Breaking News

ರಾಜ್ಯ

ಪೆಟ್ರೋಲ್ ಬೆಲೆ 101 ರೂ – 101 ತೆಂಗಿನಕಾಯಿ ಕಾಯಿ ಒಡೆದು ಪ್ರತಿಭಟನೆ

ಮಡಿಕೇರಿ: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ದಿನದಿಂದ ದಿನಕ್ಕೆ 100 ಗಡಿದಾಟುತ್ತಿದೆ. ಸದ್ಯ ಪೆಟ್ರೋಲ್ ಬೆಲೆ 101ರೂ ಆಗಿದ್ದು, ಇದನ್ನು ಖಂಡಿಸಿ ನಾಟ್ ಔಟ್ ಕರ್ನಾಟಕ ಕಾವಲು ಪಡೆ ಸಂಘಟನೆಯ ಕಾರ್ಯಕರ್ತರು ದೇವಾಲಯದಲ್ಲಿ 101 ತೆಂಗಿನಕಾಯಿ ಕಾಯಿ ಒಡೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕುಶಾಲನಗರದಲ್ಲಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ, ವಿನೂತನ ವಿಶೇಷ ರೀತಿಯಲ್ಲಿ ಪ್ರತಿಭಟನೆ ನಡೆಸಿದೆ ಆಕ್ರೋಶ ವ್ಯಕ್ತಪಡಿಸಿದರು. ದಿನನಿತ್ಯ ಲಕ್ಷಾಂತರ ಜನರು ಉಪಯೋಗಿಸುವ ಅಡುಗೆ …

Read More »

ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರ..?

ಬೆಳಗಾವಿ :  ಸಿಡಿ ಪ್ರಕರಣದ ನಂತ್ರ, ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಶತಾಯಗತಾಯ ಮತ್ತೆ ಸಚಿವರಾಗಬೇಕು ಎನ್ನುವಂತ ಕಸರತ್ತಿನಲ್ಲಿಯೂ ತೊಡಗಿರುವಂತ ಅವರು, ಮಂತ್ರಿ ಸ್ಥಾನ ಸಿಗದೇ ಇದ್ದರೇ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸರ್ಕಾರದ ವಿರುದ್ಧವೇ ಸೆಡ್ಡು ಹೊಡೆಯಲಿದ್ದಾರೆ ಎನ್ನಲಾಗುತ್ತಿದೆ.   ಸಿಡಿ ಪ್ರಕರಣದ ನಂತ್ರ, ಬೆಂಗಳೂರಿನಿಂದಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರ ಉಳಿದು, …

Read More »

ಕಿರಿಯ ವಯಸ್ಸಿನಲ್ಲಿ ವಾಯು ಸೇನೆಗೆ ಬೆಳಗಾವಿ ಯುವಕ ಆಯ್ಕೆ.

ಬೆಳಗಾವಿ:-ಸ್ಥಳೀಯ ಲಕ್ಷ್ಮೀ ನಗರದ ಯುವಕ ಗಿರೀಶ ಸದಾಶಿವ ಬಿಳ್ಳೂರ ಎನ್ ಡಿಎ ಪರೀಕ್ಷೆ ಪಾಸಾಗಿದ್ದು, ವಾಯು ಸೇನೆಯ ಪ್ಲಾಯಿಂಗ್ ಆಪೀಸರ್( ಫೈಟರ್ ಪೈಲಟ್) ಹುದ್ದೆಯನ್ನು ಅಲಂಕರಿಸಲಿದ್ದಾರೆ. ಸೇನಾಧಿಕಾರಿಗಳ ಸ್ಪರ್ಧಾತ್ಮಕ ಪರೀಕ್ಷೆ ಗಿರೀಶ ಆಯ್ಕೆಯಾಗಿದ್ದು, ಶೀಘ್ರವೇ ಹೈದರಾಬಾದಿನ ದುಂಡಿಗಲ್ ಕೇಂದ್ರದಲ್ಲಿ ತರಬೇತಿ ಪಡೆದು, ಬಿದರನ ವಾಯು ನೆಲೆಯಾದ ಹೌಕ್ಸ್ (ಹಕೀಂ ಪೇಠ) ಪ್ರಥಮ ಸೇವೆ ಸಲ್ಲಿಸಿದ್ದಾರೆ. ಶನಿವಾರ ಹೈದರಾಬಾದನಲ್ಲಿ ಜರುಗಿದ ವಾಯು ಸೇನೆಯ ಉನ್ನತಾಧಿಕಾರಿಗಳ ತರಬೇತಿ ಕೇಂದ್ರದಲ್ಲಿ ದೇಶದ ಸೇನೆಯಲ್ಲಿಯ ಉನ್ನತ …

Read More »

ಬೆಳಗಾವಿಯಲ್ಲಿ ಅಭಿಮಾನಿ ಕೈಯಿಂದ ಶೂ ಹಾಕಿಸಿಕೊಂಡ ಸಚಿವ ‘ಶ್ರೀಮಂತ’ ಪಾಟೀಲ; ಜನ ವಲಯದಲ್ಲಿ ಆಕ್ರೋಶ

