Breaking News

ರಾಜ್ಯ

ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತ: ಮಂಡ್ಯದಲ್ಲಿ ಕೋವಿಡ್ ಸೋಂಕಿತ ಯುವಕ ಸಾವು

ಮಂಡ್ಯ: ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಕೋವಿಡ್ ಸೋಂಕಿತ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ. ಇಂಡುವಾಳು ಗ್ರಾಮದ ಸುನೀಲ್(29) ಮೃತಪಟ್ಟ ಯುವಕ. ಈತನಿಗೆ 14 ದಿನದ ಹಿಂದೆ ಸೋಂಕು ದೃಢಪಟ್ಟಿತ್ತು. ಮೊದಲ ಮೂರು ದಿನ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದನು. ಮನೆಗೆ ಬಂದ ಎರಡು ದಿನದಲ್ಲಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣ ಮಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ವೆಂಟಿವೇಟರ್ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. …

Read More »

ಚಾಮರಾಜನಗರ: ಸೂಕ್ತ ಸಮಯಕ್ಕೆ ಬೆಡ್ ಸಿಗದೆ ಯುವಕ ಸಾವು: ಆಸ್ಪತ್ರೆ ಮುಂದೆ ಸಂಬಂಧಿಕರ ಆಕ್ರೋಶ

ಚಾಮರಾಜನಗರ: ರಕ್ತದ ಆಮ್ಲಜನಕ ಮಟ್ಟ ಕಡಿಮೆಯಾಗಿ ಉಸಿರಾಟದ ತೊಂದರೆಯಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ಯುವಕನಿಗೆ ಬೆಡ್ ದೊರಕದೇ ಮೃತಪಟ್ಟ ಘಟನೆ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಇದರಿಂದ ರೊಚ್ಚಿಗೆದ್ದ ಯುವಕನ ಕಡೆಯವರು ಜಿಲ್ಲಾಸ್ಪತ್ರೆಯ ಕಿಟಕಿ ಗಾಜುಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದ ಅಂಬೇಡ್ಕರ್ ಬಡಾವಣೆಯ ನಿವಾಸಿ ಅಭಿಷೇಕ್ (25) ಮೃತ ಯುವಕ. ಕಳೆದ ಆರು ದಿನದ ಹಿಂದೆಯೇ ಯುವಕನಿಗೆ ಸೋಂಕು ಧೃಢಪಟ್ಟಿತ್ತು. ಹೋಂ ಐಸೋಲೇಷನ್ ನಲ್ಲಿದ್ದರು. ಉಸಿರಾಟದ …

Read More »

ಇಂದು ದೀದಿ ಪ್ರಮಾಣ ವಚನ : 3ನೇ ಬಾರಿ ಮುಖ್ಯಮಂತ್ರಿಯಾಗುತ್ತಿರುವ ಮಮತಾ ಬ್ಯಾನರ್ಜಿ

ಕೊಲ್ಕತ್ತಾ : ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಇಂದು (ಬುಧವಾರ) ಕೋಲ್ಕತ್ತಾದ ರಾಜ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ ಕೋವಿಡ್ -19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾವಳಿಗಳ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಪ್ರಮಾಣವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 2021ರ ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ದೀದಿ ಮೂರನೇ ಬಾರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. …

Read More »

ಹೊಸ ಗೈಡ್ ಲೈನ್ ಬಿಡುಗಡೆ: ಆರೋಗ್ಯವಂತರಿಗೆ, ಸೋಂಕಿತರಾಗಿದ್ದವರಿಗೆ ಕೋವಿಡ್ ಟೆಸ್ಟ್ ಬೇಕಿಲ್ಲ

ನವದೆಹಲಿ: ಐಸಿಎಂಆರ್ ನಿಂದ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲಾಗಿದ್ದು, ಪಾಸಿಟಿವ್ ಬಂದವರಿಗೆ ಟೆಸ್ಟ್ ಮಾಡಬೇಕಿಲ್ಲ. ಪ್ರಯಾಣಿಕರಿಗೆ RTPCR ಕಡ್ಡಾಯವಲ್ಲ ಎಂದು ಕೊರೋನಾ ಪರೀಕ್ಷೆಯ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಒಮ್ಮೆ ಪಾಸಿಟಿವ್ ಆದವರಿಗೆ ಮತ್ತೆ ಟೆಸ್ಟ್ ಮಾಡಬೇಕಿಲ್ಲ ಎಂದು ಹೇಳಲಾಗಿದೆ. ಆರೋಗ್ಯವಂತರು ಅಗತ್ಯ ಕಾರ್ಯಗಳಿಗಾಗಿ ಅಂತರಾಜ್ಯ ಪ್ರಯಾಣಮಾಡುವಾಗ ಅವರಿಗೆ RTPCR ಪರೀಕ್ಷೆ ಕಡ್ಡಾಯ ಬೇಡವೆಂದು ಕೇಂದ್ರ ಸರ್ಕಾರ ಹೊಸ ಕೋವಿಡ್ ಪರೀಕ್ಷೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರಯೋಗಾಲಯಗಳ ಮೇಲೆ ಹೆಚ್ಚಿನ …

