Breaking News

ರಾಜ್ಯ

ಕಡಹೆಮ್ಮಿಗೆ: ಶಿಥಿಲಗೊಂಡ ನೀರಿನ ಟ್ಯಾಂಕ್‌; ಆತಂಕದಲ್ಲಿ ಜನರು

ಕಿಕ್ಕೇರಿ: ಹೋಬಳಿಯ ಕಡಹೆಮ್ಮಿಗೆ ಗ್ರಾಮದಲ್ಲಿನ ಕುಡಿಯುವ ನೀರಿನ ಟ್ಯಾಂಕ್ ಶಿಥಿಲಗೊಂಡಿದ್ದು, ಕುಸಿಯುವ ಹಂತ ತಲುಪಿದೆ. ಹೋಬಳಿಯ ಗಡಿಯಂಚಿನ ಗ್ರಾಮವಾದ ಆನೆಗೊಳ ಗ್ರಾ.ಪಂ ವ್ಯಾಪ್ತಿಗೆ ಈ ಗ್ರಾಮ ಸೇರಿದೆ. ಗ್ರಾಮದ ಜೊತೆಗೆ ಕಡಹೆಮ್ಮಿಗೆ ಕೊಪ್ಪಲು ಗ್ರಾಮ ಹೊಂದಿಕೊಂಡಿದೆ. ಸುಮಾರು 1,480 ಜನಸಂಖ್ಯೆ ಇದೆ. ಎರಡು ಗ್ರಾಮಗಳಿಗೆ ಈ ಟ್ಯಾಂಕಿನಿಂದ ನೀರು ಸರಬರಾಜು ಆಗುತ್ತಿದೆ. ಆದರೆ, ಶುಚಿತ್ವವೂ ಇಲ್ಲ. ಟ್ಯಾಂಕ್‌ನ ಪ್ಲಾಸ್ಟರಿಂಗ್‌ ಕಳಚಿ ಬೀಳುತ್ತಿದೆ. ಕಬ್ಬಿಣಗಳು ಹೊರಗೆ ಕಾಣಿಸುತ್ತಿದ್ದು, ತುಕ್ಕು ಹಿಡಿಯುತ್ತಿವೆ. ಕೆಲವೆಡೆ …

Read More »

ಸರ್ಕಾರದ ಹಣ ನುಂಗಬೇಡಿ ಎಂದು ಸ್ಟೇಟಸ್​ ಹಾಕಿದ್ದಕ್ಕೆ ಕೊಂದೇ ಬಿಟ್ರಾ?; ಗ್ರಾಮ ಪಂಚಾಯತ್​ ಅಧ್ಯಕ್ಷನ ವಿರುದ್ಧ ಕೊಲೆ ಶಂಕೆ

ಉಡುಪಿ: ಸರ್ಕಾರದ ಹಣ ನುಂಗಬೇಡಿ ಎಂದು ಗ್ರಾಮಪಂಚಾಯತ್ ಅಧ್ಯಕ್ಷರೊಬ್ಬರ ವಿರುದ್ಧ ಸ್ಟೇಟಸ್​ ಹಾಕಿದ್ದಕ್ಕೆ ಗ್ರಾಮಸ್ಥನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮಸ್ಥರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟಿದ್ದು, ಗ್ರಾಮಪಂಚಾಯತ್ ಅಧ್ಯಕ್ಷರು ಕೊಲೆ ಮಾಡಿರಬಹುದು ಎಂಬ ಅನುಮಾನವೂ ಮೂಡಿದೆ. ಕುಂದಾಪುರ ತಾಲೂಕು ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ವಿರುದ್ಧ ಕೊಲೆ ಶಂಕೆ ವ್ಯಕ್ತವಾಗಿದೆ. ಇವರು ಯಡಮೊಗೆ ಗ್ರಾಮದ ಉದಯ ಗಾಣಿಗ ಅವರನ್ನು ಕೊಲೆ ಮಾಡಿರಬಹುದು ಎಂದು ಹೇಳಲಾಗುತ್ತಿದೆ. ಗ್ರಾಮ ಪಂಚಾಯತ್ ಲಾಕ್​ಡೌನ್​ …

Read More »

