Breaking News

ರಾಜ್ಯ

ಜನರಲ್ ಆಸ್ಪತ್ರೆಯನ್ನು ಕೋವಿಡ್ ಕೇಂದ್ರವಾಗಿ ಪರಿವರ್ತನೆ: ಬೆಳಗಾವಿಯ ಶಹಾಪುರದಲ್ಲಿ ನರ್ಸ್ ಗಳ ಅಂಗಿ ಹರಿದು ದುಷ್ಕರ್ಮಿಗಳಿಂದ ಹಲ್ಲೆ

ಬೆಳಗಾವಿ: ಸಾಮಾನ್ಯ ಇತರ ರೋಗಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಬದಲಿಸಿದ್ದಕ್ಕೆ ಕೆಲವು ದುಷ್ಕರ್ಮಿಗಳು ಕರ್ತವ್ಯದಲ್ಲಿದ್ದ ನರ್ಸ್ ಗಳ ಮೇಲೆ ಹಲ್ಲೆ ಮಾಡಿ ಅವರ ಬಟ್ಟೆಗಳನ್ನು ಹರಿದ ಘಟನೆ ಬೆಳಗಾವಿಯ ಶಹಾಪುರದಲ್ಲಿ ನಡೆದಿದೆ. ಕಳೆದ ರಾತ್ರಿ ಈ ಅಸಹಜ ಘಟನೆ ನಡೆದಿದ್ದು ದುಷ್ಕರ್ಮಿಗಳಿಂದ ಏಟು ತಿಂದು ಅಂಗಿ ಹರಿಸಿಕೊಂಡದ್ದಲ್ಲದೆ ತೀವ್ರ ವಾಗ್ವಾದ ನಡೆಯುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೊಲೀಸರಿದ್ದರು ಜನರು ಕ್ಯಾರೇ ಅನ್ನುತ್ತಿಲ್ಲ. ಸರ್ಕಾರದ ಆದೇಶ …

Read More »

ಲಾಕ್ ಡೌನ್: ಸಂಚಾರಕ್ಕೆ ಕಠಿಣ ನಿರ್ಬಂಧ

ವಿಜಯಪುರ: ನಗರದಲ್ಲಿ ಸೋಮವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಅರಸಿದ್ದಿ ಸಿಬ್ಬಂದಿಯೊಂದಿಗೆ ಸ್ವತಃ ರಸ್ತೆಗಳಿದು ವಾಹನಗಳ ತಪಾಸಣೆ ನಡೆಸಿ, ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಿದರು. ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದು, ದಂಡ ವಿಧಿಸಿದರು. ವಾಹನಗಳನ್ನು ಠಾಣೆಯಲ್ಲಿ ನಿಲ್ಲಿಸಿ, ನಡೆದುಕೊಂಡು ಹೋಗುವಂತೆ ಕೆಲವರಿಗೆ ಎಚ್ಚರಿಕೆ ನೀಡಿ ಕಳುಹಿಸಿದರು. ಮಹಾರಾಷ್ಟ್ರ-ಕರ್ನಾಟಕ ಗಡಿಯ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. ವಿಜಯಪುರ ನಗರ …

Read More »

ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಪೊಲೀಸರು ಕಾರ್ಯಾಚರಣೆ‌ ನಡೆಸುತ್ತಿದ್ದಾರೆ. ಲಾಕ್ ಡೌನ್ ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್ ಮಾಡಲು ಮುಂದಾಗಿದ್ದಾರೆ. ನಗರದ ಪ್ರತಿ ಸರ್ಕಲ್ ನಲ್ಲೂ ಬ್ಯಾರಿಕೇಡ್ ಅಳವಡಿಸಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ‌ ಇದುವರೆಗೆ ಶಿವಮೊಗ್ಗ ನಗರ ಒಂದರಲ್ಲೇ 200ಕ್ಕೂ ಹೆಚ್ಚು ವಾಹನಗಳು ಸೀಜ್ ಮಾಡಲಾಗಿದೆ. ಇಂದಿನಿಂದ ಶಿವಮೊಗ್ಗದಲ್ಲಿ ವಾಹನದಲ್ಲಿ ಓಡಾಟ ನಡೆಸಲು ಅವಕಾಶವಿಲ್ಲ. ಬೆಳಗ್ಗೆ 6 ಗಂಟೆಯಿಂದ 10 ಗಂಟೆ ಒಳಗೆ ಕಾಲ್ನಡಿಗೆಯಲ್ಲೇ ಬಂದು ದಿನಬಳಕೆ ವಸ್ತುಗಳ …

