Breaking News

ರಾಜ್ಯ

ಸಂಕಷ್ಟ ಕಾಲದಲ್ಲಿ ಮೇದಾರ ಸಮಾಜದ ಬಡವರ ಸಹಾಯಕ್ಕೆ ನಿಂತ ನಾಗೇಶ ಕಡೋಲಿ ಮತ್ತು ಅರ್ಜುನ ಕಡೋಲಿ ಸಹೋದರರು

ಬೆಳಗಾವಿ :ಸಾಧನೆ ಮಾಡಬೇಕು ಎನ್ನುವುದು ಏನು ಇಲ್ಲ,ಒಳ್ಳೆಯದನ್ನು ಮಾಡ್ತಾ ಹೋದರೆ ಅದೇ ಒಂದು ದೊಡ್ಡ ಸಾಧನೆ ಎಂಬ ಮಾತಿನಂತೆ ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿರುವ ಮೇದಾರ ಗಲ್ಲಿ ನಿವಾಸಿ ನಾಗೇಶ ಕಡೋಲಿ ಹಾಗೂ ಅರ್ಜುನ ಕಡೋಲಿ ಸಹೋದರರು ನಡೆದುಕೊಳ್ಳುತ್ತಿದ್ದಾರೆ.ಕಳೆದ ಹಲವಾರು ವರ್ಷಗಳಿಂದ ತಮ್ಮ ಸಮಾಜದ ಬಗ್ಗೆ ಅಪಾರ ಕಳಕಳಿ ಇಟ್ಟುಕೊಂಡು ಕೈಲಾದಷ್ಟು ಸೇವೆ ಸಲ್ಲಿಸುತ್ತ ಬಂದಿರುವ ಈ ಸಹೋದರರು ಕೋವಿಡ್ ಕಾಲದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ತಮ್ಮ ಮೇದಾರ ಸಮಾಜದ ಬಡ ಕುಟುಂಬಗಳಿಗೆ …

Read More »

2ನೇ ಹಂತದ ಲಾಕ್​ಡೌನ್ ಸಡಿಲಿಕೆ ವಿಚಾರವಾಗಿ ಇಂದು ಸಿಎಂ ಸಭೆ

ಬೆಂಗಳೂರು: ಕಟ್ಟುನಿಟ್ಟಿನ ಕ್ರಮಗಳ ಜಾರಿಯಿಂದಾಗಿ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಪಾಸಿಟಿವಿಟಿ ರೇಟ್ ಮತ್ತು ಡೆತ್​​ ರೇಟ್​ ಎರಡೂ ಕೂಡ ಇಳಿಕೆ ಕಂಡಿದೆ. ಇದೇ ಕಾರಣಕ್ಕೆ ಈಗಾಗಲೇ ಹಲವು ಲಾಕ್​ಡೌನ್ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದ್ದು, ಸೋಮವಾರದಿಂದ ಜನರಿಗೆ ಮತ್ತಷ್ಟು ರಿಲೀಫ್ ನೀಡೋಕೆ ಮುಂದಾಗಿದೆ. ಅನ್ಲಾಕ್- 2 ರ ವಿಚಾರವಾಗಿ ಇಂದು ಸಂಜೆ ಸಿಎಂ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಯಾವ ಸೇವೆಗಳಿಗೆಲ್ಲ ವಿನಾಯತಿ ನೀಡಬಹುದೆಂಬ ಬಗ್ಗೆ …

Read More »

ರಾಜಕಾರಣಿಗಳಿಂದ ಕೊರೊನಾ ರೂಲ್ಸ್​ ಬ್ರೇಕ್​; ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್​ ತರಾಟೆ

ಬೆಂಗಳೂರು: ರಾಜಕಾರಣಿಗಳಿಂದ ಕೋವಿಡ್ ರೂಲ್ಸ್ ಬ್ರೇಕ್ ಮಾಡುವ ವಿಚಾರ ಸಂಬಂಧ ರಾಘವೇಂದ್ರ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ನಡೆಸಿತು. ರೂಲ್ಸ್ ಬ್ರೇಕ್ ಮಾಡಿ ಬೆಳಗಾವಿಯಲ್ಲಿ ಬಿಜೆಪಿ ನಡೆಸಿದ್ದ ಸಮಾವೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸ್ ಆಯುಕ್ತರ ಪ್ರಮಾಣಪತ್ರಕ್ಕೆ ಹೈಕೋರ್ಟ್ ಗರಂ ಆಯ್ತು. ಆಯುಕ್ತರ ಪ್ರಮಾಣಪತ್ರಗಳು ಹಾಸ್ಯಸ್ಪದವಾಗಿದೆ. ಸಾವಿರಾರು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಮಾಸ್ಕ್ ಧರಿಸದವರ ವಿರುದ್ಧ ಕ್ರಮ ಯಾಕೆ ಕೈಗೊಂಡಿಲ್ಲ ಎಂದು ಪ್ರಶ್ನೆ …

