ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ತಾಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರ ಕೋವಿಡ್-19 ಜಾಗೃತಿ ಸಭೆ ಜರುಗಿತು. ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಮಾತನಾಡಿ, “ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ, ಈಗಾಗಲೇ ಇದರ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೊರೊನಾ ಬಗ್ಗೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ಆದರೆ ಇದರಿಂದ ಯಾರೂ ಗಾಬರಿಯಾಗಬಾರದು” ಎಂದು ಹೇಳಿದರು. ಸಕಲ ವ್ಯವಸ್ಥೆ: “ಸೋಂಕಿತರಿಗೆ ಈಗಾಗಲೇ ಅಗತ್ಯ ಇರುವ ಚಿಕಿತ್ಸೆ …
Read More »ಶುಲ್ಕ ಪಾವತಿಗೆ ಒತ್ತಡ; ಬೆಂಗಳೂರು ಖಾಸಗಿ ಶಾಲಾ ಆಡಳಿತ ಮಂಡಳಿಯ ವರ್ತನೆಯಿಂದ ಪೋಷಕರು ಕಂಗಾಲು
ಬೆಂಗಳೂರು: ಕೊರೊನಾ ಎರಡನೇ ಅಲೆ ದೇಶದಲ್ಲಿ ಅತ್ಯಂತ ವೇಗವಾಗಿ ಹಬ್ಬುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದ್ದು, ಆತಂಕ ಸೃಷ್ಟಿಯಾಗಿದೆ. ಹೀಗಾಗಿ ಪರಿಸ್ಥಿತಿಯನ್ನು ಹತೋಟಿಗೆ ತರಲು ರಾಜ್ಯ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಈ ಬೆನ್ನೆಲ್ಲೆ ದಿನಗೂಲಿ ಕಾರ್ಮಿಕರು, ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಆದರೆ ಇದ್ಯಾವುದನ್ನು ಗಣನೆಗೆ ತೆಗೆದುಕೊಳ್ಳದ ಖಾಸಗಿ ಶಾಲೆಗಳು ಮಾತ್ರ ಶುಲ್ಕ ಕಟ್ಟಿಸಿಕೊಳ್ಳಲು ಮುಂದಾಗಿದೆ. ಮೇ 24ರವರೆಗೆ ಶಾಲೆಗಳ …
Read More »ಹೆಣಗಳ ಪಕ್ಕದಲ್ಲೇ ಸೋಂಕಿತರಿಗೆ ಚಿಕಿತ್ಸೆ, ಚಿತ್ರದುರ್ಗದಲ್ಲಿ ಭಯಾನಕ ವ್ಯವಸ್ಥೆ
ಚಿತ್ರದುರ್ಗ : ಕೊರೋನಾ ಸೋಂಕಿನ ಚಿಕಿತ್ಸೆಗೆ ಒಂದೇ ವಾರ್ಡಿನಲ್ಲಿ ದಾಖಲಾಗಿದ್ದ ಮೂವರು ಸೋಂಕಿತರು ಸಾವನ್ನಪ್ಪಿ ಗಂಟೆಗಳೇ ಕಳೆದಿದ್ದವು. ಸೋಂಕಿತರು ಮೃತಪಟ್ಟಿರೋ ಸುದ್ದಿ ತಿಳಿದರೂ ಮೃತ ದೇಹಗಳನ್ನ ಬೇರೆ ಕಡೆಗೆ ಸ್ಥಳಾಂತರ ಮಾಡದೆ ಚಿತ್ರದುರ್ಗ ಜಿಲ್ಲಾ ಕೋವಿಡ್ ಆಸ್ಪತ್ರೆ ಸಿಬ್ಬಂದಿ, ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದರು ಅನ್ನೋ ಆರೋಪಗಳು ಕೇಳಿ ಬಂದಿವೆ. ಈ ದೃಶ್ಯವನ್ನ ಮೊಬೈಲ್ನಲ್ಲಿ ವೀಡಿಯೋ ಮಾಡಿದ ಸೋಂಕಿತ ವಕೀಲರೊಬ್ಬರು ಆಸ್ಪತ್ರೆಯ ಅವ್ಯವಸ್ಥೆಯನ್ನ ಬಯಲು ಮಾಡಿ ಜಿಲ್ಲಾಡಳಿತದ ಬೇಜವಬ್ದಾರಿಯನ್ನ ತೋರಿಸಿ ಛೀಮಾರಿ …
Read More »ಕೊರೊನಾ ಹಬ್ಬಲು ಬಿಜೆಪಿ ಕಾರಣ: ಸತೀಶ್ ಜಾರಕಿಹೊಳಿ