ಜಪಾನ್‌ ವಿದ್ಯಾರ್ಥಿ ವೇತನಕ್ಕೆ ಗೌರಿ ಬಗಲಿ ಆಯ್ಕೆ

ಇಂಡಿ(ವಿಜಯಪುರ): ಜಪಾನ್‌ ಪ್ರಧಾನಮಂತ್ರಿ ಅವರು ಏಷ್ಯಾದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಾಯೋಜಿಸಿರುವ (The Asia kakehashi project) ಒಂದು ವರ್ಷದ ಶಿಷ್ಯವೇತನ ಸಹಿತ ಉಚಿತ ಶಿಕ್ಷಣ ಪಡೆಯಲು ಇಂಡಿ ಪಟ್ಟಣದ ಗೌರಿ ಸಂಕೇತ ಬಗಲಿ ಆಯ್ಕೆಯಾಗಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ನಡೆಯುವ ಲಿಖಿತ ಮತ್ತು ಮೌಖಿಕ ಪರೀಕ್ಷೆಯಲ್ಲಿ ಗೌರಿ ಬಗಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ದೇಶದ ವಿವಿಧ ರಾಜ್ಯಗಳ ಒಟ್ಟು 21 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇವರೆಲ್ಲರಿಗೂ ಜಪಾನ್‌ನಲ್ಲಿ ಒಂದು ವರ್ಷ ಉಚಿತ …

Read More »

ತೇಲಿ ಹೋಯ್ತು ಸೋಯಾಬೀನ್ ಬೆಳೆ; ಧಾರವಾಡದಲ್ಲಿ ಸುರಿದ ಮಳೆಗೆ ರೈತರು ಕಂಗಾಲು

ಧಾರವಾಡ: ಕಳೆದ ವರ್ಷದಿಂದ ರೈತರು ಕೊರೊನಾ ಸೋಂಕು, ಲಾಕ್​ಡೌನ್ ಹೀಗೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲೂ ಈ ಬಾರಿಯ ಕೊರೊನಾ ಎರಡನೇ ಅಲೆ ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ಕೊಂಡೊಯ್ಯದಂತಹ ಪರಿಸ್ಥಿತಿ ನಿರ್ಮಾಣ ಮಾಡಿದೆ. ಇದೆಲ್ಲದರ ಮಧ್ಯೆಯೇ ಈ ಬಾರಿ ಉತ್ತಮ ಮುಂಗಾರು ಇದ್ದಿದ್ದರಿಂದ ರೈತರು ಕೊಂಚ ಉತ್ಸಾಹದಿಂದ ಕೃಷಿ ಚಟುವಟಿಕೆ ಆರಂಭಿಸಿದ್ದರು. ಆದರೆ ನಿನ್ನೆ ಸುರಿದ ಮಳೆಗೆ ರೈತರ ಕನಸುಗಳೇ ಕೊಚ್ಚಿಕೊಂಡು ಹೋಗಿವೆ. ಸಾಲ ಮಾಡಿ ಬಿತ್ತನೆ ಮಾಡಿದ್ದ ರೈತರು …

Read More »

ಐಎಎಸ್ ಅನ್ನು ಇವತ್ತು ಧನ ಕಾಯುವವನು ಮಾಡುತ್ತಾನೆ : ರೋಹಿಣಿ ವಿರುದ್ಧ ಎ ಮಂಜು ಕಿಡಿ

ಮೈಸೂರು : ಐಎಎಸ್ ಇವತ್ತು ಧನ ಕಾಯುವವನು ಮಾಡುತ್ತಾನೆ. ಐಎಎಸ್ ಮಾಡಿದ ಮೇಲೆ ಅಧಿಕಾರ ಹೇಗೆ ನಡೆಸುತ್ತೇವೆ ಎನ್ನುವುದು ಮುಖ್ಯ. ಧನ ಕಾಯುವವನು, ಅಡ್ಜೆಸ್ಟ್ ಮೆಂಟ್ ನಲ್ಲೂ ಐಎಎಸ್ ಮಾಡುತ್ತಾನೆ. ಇವಾಗ ಯಾರ್ ಬೇಕಾದ್ರೂ ಐಎಎಸ್ ಮಾಡ್ತರೆ. ಆದ್ರೆ ಜನರ ಸೇವೆ ಹೇಗೆ ಮಾಡುತ್ತೇವೆ ಅನ್ನೋದೇ ಮುಖ್ಯ ಎಂದು ಎ ಮಂಜು ರೋಹಿಣಿ ಸಿಂಧೂರಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಮೈಸೂರು ಮಹಾರಾಜರೇ ಸ್ವಿಮ್ಮಿಂಗ್ ಪೂಲ್ ಕಟ್ಟಲಿಲ್ಲ. ಸರ್ಕಾರಿ ಸ್ಥಳದಲ್ಲಿ ಈ …

Read More »

ಗೂಗಲ್ ಬಳಿಕ ‘ಅಮೆಜಾನ್’ನಿಂದಲೂ ಕನ್ನಡಕ್ಕೆ ಅಪಮಾನ : ‘ಕನ್ನಡ ಬಾವುಟ’ದಲ್ಲಿ ‘ಒಳ ಉಡುಪು’ ತಯಾರಿ ಮಾರಾಟ.!