Read More »

ಗೋವಾ : ವ್ಯಾಕ್ಸಿನ್ ಪಡೆಯದೇ ಇದ್ರೆ ಪ್ರವಾಸಿಗರಿಗೆ ನೋ ಎಂಟ್ರಿ..!

ಗೋವಾ : ಪ್ರವಾಸಿಗರ ಹಾಟ್ ಫೇವರೇಟ್ ತಾಣವಾಗಿರುವ ಗೋವಾಗೆ ಪ್ರವಾಸಿಗರು ವಿಸಿಟ್ ಮಾಡ್ಬೇಕಂದ್ರೆ ಇನ್ಮುಂದೆ ಕೋವಿಡ್ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಂಡಿರಬೇಕು.. ಅಲ್ಲದೇ ರಾಜ್ಯದಲ್ಲಿರುವ ಎಲ್ಲರಿಗೂ ಕೊರೊನಾ ಲಸಿಕೆಯನ್ನು ನೀಡದೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಜುಲೈ 30ರೊಳಗೆ ಶೇ.100ರಷ್ಟು ಕೊರೊನಾ ವ್ಯಾಕ್ಸಿನ್ ಮೊದಲ ಡೋಸ್ ನನ್ನು ರಾಜ್ಯವ್ಯಾಪಿ ನೀಡುವ ಗುರಿಯನ್ನು ಗೋವಾ ಸರ್ಕಾರ ಹೊಂದಿದೆ. ಮೊದಲ ಡೋಸ್ ವ್ಯಾಕ್ಸಿನೇಷನ್‍ನನ್ನು ರಾಜ್ಯದಲ್ಲಿ ಪೂರ್ಣಗೊಳಿಸುವವರೆಗೆ ಪ್ರವಾಸೋದ್ಯಮವನ್ನು …

Read More »

ಜೂ. 21ರಿಂದ ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಎಲ್ಲ ಸೇವೆ ಲಭ್ಯ

ಉಡುಪಿ, ಜೂನ್ 18; ಸೋಮವಾರದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಹೊರರೋಗಿ, ಒಳರೋಗಿ ಸೇವೆಗಳು, ನಾನ್ ಓಪಿಡಿ ವಿಶೇಷ ಸೇವೆಗಳು ಮತ್ತು ಆರೋಗ್ಯ ತಪಾಸಣೆ ಪ್ಯಾಕೇಜ್ ಸೇರಿದಂತೆ ಎಲ್ಲ ವಿಭಾಗಗಳು ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ. ಹೊರರೋಗಿ ವಿಭಾಗ ಸೇವೆಗಳು ಇಡೀ ದಿನ ಅಂದರೆ ಬೆಳಗ್ಗೆ 8 ರಿಂದ ಸಂಜೆ 5ರ ವರೆಗೆ ಲಭ್ಯವಾಗಲಿದೆ ಎಂದು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಲ್ಲ ರೀತಿಯ …

Read More »

ಮಹಾಮಾರಿ ಕೊರೊನಾ ವೈರಸ್ ನಿಂದ ಸ್ಥಗಿತಗೊಂಡಿದ್ದ ಬಿಎಂಟಿಸಿ ಬಸ್ ಸೋಮವಾರದಿಂದ ನಗರದಾದ್ಯಂತ ಸಂಚರಿಸುವುದು ಖಚಿತ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ನಿಂದ ಸ್ಥಗಿತಗೊಂಡಿದ್ದ ಬಿಎಂಟಿಸಿ ಬಸ್ ಸೋಮವಾರದಿಂದ ನಗರದಾದ್ಯಂತ ಸಂಚರಿಸುವುದು ಖಚಿತವಾಗಿದೆ. ನಾಳೆ ಹಾಗೂ ನಾಡಿದ್ದು ಬಸ್ ಸಿಬ್ಬಂದಿಗೆ ಕೊರೊನಾ ಟೆಸ್ಟ್ ನಡೆಸಲಾಗುತ್ತದೆ. ಕರ್ತವ್ಯಕ್ಕೆ ಹಾಜರಾಗುವ ಮುನ್ನ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರೋದ್ರಿಂದ ನಾಳೆ ಆಯಾಯ ಘಟಕದಲ್ಲಿ ಟೆಸ್ಟಿಂಗ್ ಕ್ಯಾಂಪ್ ಇರಿಸಲಾಗುತ್ತದೆ. ಹೀಗಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಘಟಕದ ವ್ಯವಸ್ಥಾಪಕರು ಈಗಾಗಲೇ ಸೂಚನೆ ನೀಡಿದ್ದಾರೆ.   ಎಲ್ಲಾ ಘಟಕದಲ್ಲಿಯೂ ಟೆಸ್ಟಿಂಗ್ ಕ್ಯಾಂಪ್ ಇರುತ್ತದೆ. ನಾಳೆ ಹಾಗೂ ನಾಡಿದ್ದು …

