ಗೋಕಾಕ: ಹಿಂದುಳಿದ ಹಾಗೂ ಅಲೆಮಾರಿ ಜನಾಂಗದ ಕುಟುಂಬಗಳಿಗೆ ಇಲ್ಲಿಯ ನಗರಸಭೆ ವಾರ್ಡ ನಂ 12ರ ಸದಸ್ಯೆ ಭಾರತಿ ಶಿವಾನಂದ ಹತ್ತಿ ಅವರು ಆಸರೆಯಾಗಿದ್ದಾರೆ. ನಗರದ ಹೊರವಲಯದಲ್ಲಿ ವಾಸವಾಗಿರುವ ಅಲೆಮಾರಿ ಜನಾಂಗ ಹಾಗೂ ನಿರ್ಗತಿಕ ಕುಟುಂಬಗಳಿಗೆ ಆಹಾರ ದಿನಸಿ ಕಿಟ್ ವಿತರಿಸಿ ಮಾನವಿಯತೆ ಮೆರದಿದ್ದಾರೆ. ಕೊರೋನಾ 2ನೇ ಅಲೆಯ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ನಗರದ ಎಪಿಎಮ್ಸಿ ಆಗ್ನಿ ಶಾಮಕ ಠಾಣೆಯ ಹತ್ತಿರ ವಾಸವಾಗಿರುವ ಅಲೆಮಾರಿ ಕುಟುಂಬದವರಿಗೆ ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ …
Read More »ಮಾಜಿ ಸಿಎಂ ಕುಮಾರಸ್ವಾಮಿ ಪಲ್ಟಿ ಗಿರಾಕಿ; ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವ ಶಾಸಕ ಜಮೀರ್ ಅಹ್ಮದ್, ಕುಮಾರಸ್ವಾಮಿ ಪಲ್ಟಿ ಗಿರಾಕಿ, ಅವರು ಯಾವಾಗ ಬೇಕಿದ್ದರೂ ಪಲ್ಟಿ ಹೊಡೆಯುತ್ತಾರೆ ಎಂದು ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಅಧಿಕಾರಕ್ಕಾಗಿ ಯಾರ ಕಾಲು ಬೇಕಾದರೂ ಹಿಡಿಯುತ್ತಾರೆ. ಆದರೆ ಹೆಚ್.ಡಿ.ದೇವೇಗೌಡರು ಹಾಗಲ್ಲ, ಅವರಿಗೆ ಸಿದ್ಧಾಂತವಿದೆ. ಕುಮಾರಸ್ವಾಮಿಗೆ ಸಿದ್ಧಾಂತಗಳಿಲ್ಲ. ಅಧಿಕಾರ ಸಿಕ್ಕ ಬಳಿಕ ಪಲ್ಟಿ ಹೊಡೆಯುತ್ತಾರೆ ಎಂದರು. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಜಮೀರ್ ಅಹ್ಮದ್, ಸರ್ಕಾರದ …
Read More »ರವಿ ಚನ್ನಣ್ಣನವರ್, ಮೈಸೂರು ಎಸ್ಪಿ ಸೇರಿ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ರವಿ.ಡಿ.ಚನ್ನಣ್ಣನವರ್, ಮೈಸೂರು ಎಸ್ಪಿ ಸೇರಿ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿಯಾಗಿದ್ದ ರವಿ.ಡಿ.ಚನ್ನಣ್ಣನವರ್ ಅವರನ್ನು ಸಿಐಡಿ ಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಉಡುಪಿಯಲ್ಲಿ ಕರಾವಳಿ ಭದ್ರತಾ ಪೊಲೀಸ್ ಪಡೆಯ ಎಸ್ಪಿಯಾಗಿದ್ದ ಆರ್.