ನವದೆಹಲಿ: ಮದ್ದೇ ಇಲ್ಲದ ರೋಗ ಎನ್ನಲಾಗಿರುವ ಕರೊನಾಗೆ ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಮದ್ದು ಕಂಡು ಹಿಡಿದಿದ್ದು, ಅದು ನಾಳೆಯೇ ಲೋಕಾರ್ಪಣೆ ಆಗಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಾಳೆ ರಾಷ್ಟ್ರ ರಾಜಧಾನಿಯಲ್ಲಿ ಈ ಔಷಧದ ಹತ್ತು ಸಾವಿರ ಪ್ಯಾಕೆಟ್ಗಳನ್ನು ಕೆಲವು ಆಸ್ಪತ್ರೆಗಳಿಗೆ ನೀಡಲಿದ್ದಾರೆ. ಒ2 ಡಿಜೆ ಎಂಬ ಹೆಸರಿನ ಈ ಔಷಧವು ದೇಹವನ್ನು ಸೇರಿಕೊಂಡ ವೈರಾಣುಗಳ ಬಲವನ್ನು ಕುಂದಿಸಿ, ಸೋಂಕು ಇತರ ಭಾಗಗಳಿಗೆ ಹರಡದಂತೆ …
Read More »ಅರೆಸ್ಟ್ ಮಿ ಟೂ” : ಕೇಂದ್ರ ಸರ್ಕಾರಕ್ಕೆ ನನ್ನನ್ನೂ ಬಂಧಿಸಿ ಎಂದು ಕೇಳಿಕೊಂಡ ಗಾಂಧಿ
ನವ ದೆಹಲಿ : ಕೋವಿಡ್ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನೀಭಾಯಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಟೀಕಿಸಿ ಹಾಕಿದ್ದ ಪೋಸ್ಟರ್ ಗಳಿಗೆ ಸಂಬಂಧಿಸಿದಂತೆ 17 ಮಂದಿಯನ್ನು ರಾಷ್ಟ್ರ ರಾಜಧಾನಿ ಪೊಲೀಸರು ಬಂಧಿಸಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಆ ವಿರೋಧದ ಧ್ವನಿಗೆ ತಮ್ಮ ಧ್ವನಿ ಸೇರಿಸಿದ್ದಾರೆ. ಈ ಕುರಿತಾಗಿ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿರುವ ಗಾಂಧಿ …
Read More »ರಾಜ್ಯದಲ್ಲಿ ಕೊರೊನಾ ಕಂಟ್ರೋಲ್ಗೆ ಬಂದಿಲ್ಲ. ಮೇ 24ರ ಬಳಿಕವೂ ಲಾಕ್ ಲಾಕ್..!
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಂಟ್ರೋಲ್ಗೆ ಬಂದಿಲ್ಲ. ಕೇವಲ ಟೆಸ್ಟಿಂಗ್ ಕಡಿಮೆ ಮಾಡಿರೋ ಕಾರಣ ಕಡಿಮೆ ಸಂಖ್ಯೆ ಬರ್ತಿದೆ. ಆದರೆ ಸಕ್ರಿಯ ಕೇಸ್ಗಳ ಸಾಲಿನಲ್ಲಿ ಇಡೀ ದೇಶದಲ್ಲಿ ಕರ್ನಾಟಕವೇ ನಂಬರ್ 1. ಕರ್ನಾಟಕದಲ್ಲಿ ಭರ್ತಿ 6 ಲಕ್ಷ ಸಕ್ರಿಯ ಕೇಸ್ಗಳಿವೆ. ಪಾಸಿಟಿವಿಟಿ ರೇಟ್ 25ಕ್ಕಿಂತಲೂ ಹೆಚ್ಚಿದೆ. ಈ ನಿಟ್ಟಿನಲ್ಲಿ ಲಾಕ್ಡೌನ್ಗೆ ಸರ್ಕಾರದ ಸಚಿವರು, ತಜ್ಞರು ಕೂಡ ಒತ್ತಡ ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಇನ್ನೊಂದು ವಾರ ಅಂದರೆ ಮೇ 24ರ …