ಬೆಳಗಾವಿ: ಜನಪ್ರತಿನಿಧಿ ಅಂದರೆ ಜನರ ಸೇವಕರು. ಆದರೆ ಸಚಿವ ಶ್ರೀಮಂತ ಪಾಟೀಲ ಮಾತ್ರ ಅಭಿಮಾನಿ ಒಬ್ಬರಿಂದ ಕಾಲಿಗೆ ಶೂ ಹಾಕಿಸಿಕೊಳ್ಳುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರು ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ನಿನ್ನೆ (ಜೂನ್ 20) ಮಧ್ಯಾಹ್ನ ತಮ್ಮ ಬೆಂಬಲಿಗರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಸಚಿವ ಶ್ರೀಮಂತ ಪಾಟೀಲ ಅರ್ಚಕರನ್ನು ಕರೆಸಿ ಬಾಗಿಲು ತೆಗೆಸಿದ್ದಾರೆ. ಮಾತ್ರವಲ್ಲ ಪೂಜೆಯನ್ನೂ ಮಾಡಿಸಿದ್ದಾರೆ. ಸಚಿವರು ಪೂಜಾ ಕೈಂಕರ್ಯ …

Read More »

2024ರ ಸಾರ್ವತ್ರಿಕ ಚುನಾವಣೆ ಗುರಿ: ಎರಡನೇ ಬಾರಿ ಶರದ್ ಪವಾರ್, ಪ್ರಶಾಂತ್ ಕಿಶೋರ್ ಚರ್ಚೆ

ಮುಂಬಯಿ: ಭಾರತೀಯ ಜನತಾ ಪಕ್ಷದ ವಿರುದ್ಧ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೋರಾಡುವ ನಿಟ್ಟಿನಲ್ಲಿ 2024ರ ಚುನಾವಣೆಯ ಪೂರ್ವಸಿದ್ಧತೆಗಾಗಿ ಎರಡು ವಾರಗಳ ಅವಧಿಯಲ್ಲಿ ಚುನಾವಣಾ ನೀತಿ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು ಎನ್ ಸಿಪಿ ಮುಖಂಡ ಎರಡನೇ ಬಾರಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮುಂಬಯಿಯ ಶರದ್ ಪವಾರ್ ನಿವಾಸದಲ್ಲಿ ಜೂನ್ 11ರಂದು ಕಿಶೋರ್ ಜತೆ ಚರ್ಚೆ ನಡೆಸಿದ ನಂತರ ಇದೀಗ ದೆಹಲಿಯಲ್ಲಿ ಇಬ್ಬರು ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ವರದಿ …

Read More »

ಲೋಂಡಾ ರೈಲು ನಿಲ್ದಾಣದ ಒಂದನೇ ಪ್ಲಾಟ್ ಫಾರ್ಮ್ ಕೆಲಕಾಲ ಜಲಾವೃತ

ಖಾನಾಪುರ: ಶನಿವಾರ ಇಡೀ ದಿನ ಸತತ ವರ್ಷಧಾರೆಯ ಪರಿಣಾಮ ತಾಲ್ಲೂಕಿನ ಲೋಂಡಾ ಗ್ರಾಮದ ಬಳಿ ಹರಿಯುವ ಪಾಂಡರಿ ನದಿಯಲ್ಲಿ ಪ್ರವಾಹವೇರ್ಪಟ್ಟಿದ್ದರಿಂದ ಲೋಂಡಾ ರೈಲು ನಿಲ್ದಾಣದ ಒಂದನೇ ಪ್ಲಾಟ್ ಫಾರ್ಮ್ ಕೆಲಕಾಲ ಜಲಾವೃತಗೊಂಡ ಘಟನೆ ಸಂಭವಿಸಿದೆ. ಶನಿವಾರ ಮಧ್ಯಾಹ್ನದ ಬಳಿಕ ಲೋಂಡಾ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಪಾಂಡರಿ ನದಿಯ ನೀರು ಹರಿದುಬಂದಿದ್ದರಿಂದ ಕೆಳ ಸೇತುವೆ, ಪ್ರವೇಶದ್ವಾರ, ರೈಲ್ವೆ ಹಳಿಗಳು, ಮೊದಲ ಪ್ಲಾಟ್ ಫಾರ್ಮ್ ಸೇರಿದಂತೆ ರೈಲು ನಿಲ್ದಾಣ ಮತ್ತು ಅಕ್ಕಪಕ್ಕದ …

Read More »

