Breaking News

ರಾಜ್ಯ

ಕೋವಿಡ್ ಲಸಿಕೆ ಪಡೆದ ಶಾಸಕ ಯತ್ನಾಳ: ಲಸಿಕೆ ಪಡೆಯಲು ಜನರಿಗೆ ಮನವಿ

ವಿಜಯಪುರ: ದೇಶದ ಎಲ್ಲ ನಾಗರಿಕರು ಕೋವಿಡ್ ಲಸಿಕೆ ಪಡೆದು, ಕೋವಿಡ್ ಮುಕ್ತ ಭಾರತ ನಿರ್ಮಾಣಕ್ಕೆ ಸಹಕರಿಸಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಶುಕ್ರವಾರ ವಿಜಯಪುರ ನಗರದ ವಾರ್ಡ ನಂ-3 ರಲ್ಲಿ ಗ್ಯಾಂಗ್ ಬಾವಡಿ ಸರಕಾರಿ ಶಾಲೆ ನಂ-10 ರಲ್ಲಿ ಎರಡನೇ ಹಂತದ ಕೋವಿಡ್ ಲಸಿಕೆ ಪಡೆದು ಬಳಿಕ ಜನರಿಗೆ ಲಸಿಕೆ ಪಡೆಯುವ ಅಗತ್ಯ ಹಾಗೂ ಮಹತ್ವದ ಕುರಿತು ವಿವರಿಸಿದರು. ಭಾರತದಲ್ಲೇ ಅಭಿವೃದ್ಧಿ ಪಡಿಸಿದ, ಅತ್ಯಂತ …

Read More »

ಕೋವಿಡ್ ನಿಯಂತ್ರಣ ವೈಫಲ್ಯ: ವಿಜಯಪುರ ಡಿಎಚ್‌ಒ ಡಾ.ಯರಗಲ ಕಡ್ಡಾಯ ರಜೆ

ವಿಜಯಪುರ: ಕೋವಿಡ್ ಎರಡನೇ ಅಲೆಯ ವೇಗ ಹೆಚ್ಚಿದ್ದು, ಸೋಂಕು ನಿಯಂತ್ರಣ ವಿಷಯದಲ್ಲಿ ವಿಫಲವಾಗಿದ್ದಾರೆ ಎಂಬ ಆರೋಪದಲ್ಲಿ ವಿಜಯಪುರ ಡಿಎಚ್‌ಒ ಡಾ.ರಾಜಕುಮಾರ ಯರಗಲ ಅವರನ್ನು ಕಡ್ಡಾಯ ರಜೆ ಮೇಲೆ ತೆರಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಯ. ಶಿವಶಂಕರ ಅವರು, ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಡಾ.ರಾಜಕುಮಾರ ಅವರನ್ನು ಕಡ್ಡಾಯ ರಜೆ ಮೇಲೆ …

Read More »

ಕೋವಿಡ್-19: ಪರೀಕ್ಷಾ ವರದಿ ವಿಳಂಬ, ಆತಂಕದಲ್ಲಿಯೇ ದಿನ ದೂಡುತ್ತಿರುವ ಬೆಂಗಳೂರು ಜನತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಭಾರೀ ಪ್ರಮಾಣದಲ್ಲಿ ಹರಡುತ್ತಿದ್ದು, ಈ ನಡುವೆ ಅಲ್ಪ ಸ್ವಲ್ಪ ಲಕ್ಷಣಗಳು ಕಂಡು ಬಂದರೂ ಆತಂಕಕ್ಕೊಳಗಾಗುತ್ತಿರುವ ಜನರು ಸ್ಥಳೀಯ ಆಸ್ಪತ್ರೆಗಳು ಹಾಗೂ ಕ್ಲಿನಿಕ್ ಗಳಿಗೆ ತೆರಳಿ ಪರೀಕ್ಷೆಗೊಳಗಾಗುತ್ತಿದ್ದಾರೆ. ಈ ನಡುವೆ ಲ್ಯಾಬ್ ಗಳ ವರದಿ ತಡವಾಗಿ ಬರುತ್ತಿದ್ದು, ಇದು ಜನತೆಯ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡುತ್ತಿದೆ. ನಗರದಲ್ಲಿ ಸೋಂಕು ಹೆಚ್ಚಾದಂತೆ ಲ್ಯಾಬ್ ಗಳ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಇದರ ಪರಿಣಾಮ ಹಲವು ಲ್ಯಾಬ್ ಗಳು ಪರೀಕ್ಷಾ …

