ಮೈಸೂರು: ನೂರಾರು ಕನಸಿನ ಬುತ್ತಿಯೊಂದಿಗೆ ಎರಡು ತಿಂಗಳ ಹಿಂದಷ್ಟೇ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಅಷ್ಟರಲ್ಲಿ ಸುಖಸಂಸಾರಕ್ಕೆ ಬಂದಪ್ಪಳಿಸಿದ ಮಹಾಮಾರಿ ಕರೊನಾ, ನವವಿವಾಹಿತನ ಪ್ರಾಣ ತೆಗೆದ ಹೃದಯವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಆಲನಹಳ್ಳಿ ಬಡಾವಣೆ ನಿವಾಸಿ, ಇಂಜಿನಿಯರ್ ನವೀನ್ ಕುಮಾರ್ ಮೃತ ದುರ್ದೈವಿ. ಬೆಂಗಳೂರಿನ ಜೈನ್ ವಿವಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಎರಡು ತಿಂಗಳ ಹಿಂದಷ್ಟೆ ಮದುವೆ ಆಗಿದ್ದರು. ಇತ್ತೀಚಿಗೆ ತೀವ್ರ ಉಸಿರಾಟದ ಬಳಲುತ್ತಿದ್ದ ನವೀನ್, ಬೆಂಗಳೂರಿನಿಂದ …
Read More »ಲಸಿಕೆ ಪಡೆದವರ ಸಂಖ್ಯೆ ೨೨ ಕೋಟಿಗೂ ಅಧಿಕ
ನವದೆಹಲಿ, : ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ನಡುವೆ ಲಸಿಕೆ ವಿತರಣೆ ವೇಗ ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 22 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 138 ದಿನಗಳಲ್ಲಿ 22,08,62,449 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಬುಧವಾರ ರಾತ್ರಿ 7 ಗಂಟೆ ವೇಳೆಗೆ 22,45,112 ಮಂದಿಗೆ …
Read More »ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ದಕ್ಷಿಣದ ಇಬ್ಬರು ನಟಿಯರ ರಕ್ಷಣೆ, ಮೂವರ ಬಂಧನ
ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯಿಂದ ದಕ್ಷಿಣ ಭಾರತದ ಇಬ್ಬರು ನಟಿಯರನ್ಬು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ನಗರದ ನೌಪಡ ಪ್ರದೇಶದ ಫ್ಲ್ಯಾಟ್ನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ‘ಅಮೃತ್ ನಗರದ ಮಹಿಳೆಯೊಬ್ಬರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ದೊರೆತಿದ್ದು, ಪೊಲೀಸರು ಗ್ರಾಹಕರ …
Read More »ಕೊರೊನಾ ಮಧ್ಯೆ ಶುರುವಾಯ್ತು ಜನರಿಗೆ ಚಿಕನ್ ಗುನ್ಯಾ ಕಾಟ
ಧಾರವಾಡ: ಕೊರೊನಾ ಮಧ್ಯೆ ಗ್ರಾಮವೊಂದಕ್ಕೆ ಕೊರೊನಾ ಮಧ್ಯದಲ್ಲಿ ಈಗ ಚಿಕನ್ ಗುನ್ಯಾ ಕಾಟ ಆರಂಭವಾಗಿದೆ. ಜಿಲ್ಲೆಯ ಲಕಮಾಪುರ ಎಂಬ 2 ಸಾವಿರ ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಚಿಕನ್ ಗುನ್ಯಾ ಕಾಣಿಸಿಕೊಂಡಿದ್ದು. ಕಳೆದ ವಾರ ಗ್ರಾಮದಲ್ಲಿ ಕೈ ಕಾಲು ಬೇನೆ ಬಂದವರಿಗೆ ತಪಾಸಣೆ ಮಾಡಿಸಿದಾಗ, ಗ್ರಾಮದ ಒಬ್ಬರಲ್ಲಿ ಚಿಕನ್ ಗುನ್ಯಾ ಪತ್ತೆಯಾಗಿತ್ತು. ನಂತರ ಗ್ರಾಮದಲ್ಲಿ ಇದು ಹೆಚ್ಚಾಗಬಾರದೆಂದು ಆರೋಗ್ಯ ಇಲಾಖೆಯವರು ಲಾರ್ವಾ ಸರ್ವೇ ಕೂಡಾ ಮಾಡಿಸಿದ್ದರು. ಈಗ ಗ್ರಾಮದಲ್ಲಿ ಚಿಕನ್ ಗುನ್ಯಾ …