Read More »

ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್

ಬೆಳಗಾವಿ – ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಉಸ್ತುವಾರಿ ನೋಡಿಕೊಂಡರು. ಡಾ.ಸೋನಾಲಿ ಸರ್ನೋಬತ್         ಜನರ ಮನರಂಜನೆಗಾಗಿ ಕೆಲವರು ಬೆಳಗಾವಿಗೆ 7 ಒಂಟೆಗಳನ್ನು ಕರೆತಂದಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ಅವುಗಳಿಗೆ ಆಹಾರ ಮತ್ತು ಆರೋಗ್ಯದ ಸಮಸ್ಯೆ ಉಂಟಾಗಿತ್ತು. ಅವುಗಳ ಮಾಲಿಕರಿಗೆ ಯಾವುದೇ ಆದಾಯವಿರಲಿಲ್ಲ. ಇದರಿಂದಾಗಿ ಒಂದು ಒಂಟೆ ಮರಣ ಹೊಂದಿತು. …

Read More »

ಮಗು ಅಪಹರಣದ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪಣಜಿ: ಮಗುವಿನ ಅಪಹರಣ ಪ್ರಕರಣದಲ್ಲಿ ಶಂಕಿತ ಆರೋಪಿ ವಿಶ್ರಾಂತಿ ಗಾವಡೆಗೆ ಬಾಲ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ತನಿಖಾ ಕಾರ್ಯ ಪೂರ್ಣಗೊಳ್ಳುವ ವರೆಗೆ ಮಗುವಿನ ಪಾಲಕರು ವಾಸಿಸುವ ಪರಿಸರಕ್ಕೆ ತೆರಳಬಾರದು ಎಂದು ನ್ಯಾಯಾಲಯವು ಶಂಕಿತ ಆರೋಪಿಗೆ ಷರತ್ತು ವಿಧಿಸಿದೆ. ಬಾಲ ನ್ಯಾಯಾಲಯದ ನ್ಯಾಯಾಧೀಶ ವಿಜಯಾ ಆಮರೆ ರವರು ಶುಕ್ರವಾರ ವಿಚಾರಣೆ ಕೈಗೆತ್ತಿಕೊಂಡು, 10,000 ರೂ ಮೌಲ್ಯದ ವಯಕ್ತಿಕ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಲಾಗಿದೆ. ಈ ಪ್ರಕರಣದ ಸಾಕ್ಷೀದಾರರಾಗಿರುವ …

Read More »

ಗುರ್ಲಾಪೂರ ಕ್ರಾಸ್ ಬಳಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶೀಘ್ರ ಟೆಂಡರ್ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್‍ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂಡಲಗಿ …

Read More »

ಜೈಲಿನಿಂದ ಫೋನ್ ಕರೆ; ಶಾಸಕ ಬೆಲ್ಲದ್ ಫೋನ್ ಕದ್ದಾಲಿಕೆ ತನಿಖೆಗೆ ಸಿದ್ಧತೆ

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಶಾಸಕ ಬೆಲ್ಲದ್ ಅವರಿಗೆ ಜೈಲಿನಲ್ಲಿರುವ ಯುವರಾಜ ಸ್ವಾಮಿ ಎಂಬುವವರಿಂದ ಕರೆ ಬಂದಿದ್ದು, ಫೋನ್ ಕದ್ದಾಲಿಕೆ ಮಾಡುತ್ತಿರುವ ಬಗ್ಗೆ ಸ್ವತಃ ಶಾಸಕರು ಆರೋಪಿಸಿದ್ದರು. ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ನಡೆಸುವಂತೆ ಡಿಜಿ, ಐಜಿಪಿ ಕಚೇರಿಯಿಂದ …

Read More »