ಬೆಂಗಳೂರು : ಕನ್ನಡವನ್ನು ಕೊಳಕು ಭಾಷೆಗೆ ಎಂಬುದಾಗಿ ತೋರಿಸುವ ಮೂಲಕ, ಕನ್ನಡಕ್ಕೆ ಅವಮಾನ ಮಾಡಿ, ತಪ್ಪು ತಿದ್ದಿಕೊಂಡು, ಕನ್ನಡಿಗರ ಕ್ಷಣೆಯನ್ನು ಗೂಗಲ್ ಕೇಳಿತ್ತು. ಇದು ಮಾಸುವ ಮುನ್ನಾವೇ ಈಗ ಆನ್ ಲೈನ್ ವ್ಯವಹಾರಿಕ ದೈತ್ಯ ಸಂಸ್ಥೆ ಅಮೆಜಾನ್, ಕನ್ನಡ ಬಾವುಟದಿಂದ ಒಳ ಉಡುಪುಗಳನ್ನು ತಯಾರಿಸುವ ಮೂಲಕ, ಕನ್ನಡಕ್ಕೆ ಅಪಮಾನ ಮಾಡಿದೆ.   ಕನ್ನಡ ಬಾವುಟದ ಬಣ್ಣದಲ್ಲಿ ಮಹಿಳೆಯರ ಒಳ ಉಡುಪು ತಯಾರಿಸಿ, ಅದರ ಮೇಲೆ ಕನ್ನಡ ಧ್ವಜ ಲಾಂಛನ, ಭಾರತದ …

Read More »

ಪೆಟ್ರೋಲ್, ಡೀಸೆಲ್ ದರ ಏರಿಸುವುದು, ಇಳಿಸುವುದು ಕೇಂದ್ರದ ತೀರ್ಮಾನ: ಈಶ್ವರಪ್ಪ

ಶಿವಮೊಗ್ಗ: ಪೆಟ್ರೋಲ್, ಡೀಸೆಲ್ ದರ ಏರಿಸುವುದು, ಇಳಿಸುವುದು ಕೇಂದ್ರ ಸರಕಾರದ ತೀರ್ಮಾನ. ಯಾಕೆ ಏನು, ಏನು ಕಥೆ ಎಂದು ನನಗೆ ಗೊತ್ತಿಲ್ಲ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕೆಲವು ಸಂದರ್ಭದಲ್ಲಿ ಏರಿಸುತ್ತಾರೆ, ಕೆಲವು ಸಂದರ್ಭದಲ್ಲಿ ಇಳಿಸುತ್ತಾರೆ. ಕೇವಲ ಪೆಟ್ರೋಲ್ ಡೀಸೆಲ್ ಅಷ್ಟೇ ಅಲ್ಲ. ಎಲ್ಲಾ ಪದಾರ್ಥಗಳಿಗೆ ಈ ವ್ಯವಸ್ಥೆ ಇರುತ್ತೆದೆ. ಕಾರಣಗಳು ಕೇಂದ್ರದ ಅರ್ಥ ಸಚಿವರಿಗೆ ಗೊತ್ತಿರುತ್ತದೆ. ಆಡಳಿತ …

Read More »

ವಿಜಯೇಂದ್ರ ಹೈಕಮಾಂಡ್ ಭೇಟಿ ಮಾಡಲು ಇಡಿ ತನಿಖೆ ಭಯ ಕಾರಣ: ಯತ್ನಾಳ್

ವಿಜಯಪುರ: ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೈಕಮಾಂಡ್ ಭೇಟಿಗೆ ಇಡಿ ತನಿಖೆ ಕಾರಣ. ತಮ್ಮ ವಿರುದ್ಧ ಮಾರಿಷಸ್ ಹಣಕಾಸಿನ ಹಗರಣದ ಕುರಿತು ಮೂರು ದಿನಗಳಿಂದ ಇಡಿ ನಡೆಸುತ್ತಿರುವ ತನಿಖೆಯಿಂದ ರಕ್ಷಣೆ ಪಡೆಯಲು ವಿಜಯೇಂದ್ರ ದೆಹಲಿ ನಾಯಕರ ದುಂಬಾಲು ಬಿದ್ದಿದ್ದಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ನೀಡಿದ್ದಾರೆ. ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಪುತ್ರ ಬಿ.ವೈ ವಿಜಯೇಂದ್ರ ಕೋವಿಡ್ ನಿರ್ವಹಣೆ ಬಗ್ಗೆ ಹೈಕಮಾಂಡ್ ಶಹಬ್ಬಾಶ್ …