ಬೆಂಗಳೂರು: ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮಾನಸಿಕವಾಗಿ ಗೆದ್ದಿದೆ. ಆದರೆ ತಾಂತ್ರಿಕವಾಗಿ ಸೋತಿದೆಯಷ್ಟೇ ಎಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಸೋಲನ್ನು ವಿಶ್ಲೇಷಿಸಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಬೆಂಗಳೂರಿಗೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸತೀಶ್ ಜಾರಕಿಹೊಳಿ ಭೇಟಿ ಮಾಡಿದರು. ಬಳಿಕ ಮಾತನಾಡಿದ ಅವರು ಚುನಾವಣೆ ಆದ ಬಳಿಕ ಭೇಟಿ ಆಗಿರಲಿಲ್ಲ. ಹೀಗಾಗಿ ಬಂದು ಭೇಟಿ ಮಾಡಿದ್ದೇನೆ. ಪಕ್ಷ ಸಂಘಟನೆ ದೃಷ್ಟಿಯಿಂದ …
Read More »ಅರಬ್ಬಿ ಸಮುದ್ರದಲ್ಲಿ ದುರಂತಕ್ಕೀಡಾಗಿದ್ದ ಬೋಟ್ 9 ಜನರ ರಕ್ಷಣೆ
ಮಂಗಳೂರು: ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಅರಬ್ಬಿ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಎನ್ ಎಂಪಿಟಿ ಟಗ್ ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೋಟ್ ನಲ್ಲಿದ 9 ಜನರನ್ನು ರಕ್ಷಣೆ ಮಾಡಲಾಗಿದೆ. ಚಂಡಮಾರುತದಿಂದಾಗಿ ಅಲೆಗಳ ಅಬ್ಬರಕ್ಕೆ ಸಿಲುಕಿ ಟಗ್ ಬೋಟ್ ಶನಿವಾರ ಅರಬ್ಬಿ ಸಮುದ್ರದಲ್ಲಿ ಮಗುಚಿಬಿದ್ದಿತ್ತು. ಕಾಪುವಿನ ದೀಪಸ್ತಂಭದಿಂದ 13 ನಾಟಿಕಲ್ ಮೈಲಿ ದೂರದಲ್ಲಿ ಈ ದುರಂತ ಸಂಭವಿಸಿತ್ತು. ಇಬ್ಬರು ಈಜಿ ದಡ ಸೇರಿದ್ದರೆ ಬೋಟ್ ನಲ್ಲಿದ್ದ 9 ಜನರು …
Read More »ಉದ್ಯೋಗ ‘ಖಾತ್ರಿ’ ಕೂಲಿ ಹಣ ಪಡೆಯುವುದೇ ಪಜೀತಿ!
ಶಿವಮೊಗ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕಾರ್ಮಿಕರ ಪಾಡು ‘ಮಾಡುವುದು ಕೂಲಿ, ಬೇಡುವುದು ಕೂಲಿ’ ಎಂಬಂತಾಗಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಸಾಕಷ್ಟು ಗ್ರಾಮೀಣ ಕುಟುಂಬಗಳಿಗೆ ಜೀವನಾಧಾರವೂ ಆಗಿದೆ. ಲಾಕ್ಡೌನ್ನಿಂದಾಗಿ ನಗರದಲ್ಲಿ ಕೆಲಸ ವಿಲ್ಲದೆ ಹಲವು ಜನರು ಉದ್ಯೋಗ ಖಾತ್ರಿ ಕಾಮಗಾರಿಗೆ ಹೋಗುತ್ತಿದ್ದಾರೆ. ಕುಟುಂಬ ನಿರ್ವಹಣೆಗೆ ಸಂಘ-ಸಂಸ್ಥೆಗಳಲ್ಲಿ ಸಾಲ ಪಡೆದು ಕಂತು ರೂಪದಲ್ಲಿ ಪಾವತಿ ಮಾಡುತ್ತಿರುವ ಅದೆಷ್ಟೋ …
Read More »ಎಲ್ಲದಕ್ಕೂ ಕಾಂಗ್ರೆಸ್ ದೂರುವ ಬಿಜೆಪಿಯವರೇ ಈ 10 ಪ್ರಶ್ನೆಗಳಿಗೆ ಉತ್ತರಿಸಿ: ಈಶ್ವರ ಖಂಡ್ರೆ