Read More »ತಂದೆ ತಾಯಿ ಕಳೆದುಕೊಂಡ ಮಕ್ಕಳ ಜೊತೆ ನಾವಿದ್ದೇವೆ: ಶಶಿಕಲಾ ಜೊಲ್ಲೆ
ಬೆಂಗಳೂರು: ಕೋವಿಡ್ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಅಂತಹ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿರುವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಕೋವಿಡ್-19ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರನ್ನು ಪಾಲನೆ ಮಾಡುತ್ತಿರುವ ಪಾಲಕರ ಜೊತೆಗೆ ಗೂಗಲ್ ಮೀಟ್ ಮೂಲಕ ವೀಡಿಯೊ ಸಂವಾದ ನಡೆಸಿ, ಅವರಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಿ, ಅವರ ಮನಸ್ಸಿನ ನೋವು, ಸಮಸ್ಯೆಗಳನ್ನು …
Read More »ಕೆಎಸ್ಆರ್ಟಿಸಿ’ ಕೇರಳ ಪಾಲು : 7 ವರ್ಷಗಳ ಕಾನೂನು ಸಮರದಲ್ಲಿ ಕರ್ನಾಟಕಕ್ಕೆ ಸೋಲು
ಹೊಸದಿಲ್ಲಿ: “ಕೆಎಸ್ಆರ್ಟಿಸಿ’ ಪದ ಬಳಕೆಗೆ ಸಂಬಂಧಿಸಿ 7 ವರ್ಷ ನಡೆದ ಕಾನೂನು ಸಮರದಲ್ಲಿ ಕರ್ನಾಟಕಕ್ಕೆ ಸೋಲಾಗಿದೆ. “ಕೆಎಸ್ಆರ್ಟಿಸಿ’ ಹೆಸರು ಮತ್ತು ಲಾಂಛನ ಕೇರಳದ ಸ್ವತ್ತು ಎಂದು ಟ್ರೇಡ್ ಮಾರ್ಕ್ ರಿಜಿಸ್ಟ್ರಿ ತೀರ್ಪು ನೀಡಿದೆ. ಬೌದ್ಧಿಕ ಆಸ್ತಿ ಹಕ್ಕು ಕಾಯ್ದೆ ಆಧಾರದಲ್ಲಿ ಇದನ್ನು ಕೇರಳಕ್ಕೆ ಬಿಟ್ಟುಕೊಡಬೇಕೆಂದು ರಿಜಿಸ್ಟ್ರಿ ತೀರ್ಪಿತ್ತಿದೆ. ಈ ಸಂಬಂಧ 2013ರಲ್ಲೇ ಕಾನೂನು ಸಮರ ಆರಂಭವಾಗಿತ್ತು. “ವಿಚಾರ ಗಮನಕ್ಕೆ ಬಂದಿದ್ದು, ಅಧಿಕೃತ ನೋಟಿಸ್, ತೀರ್ಪಿನ ಪ್ರತಿ ಸಿಕ್ಕಿಲ್ಲ. ಅದು ದೊರೆತ ಬಳಿಕ …
Read More »14 ಲಕ್ಷ ರೂ ಮೌಲ್ಯದ ಅನಧಿಕೃತ ಬೀಜ ಸಂಗ್ರಹ: ಕೃಷಿ ಅಧಿಕಾರಿಗಳಿಂದ ದಾಳಿ
ಗಂಗಾವತಿ: ಕೃಷಿ ಇಲಾಖೆಯ ಅನುಮತಿ ಪಡೆಯದೇ 14ಲಕ್ಷ ರೂ.ಮೌಲ್ಯದ ಬೀಜ, ಗೊಬ್ಬರ ಅನಧಿಕೃತ ಸಂಗ್ರಹ ಮಾಡಿದ ಗೋಡೌನ್ ಮೇಲೆ ಕೃಷಿ ಇಲಾಖೆ ಮತ್ತು ಕೃಷಿ ಜಾಗೃತ ದಳದ ಅಧಿಕಾರಿ ದಾಳಿ ನಡೆಸಿದ್ದಾರೆ. ಸಿಬಿಎಸ್ ವೃತ್ತದ ಸಮೀಪದ ಗೋಡೌನ್ ನಲ್ಲಿ ಶಂಕ್ರಪ್ಪ ಮೇಟಿ ಎಂಬುವವರಿಗೆ ಸೇರಿದ ಮಲ್ಲಿಕಾರ್ಜುನ ಸೀಡ್ಸ್ ಕಂಪನಿ ಹೆಸರಿನಲ್ಲಿದ್ದ ಬೀಜ ಗೊಬ್ಬರ ಅಂಗಡಿಯಲ್ಲಿ ಕೃಷಿ ಇಲಾಖೆಯಿಂದ ಪರವಾನಿಗೆ ಪಡೆಯದೇ ಸುಮಾರು 14 ಲಕ್ಷ ರೂ.ಮೌಲ್ಯದ ಸಜ್ಜಿ ಮೆಕ್ಕೆಜೋಳ ಹಾಗೂ …
Read More »ಬಿಎಸ್ವೈ ನಾಯಕತ್ವ ಬದಲಾವಣೆ ಇಲ್ಲ; ಸಂಪುಟದ ಶೇ.50 ಪುನಾರಚನೆಗೆ ಬಿಜೆಪಿ ಹೈಕಮಾಂಡ್ ಮಹತ್ವದ ನಿರ್ಧಾರ!