Read More »

ಕೊರೊನಾ ಪ್ರಕರಣಗಳಲ್ಲಿ ದೇಶದ ಟಾಪ್ 3 ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ.

ಬೆಂಗಳೂರು: ಕೊರೊನಾ ಪ್ರಕರಣಗಳಲ್ಲಿ ದೇಶದ ಟಾಪ್ 3 ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಹೀಗಿದ್ರೂ ರಾಜ್ಯದ ಜನಕ್ಕೆ ಸ್ವಲ್ಪವೂ ಸೀರಿಯಸ್‍ನೆಸ್ ಬಂದಿಲ್ಲ. ಮೊದಲ ದಿನ ಜನತಾ ಕರ್ಫ್ಯೂ ಸಕ್ಸಸ್ ಮಾಡಿದ ಜನ, ಎರಡನೇ ದಿನ ಕ್ಯಾರೆ ಅನ್ಲಿಲ್ಲ. ಹಾಗಾದ್ರೆ ರಾಜ್ಯದಲ್ಲಿ ಜನತಾ ಲಾಕ್‍ಡೌನ್ ಮುಂದುವರಿಯುತ್ತಾ..? ಹೀಗೊಂದು ಸುಳಿವನ್ನ ಸರ್ಕಾರವೇ ನೀಡಿದೆ. ರಾಜ್ಯದಲ್ಲಿ ಜನತಾ ಕರ್ಫ್ಯೂ ಇಷ್ಟಕ್ಕೆ ಮುಗಿಯುವ ಲಕ್ಷಣ ಕಾಣಿಸ್ತಿಲ್ಲ. ಮೇ 12ಕ್ಕೆ ಅಂತ್ಯವಾಗಬೇಕಿರುವ ಜನತಾ ಲಾಕ್‍ಡೌನ್ ಅನ್ನು ಮೇ 19ವರೆಗೆ …

Read More »

ಚುನಾವಣೋತ್ತರ ಸಮೀಕ್ಷೆ; ಬೆಳಗಾವಿಯಲ್ಲಿ ಯಾರಿಗೆ ಗೆಲುವು?

ಬೆಳಗಾವಿ, ಏಪ್ರಿಲ್ 29; ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಚುನಾವಣೋತ್ತರ ಫಲಿತಾಂಶ ಪ್ರಕಟವಾಗಿದೆ. ಏಪ್ರಿಲ್ 17ರಂದು ಮತದಾನ ನಡೆದಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಗುರುವಾರ ಟಿವಿ 9 ವಾಹಿನಿ ನಡೆಸಿದ ಚುನಾವಣೋತ್ತರ ಸಮೀಕ್ಷೆಗಳ ವರದಿ ಪ್ರಕಟವಾಗಿದೆ. ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರು ಕೋವಿಡ್‌ಗೆ ಬಲಿಯಾದ ಕಾರಣ ಉಪ ಚುನಾವಣೆ ಎದುರಾಗಿದೆ.   ಬಿಜೆಪಿ ದಿ. ಸುರೇಶ್ ಅಂಗಡಿ ಪತ್ನಿ ಮಂಗಲ ಅಂಗಡಿ ಅವರಿಗೆ ಟಿಕೆಟ್ …

Read More »

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಬರೆದು 8 ಸರ್ಕಾರಿ ಹುದ್ದೆಗೆ ಆಯ್ಕೆಯಾಗಿದ್ದಾನೆ. ಗ್ರಾಮೀಣ ಪ್ರತಿಭೆ

