ಸರ್ಕಾರಿ ಆಸ್ಪತ್ರೆಯ ಒಪಿಡಿ ಪುಸ್ತಕದಲ್ಲಿ ಸಿನಿಮಾದ ಭಕ್ತಿಗೀತೆ ಬರೆದ ಸಿಬ್ಬಂದಿ: ಲೋಕಾಯುಕ್ತರೇ ಶಾಕ್..!
ಕಲಬುರಗಿ, (ಜುಲೈ 16): ಜಿಲ್ಲೆಯ ಜೇವರ್ಗಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ (Jewargi Governmnet Hospital) ಹೊರ ರೋಗಿಗಳ (ಒಪಿಡಿ) ದಾಖಲಾತಿ ಪುಸ್ತಕದಲ್ಲಿ ಆಸ್ಪತ್ರೆಯ ಸಿಬ್ಬಂದಿ ಸಿನಿಮಾದ ಭಕ್ತಿಗೀತೆ ಬರೆದಿರುವುದು ಲೋಕಾಯುಕ್ತರ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಲು ಕಲಬುರಗಿ (Kalaburagi) ಲೋಕಾಯುಕ್ತ ಎಸ್ಪಿ ಸಿದ್ದರಾಜು, ಡಿವೈಎಸ್ಪಿ ಗೀತಾ ಬೇನಾಳ ಅವರು ಭೇಟಿ ನೀಡಿದರು. ಇದೇ ವೇಳೆ ಆಸ್ಪತ್ರೆಯ ವ್ಯವಸ್ಥೆಯ ಪರಿಶೀಲಿಸುವಾಗ ಭಕ್ತಿಗೀತೆ ಬರೆದಿರುವುದು ಕಂಡುಬಂದಿದ್ದು, ಲೋಕಾಯುಕ್ತ ಅಧಿಕಾರಿಗಳು ದಂಗಾಗಿದ್ದಾರೆ. ಒಪಿಡಿ ಪುಸ್ತಕದಲ್ಲಿ …
Read More »
Laxmi News 24×7