ಕೊರೋನಾ ಕಾಲದಲ್ಲಿ ಅತಿದೊಡ್ಡ ರಾಜಕೀಯ ಬೆಳವಣಿಗೆ ನಡೆದಿದ್ದು, ನಾಯಕತ್ವ ಬದಲಾವಣೆ ಕೂಗಿನ ಮಧ್ಯೆ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟಕ್ಕೆ ಸರ್ಜರಿ ಮಾಡಲಾಗುವುದು ಎನ್ನಲಾಗಿದೆ. ಸ್ವತಃ ಅಖಾಡಕ್ಕಿಳಿದಿರುವ ಬಿಜೆಪಿ ಹೈಕಮಾಂಡ್ ಆಡಳಿತಕ್ಕೆ ಚುರುಕು ನೀಡಲು ಮುಂದಾಗಿದೆ. ಸಂಪುಟ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಕೈಹಾಕಿದ್ದು, ಬಹುತೇಕ ಸಚಿವರಿಗೆ ಗೇಟ್ ಫಾಸ್ ನೀಡುವ ಸಾಧ್ಯತೆ ಇದೆ. ಹಿರಿಯ ಸಚಿವರಿಗೆ ಪಕ್ಷದ ಹೊಣೆಗಾರಿಕೆ ವಹಿಸಲಾಗುವುದು. ಎರಡನೇ ತಲೆಮಾರಿನ ನಾಯಕರಿಗೆ …
Read More »ಸೀಡಿ ಪ್ರಕರಣ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಆಕ್ಷೇಪಣೆ ಸಲ್ಲಿಸಿದ S.I.T.
ಬೆಂಗಳೂರು,: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಇಬ್ಬರು ಶಂಕಿತ ಆರೋಪಿಗಳು ಸಲ್ಲಿಸಿದ್ದ ಅರ್ಜಿಗೆ ಎಸ್ಐಟಿ ಪೊಲೀಸರು ನಗರದ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ಗೆ ತನಿಖೆಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದಾರೆ. ಜತೆಗೆ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಆಕ್ಷೇಪಣೆ ಸಲ್ಲಿಸಿದ್ದಾರೆ. ಅಶ್ಲೀಲ ಸೀಡಿ ಬೆಳಕಿಗೆ ಬಂದ ಬೆನ್ನಲ್ಲೇ ಪರಾರಿಯಾಗಿರುವ ಶಂಕಿತ ಆರೋಪಿಗಳಾದ ನರೇಶ್ಗೌಡ ಹಾಗೂ ಶ್ರವಣ್ ನಿರೀಕ್ಷಣಾ ಜಾಮೀನು ಕೋರಿ …
Read More »ಕೊರೊನಾ ಮುಕ್ತ ಗ್ರಾಮ’ ಸ್ಪರ್ಧೆ- ಗೆದ್ದ ಗ್ರಾಮಗಳಿಗೆ 50 ಲಕ್ಷ ಬಹುಮಾನ
ಮುಂಬೈ: ದೇಶಾದ್ಯಂತ ಕೊರೊನಾ ತಾಂಡವಾಡುತ್ತಿದ್ದು, ಮಹಾರಾಷ್ಟ್ರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇನ್ನೂ ಭಯಾನಕ ವಿಚಾರ ಎಂಬಂತೆ ಹಳ್ಳಿಗಳಿಗೂ ಸಹ ಮಹಾಮಾರಿ ಆವರಿಸುತ್ತಿದೆ. ಹೀಗಾಗಿ ಹಳ್ಳಿಗಳಿಗೆ ಕೊರೊನಾ ಹರಡುವುದನ್ನು ತಡೆಯಲು ಮಹಾರಾಷ್ಟ್ರ ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿದ್ದು, ‘ಕೊರೊನಾ ಮುಕ್ತ ಗ್ರಾಮ’ ಸ್ಪರ್ಧೆಯ ಪರಿಕಲ್ಪನೆಯನ್ನು ಜಾರಿಗೆ ತಂದಿದೆ. ಸ್ಥಳೀಯ ಆಡಳಿತವನ್ನು ಪ್ರೋತ್ಸಾಹಿಸುವುದು ಹಾಗೂ ಹಳ್ಳಿಗಳಿಗೆ ಕೊರೊನಾ ವ್ಯಾಪಿಸದಂತೆ ತಡೆಯುವುದು, ಈ ಮೂಲಕ ಕೊರೊನಾ ಮುಕ್ತ ರಾಜ್ಯವನ್ನಾಗಿಸುವುದು ಈ ಪರಿಕಲ್ಪನೆಯ ಉದ್ದೇಶವಾಗಿದೆ. ಹೀಗಾಗಿ …
Read More »
Laxmi News 24×7