Breaking News

ರಾಜ್ಯ

ಕೋವಿಡ್ ಗೆ ದಂಪತಿ ಬಲಿ ಅನಾಥರಾಗಿರುವ ಎಂಟು ಜನ ಮಕ್ಕಳು

ಬಾಗಲಕೋಟೆ: ವಾರದ ಅಂತರದಲ್ಲಿ ಕೋವಿಡ್ ಗೆ ದಂಪತಿ ಬಲಿಯಾದ ಕಾರಣ, ಎಂಟು ಜನ ಮಕ್ಕಳು ಅನಾಥರಾಗಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಿಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಮಪ್ಪ ಹೂಗಾರ, ದುಂಡವ್ವ ಹೂಗಾರ ಅವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕಳೆದ ಶನಿವಾರ ಮೇ 29 ರಂದು ದುಂಡವ್ವ ಹೂಗಾರ ಮೃತರಾದರೆ, ಬಳಿಕ ಪತಿ ದುಂಡಪ್ಪ ಸಾವನ್ನಪ್ಪಿದ್ದಾರೆ. ಕಾರಣ ಎಂಟು ಜನ ಮಕ್ಕಳು ಅನಾಥರಾಗಿದ್ದಾರೆ. ದಂಪತಿಗೆ ಏಳು ಜನ ಹೆಣ್ಣು ಮಕ್ಕಳು, …

Read More »

ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ 70 ಜನರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಕಂಗಾಲ

ಬೆಳಗಾವಿ: ಹಳ್ಳಿ ಹಳ್ಳಿಗಳಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಈ ನಡುವೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ 70 ಜನರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಚಿಂಚಲಿ ಗ್ರಾಮದಲ್ಲಿ ಕಳೆದ 20 ದಿನಗಳಲ್ಲಿ 70 ಜನರು ಸಾವನ್ನಪ್ಪಿದ್ದು, ಅವರಲ್ಲಿ 22 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ದಾಖಲಾಗಿದೆ. ಇತರರು ಬೇರೆ ಬೇರೆ ಕಾರಣಗಳಿಂದ ಸಾವಿಗೀಡಾಗಿದ್ದಾರೆ.

Read More »

ಸಿನಿಮೀಯ ರೀತಿ ಚಿರತೆಯಿಂದ ಪ್ರಾಣ ಉಳಿಸಿಕೊಂಡ ಮಹಿಳೆ.. ಆಕೆ ಹೋರಾಡಿದ್ದೇ ರೋಚಕ

ಚಿತ್ರದುರ್ಗ: ಮನೆಯಲ್ಲಿ ಮಲಗಿದ್ದ ಮಹಿಳೆಯ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಚಿತ್ರದುರ್ಗದ ಹಿರಿಯೂರು ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂಟರೆಸ್ಟಿಂಗ್ ವಿಚಾರ ಏನಂದ್ರೆ ಆ ಮಹಿಳೆ ಚಿರತೆಯೊಂದಿಗೆ ಕಾದಾಡಿ ಪ್ರಾಣ ರಕ್ಷಿಸಿಕೊಂಡಿದ್ದಾರೆ. ಈ ರೋಚಕ ಘಟನೆ ಬಗ್ಗೆ ಗೊತ್ತಾದ ಬಳಿಕ ಗ್ರಾಮದ ಜನರು ಮಹಿಳೆಯ ಚಾಣಾಕ್ಷತನ ಮತ್ತು ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆಗಿದ್ದೇನು? ಲಕ್ಷ್ಮೀಬಾಯಿ(45) ಚಿರತೆಯೊಂದಿಗೆ ಕಾದಾಡಿ ಗಾಯಗೊಂಡ ಮಹಿಳೆ. ನಿನ್ನೆ ಬೆಳಗಿನ ಜಾವ ನಡೆದಿರುವ ಘಟನೆ ಇಂದು …

Read More »

ಜಿಲ್ಲೆಯ ಎಲ್ಲಾ ಶಾಸಕರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಿಟ್ ನೀಡಿದರೆ ರೋಗಿಗಳಿಗೆ, ವೈದ್ಯರಿಗೆ ಅನುಕೂಲ: ಸತೀಶ ಜಾರಕಿಹೊಳಿ

ಗೋಕಾಕ: ಯಮಕನಮರಡಿ ಕ್ಷೇತ್ರದ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಕ್ಸಿಜನ್ ಕಿಟ್ ವಿತರಿಸಿ, ಕೊರೋನಾ ಜಾಗೃತಿ ಮೂಡಿಸಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರ ಕೋವಿಡ್ ನಿಯಂತ್ರಿಸುವ ಉದ್ದೇಶದಿಂದ 25% ರಷ್ಟು ಅನುದಾನ ಮೀಸಲಿಟ್ಟಿದೆ. ಜನರ ತುರ್ತು ಸೇವೆಗಾಗಿ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ನೀಡಲಾಗುತ್ತಿದೆ. ಎರಡ್ಮೂರು ದಿನಗಳಲ್ಲಿ ಜನತೆ ಸೇವೆಗಾಗಿ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಸಾವಿರಾರೂ ರೋಗಿಗಳಿಗೆ ಅನುಕೂಲವಾಗಲಿದೆ. ಇಲ್ಲಿನ …

Read More »

ಸಂಬಳ ಕೊಡದ್ದಕ್ಕೆ ಪೊಲೀಸರ ವೇಷದಲ್ಲಿ ಮಾಲೀಕನನ್ನೇ ದೋಚಿದರು!