ಚೇತನ್ ಅವರನ್ನು ಮೈಸೂರು ಎಸ್ಪಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ. ಕೋಲಾರ ಎಸ್ಪಿಯಾಗಿದ್ದ ಕಾರ್ತಿಕ್ ರೆಡ್ಡಿಯವರನ್ನು ಬೆಂಗಳೂರಿನ ವೈರ್ಲೆಸ್ ವಿಭಾಗಕ್ಕೆ, ಸಿಐಡಿ ಎಸ್ಪಿಯಾಗಿದ್ದ ರಾಹುಲ್ ಕುಮಾರ್ ಶಹಪೂರ್ವಾಡ್ ಅವರನ್ನು ತುಮಕೂರು …
Read More »ಬೆಂಗಳೂರು: ವೀರ್ಯ ತಿಮಿಂಗಲದ ಅಂಬರ್ ಗ್ರೀಸ್ ಮಾರಾಟ-ನಾಲ್ವರ ಬಂಧನ
ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವೀರ್ಯ ತಿಮಿಂಗಲದ ಅಂಬರ್ ಗ್ರೀಸ್ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸೈಯದ್ ತಜ್ಮುಲ್ (54), ಸಲೀಂ ಪಾಷಾ (48), ರಫೀ ಉಲ್ಲಾ ಶರೀಫ್ (45) ಹಾಗೂ ನಾಸೀರ್ ಪಾಷಾ (34) ಬಂಧಿತ ಆರೋಪಿಗಳು. ಬಂಧಿತರಿಂದ ಅಂದಾಜು 8 ಕೋಟಿ ರೂ ಬೆಲೆಬಾಳುವ 6ಕೆಜಿ 700 ಗ್ರಾಂ ತೂಕದ ವೀರ್ಯ ತಿಮಿಂಗಲದ ಅಂಬರ್ ಗ್ರೀಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಡುಗೊಂಡನಹಳ್ಳಿ …
Read More »ಪೊಲೀಸರಿಗೆ ಹಾಫ್ ಡೋಸ್ ಹಾಕಿ ಡಾಕ್ಟ್ರಮ್ಮ ದೋಖಾ- ಲಸಿಕೆ ಹಾಕಿಸಿಕೊಂಡವರಿಗೆ ಆತಂಕ
ಕೊರೊನಾ ವ್ಯಾಕ್ಸಿನ್ ಅನ್ನ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ವೈದ್ಯೆ ಪುಷ್ಪಿತಾಳ ಇನ್ನೊಂದು ಕರ್ಮಕಾಂಡ ಬಯಲಾಗಿದೆ. ಮಂಜುನಾಥ ನಗರ ಆರೋಗ್ಯಕೇಂದ್ರದಲ್ಲಿ ವ್ಯಾಕ್ಸಿನ್ ಹಾಕಿಸಿಕೊಂಡ ಕೊರೊನಾ ವಾರಿಯರ್ ಗಳಿಗೆ ಮತ್ತು ನಾಗರೀಕರಿಗೆ ಭಯ ಅವರಿಸಿದೆ. ಬೆಂಗಳೂರಿನಲ್ಲಿ ಹಾಫ್ ಡೋಸ್ ಇಂಜೆಕ್ಷನ್ ಕರ್ಮಕಾಂಡ ಬಯಲಾಗಿದೆ. ಕೊರೊನಾ ವಾರಿಯರ್ಸ್ ಪೊಲೀಸರಿಗೂ ಹಾಫ್ ಡೋಸ್ ವ್ಯಾಕ್ಸಿನ್ ಹಾಕಿರೋ ಗಂಭೀರ ಆರೋಪ ಕೇಳಿ ಬಂದಿದೆ. ಹಗಲಿರುಳೆನ್ನದೇ ಜೀವ ಒತ್ತೆಯಿಟ್ಟು ಕೆಲಸ ಮಾಡೋ ಕೊರೊನಾ ವಾರಿಯರ್ಸ್ಗೆ ದೋಖಾ ಮಾಡಲಾಗಿದೆ. …
Read More »ನಿತ್ಯಾನಂದ ಭಾರತದಲ್ಲಿ ಕಾಲಿಟ್ಟ ಬಳಿಕವೇ ಕೊರೊನಾ ನಿರ್ಮೂಲನೆ; ಕೈಲಾಸವಾಸಿ ಭವಿಷ್ಯವಾಣಿ..!