ಯಲಬುರ್ಗಾ: ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ನೌಕರಿ ಪಡೆಯುವುದು ಕಷ್ಟ. ಅಂಥದ್ದರಲ್ಲಿ ತಾಲೂಕಿನ ಚಿಕ್ಕಮನ್ನಾಪುರದ ಯುವಕ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಬರೆದು 8 ಸರ್ಕಾರಿ ಹುದ್ದೆಗೆ ಆಯ್ಕೆಯಾಗಿದ್ದಾನೆ. ತಾಲೂಕಿನ ಬೋದುರು ಗ್ರಾಪಂ ವ್ಯಾಪ್ತಿಯ ಚಿಕ್ಕಮನ್ನಾಪುರ ಗ್ರಾಮದ ಸಂಗನಗೌಡ ಮಾಲಿಪಾಟೀಲ ಎಂಬಾತನೇ ಈ ಸಾಧನೆ ಮಾಡಿದ ಯುವಕ. ಪ್ರಯತ್ನ: ಸಂಗನಗೌಡ ಮಾಲಿಪಾಟೀಲ 2016ರಿಂದ ಸರ್ಕಾರಿ ನೌಕರಿಗಾಗಿ ಅರ್ಜಿ ಹಾಕಲು ಪ್ರಾರಂಭಿಸಿದ್ದಾರೆ. ಅಂದಿನಿಂದ ಸರ್ಕಾರ ಕರೆದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದಿದ್ದಾರೆ. ಪ್ರಾರಂಭದಲ್ಲಿ …

Read More »

ಆಸ್ಪತ್ರೆಯಲ್ಲೇ ರೆಮಿಡಿಸಿವಿರ್‌ ಬಳಸಿ

ಹೊಸದಿಲ್ಲಿ: ದೇಶದಲ್ಲಿ ಸೋಂಕು ಪರಿಸ್ಥಿತಿ ಬಿಗಡಾಯಿಸುತ್ತಿರುವಂತೆ ಕೇಂದ್ರ ಸರಕಾರ ಹೋಮ್‌ ಐಸೊಲೇಶನ್‌ನ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವಿಶೇಷವಾಗಿ ರೋಗಲಕ್ಷಣ ರಹಿತ ಮತ್ತು ಅಲ್ಪ ಪ್ರಮಾಣದ ಲಕ್ಷಣಗಳು ಇರುವವರಿಗೆ ಇದರಿಂದ ಅನುಕೂಲವಾಗಲಿದೆ. ಮನೆಯಲ್ಲಿ ರೆಮಿಡಿಸಿವಿರ್‌ ಇಂಜೆಕ್ಷನ್‌ ಪಡೆಯುವುದನ್ನು ನಿಷೇಧಿಸಲಾಗಿದ್ದು, ಆಸ್ಪತ್ರೆಯಲ್ಲಿ ಮಾತ್ರ ಪಡೆಯಬೇಕು ಎಂದು ಸಲಹೆ ಮಾಡಲಾಗಿದೆ. ಮತ್ತೂಂದು ಗಮನಾರ್ಹ ಅಂಶವೆಂದರೆ ಸೋಂಕು ದೃಢಪಟ್ಟವರು ಮನೆಯಲ್ಲಿರುವಾಗ ಕೂಡ ಮೂರು ಪದರಗಳ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಲಾಗಿದೆ. ಇನ್ನಿತರ ಸಲಹೆಗಳು …

Read More »

ಬೆಳಗಾವಿಯಲ್ಲಿ ಕೊರೋನಾ ಅಟ್ಟಹಾಸ ಮೆರದಿದ್ದು, ಮೊದಲಬಾರಿಗೆ 500ರ ಗಡಿ ದಾಟಿದೆ.