ಸಂಬಳ ಕೊಡದೇ ಸತಾಯಿಸುತ್ತಿದ್ದ ಮಾಲೀಕನನ್ನು ಕೆಲಸಗಾರರು ಪೊಲೀಸರ ಮಾರುವೇಷದಲ್ಲಿ ದರೋಡೆ ಬೆಂಗಳೂರಿನ ಕೆಂಗೇರಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಶರತ್ ಶೆಟ್ಟಿ, ಪೂರ್ವಿಕ್ ರಾಜ್, ಮೋಹನ್ ಕುಮಾರ್, ತಪಸ್ ರಾಯ್ ಬಂಧಿತರು. ಕೊಮ್ಮಘಟ್ಟ ಬಳಿ ಪೊಲೀಸರ ಮಾರುವೇಷದಲ್ಲಿ ಮಾಲೀಕನನ್ನು ದೋಚಲು ಸಂಚು ರೂಪಿಸಿದ ಕೆಲಸಗಾರರು, ರಸ್ತೆ ಮಧ್ಯದಲ್ಲಿ ಅಡ್ಡಗಟ್ಟಿ, ನಾವು ಪೊಲೀಸರು ಲಾಕ್ ಡೌನಲ್ಲಿ ಯಾಕೆ ಓಡಾಡ್ತಿರಿ ಎಂದು ಆವಾಜ್ ಹಾಕಿದ್ದಾರೆ. ವಾಹನ ತಪಾಸಣೆ ಮಾಡುವವರ ರೀತಿ ಬಂದು ಬೈಕ್ ಹಾಗೂ …

Read More »

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೆಟಿಯಾದ ಬಿ.ವೈ. ವಿಜಯೇಂದ್ರ; ಯೋಗೇಶ್ವರ್ ಗೆ ‘ಪಂಚ್’ ನೀಡಿದ ಸಿಎಂ ಪುತ್ರ.!

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ದಿಢೀರ್ ದೆಹಲಿಗೆ ತೆರಳಿರುವ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದೀಗ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಬಿ.ವೈ.ವಿಜಯೇಂದ್ರ, ಅರುಣ್ ಸಿಂಗ್ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕಾರಣದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅರುಣ್ ಸಿಂಗ್ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಅರುಣ್ ಸಿಂಗ್ ಭೇಟಿ ಬಳಿಕ ಬಿಜೆಪಿ …

Read More »

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಪೊಲೀಸ್ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಖೋಟಾ ನೋಟುಗಳ ವಶ

ದಾಂಡೇಲಿ – ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಪೊಲೀಸ್ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.  ಖೋಟಾನೋಟು ವ್ಯವಹಾರ ಮಾಡುತ್ತಿದ್ದ 6 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ. ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ ಪೂಜಾರಿ(42), ಬೆಳಗಾವಿಯ ಅಮರ ನಾಯ್ಕ(30), ಸಾಗರ ಕುಣ್ಣೂರ್ಕರ್(28), ದಾಂಡೇಲಿಯ ಶಬ್ಬೀರ್ ಕುಟ್ಟಿ(45), ಶಿವಾಜಿ ಕಾಂಬ್ಳೆ(52) ಬಂಧನಕ್ಕೊಳಗಾದವರು. ಡಿಡಿಎಲ್ ವನಶ್ರೀ ಭಾಗದ …

Read More »