Read More »ರಾಧೆ ನೋಡಿದ ಅಭಿಮಾನಿಗಳಿಗೆ ನಿರಾಸೆ; ತೆಲುಗು ಸಿನಿಮಾ ರಿಮೇಕ್ ಮಾಡೋಕೆ ಮುಂದಾದ ಸಲ್ಲು
ಸಲ್ಮಾನ್ ಖಾನ್ ನಟನೆಯ ‘ರಾಧೆ: ಯುವರ್ ಮೋಸ್ಟ್ ವಾಂಟೆಡ್ ಭಾಯ್’ ಚಿತ್ರ ಮೊದಲ ದಿನ ಒಟಿಟಿಯಲ್ಲಿ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತ್ತು. ಆದರೆ, ವಿಮರ್ಶಕರಿಂದ ಸಿನಿಮಾಗೆ ಮೆಚ್ಚುಗೆ ಬಂದಿಲ್ಲ. ಇದು ಸಲ್ಮಾನ್ ಖಾನ್ ಅವರನ್ನು ಅಪ್ಸೆಟ್ ಮಾಡಿದೆ. ಹೀಗಾಗಿ, ಅವರು ದಕ್ಷಿಣ ಭಾರತದ ಸಿನಿಮಾ ಮೇಲೆ ಕಣ್ಣಿಟ್ಟಿದ್ದಾರೆ. 2017ರಲ್ಲಿ ತೆರೆಕಂಡಿದ್ದ ‘ಟೈಗರ್ ಜಿಂದಾ ಹೇ’ ಚಿತ್ರವೇ ಕೊನೆ. ಅದಾದ ನಂತರದಲ್ಲಿ ಸಲ್ಲುಗೆ ಅಂಥ ಯಶಸ್ಸು ಸಿಕ್ಕಿಲ್ಲ. ‘ರೇಸ್-3’, ‘ಭಾರತ್’, ‘ದಬಾಂಗ್ …
Read More »ಬಾದಾಮಿ ಕ್ಷೇತ್ರಕ್ಕೆ ಮೂರು ಆಂಬುಲೆನ್ಸ್ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಬಾಗಲಕೋಟೆ : ಬಾದಾಮಿ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕರು ಕೊರೊನಾ ಸೋಂಕಿತರ ಅನುಕೂಲಕ್ಕಾಗಿ ಮೂರು ಆಂಬುಲೆನ್ಸ್ ಗಳನ್ನು ನೀಡಿದ್ದಾರೆ. ಇಂದು ಮೂರು ವಾಹನಗಳನ್ನು ತಾಲೂಕು ಆಡಳಿತಕ್ಕೆ ಆಧಿಕಾರಿಗಳ ಮೂಲಕ ಹಸ್ತಾಂತರಿಸಲಾಯಿತು. ಈ ಆಂಬ್ಯುಲೆನ್ಸ್ ಗಳು ಬಾದಾಮಿ ಕ್ಷೇತ್ರದಲ್ಲಿ ಸಂಚರಿಸಲಿದ್ದು, ಕೋವಿಡ್ ಸೋಂಕಿತರಿಗೆ ನೆರವಾಗಲಿವೆ. ಇದೇ ವೇಳೆ ವೈದ್ಯರಿಗೆ N95 ಮಾಸ್ಕ್ ಗಳು, ಪಿಪಿಇ ಕಿಟ್ ಗಳನ್ನು ವಿತರಣೆ ಮಾಡಲಾಯಿತು. ಇನ್ನು ಕೊರೊನಾ ಸೋಂಕಿತರ ಅನುಕೂಲಕ್ಕಾಗಿ ಪಕ್ಷದ …
Read More »ಖಾಕಿ ಪಡೆಯಿಂದ ಹಸಿದವರಿಗೆ ಊಟ, ಗದಗದಲ್ಲಿ ಅಲೆಮಾರಿಗಳ ಪಾಲಿಗೆ ಇವರೇ ಅನ್ನದಾತರು !