ನವದೆಹಲಿ: ಭಾರತ ಕೊರೊನಾ ಎರಡನೇ ಅಲೆಯ ವಿರುದ್ಧ ಹೋರಾಟ ನಡೆಸುತ್ತಿದ್ದರೆ ಸ್ವಯಂ ಘೋಷಿತ ದೇವ ಮಾನವ ಮತ್ತೊಮ್ಮೆ ವಿವಾದತ್ಮಾಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. 2019ರಲ್ಲಿ ಭಾರತದಿಂದ ಪರಾರಿಯಾಗಿದ್ದ ಅತ್ಯಾಚಾರ ಆರೋಪಿ ನಿತ್ಯಾನಂದ ಸದ್ಯ ಈಕ್ವೆಡಾರ್ ದ್ವೀಪವೊಂದನ್ನು ಖರೀದಿ ಮಾಡಿ ಅದಕ್ಕೆ ಕೈಲಾಸ ಎಂದು ನಾಮಕರಣ ಮಾಡಿ ಅಲ್ಲಿಯೇ ನೆಲೆಸಿದ್ದಾರೆ. ಈ ನಡುವೆ ನಿತ್ಯಾನಂದ ತನ್ನ ಹೊಸ ವೀಡಿಯೊ ಒಂದನ್ನ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ನಾನು ಭಾರತಕ್ಕೆ ಕಾಲಿಟ್ಟರೆ ಮಾತ್ರ ದೇಶದಲ್ಲಿ …
Read More »ರಾಜ್ಯದಲ್ಲಿ 10 ಸಾವಿರಕ್ಕಿಂತ ಕಡಿಮೆ ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖ ಮಾಡಿದ್ದು, ಕಳೆದ 55 ದಿನಗಳಲ್ಲಿ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 10 ಸಾವಿರಕ್ಕಿಂತ (9,808) ಕಡಿಮೆ ಸಂಖ್ಯೆಯ ಪ್ರಕರಣ ಮಂಗಳವಾರ ವರದಿಯಾಗಿದೆ. ಕಳೆದ ಏ.14ರಂದು ಪ್ರಕರಣ ಗಳ ಸಂಖ್ಯೆ 10 ಸಾವಿರದ ಗಡಿ ದಾಟಿತ್ತು. ಬಳಿಕ ಏರುಗತಿ ಪಡೆದು, 50 ಸಾವಿರದ ಗಡಿಯ ಆಸುಪಾಸಿಗೆ ಏರಿಕೆ ಕಂಡಿತ್ತು. ಈಗ ಎರಡು ವಾರಗಳಿಂದ ಇಳಿಮುಖ ಕಂಡಿದ್ದು, ಸೋಂಕು ದೃಢ …
Read More »ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅನಾರೋಗ್ಯದಿಂದ ನಿಧನ.
ಧಾರವಾಡ: ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸವದತ್ತಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಧಾರವಾಡದ ನವೋದಯ ನಗರ ಬಡಾವಣೆ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ ಎಂ.ಐ.ಸವದತ್ತಿ, ಖ್ಯಾತ ವಿಜ್ನಾನಿಕೂಡ ಆಗಿದ್ದರು.
Read More »ಪೆಟ್ರೋಲ್ ದರ ಹೆಚ್ಚಳ: ಜಾಗಟೆ ತಟ್ಟೆ ಬಾರಿಸಿ ವಿನೂತನ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್
ಶಿವಮೊಗ್ಗ: ಪೆಟ್ರೋಲ್ ದರ ಶತಕ ಬಾರಿಸಿದ್ದನು ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು. ನಗರದ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಜಾಗಟೆ ತಟ್ಟೆ ಶಂಕ ಬಾರಿಸಿ ಅಣಕು ಸಂಭ್ರಮಾಚರಣೆಯ ಮೂಲಕ ಪ್ರತಿಭಟಿಸಿದರು. ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತಟ್ಟೆ ಜಾಗಟೆ ಶಂಕಗಳನ್ನು ಬಾರಿಸಿ ಪೆಟ್ರೋಲ್ ಬಂಕಿಗೆ ಬರುವ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ನೀಡುವ …
Read More »ಮುದ್ದೇಬಿಹಾಳ ಬಳಿ ಅಪರಿಚಿತ ಯುವತಿ ಶವ ಪತ್ತೆ, ಕೊಲೆ ಶಂಕೆ
ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಜಮ್ಮಲದಿನ್ನಿ ಕ್ರಾಸ್ ಬಳಿ ಇರುವ ಸೆತುವೆ ಪೈಪ್ ನಲ್ಲಿ ಅಪರಿಚಿತ ಯುವತಿಯ ಶವ ಪತ್ತೆ ಆಗಿದೆ. ಸುಮಾರು 18 ವಯಸ್ಸಿನ ಯುವತಿಯ ಕತ್ತಿಗೆ ವೇಲ್ ನಿಂದ ಬಿಗಿದು, ತಲೆ ಮೇಲೆ ಕಲ್ಲು ಎತ್ತಿಹಾಕಿದಂತೆ ತಲೆಗೆ ಭಾರಿ ಪೆಟ್ಟು ಬಿದ್ದು ರಕ್ತಸ್ರಾವ ಆಗಿದೆ. ಸ್ಥಳದಲ್ಲಿನ ಸ್ಥಿತಿಯನ್ನು ಆಧರಿಸಿ ಪೊಲೀಸರು ಪ್ರಾಥಮಿಕ ಹಂತದಲ್ಲಿ ಇದು ಕೊಲೆ ಎಂದು ಶಂಕಿಸಿದ್ದಾರೆ. ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಮುದ್ದೇಬಿಹಾಳ …
Read More »
Laxmi News 24×7