Read More »

ಚಾಮರಾಜನಗರ ದುರಂತ’ ಬೆನ್ನಲ್ಲೇ ಆರೋಗ್ಯ ಸಚಿವರ ಎಲ್ಲಾ ಜವಾಬ್ದಾರಿ ಕಿತ್ತುಕೊಂಡ ‘ಸಿಎಂ ಯಡಿಯೂರಪ್ಪ’

ಬೆಂಗಳೂರು : ಚಾಮರಾಜನಗರದಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ಹಿನ್ನೆಲೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದ್ದವು. ಚಾಮರಾಜನಗರ ದುರಂತಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಸಿಎಂ ಬಿ ಎಸ್ ಯಡಿಯೂರಪ್ಪ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಆರೋಗ್ಯ ಸಚಿವ ಡಾ.ಸುಧಾಕರ್ ನೀಡಿದ್ದ ಎಲ್ಲಾ ಜವಾಬ್ದಾರಿಯನ್ನು ಸಿಎಂ ವಾಪಸ್ ತೆಗೆದುಕೊಂಡಿದ್ದಾರೆ. ಯೆಸ್, ಆರೋಗ್ಯ ಸಚಿವ ಡಾ, ಸುಧಾಕರ್ ಗೆ ಆರೋಗ್ಯ ಖಾತೆಯೊಂದೇ ಉಳಿದಿದ್ದು, ಕೊರೊನಾ …

Read More »

ಕೋವಿಡ್ ಸೊಂಕಿತರಿಗೆ ಉಚಿತವಾಗಿ ಕೆಎಂಎಫ್‍ನಿಂದ 200 ಆಕ್ಸಿಜನ್ ಬೆಡ್‍ಗಳ ಪೂರೈಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ ನಿರ್ಧಾರ ತೆಗೆದುಕೊಂಡಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮಂಗಳವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಆಕ್ಸಿಜನ್ …

Read More »

ಬೆಂಗಳೂರು-ಧಾರವಾಡ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ

ಧಾರವಾಡ, ಮೇ 04; ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ರೈಲಿನ ಮೂಲಕ ಸಂಚಾರ ನಡೆಸುವ ಜನರು ಟಿಕೆಟ್ ತೋರಿಸಿ ರೈಲು ನಿಲ್ದಾಣಕ್ಕೆ ಸಂಚಾರ ನಡೆಸಲು ಅವಕಾಶ ನೀಡಲಾಗಿದೆ. ನೈಋತ್ಯ ರೈಲ್ವೆ ಪ್ರಯಾಣಿಕರ ಕೊರತೆಯ ಕಾರಣ ಮೇ 4ರಿಂದ ಮುಂದಿನ ಆದೇಶದ ತನಕ ಧಾರವಾಡ- ಬೆಂಗಳೂರು ನಡುವೆ ಸಂಚಾರ ನಡೆಸುತ್ತಿದ್ದ ರೈಲು ಸೇವೆಯನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ ರಾಜಧಾನಿಯಿಂದ ಉತ್ತರ ಕರ್ನಾಟಕ ಭಾಗಕ್ಕೆ …

Read More »

