Breaking News

ರಾಜ್ಯ

ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕೆ ಅಭಿಯಾನವನ್ನು ಈಗಾಗಲೇ ನಡೆಸಲಾಗುತ್ತಿದ್ದು, ಆರೋಗ್ಯ ಇಲಾಖೆಯ ಜೊತೆಗೆ ಎಲ್ಲ ಇಲಾಖೆಗಳು ಕೈಜೋಡಿಸಿ …

Read More »

ಗೋಕಾಕ: ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ) ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ರೈತ ಮುಖಂಡರು.

ಗೋಕಾಕ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ)ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯು ಸೋಮವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಜರುಗಿತು. ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪೂರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜುಲೈ-21 ರಂದು ರಾಜ್ಯ ಮಟ್ಟದ ರೈತ ಹುತ್ಮಾತ ದಿನಾಚರಣೆಯನ್ನು ಯರಗಟ್ಟಿಯಲ್ಲಿ ನಡೆಸಲು ನಿರ್ಧರಿಸಲಾಯಿತ್ತಲ್ಲದೇ ಕೃಷಿ ಇಲಾಖೆ ನೀಡುತ್ತಿರುವ ಉಪಕರಣಗಳ ಸಹಾಯಧನವನ್ನು ರದ್ದು ಮಾಡಿದ್ದು ಅದನ್ನು ಪುನ: ಆರಂಭಿಸಬೇಕು. ನೀರಿನ ಪಂಪಸೆಟ್‍ಗಳನ್ನು ನಡೆಸಲು 3ಪೇಸ್ …

Read More »

ಖಾಸಗಿ ಬಸ್ ಪ್ರಯಾಣ ದರ ಏರಿಕೆಗೆ ತಡೆ : ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮಂಗಳೂರು, ಜು.5: ದ.ಕ.ಜಿಲ್ಲೆಯ ಖಾಸಗಿ ಬಸ್ ಮಾಲಕರ ಸಂಘವು ಏರಿಕೆ ಮಾಡಿರುವ ಬಸ್ ಪ್ರಯಾಣ ದರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಸೋಮವಾರ ಬಸ್ ಮಾಲಕರ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಲಾಕ್‌ ಡೌನ್ ಮುಂಚೆ ಚಾಲ್ತಿಯಲ್ಲಿದ್ದ ಪ್ರಯಾಣ ದರವನ್ನು ತೆಗೆದುಕೊಳ್ಳಬೇಕು ಎಂದು ಮಾಲಕರಿಗೆ ಸೂಚಿಸಲಾಗಿದೆ. ಪ್ರಯಾಣ ದರ ಏರಿಕೆಗೆ ಸಂಬಂಧಿಸಿ ಈ …

Read More »

ಕುರಿ ಸಾಕಾಣಿಕೆ ಆರಂಭಿಸಿದ ಮಾಜಿ ಸಿಎಂ ಹೆಚ್​ಡಿಕೆ

ರಾಮನಗರ: ಜಿಲ್ಲೆಯ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಕೃಷಿ ಭೂಮಿ ಹೊಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ತಮ್ಮ ಜಮೀನಿನಲ್ಲಿ ಇಸ್ರೇಲ್ ಮಾದರಿ ಕುರಿ ಸಾಕಾಣಿಕೆ ಆರಂಭ ಮಾಡಿದ್ದು, ಆ ಮೂಲಕ ಪ್ರಗತಿ ಪರ ರೈನತನಾಗಿ ಇತರರಿಗೂ ಮಾದರಿಯಾಗುವ ಕಾರ್ಯವನ್ನು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಕೃಷಿ ಚಟುವಟಿಕೆಗಳಿಗಾಗಿ ಹೊಸ ಟ್ರ್ಯಾಕ್ಟರ್​ ಖರೀದಿಸಿದ್ದ ಕುಮಾರಸ್ವಾಮಿ ಅವರು, ಸದ್ಯ ಬಿಡದಿಯ ತೋಟದಲ್ಲಿ ಕುರಿ ಸಾಕಾಣಿಕೆಗೆ ಅತ್ಯಾಧುನಿಕವಾಗಿ ಇಸ್ರೇಲ್​ ಮಾದರಿಯಲ್ಲಿ ಕುರಿ ಸಾಕಾಣಿಕೆ ಆರಂಭಿಸಿದ್ದಾರೆ. ಈ ಕುರಿತ …