ಸ್ವಂತ ಖರ್ಚಿನಲ್ಲಿ ವ್ಯಾಕ್ಸಿನ್ ಕೇಂದ್ರ ನಿರ್ಮಿಸಿದ ಯಲ್ಲಾಪುರದ ಉದ್ಯಮಿ

ಕಾರವಾರ (ಜೂನ್ 2): ಕೋವಿಡ್ ಸಂಕಷ್ಟ ಕಾಲಕ್ಕೆ ಅದೆಷ್ಟೋ ಮಾನವೀಯ ವ್ಯಕ್ತಿಗಳು ಬೆಳಕಿಗೆ ಬರುತ್ತಿದ್ದಾರೆ. ವಿವಿಧ ರೂಪದಲ್ಲಿ ಬಡವರಿಗೆ ದಾರಿ ದೀಪವಾಗುತ್ತಿದ್ದಾರೆ. ಸರಕಾರ ಮಾಡಬೇಕಾದ ಕೆಲಸವನ್ನ ದಾನಿಗಳು ಮಾಡಿ ಸರಕಾರವನ್ನು ನಾಚಿಸುವಂತೆ ಮಾಡುತ್ತಿದ್ದಾರೆ. ಹೀಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಉದ್ಯಮಿ ಬಾಲಕೃಷ್ಣ ನಾಯ್ಕ್ ಸ್ವಂತ ಖರ್ಚಿನಲ್ಲಿ ಕೋವಿಡ್ ವ್ಯಾಕ್ಸಿನ್ ಕೇಂದ್ರವನ್ನೇ ತೆರೆದಿದ್ದಾರೆ. ವ್ಯಾಕ್ಸಿನ್ ಪಡೆಯುವವರಿಗೆ ಉತ್ತಮ ವಾತಾವರಣ ಕಲ್ಪಿಸಿಕೊಟ್ಟಿದ್ದಾರೆ. ಹೌದು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ನಿವಾಸಿಯಾದ …

Read More »

ಲಾಕ್​ಡೌನ್ ಮುಗಿದ ನಂತರ ಆರಂಭವಾಗುವ ಸಾರಿಗೆ ಸೇವೆಯಲ್ಲಿ ಲಸಿಕೆ ಪಡೆದ ಸಿಬ್ಬಂದಿಗಳಿಗೆ ಆದ್ಯತೆ: ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು: ಪ್ರಯಾಣಿಕರ ಆರೋಗ್ಯದ ಹಿತದೃಷ್ಟಿಯಿಂದ ಲಾಕ್​ಡೌನ್ ಮುಗಿದ ನಂತರ ಪ್ರಾರಂಭವಾಗುವ ಸಾರಿಗೆ ಸೇವೆಗೆ ಎರಡನೇ ಸುತ್ತಿನ ಕೊವಿಡ್ ಲಸಿಕೆ ಪಡೆದಂತಹ ಚಾಲಕರು ಮತ್ತು ನಿರ್ವಾಹಕರನ್ನೇ ಬಳಸಿಕೊಳ್ಳಲು ಆದ್ಯತೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸ್ಪಷ್ಟಪಡಿಸಿದರು. ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಆಶ್ರಯದಲ್ಲಿ ಇಂದು (ಜೂನ್ 1) ಸಾರಿಗೆ ಸಿಬ್ಬಂದಿಗಳಿಗೆ ಎರಡನೆಯ ಹಂತದಲ್ಲಿ ಕೊವಿಡ್ ಲಸಿಕೆಯನ್ನು ಉಚಿತವಾಗಿ ನೀಡುವ ಆಂದೋಲನಕ್ಕೆ ಸಾರಿಗೆ ಸಚಿವರು ಹಾಗೂ …

Read More »

ಸೀಜ್ ಮಾಡಲಾದ ಸಾವಿರಾರು ವಾಹನಗಳಿಂದ ಮೈದಾನ ಫುಲ್

ಕಲಬುರಗಿ: ಕೊರೊನಾ ನಿಯಂತ್ರಿಸಲು, ರಾಜ್ಯಾದ್ಯಂತ ಲಾಕ್​​ಡೌನ್ ಜಾರಿಯಲ್ಲಿದೆ. ಅಗನತ್ಯವಾಗಿ ಹೊರಗಡೆ ಓಡಾಡದಂತೆ ಜನರಿಗೆ ಸೂಚನೆ ನೀಡಲಾಗಿದೆ. ಆದ್ರೂ ನಿಯಮ ಉಲ್ಲಂಘಿಸಿ ಸುಖಾಸುಮ್ಮನೆ ಹೊರಗಡೆ ಓಡಾಡುವ ಸಾವಿರಾರು ವಾಹನಗಳನ್ನ ಪೊಲೀಸರು ಸೀಜ್ ಮಾಡ್ತಿದ್ದಾರೆ. ಕಲಬುರಗಿಯಲ್ಲಿ ಹೀಗೆ ಜಪ್ತಿ ಮಾಡಲಾದ ವಾಹನಗಳಿಂದ ಇಡೀ ಮೈದಾನವೇ ತುಂಬಿಹೋಗಿದೆ.   ಅನಗತ್ಯವಾಗಿ ಹೊರಬಂದವರ ಬೈಕ್ ಹಾಗೂ ಕಾರ್​ಗಳನ್ನ ಸೀಜ್ ಮಾಡಿರುವ ಪೊಲೀಸರು, ಅವುಗಳನ್ನ ಡಿಎಆರ್ ಮೈದಾನದಲ್ಲಿ ಪಾರ್ಕ್‌ ಮಾಡ್ತಿದ್ದಾರೆ. ಜಪ್ತಿಯಾದ ಬೈಕ್, ಕಾರ್, ಆಟೋಗಳನ್ನ ಪ್ರತಿದಿನ …

Read More »