ಗದಗ: ಅವರೆಲ್ಲಾ ಕೊರೊನಾ ವಾರಿಯರ್ಸಗಳು. ಸರಕಾರ ಜಾರಿ ಮಾಡಿರೋ ಲಾಕ್ಡೌನ್ ಯಶಸ್ಸು ಕಾಣ್ತಾಯಿದ್ರೆ ಇವರೇ ಕೇಂದ್ರ ಬಿಂದು. ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಇತ್ತ ತಮ್ಮ ಹಸಿವನ್ನೂ ಲೆಕ್ಕಿಸದೇ ಜನರಿಗೆ ರಕ್ಷಕರಾದವರು. ಆದ್ರೆ ಅದೇ ಆರಕ್ಷಕರೀಗ ಇಲ್ಲಿ ಅನ್ನದಾತರೂ ಆಗಿದ್ದಾರೆ. ಲಾಠಿ ಹಿಡಿದ ಕೈಗಳು ಅನ್ನದ ಕೈಯನ್ನೂ ಹಿಡಿದಿವೆ. ಕೊರೊನಾ ಎಲ್ಲರ ಬದುಕನ್ನು ನುಂಗಿ ನೀರು ಕುಡಿತಿದೆ. ಅದರಲ್ಲೂ ಬಡ ಹಾಗೂ ನಿರ್ಗತಿಕರ ಪಾಡಂತೂ ಹೇಳತೀರದಾಗಿದೆ. ಅಲೆಮಾರಿ ಕುಟುಂಬಗಳ ಬದುಕು ದುಸ್ಥರವಾಗಿದೆ. …
Read More »1,418 ಪೊಲೀಸ ಸಿಬ್ಬಂದಿಗಳಿಗೆ ವಕ್ಕರಿಸಿದ ವೈರಸ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸಕ್ಕೆ ಖಾಕಿ ಪಡೆ ನಲುಗುತ್ತಿದೆ. ಬರೋಬ್ಬರಿ 1418 ಪೊಲೀಸ್ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಮಾಹಾಮಾರಿ ಪೊಲೀಸ್ ಇಲಾಖೆಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, 13 ಪೊಲೀಸರು ಸೋಂಕಿಗೆ ಬಲಿಯಾಗಿದ್ದಾರೆ. 725 ಪೊಲೀಸರು ಹೋಂ ಐಸೋಲೇಟ್ ಆಗಿದ್ದಾರೆ. ಸಿಲಿಕಾನ್ ಸಿಟಿಯ 655 ಪೊಲೀಸರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೊರೊನಾ ವಾರಿಯರ್ಸ್ ಆಗಿರುವ ಪೊಲೀಸರೇ ಇದೀಗ ವೈರಸ್ ಗೆ ತುತ್ತಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
Read More »ನಾವ್ ಕೊರೋನ ಹೋದ್ರೂ ಆಸ್ಪತ್ರೆ ಬಿಟ್ ಹೋಗಲ್ಲ!’
ಕೊರೋನಾ ಪರಿಸ್ಥಿತಿ ಹೇಗಾಗಿದೆ ಅಂದ್ರೆ ರೋಗಿಗಳು ಗುಣಮುಖರಾದ್ರು ಆಸ್ಪತ್ರೆ ಇಂದ ಹೋಗೋ ಮನಸ್ಸು ಮಾಡ್ತ ಇಲ್ಲಾ. ಇಂತಹ ವಿಚಿತ್ರ ಘಟನೆ ಬಾಗಲಕೋಟೆಯ ಆಸ್ಪತ್ರೆಗಳಲ್ಲಿ ನಡೆದಿದೆ. ಇಲ್ಲಿ ಒಂದುಕಡೆ ಕೊರೋನಾ ರೋಗಿಗಳ ಸಂಖ್ಯೆ ಹೆಚ್ಚಾಗ್ತ ಇದ್ರೆ , ಚಿಕಿತ್ಸೆ ಪಡೆದು ಗುಣ ಮುಖರಾದ್ರು ಮನೆಗೆ ತೆರಳದ ರೋಗಿಗಳು ಇನ್ನೊಂದು ಕಡೆ. ಯಾಕೆ ಈ ರೋಗಿಗಳು ಆಸ್ಪತ್ರೆ ಬಿಟ್ಟು ಮನೆಗೆ ಹೋಗಲು ಕೇಳಲ್ಲ ಅಂತ ವಿಚಾರಿಸಿದ ಜಿಲ್ಲಾಡಳಿತಕ್ಕೆ, ರೋಗಿಗಳ ಉತ್ತರ ಕೇಳಿ ದಂಗಾಗಿದೆ. …