Read More »

“ಸಿದ್ದರಾಮಯ್ಯ ಬಿಜೆಪಿಗೆ ಬೇಕಾದರೆ ಬರಲಿ” -ಸಚಿವ ಜೆ.ಸಿ ಮಾಧುಸ್ವಾಮಿ

ತುಮಕೂರು: ‘ಮಾಜಿ ಸಿಎಂ ಸಿದ್ದರಾಮಯ್ಯನವರೇ ಬೇಕಾದರೆ ಬಿಜೆಪಿಗೆ ಬರಲಿ’ ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ ಮಾಧುಸ್ವಾಮಿ ಆಹ್ವಾನ ನೀಡಿದ್ದಾರೆ. ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​​ ಯಾರು ಬೇಕಾದರೂ ಕಾಂಗ್ರೆಸ್​​ಗೆ ಬರಬಹುದು, ಬಿಜೆಪಿಗೆ ಹೋದ 17 ಮಂದಿಗೂ ಸ್ವಾಗತ ಎಂದಿದ್ದರು. ಈಗ ಡಿ.ಕೆ ಶಿವಕುಮಾರ್​​ ಹೇಳಿಕೆಗೆ ಹಲವು ಬಿಜೆಪಿ ನಾಯಕರು ಪ್ರತಿಕ್ರಿಯಿಸುತ್ತಿದ್ದಾರೆ. ಸದ್ಯ ಸಚಿವ ಜೆ.ಸಿ ಮಾಧುಸ್ವಾಮಿ ಕೂಡ ಡಿಕೆಶಿಗೆ ಟಾಂಗ್​​ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ …

Read More »

ನನಗೂ ಸಿಎಂ ಆಗಬೇಕೆಂಬ ಆಸೆ ಇದೆ – ಸಚಿವ ಉಮೇಶ್ ಕತ್ತಿ

ಬಾಗಲಕೋಟೆ: ನಾನು ಸಿಎಂ ಸ್ಥಾನದ ಆಕಾಂಕ್ಷಿಯಾಗಿರೋದು ನಿಜ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಸಚಿವ ಉಮೇಶ್ ಕತ್ತಿ, ನಾನು ಆರು ಬಾರಿ ಶಾಸಕನಾಗಿದ್ದೇನೆ. ನನಗೂ ಸಿಎಂ ಆಗಬೇಕೆಂಬ ಆಸೆ ಇದೆ. ಸಿಎಂ ಆಗಲು ಬೇಕಾದ ಅರ್ಹತೆ ಎಲ್ಲವೂ ನನಗಿದೆ. ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆಯಿಲ್ಲದ ಕಾರಣ ಸಿಎಂ ಬದಲಾವಣೆ ಆದಾಗ ನೋಡೋಣ ಎಂದರು. ರಾಜ್ಯ ಸಿಎಂ ಬದಲಾವಣೆಯಾಗಲೀ, ಮುಂದಿನ ಚುನಾವಣೆ ಬರಲಿ. …

Read More »

ಸಂಕಷ್ಟದಲ್ಲಿ ಅಮಿತಾಬ್ ಪ್ರೀತಿಯ ಬಂಗಲೆ: ನೆಲಸಮ ಮಾಡಲು ಮುಂದಾದ ಮುಂಬೈ ಮಹಾನಗರ ಪಾಲಿಕೆ

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಪ್ರೀತಿಯ ಪ್ರತೀಕ್ಷ ಬಂಗಲೆಯ ಒಂದು ಭಾಗವನ್ನು ಕೆಡವಲು ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ (ಬಿಎಂಸಿ) ನಿರ್ಧರಿಸಿದೆ ಎಂದು ಆಂಗ್ಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಅಮಿತಾಬ್ ಮೊದಲು ಖರೀದಿಸಿದ ಬಂಗಲೆ ಇದಾಗಿದ್ದು, ಮುಂಬೈನ ಜುಹು ಪ್ರದೇಶದಲ್ಲಿದೆ. ರಸ್ತೆ ಅಗಲೀಕರಣಕ್ಕಾಗಿ ಅಮಿತಾಬ್ ಬಚ್ಚನ್ ಬಂಗಲೆಯ ಒಂದು ಭಾಗ ನೆಲಸಮವಾಗಲಿದೆ. ಸಂತಸ ಜ್ಞಾನೇಶ್ವರ ಮಾರ್ಗ್ ರಸ್ತೆಯಲ್ಲಿ ಅಮಿತಾಬ್ ಮನೆ ಇದೆ. ಈ ರಸ್ತೆಯನ್ನು ಅಗಲೀಕರಣ ಮಾಡಲು ಮುಂಬೈ …