Read More »

ಹೊಸ ಐಟಿ ನಿಯಮ’ಗಳನ್ನು ಪಾಲಿಸುವಂತೆ ಕೇಂದ್ರ ಸರ್ಕಾರದಿಂದ ಟ್ವಿಟ್ಟರ್ ಗೆ ಅಂತಿಮ ಸೂಚನೆ

ನವದೆಹಲಿ : ಕೇಂದ್ರ ಸರ್ಕಾರದಿಂದ ಹೊಸ ಐಟಿ ನಿಯಮಗಳನ್ನು ರೂಪಿಸಿ, ಅಧಿಸೂಚನೆಯನ್ನು ಹೊರಡಿಸಿತ್ತು. ಅದಕ್ಕೆ ಮೇ.15ರವರೆಗೆ ಆಕ್ಷೇಪಣೆಗೆ ಕಾಲಾವಕಾಶ ಕೂಡ ನೀಡಲಾಗಿತ್ತು. ಇಂತಹ ಕಾಲಾವಕಾಶ ಮುಕ್ತಾಯಗೊಂಡ ಬಳಿಕ, ಈಗಾಗಲೇ ವಾಟ್ಸ್ ಆಪ್ ಸೇರಿದಂತೆ ಅನೇಕ ಸೋಷಿಯಲ್ ಮೀಡಿಯಾಗಳಿಗೆ ಹೊಸ ಐಟಿ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದ್ದಂತ ಕೇಂದ್ರ ಸರ್ಕಾರ, ಈಗ ಟ್ವಿಟ್ಟರ್ ಗೆ ಅಂತಿಮ ಸೂಚನೆ ನೀಡಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಮುಖ್ಯ ಅನುಸರಣಾ ಅಧಿಕಾರಿಯವರು ವಿವರಗಳನ್ನು ಒಳಗೊಂಡಂತ ಹೊಸ …

Read More »

ಬಳ್ಳಾರಿ ಜಿಲ್ಲೆಯ 180 ಮಕ್ಕಳನ್ನು ಅನಾಥರನ್ನಾಗಿಸಿದ COVID19 ಎರಡನೇ ಅಲೆ

ಬಳ್ಳಾರಿ: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆಯಲ್ಲಿ ಹೆಚ್ಚಿನ ಪ್ರಮಾಣದ ಏರಿಕೆ ಕಂಡುಬಂದಿದೆ. ಅದೇಷ್ಟೋ ಕುಟುಂಬ ತನ್ನವರನ್ನು ಕಳೆದುಕೊಂಡು ಕಣ್ಣೀರಿನಲ್ಲಿ ಜೀವನ ಸಾಗಿಸುವಂತಾಗಿದೆ. ಕುಟುಂಬದಲ್ಲಿ ಒಬ್ಬರನ್ನು ಕಳೆದುಕೊಂಡು ಜೀವನ ಸಾಗಿಸುವ ಧೈರ್ಯದಿಂದ ದೂರವಾದವರನ್ನು ಒಂದು ಕಡೆಯಾದರೆ, ಇನ್ನೊಂದು ಕಡೆ ಪ್ರಪಂಚದ ಅರಿವೇ ಇಲ್ಲದ ಆದೆಷ್ಟೋ ಕಂದಮ್ಮಗಳು ಕೊವಿಡ್​ನಿಂದಾಗಿ ಹೆತ್ತವರನ್ನು ಕಳೆದುಕೊಂಡಿದ್ದು, ಅನಾಥರಾಗಿದ್ದಾರೆ. ಇಂತಹದ್ದೇ ಪರಿಸ್ಥಿತಿ ಸದ್ಯ ಬಳ್ಳಾರಿ ಜಿಲ್ಲೆಯದ್ದಾಗಿದ್ದು, 180 ಮಕ್ಕಳು ತಂದೆ- ತಾಯಿ …

Read More »