Read More »ರಾಯಚೂರು ಹಾಗೂ ಹುಬ್ಬಳ್ಳಿಯಲ್ಲಿ ಕಂಡುಬಂದ ಬ್ಲ್ಯಾಕ್ ಫಂಗಸ್ ಕಾಯಿಲೆ
ರಾಯಚೂರು: ನಿರಂತರ ಆಕ್ಸಿಜನ್ ಬಳಕೆ ಜತೆಗೆ ಇನ್ನಿತರ ಕಾರಣಗಳಿಂದ ಬರುವ ಅಪಾಯಕಾರಿ ಬ್ಲ್ಯಾಕ್ ಫಂಗಸ್ ಕಾಯಿಲೆ ಜಿಲ್ಲೆಯ ಇದೀಗ ರಾಜ್ಯದ ಇನ್ನು ಹಲವು ಕಡೆಗಳಲ್ಲಿ ಕಂಡುಬರುತ್ತಿದ್ದು, ಕರ್ನಾಟಕದಲ್ಲಿಯೂ ಇದು ವೇಗವಾಗಿ ಹಬ್ಬುತ್ತಿರುವುದು ತಲೆನೋವಾಗಿ ಪರಿಣಮಿಸಿದೆ. ಇದುವರೆಗೂ ಬೆಂಗಳೂರಿನಲ್ಲಿ ಮಾತ್ರ ಕಾಣಿಸಿಕೊಂಡಿದ್ದ ಈ ಕಾಯಿಲೆ ರಾಯಚೂರು ಹಾಗೂ ಹುಬ್ಬಳ್ಳಿಯಲ್ಲಿ ಕಂಡುಬಂದಿದೆ. ರಾಯಚೂರಿನಲ್ಲಿ ನಾಲ್ವರಲ್ಲಿ ಕಾಣಿಸಿಕೊಂಡಿದ್ದು, ಒಪೆಕ್ ಕೋವಿಡ್ ಕೇಂದ್ರದಲ್ಲಿ ದಾಖಲಾದ ಮೂವರು ಹಾಗೂ ಖಾಸಗಿ ಆಸ್ಪತ್ರೆಯ ಒಬ್ಬ ರೋಗಿಯಲ್ಲಿ ಈ ಕಾಯಿಲೆ …
Read More »ಅನುಕಂಪದ ಆಧಾರದ ಮೇಲಿನ ಕೆಲಸಕ್ಕೆ ಕುತ್ತು; ನ್ಯಾಯಕ್ಕೆ ಮೊರೆಯಿಟ್ಟ ಲೀಲಾವತಿ
ಚಿತ್ರದುರ್ಗ, (ಮೇ.16) : ಅನುಕಂಪದ ಆಧಾರದ ಮೇಲೆ ಪಡೆದ ಗ್ರಂಥಪಾಲಕ ಹುದ್ದೆಯಲ್ಲಿ ನಾನು ಮುಂದುವರಿಯಲು ನನಗೆ ನ್ಯಾಯ ಕೊಡಿಸಿ ಎಂದು ಲೀಲಾವತಿ ಕೋರಿದ್ದಾರೆ. ಹಿರಿಯೂರು ತಾಲ್ಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ಬಿ.ಬಸವರಾಜ್ ಎಂಬುವ ವ್ಯಕ್ತಿ 2007 ರಿಂದ ಗ್ರಂಥಪಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ 2020 ಮಾರ್ಚ್ 14 ರಂದು ಅವರು ಆಕಸ್ಮಿಕವಾಗಿ ಮೃತಪಟ್ಟರು. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರ ಶಿಫಾರಸ್ಸಿನ ಆಧಾರದ ಮೇಲೆ ಮೃತನ ಪತ್ನಿ …
Read More »
Laxmi News 24×7