Read More »

alert! ಪಾಲಿಸಿದಾರರಿಗೆ `LIC’ ಯಿಂದ ಮಹತ್ವದ ಮಾಹಿತಿ

ನವದೆಹಲಿ : ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ತನ್ನ ಗ್ರಾಹಕರಿಗೆ ಇಡೀ ಪ್ರಕ್ರಿಯೆಯನ್ನು ತೊಂದರೆರಹಿತ ಮತ್ತು ಸುಲಭಗೊಳಿಸಲು ಕ್ಲೇಮ್ ಇತ್ಯರ್ಥ ಅಗತ್ಯಗಳಿಗೆ ಸಂಬಂಧಿಸಿದಂತೆ ಹಲವಾರು ಸಡಿಲಿಕೆಗಳನ್ನು ಹೊರತಂದಿದೆ. ಸಾವಿನ ಪರ್ಯಾಯ ಪುರಾವೆಗಳನ್ನು ಅನುಮತಿಸಲಾಗಿದೆ ವಿಮಾ ದಾರ ವ್ಯಕ್ತಿಯು ಆಸ್ಪತ್ರೆಯ ಆವರಣದೊಳಗೆ ಸತ್ತರೆ ಪರಿಶೀಲನೆ ವಿಧಾನವಾಗಿ ಎಲ್ ಐಸಿ ಸಾವಿನ ಪರ್ಯಾಯ ಪುರಾವೆಗಳನ್ನು ಅನುಮತಿಸಿದೆ. ಮುನ್ಸಿಪಲ್ ಮರಣ ಪ್ರಮಾಣಪತ್ರಗಳಲ್ಲದೆ, ಈಗ ಎಲ್‌ಐಸಿ ಅಂಗೀಕರಿಸಿದ ಸಾವುಗಳ ಇತರ ಪುರಾವೆಗಳಲ್ಲಿ, ಮರಣ ಪ್ರಮಾಣಪತ್ರ, …

Read More »

ಕುಂಟು ನೆಪ ಹೇಳಿ ರಸ್ತೆಗಿಳಿದವ್ರಿಗೆ ಬಿಸಿ ಮುಟ್ಟಿಸುತ್ತಿರೋ ಪೊಲೀಸ್​, ಸಾಲು ಸಾಲು ವಾಹನಗಳು ಸೀಜ್

ರಾಜ್ಯದಲ್ಲಿ ಇಂದಿನಿಂದ 14 ದಿನಗಳ ಲಾಕ್​ಡೌನ್ ಜಾರಿಯಾಗಿದೆ. ಅಗತ್ಯವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10 ಗಂಟೆವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಸುಖಾಸುಮ್ಮನೆ ವಾಹನಗಳಲ್ಲಿ ರಸ್ತೆಗಿಳಿಯದಂತೆ ಸೂಚಿಸಲಾಗಿದೆ. ಆದ್ರೂ ನಿಯಮ ಉಲ್ಲಂಘಿಸಿ ಕುಂಟು ನೆಪಗಳನ್ನ ಹೇಳಿಕೊಂಡು ರಸ್ತೆಗಿಳಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ. ಜೊತೆಗೆ ವಾಹನಗಳನ್ನ ಸೀಜ್ ಮಾಡ್ತಿದ್ದಾರೆ. ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಫೀಲ್ಡಿಗಳಿದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಮಧ್ಯೆ ಕೆಲ ಜನರು ಅನಾವಶ್ಯಕ ಓಡಾಡೋದಲ್ಲದೆ ಪೊಲೀಸರ ಜೊತೆ ವಾಗ್ವಾದ ಮಾಡ್ತಿದ್ದಾರೆ. …

Read More »

ಆತ್ಮಹತ್ಯೆ ಮಾಡಿಕೊಂಡ ಮಗಳ ಶವವನ್ನು ಹೊತ್ತು 35 ಕಿಮೀ ಕಾಲ್ನಡಿಗೆಯಲ್ಲೇ ಕ್ರಮಿಸಿ ಆಸ್ಪತ್ರೆ ತಲುಪಿದ ತಂದೆ; ವಿಡಿಯೋ ವೈರಲ್​

ಭೋಪಾಲ್​: ಆತ್ಮಹತ್ಯೆ ಮಾಡಿಕೊಂಡ ಮಗಳ ಮೃತದೇಹವನ್ನು ತಂದೆ ಮಂಚದ ಮೇಲೆ ಮಲಗಿಸಿ, ಕಟ್ಟಿಕೊಂಡು ಸುಮಾರು 35 ಕಿಮೀ ಹೊತ್ತು ನಡೆದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ ನಡೆದಿದೆ. ಮಗಳ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿತ್ತು. ಆದರೆ ಶವವನ್ನು ಸಾಗಿಸಲು ಒಂದು ವಾಹನದ ವ್ಯವಸ್ಥೆ ಮಾಡಲು ಸಾಧ್ಯವಾಗದೆ ಮಗಳ ಶವವನ್ನು ಹೊತ್ತು 35 ಕಿಮೀ ದೂರವನ್ನು ಏಳು ಗಂಟೆಗಳಲ್ಲಿ ಕ್ರಮಿಸಿದ್ದಾರೆ. ಇವರೊಂದಿಗೆ ಹಳ್ಳಿಯ ಕೆಲವರೂ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ …

Read More »

ಆಮೆರಿಕಾದಿಂದ ಭಾರತಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್​ ನೆರವು; ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರವಾನೆ

ದೆಹಲಿ: ಆಮೆರಿಕಾದಿಂದ ಭಾರತಕ್ಕೆ 2200 ಆಕ್ಸಿಜನ್ ಕಾನ್ಸೆಂಟ್ರೇಟರ್​​ ನೆರವು ಒದಗಿಬಂದಿದೆ. ಜೊತೆಗೆ 10 ಸಾವಿರ ಆಕ್ಸಿಮೀಟರ್ ಸಹ ಭಾರತಕ್ಕೆ ರವಾನೆಯಾಗಿದೆ. ಕೇಂದ್ರ ಸರ್ಕಾರವು ಇವುಗಳನ್ನ ತಕ್ಷಣ ಕೆಲ ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಕೇಂದ್ರ ನೀತಿ ಆಯೋಗ (National Institution for Transforming India-NITI Aayog) ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಅದರಲ್ಲಿ ಕರ್ನಾಟಕಕ್ಕೆ ಹೆಚ್ಚು ಪಾಲು ಸಂದಾಯವಾಗಿದೆ ಎಂಬುದು ಸಮಧಾನಕರ ವಿಷಯ. ಕೊರೊನಾ ಸಂಕಷ್ಟ ಕಾಲದಲ್ಲಿ ಅಮರಿಕದಿಂದ ಬಂದಿಳಿದಿರುವ ವೈದ್ಯಕೀಯ …

Read More »

ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಕೊವಿಡ್​ ಸೋಂಕಿನಿಂದ ಸಾವು

ದೆಹಲಿಯ ಟಿಕ್ರಿ ಗಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮಬಂಗಾಳದಿಂದ ತೆರಳುತ್ತಿದ್ದ 26ವರ್ಷದ ಹೋರಾಟಗಾರ್ತಿಯೊಬ್ಬಳನ್ನು, ಅವಳ ಜತೆಗಿದ್ದ ಇಬ್ಬರು ಅತ್ಯಾಚಾರ ಮಾಡಿದ್ದರು. ಈ ಅತ್ಯಾಚಾರ ಸಂತ್ರಸ್ತೆ ಇದೀಗ ಕೊವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.   ಇದು ತುಸು ಹಳೇ ಘಟನೆಯಾಗಿದ್ದು, ಇದೀಗ ಬೆಳಕಿಗೆ ಬಂದಿದೆ. ಏಪ್ರಿಲ್​ 11ರಂದು ಈ ಯುವತಿ, ಇನ್ನಿಬ್ಬರೊಂದಿಗೆ ದೆಹಲಿ ಗಡಿಗೆ ತೆರಳುತ್ತಿದ್ದರು. ಆದರೆ ದುರ್ದೈವವೆಂಬಂತೆ ಜತೆಗಿದ್ದವರಿಂದಲೇ …

Read More »

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 12 ಜನ ಕೊರೊನಾ ಸೋಂಕಿಗೆ ಬಲಿ; ಜನರಲ್ಲಿ ಹೆಚ್ಚಾದ ಆತಂಕ

ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಮತ್ತೆ 12 ಜನರನ್ನು ಕೊರೊನಾ ಸೋಂಕು ಬಲಿ ತೆಗೆದುಕೊಂಡಿದೆ. ಕಳೆದ 12 ಗಂಟೆಯಲ್ಲಿ 12 ಜನ ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬರು ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಕೂಡಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಮೂರು ದಿನಗಳ ಹಿಂದೆ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಾದ …

Read More »

ಕೇಂದ್ರದಿಂದ ಹೆಚ್ಚುವರಿ ಆಕ್ಸಿಜನ್; ಶೀಘ್ರ ಸಮಸ್ಯೆಗೆ ಪರಿಹಾರ: ಸಚಿವ ಜಗದೀಶ್ ಶೆಟ್ಟರ್

  ಬೆಳಗಾವಿ;-ರಾಜ್ಯಕ್ಕೆ ಅಗತ್ಯವಿರುವ ಆಕ್ಸಿಜನ್ ಪ್ರಮಾಣವನ್ನು ಆಧರಿಸಿ ಹೆಚ್ಚುವರಿ ಆಕ್ಸಿಜನ್ ಹಂಚಿಕೆಗೆ ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿರುವುದರಿಂದ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಪರಿಹಾರವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ರಾಜ್ಯದ ಆಕ್ಸಿಜನ್ ಪೂರೈಕೆ ಉಸ್ತುವಾರಿ ವಹಿಸಿಕೊಂಡಿರುವ ಸಚಿವ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಆಕ್ಸಿಜನ್ ಲಭ್ಯತೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ (ಮೇ 9) ನಡೆದ ಅಧಿಕಾರಿಗಳ …

Read More »