ಜೀವ ಉಳಿಸುವುದು ಮುಖ್ಯವೇ ಹೊರತು ರಾಜಕೀಯವಲ್ಲ: ಡಿಕೆಶಿ

ಬೆಂಗಳೂರು: ಕೊರೋನಾ ಮಹಾಮಾರಿ ಹೆಚ್ಚುತ್ತಿರುವಂತಹ ಪ್ರಸಕ್ತ ಸಂದರ್ಭದಲ್ಲಿ ಜನರಿಗೆ ಜಾಗೃತಿ ಮೂಡಿಸುವುದು, ಜೀವ ಉಳಿಸುವುದು ಮುಖ್ಯವೇ ಹೊರತು ರಾಜಕೀಯವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಚಾಮರಾಜನಗರಕ್ಕೆ ತೆರಳುವ ಮುನ್ನ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಸೋಮವಾರ ಆರೇಳು ದೇಹಗಳ ಶವಸಂಸ್ಕಾರ ಪೊಲೀಸರೇ ಮಾಡಿದ್ದಾರೆ, ಉಳಿದದ್ದನ್ನು ಊರಿಗೆ ಕಳಿಸಿದ್ದಾರೆ, ಜನರ ಆಕ್ರಂದನ ಮುಗಿಲು ಮುಟ್ಟಿದೆ. ಚಾಮರಾಜನಗರದಲ್ಲಿ ಇಪ್ಪತ್ತನಾಲ್ಕು ಜನರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿರುವ ಬಗ್ಗೆ ಇಲಾಖೆ ಮಾಹಿತಿ ನೀಡಿದೆ. ಸಾವಿನ …

Read More »

ಆಕ್ಸಿಜನ್ ಕೊರತೆಗೆ ಸರ್ಕಾರ ಕಾರಣ ಅಲ್ಲ: ಸಚಿವ ಸೋಮಶೇಖರ್ ಉಡಾಫೆ ಉತ್ತರ

ಬೆಂಗಳೂರು. ಆಕ್ಸಿಜನ್ ಕೊರತೆಗೆ ಸರ್ಕಾರ ಕಾರಣ ಅಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಉಡಾಫೆ ಉತ್ತರ ನೀಡಿದ್ದಾರೆ. ಆರೋಗ್ಯ ಸಚಿವ ಸುಧಾಕರ್ ಅವರನ್ನ ಭೇಟಿಯಾದ ನಂತರ ಎಸ್.ಟಿ.ಸೋಮಶೇಖರ್ ಮಾಧ್ಯಮಗಳ ಜೊತೆ ಮಾತನಾಡಿ, ಎಲ್ಲರಂತೆ ಸರ್ಕಾರವನ್ನು ಸಮರ್ಥಿಸಿಕೊಂಡರು. ಸಂಜೆ ಸಭೆ ಬಳಿಕ ಅಲ್ಲಿ ಚರ್ಚೆ ಮಾಡುತ್ತೇವೆ. ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳಲು ನೋಡಲ್ ಅಧಿಕಾರಿಗಳು ಇರ್ತಾರೆ. ಅವರು ಕೆಲಸ ಮಾಡದೇ ಹೋದ್ರೆ ಸರ್ಕಾರಕ್ಕೆ ಕೆಟ್ಟ ಹೆಸರು. ಅಧಿಕಾರಿಗಳ ನಿರ್ಲಕ್ಷ್ಯ ಇದರಲ್ಲಿದೆ ಎಂದು ಹೇಳಿ …

Read More »

ಜೀವ ತೆಗೆಯೋಕೆ ವ್ಯಾಕ್ಸಿನ್ ಮಾಡಿದ್ದಾರೆ, ಹಾಕಿಸಿಕೊಂಡ್ರೆ ಮಕ್ಕಳಾಗಲ್ಲ ಅಂದ್ರು, ಅವರೇ ಕದ್ದು ಹಾಕಿಸಿಕೊಂಡ್ರು: ಸಿಟಿ ರವಿ

ಚಿಕ್ಕಮಗಳೂರು: ಬಿಜೆಪಿ ವ್ಯಾಕ್ಸಿನ್, ಜೀವ ತೆಗೆಯುವುದಕ್ಕೆ ಮಾಡಿದ್ದಾರೆ. ಈ ವ್ಯಾಕ್ಸಿನ್ ತಗೊಂಡ್ರೆ ಮಕ್ಕಳಾಗಲ್ಲ ಎಂದು ಅಪಪ್ರಚಾರ ಮಾಡಿದರು. ನಂತರ ಅವರೇ ಕದ್ದು ಹೋಗಿ ವ್ಯಾಕ್ಸಿನ್ ತಗೆದುಕೊಂಡರು. ಆದರೆ ಈಗ ಜನರು ಸಾಯುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ವ್ಯಾಕ್ಸಿನ್ ಕುರಿತು ರಾಜಕೀಯ ಅಪಪ್ರಚಾರ ಮಾಡಿದರು. ಈ ಹಿಂದೆ ಟಾರ್ಗೆಟ್ ರೀಚ್ ಆಗುತ್ತಿರಲಿಲ್ಲ. ಈಗ ವ್ಯಾಕ್ಸಿನ್ ಗೆ …

Read More »