Breaking News

ರಾಜ್ಯ

ಸೋದರತ್ತೆ ಮಗಳ ಜೊತೆ ಸಪ್ತಪದಿ ತುಳಿದ ನಿರ್ದೇಶಕ ಚೇತನ್​ ಕುಮಾರ್​

ಮಾರ್ಚ್​ 6ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನಿರ್ದೇಶಕ ಬಹದ್ದೂರ್​ ಚೇತನ್​ ತಮ್ಮ ಬಹುಕಾಲದ ಗೆಳತಿ ಮಾನಸ ಜೊತೆ ರಿಂಗ್​ ಎಕ್ಸ್​​​ಚೇಂಜ್​ ಮಾಡಿಕೊಂಡಿದ್ದಾರೆ ಅನ್ನೋ ಸುದ್ದಿ ಇತ್ತು. ಇದೇ ಬಹುಕಾಲದ ಗೆಳತಿ ಸ್ವತಃ ಚೇತನ್​ ಕುಮಾರ್​ ಸೋದರತ್ತೆ ಮಗಳು ಅನ್ನೋದು ಅನಂತರ ತಿಳಿದು ಬಂದಿತ್ತು. ಇಂದು ನಿರ್ದೇಶಕ ಚೇತನ್​ ಸೋದರತ್ತೆ ಮಗಳು ಮಾನಸ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ ಕಲ್ಪವೃಕ್ಷ ರಾಘವೇಂದ್ರ ಸ್ವಾಮಿ ಮಠದಲ್ಲಿ ಸರಳವಾಗಿ ಮದುವೆ ಆಗಿದ್ದಾರೆ.   ಹಲವು …

Read More »

ಪರಮೇಶ್ವರ್ ಮನೆಯಲ್ಲಿ ಡಿ.ಕೆ.ಶಿವಕುಮಾರ್ ಉಪಹಾರ: 100 ನಾಟೌಟ್ ಪ್ರತಿಭಟನೆ ಬಗ್ಗೆ ಸಮಾಲೋಚನೆ

ತುಮಕೂರು/ ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತುಮಕೂರಿನಲ್ಲಿ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದರು. ರಾಜ್ಯಾದ್ಯಂತ ಜಿಲ್ಲಾ ಪಂಚಾಯಿತಿ ಹಾಗೂ ಹೋಬಳಿ ಮಟ್ಟದಲ್ಲಿ ನಡೆಯುತ್ತಿರುವ ತೈಲ ಬೆಲೆ ಏರಿಕೆ ವಿರುದ್ದದ 100 ನಾಟೌಟ್ ಪ್ರತಿಭಟನೆ ಬಗ್ಗೆ ಜೂಮ್ ವಿಡಿಯೋ ಸಂವಾದದ ಮೂಲಕ ಪರಿಶೀಲನೆ ನಡೆಸಿ, ಸಲಹೆ-ಸೂಚನೆಗಳನ್ನು ನೀಡಿದರು. ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ವಿರುದ್ಧ …

Read More »

ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸಚಿವರಾದ ಕೆ ಎಸ್ ಈಶ್ವರಪ್ಪ, ಭೈರತಿ ಬಸವರಾಜ್

ಶಿವಮೊಗ್ಗ: ನಂಬರ್ ಪ್ಲೇಟ್ ಇಲ್ಲದಿರುವ ವಾಹನಗಳಲ್ಲಿ ಪ್ರಯಾಣ ಮಾಡಬಾರದು ಎಂದು ಸರ್ಕಾರದ ನಿಯಮವೇ ಇದೆ, ನಂಬರ್ ಪ್ಲೇಟ್ ಇಲ್ಲದಿರುವ ವಾಹನವನ್ನು ಚಲಾಯಿಸಿ ಸಿಕ್ಕಿಬಿದ್ದು ಅನೇಕರು ದಂಡ ಕಟ್ಟಿಸಿಕೊಳ್ಳುವುದೂ ಇದೆ. ಆದರೆ ಜನಸಾಮಾನ್ಯರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೊಂದು ನ್ಯಾಯ, ರಾಜಕಾರಣಿಗಳು ಏನು ಮಾಡಿದರೂ ನಡೆಯುತ್ತದೆ ಎಂಬಂತೆ ಹೇಳುವ ಘಟನೆಗಳು ಆಗಾಗ ನಡೆಯುತ್ತಿರುತ್ತವೆ. ಇಂದು ಶಿವಮೊಗ್ಗದಲ್ಲಿ ನಗರಾಭಿವೃದ್ಧಿ ಸಚಿವ ಬಿ ಎ ಬಸವರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಪ್ರಯಾಣಿಸಿದ …