ಬೆಳಗಾವಿ – 2 ಅಲೆಯಲ್ಲಿ ಬೆಳಗಾವಿಯಲ್ಲಿ ಕೊರೋನಾ ಅಟ್ಟಹಾಸ ಮೆರದಿದ್ದು, ಮೊದಲಬಾರಿಗೆ 500ರ ಗಡಿ ದಾಟಿದೆ. ಇಂದು 545 ಜನರಿಗೆ ಜಿಲ್ಲೆಯಲ್ಲಿ ಕೊರೋನಾ ದೃಢಪಟ್ಟಿದೆ. ಬೆಳಗಾವಿ ನಗರದಲ್ಲಿ 157, ಗೋಕಾಕ ತಾಲೂಕಲ್ಲಿ 104 ಜನರಿಗೆ ಸೋಂಕು ಪತ್ತೆಯಾಗಿದೆ. ಅಥಣಿಯಲ್ಲಿ 76, ಬೈಲಹೊಂಗಲ 50, ಚಿಕ್ಕೋಡಿ 30, ಹುಕ್ಕೇರಿ 18, ಖಾನಾಪುರ 10, ರಾಮದುರ್ಗ 15, ರಾಯಬಾಗ 38, ಸವದತ್ತಿ 30 ಹಾಗೂ ಇತರೆ 17 ಜನರಿಗೆ ಸೋಂಕು ದೃಢಪಟ್ಟಿದೆ. ಇಲ್ಲಿಯವರೆಗೆ …

Read More »

ಬೆಂಗಳೂರಿನಿಂದ ಬಂದರೆ ಈ ಗ್ರಾಮದಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ

ಧಾರವಾಡ, ಏಪ್ರಿಲ್ 29; ಕೋವಿಡ್ 2ನೇ ಅಲೆ ವೇಗವಾಗಿ ಹಬ್ಬುತ್ತಿದೆ. ಕರ್ನಾಟಕ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಬೆಂಗಳೂರು ನಗರ ಮತ್ತು ವಿವಿಧ ಜಿಲ್ಲೆಗಳ ಜನರು ತವರಿಗೆ ವಾಪಸ್ ಆಗುತ್ತಿದ್ದಾರೆ. ಬೆಂಗಳೂರು ಮತ್ತು ಹೊರ ಜಿಲ್ಲೆಗಳಿಂದ ಬರುವ ಜನರಿಂದ ಕೋವಿಡ್ ಸೋಂಕು ಹರಡಬಾರದು ಎಂದು ಧಾರವಾಡ ಜಿಲ್ಲೆಯ ಗ್ರಾಮವೊಂದು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ.   ಧಾರವಾಡ ಸಮೀಪದ ಹೆಬ್ಬಳ್ಳಿ ಗ್ರಾಮದ ಜನರು ಸ್ವಯಂ ಆಗಿ ತೀರ್ಮಾನ ಕೈಗೊಂಡಿದ್ದಾರೆ. …

Read More »

ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಬಜಾಜ್ ರಾಜೀನಾಮೆ, ನೀರಜ್ ಬಜಾಜ್ ನೂತನ ಅಧ್ಯಕ್ಷ

ನವದೆಹಲಿ:ರಾಹುಲ್ ಬಜಾಜ್ ಅವರು ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷ ಸ್ಥಾನದಿಂದ ಏಪ್ರಿಲ್ 30ರಂದು ಕೆಳಗಿಳಿಯಲಿದ್ದಾರೆ ಎಂದು ಬಜಾಜ್ ಆಟೋ ಗುರುವಾರ(ಏಪ್ರಿಲ್ 29) ಘೋಷಿಸಿದೆ. ರಾಹುಲ್ (82ವರ್ಷ) ಅವರು ಕಂಪನಿಯ ಕಾರ್ಯನಿರ್ವಾಹಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇನ್ನು ಮುಂದೆ ಅವರು ಐದು ವರ್ಷಗಳ ಕಾಲ ಕಂಪನಿಯ ವಿಶ್ರಾಂತ ಅಧ್ಯಕ್ಷರಾಗಲಿದ್ದಾರೆ ಎಂದು ಬಜಾಜ್ ತಿಳಿಸಿದೆ. ಅಲ್ಲದೇ ನೀರಜ್ ಬಜಾಜ್ ಅವರು ಮೇ 1ರಂದು ಕಂಪನಿಯ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದೆ. …

Read More »