ಕೊರೊನಾ ಗಂಡಾಂತರ ಕಾಲದಲ್ಲಿ ನಮ್ಮ ದೇಶದ ಯೋಗ ಭರವಸೆಯ ಆಶಾ ಕಿರಣವಾಗಿದೆ : ಪ್ರಧಾನಿ ಮೋದಿ

ನವದೆಹಲಿ: ಕೊರೊನಾ ಗಂಡಾಂತರ ಕಾಲದಲ್ಲಿ ನಮ್ಮ ದೇಶದ ಯೋಗ ಭರವಸೆಯ ಆಶಾ ಕಿರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 7ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮಾತನಾಡಿದ ಅವರು, ಭಾರತದಲ್ಲಿ ಕೊರೋನಾ ವೈರಸ್ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ಯಾವುದೇ ಸಾರ್ವಜನಿಕ ಸಭೆ, ಸಮಾರಂಭ-ಕಾರ್ಯಕ್ರಮಗಳು ನಡೆದಿಲ್ಲ. ಆದರೂ ಜನರಲ್ಲಿ ಯೋಗದ ಬಗ್ಗೆ ಇರುವ ಉತ್ಸಾಹ, ಆಸಕ್ತಿ ಇನ್ನೂ ಕಡಿಮೆಯಾಗಿಲ್ಲ ಎಂದರು. ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು …

Read More »

ಆಂಬುಲೆನ್ಸ್ ನಿಂದ ಜಿಗಿದು ರಸ್ತೆ ಮಧ್ಯೆದಲ್ಲೇ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ!

ಚಲಿಸುತ್ತಿದ್ದ ಆಂಬುಲೆನ್ಸ್ ನಿಂದ ಜಿಗಿದ ಮಾನಸಿಕ ಅಸ್ವಸ್ಥನೊಬ್ಬ ರಸ್ತೆ ಮಧ್ಯೆದಲ್ಲೇ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಮೈಸೂರು ಜಿಲ್ಲೆಯ ತಿ‌. ನರಸೀಪುರ ತಾಲೂಕಿನಲ್ಲಿ ನಡೆದಿದೆ. ತಿ. ನರಸೀಪುರ ತಾಲೂಕಿನ ಕನ್ನಳ್ಳಿ ಮೋಳೆ ಗ್ರಾಮದ ಶಿವಣ್ಣ (42) ಮೃತ ವ್ಯಕ್ತಿ.‌ ಮಾನಸಿಕ‌ ಅಸ್ವಸ್ಥ ಶಿವಣ್ಣನನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಯಬುಲೆನ್ಸ್​ನಿಂದ ಜಿಗಿದು ರಸ್ತೆ ಮಧ್ಯೆ ಕುಳಿತು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ‌. ಈತನ ವರ್ತನೆ ಕಂಡು ಸಾರ್ವಜನಿಕರು …

Read More »

ಮೂರನೇ ಅಲೆ ತಡೆಗೆ ಮಹತ್ವದ ಕ್ರಮ: ಆರೋಗ್ಯ ವ್ಯವಸ್ಥೆ ಉತ್ತಮ ಪಡಿಸಲು 7500 ವೈದ್ಯ ಸಿಬ್ಬಂದಿ ನೇಮಕ

ಮೈಸೂರು: ಕೊರೋನಾ ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ, ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಮೈಸೂರು ಜಿಲ್ಲೆ ಸರಗೂರಿನ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಆವರಣದಲ್ಲಿ ಕೋವಿಡ್ ವಾರ್ಡ್ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು, ನರ್ಸುಗಳು, ಡಿ ಗ್ರೂಪ್, ಪ್ಯಾರಾ ಮೆಡಿಕಲ್ ಸೇರಿದಂತೆ 7500 ವೈದ್ಯ ಸಿಬ್ಬಂದಿಯನ್ನು ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಮೂರನೇ ಅಲೆ ಸೇರಿ …

Read More »

ತರಕಾರಿ, ಸೊಪ್ಪು ಕಾಲಿನಿಂದ ಒದ್ದು ಚೆಲ್ಲಾಪಿಲ್ಲಿ ಮಾಡಿ ದರ್ಪ ತೋರಿದ್ದ PSI ಸಸ್ಪೆಂಡ್

ತರಕಾರಿ, ಸೊಪ್ಪನ್ನು ಕಾಲಿನಿಂದ ಒದ್ದು ದರ್ಪ ತೋರಿಸಿದ್ದ ರಾಯಚೂರು ಸದರ ಬಜಾರ್ ಠಾಣೆ ಪಿಎಸ್‌ಐ ಆಜಂ ಖಾನ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ರಾಯಚೂರು ಎಸ್.ಪಿ. ಪ್ರಕಾಶ್ ನಿಕ್ಕಂ ಅವರು ಪಿಎಸ್‌ಐ ಅಜಂ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ರಾಯಚೂರಿನ ಚಂದ್ರಮೌಳೇಶ್ವರ ವೃತ್ತದಲ್ಲಿ ತರಕಾರಿ, ಸೊಪ್ಪನ್ನು ಮಾರಾಟ ಮಾಡುತ್ತಿದ್ದು, ಅಲ್ಲಿಗೆ ಬಂದ ಅಜಂ ಕಾಲಿನಿಂದ ತರಕಾರಿ, ಸೊಪ್ಪು ಒದ್ದು ಚೆಲ್ಲಾಪಿಲ್ಲಿ ಮಾಡಿದ್ದರು. ರಾಯಚೂರಿನ ಚಂದ್ರಮೌಳೇಶ್ವರ ವೃತ್ತದ …

Read More »