Read More »

16.80 ಲಕ್ಷದ ಸ್ಟಾಂಪ್ ಡ್ರಗ್ಸ್ ವಶ- ಕಿಂಗ್ ಪಿನ್ ಬಂಧನ

ಮಂಗಳೂರು: ನಗರದ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಐಷಾರಾಮಿ ವ್ಯಕ್ತಿಗಳಿಗೆ ಡ್ರಗ್ಸ್ ಮಾರುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಮೂಲಕ ಡ್ರಗ್ಸ್ ವಿರುದ್ಧದ ಸಮರವನ್ನು ಮುಂದುವರಿಸಿದ್ದಾರೆ. ನಿಷೇಧಿತ ಮಾದಕವಸ್ತು ಎಲ್‍ಎಸ್‍ಡಿ ಮಾರಾಟ ಮಾಡುತ್ತಿದ್ದ ಕೇರಳದ ಕ್ಯಾಲಿಕಟ್ ಮೂಲದ ಆರೋಪಿ ಮೊಹಮ್ಮದ್ ಅಜಿನಾಸ್ ನನ್ನು ಖೆಡ್ಡಾಕೆ ಬೀಳಿಸಿದ್ದಾರೆ. ಈತ ವಿದ್ಯಾರ್ಥಿಯಾಗಿದ್ದು, ಪಿ.ಜಿಯಲ್ಲಿ ವಾಸವಾಗಿದ್ದ. ನಗರದ ಕದ್ರಿ ಮೈದಾನದಲ್ಲಿ ಗ್ರಾಹಕರ ಬರುವಿಕೆಗಾಗಿ ಕಾಯುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು. 16.80ಲಕ್ಷ …

Read More »

ಪೊಲೀಸ್ ಸೇವೆಗೆ ತೃತೀಯ ಲಿಂಗಿಗಳನ್ನು ನೇಮಿಸಿಕೊಳ್ಳಲು ಮುಂದಾದ ಒಡಿಶಾ ಸರ್ಕಾರ

ಭುವನೇಶ್ವರ್ : ಪ್ರಮುಖ ನಿರ್ಧಾರವೊಂದರಲ್ಲಿ, ಒಡಿಶಾ ಸರ್ಕಾರ ತೃತೀಯ ಲಿಂಗಿಗಳನ್ನು ಪೊಲೀಸ್ ಸೇವೆಗಳಲ್ಲಿ ನೇಮಕ ಮಾಡಲು ನಿರ್ಧರಿಸಿದೆ . 477 ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ಮತ್ತು ಒಡಿಶಾ ಪೊಲೀಸರ 244 ಕಾನ್‌ಸ್ಟೆಬಲ್‌ಗಳನ್ನು (ಸಂವಹನ) ನೇಮಕ ಮಾಡಿಕೊಳ್ಳಿ ಒಪ್ಪಂದದ ಆಧಾರದ ಮೇಲೆ ಸಿಗ್ನಲ್ ಸೇವೆಗೆ ನೇಮಕಮಾಡಿಕೊಳ್ಳಲು ಒಡಿಶಾ ಪೊಲೀಸ್ ನೇಮಕಾತಿ ಮಂಡಳಿ ನಿರ್ಧರಿಸಿದೆ ಎಂದು ಪೊಲೀಸ್ ಮಹಾನಿರ್ದೇಶಕ ಅಭಯ್ ತಿಳಿಸಿದ್ದಾರೆ. ಟ್ರಾನ್ಸ್ಜೆಂಡರ್ ಅಭ್ಯರ್ಥಿಗಳು ಎರಡೂ ವಿಭಾಗಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ಡಿಜಿಪಿ …

Read More »

ಕಚ್ಚಿದ ಹಾವನ್ನು ಹಿಡಿದುಕೊಂಡೇ ಆಸ್ಪತ್ರೆಗೆ ಬಂದ ಭೂಪ

ಬಳ್ಳಾರಿ: ಸಾಮಾನ್ಯವಾಗಿ ಹಾವು ಕಂಡರೆ ಮಾರುದ್ದ ಓಡಿ ಹೋಗುವ ಜನರ ಮಧ್ಯೆ, ತನಗೆ ಕಚ್ಚಿದ ಹಾವನ್ನು ಹಿಡಿದುಕೊಂಡು ಯುವನೋರ್ವ ಆಸ್ಪತ್ರೆಗೆ ಬಂದಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಳ್ಳಿಯಲ್ಲಿ ನಡೆದಿದೆ. ಇಂದು ಮುಂಜಾನೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಗ್ರಾಮದ ಯುವಕ ಕಾಡಪ್ಪನ ಕಾಲಿಗೆ ಹಾವು ಕಚ್ಚಿದೆ. ಹಾವು ಕಚ್ಚಿದ ತಕ್ಷಣ ಎಚ್ಚರಗೊಂಡ ಕಾಡಪ್ಪ ಪಕ್ಕದಲ್ಲಿ ಇದ್ದ ಹಾವನ್ನು ನೋಡಿದ್ದಾನೆ. ಕೂಡಲೇ ಆ ಹಾವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಗ್ರಾಮದ …

Read More »

ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ.