ಬೀದರ್: ‘ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿದಂತೆ’ ಎಂಬ ಗಾದೆಯಂತೆ, ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿ ಸಾವಿರಾರು ಮುಗ್ಧ ಜನರ ಸಾವಿಗೆ ಕಾರಣವಾದ ಬಿಜೆಪಿ ಈಗ ಕಾಂಗ್ರೆಸ್ ಜನರ ತೆರಿಗೆ ಹಣವನ್ನು ವಿವೇಚನೆಯಿಂದ ವೆಚ್ಚ ಮಾಡಿದ್ದರೆ ಕೋವಿಡ್ ನಿಯಂತ್ರಿಸಬಹುದಾಗಿತ್ತು ಎಂದು ಆರೋಪಿಸುತ್ತಿರುವುದು ಅರ್ಥ ಹೀನ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾಗಳ ಬೇಜವಾಬ್ದಾರಿತನ, ಹೊಣೆಗೇಡಿ, ತಿಳಿಗೇಡಿತನದ …
Read More »ಕೊರೊನಾ ಹೋರಾಟಕ್ಕೆ ಸೂಪರ್ ಸ್ಟಾರ್ ರಜನಿ ನೆರವು; ₹50 ಲಕ್ಷ ದೇಣಿಗೆ
ಚೆನ್ನೈ: ನಟ ರಜನಿಕಾಂತ್ ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿ, ಕೊರೊನಾವೈರಸ್ ವಿರುದ್ಧದ ಹೋರಾಟಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹50 ಲಕ್ಷ ದೇಣಿಗೆಯನ್ನು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ. ಇತ್ತೀಚೆಗಷ್ಟೇ ರಜನಿ ಕೊರೊನಾ ಲಸಿಕೆಯ 2ನೇ ಡೋಸ್ ಹಾಕಿಸಿಕೊಂಡಿದ್ದರು. ಕೊರೊನಾ ನಿರ್ಮೂಲನೆಗಾಗಿ ನಾನು ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹50 …
Read More »ಕೊವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋಗೆ ಲಾರಿ ಡಿಕ್ಕಿ
ಉಪ್ಪಿನಂಗಡಿ, ಮೇ 17 : ಕೊರೊನಾ ನಿಯಂತ್ರಿತ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಪೆರಿಯ ಶಾಂತಿ ಬಳಿ ನಡೆದಿದೆ. ಸೋಮವಾರ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಧರ್ಮಸ್ಥಳ ತಿರುವಿನಲ್ಲಿ ಕೊರೊನಾ ವೈರಸ್ ತಡೆಗೆ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಿಸುತ್ತಿದ್ದ ಸರ್ಕಾರದ ಟಾಟಾ ಸುಮೋ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೋ …
Read More »ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ : ಓರ್ವ ಸವಾರನಿಗೆ ಗಂಭೀರ ಗಾಯ
ಶಿವಮೊಗ್ಗ : ಚಲಿಸುತ್ತಿದ್ದ ಬೈಕ್ ಗಳ ಮೇಲೆ ಮರ ಉರುಳಿ ಬಿದ್ದು, ಓರ್ವ ಸವಾರ ಗಂಭೀರ ಗಾಯಗೊಂಡು, ಮತ್ತೋರ್ವನಿಗೆ ಸಣ್ಣ-ಪುಟ್ಟ ಗಾಯಗಳಾಗಿರುವ ಘಟನೆ ಹೊಸನಗರದ ಕೊಡಚಾದ್ರಿ ಕಾಲೇಜು ಎದುರು ಸೋಮವಾರ ( ಮೇ.17) ನಡೆದಿದೆ. ಭಾರಿ ಗಾಳಿ-ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರ ರಸ್ತೆಯಲ್ಲಿ ಉರುಳಿ ಬಿದ್ದಿದೆ. ಪರಿಣಾಮ ಮಾವಿನಕೊಪ್ಪ ಬಡಾವಣೆಯ ಸಾಧಿಕ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಈತ ಬೈಕ್ ನಲ್ಲಿ ತೆರಳುವಾಗ ಮರ ಬಿದ್ದಿದೆ. ಚಿಕಿತ್ಸೆಗಾಗಿ ಈತನನ್ನು ಮಣಿಪಾಲ …
Read More »
Laxmi News 24×7