Read More »

ದಕ್ಷಿಣೆ ಕಾಸಿಗೆ ಆಸೆ ಬಿದ್ದು ಕೆಲ ಮಠಾಧೀಶರು ಸಿಎಂ ಪರ ಮಾತನಾಡುತ್ತಿದ್ದಾರೆ: ಯತ್ನಾಳ್ ಟೀಕೆ

ಮೈಸೂರು: ಲವ್ ಜಿಹಾದ್‌ ತಡೆಯಲು ಮಠಾಧೀಶರು ಮುಂದಾಗಬೇಕು. ಕೆಟ್ಟವರಿಗೆ ಬುದ್ದಿ ಹೇಳುವ ಕೆಲಸ ಮಾಡಬೇಕು. ಅದನ್ನ ಬಿಟ್ಟು ಮುಖ್ಯಮಂತ್ರಿ ಬದಲಾವಣೆ ಮಾಡಿದರೆ ಬೀದಿಗೆ ಬರುತ್ತೇವೆ ಎನ್ನುವುದು ಸರಿಯಲ್ಲ. ದಕ್ಷಿಣೆ ಕಾಸಿಗೆ ಆಸೆ ಬಿದ್ದು ಕೆಲ ಮಠಾಧೀಶರು ಸಿಎಂ ಪರ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕೆ ಮಾಡಿದರು. ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ‌ ಕುಟುಂಬದಿಂದ ಲಿಂಗಾಯತ ಸಮಾಜಕ್ಕೆ ಕೆಟ್ಟ ಹೆಸರು ಬಂದಿದೆ. …

Read More »

ಡೀಲ್ ನಡೆಯುವುದು ಕಾವೇರಿ ನಿವಾಸದ ಹಿಂಭಾಗದಲ್ಲಿ: ವಿಜಯೇಂದ್ರ ವಿರುದ್ದ ಗುಡುಗಿದ ಯತ್ನಾಳ್

ಮೈಸೂರು: ಬಿ.ವೈ.ವಿಜಯೇಂದ್ರರ ಎಲ್ಲಾ ಡೀಲ್‌ಗಳು ನಡೆಯುದು ಸಿಎಂ ನಿವಾಸ ಕಾವೇರಿ ಹಿಂಭಾಗದ ಗೆಸ್ಟ್‌ ಗೌಸ್‌ ನಲ್ಲಿ. ಸಿಸಿಬಿ ಪೊಲೀಸರು ಅಲ್ಲೂ ದಾಳಿ ನಡೆಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ಪುತ್ರ ವಿಜಯೇಂದ್ರ ವಿರುದ್ದ‌ ಮತ್ತೆ ವಾಗ್ದಾಳಿ ನಡೆಸಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಯತ್ನಾಳ್‌ಗೆ ಮಾಹಿತಿ ನೀಡುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೂ ಪ್ರತಿಕ್ರಿಯೆ ನೀಡಿದರು. ಒಂದು ವೇಳೆ ಇದು …

Read More »

ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯ; ಅಂತಿಮ ತನಿಖಾ ವರದಿ ಸಿದ್ಧ

ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್​ಗೆ ಎಜಿ ಪ್ರಭುಲಿಂಗ್ ನಾವದಗಿ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಸ್‌ಐಟಿಯಿಂದ ಹೈಕೋರ್ಟ್​ಗೆ ಮೆಮೋ ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಜುಲೈ 14ರವರೆಗೆ ಅಂತಿಮ ವರದಿ ಸಲ್ಲಿಸದಂತೆ ಎಸ್‌ಐಟಿ ಪೊಲೀಸರಿಗೆ ಸೂಚನೆ ನೀಡಿದೆ. ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ …

Read More »