ಬೆಳಗಾವಿ : ಇಲ್ಲಿನ ಖಂಜರ ಗಲ್ಲಿಯಲ್ಲಿ ನಿನ್ನೆ ರಾತ್ರಿ ಜೂಜು ಅಡ್ಡೆ ಮೇಲೆ ದಾಳಿ ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ. ಜುಬೆರ ಶಕಿಲ ಸುಬೆದಾರ,  ಆರೀಪ ಜಿಲಾನಿ ಖೊತ್ವಾಲ್ , ಅಯಾಜ್ ಬಾಬು ಖತಿಬ್ , ಅಬ್ದುಲ್ ಸಲಾಮ್ ಮೈಬುಸಾಬ ಬಾಳೆಕುಂದ್ರೀ, ಸೊಹೆಲ್ ಅಕ್ತರ ಮುಲ್ಲಾ, ಷರಿಪ್ ದಸ್ಥಗಿರಸಾಬ ಮುಲ್ಲಾ, ಅಬುತಾಲಿಪ್ ಗೌಸ್ ಶೆಕ್, ಆಸಿಪ್ ಯುಸುಪಖಾನ್ ಸಯ್ಯದ, ಆಯೂಬಖಾನ್ ಕರಿಂಖಾನ ಪಠಾಣ , ವಾಸಿಂ ಆಯೂಬ್ ಸೌದಾಗರ್ …

Read More »

ಅಥಣಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಗ್ರಾಪಂ. ಸದಸ್ಯ ಸಾವು

ಅಥಣಿ : ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹತ್ತಿದ ಪರಿಣಾಮ ಗ್ರಾಪಂ. ಸದಸ್ಯ ಸಾವನ್ನಪ್ಪಿದ ಘಟನೆ ನಡೆದಿದೆ. ಶಿರಗುಪ್ಪಿ ಗ್ರಾಮದ ಸೋಮೇಶ್ ಶಿವಾನಂದ ಪಾಟೀಲ ( 32 ) ಮೃತ ಗ್ರಾಪಂ ಸದಸ್ಯ . ಹಳೆ ಮನೆಯ ದುರಸ್ತಿ ಕಾರ್ಯ ನಡೆದಿದ್ದರಿಂದ ಮನೆಯವರೆಲ್ಲ ಬೇರೆ ಮನೆಯಲ್ಲಿ ಇದ್ದರು . ಇವರು ಮಾತ್ರ ಮನೆಯ ಚಾವಣಿಯ ಮೇಲೆ ಮಲಗಿದ್ದರು . ಏಕಾಏಕಿ …

Read More »

ಮುಂದಿನ ಜೂನ್ ಅಂತ್ಯದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಮುಖ್ಯಮಂತ್ರಿ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಶನಿವಾರ ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅಂತಹ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು. …

Read More »

ವೈದ್ಯಕೀಯ ವಸ್ತುಗಳ ಮೇಲಿನ ತೆರಿಗೆ ಕಡಿತ: ನಿರ್ಮಲಾ ಸೀತಾರಾಮನ್

ನವದೆಹಲಿ: ಇಂದು ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಹಾಗೂ ವೈದ್ಯಕೀಯ ಆಮ್ಲಜನಕದ ಸರಕುಗಳ ಮೇಲಿನ ತೆರಿಗೆ ದರವನ್ನು ಕಡಿತಗೊಳಿಸುವ ಕುರಿತು ಚರ್ಚಿಸಲಾಗಿದೆ. Tocilizumab ಹಾಗೂ Amphotericin B ಔಷಧಿಗಳ ಮೇಲೆ ಜಿಎಸ್‌ಟಿಯನ್ನು ಶೇಕಡಾ 5ಕ್ಕೆ ನಿಗದಿಪಡಿಸಿದರೆ ರೆಮ್‌ಡೆಸಿವಿರ್ ಮತ್ತು ಹೆಪಾರಿನ್‌ನಂತಹ ಆಂಟಿ ಕೋಗುಲಂಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಇಳಿಸಲಾಗಿದೆ. ಈ ಕುರಿತು ಮಾತನಾಡಿದ …

Read More »