Breaking News

ರಾಜ್ಯ

ಈ ಊರಿಗೆ 2 ಸಂಸದರು, 2 ಶಾಸಕರು : ಆಸ್ಪತ್ರೆಗೆ ಹೋಗಬೇಕಾದರೆ 25 ಕಿ.ಮೀ. ಸಂಚರಿಸಬೇಕು!

ಕುಂದಾಪುರ: ಈ ಪಂಚಾಯತ್‌ ಎರಡು ಲೋಕಸಭಾ ಕ್ಷೇತ್ರ, ಎರಡು ವಿಧಾನಸಭಾ ಕ್ಷೇತ್ರ, ಇಬ್ಬರು ಸಂಸದರು, ಇಬ್ಬರು ಶಾಸಕರ ವ್ಯಾಪ್ತಿಯಲ್ಲಿ ಬರುತ್ತದೆ. ಆದ್ದರಿಂದ ಊರು ಸರ್ವ ಸೌಲಭ್ಯಗಳನ್ನೂ ಹೊಂದಿರಬೇಕಿತ್ತು. ಆದರೆ ಇಲ್ಲಿನ ಜನರಿಗೆ ಏನಾದರೂ ಅನಾರೋಗ್ಯ ತಲೆದೋರಿದರೆ ತುರ್ತು ಚಿಕಿತ್ಸೆಗೆ 20-25 ಕಿ.ಮೀ. ದೂರ ಬರಬೇಕು; ಅದೂ ಸಣ್ಣ ಆಸ್ಪತ್ರೆಗೆ. ದೊಡ್ಡ ಆಸ್ಪತ್ರೆ ಆಗಬೇಕೆಂದರೆ 45 ಕಿ.ಮೀ. ದೂರ ಹೋಗಬೇಕು. ಇದು ಉಡುಪಿ – ಚಿಕ್ಕಮಗಳೂರು, ಶಿವಮೊಗ್ಗ ಲೋಕಸಭಾ ಕ್ಷೇತ್ರ, ಕುಂದಾಪುರ, …

Read More »

ಖಾತೆದಾರರಿಗೆ ಕೆವೈಸಿ ಸಮಸ್ಯೆ : ಬ್ಯಾಂಕ್‌ಗಳಲ್ಲಿ ವಿವರ ಅಪ್‌ಡೇಟ್‌ಗೆ ತಾಕೀತು

ಹೊಸದಿಲ್ಲಿ/ಮುಂಬಯಿ: “ನಿಮ್ಮ ಗ್ರಾಹಕರನ್ನು ಅರಿಯಿರಿ’ (ಕೆವೈಸಿ) ವಿವರಗಳನ್ನು ಅಪ್‌ಡೇಟ್‌ ಮಾಡಲಾಗಿಲ್ಲ ಎಂಬ ಕಾರಣಕ್ಕೆ ಸರಕಾರಿ ಮತ್ತು ಖಾಸಗಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಜತೆಗೆ ಹಿರಿಯ ನಾಗರಿಕರಿಗೆ ಸಿಗಬೇಕಾಗಿದ್ದ ಪಿಂಚಣಿ ಪಾವತಿ ಮೇಲೆಯೂ ಇದು ಪ್ರತಿಕೂಲ ಪರಿಣಾಮ ಬೀರಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರಿಗೆ ಇಂಥ ಅನುಭವವಾಗುತ್ತಿದೆ. ಕಳೆದ ವರ್ಷದ ಲಾಕ್‌ಡೌನ್‌ ಅವಧಿಯಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಎಸ್‌ಬಿ ಖಾತೆ ಹೊಂದಿದ್ದ ವ್ಯಕ್ತಿಗೆ ತತ್‌ಕ್ಷಣವೇ ಕೆವೈಸಿ ವಿವರ ಅಪ್‌ಡೇಟ್‌ ಮಾಡಬೇಕು. …

Read More »

ಭಾರತದಲ್ಲಿ ಒಂದೇ ದಿನದಲ್ಲಿ 73,600 ಕೋವಿಡ್ ಲಸಿಕೆ ಕೇಂದ್ರಗಳ ಕಾರ್ಯಾಚರಣೆ

ನವದೆಹಲಿ : ಭಾರತದಲ್ಲಿ ಸೋಮವಾರ ಒಂದೇ ದಿನದಲ್ಲಿ 73,600 ಕೊರೋನಾ ಲಸಿಕೆ ಕೇಂದ್ರಗಳು ಕಾರ್ಯನಿರ್ವಹಿಸುವ ಮೂಲಕ ಇಲ್ಲಿವರೆಗಿನ ಅತ್ಯಂತ ಹೆಚ್ಚಿನ ಲಸಿಕಾ ಕೇಂದ್ರ ಕಾರ್ಯಾಚರಣೆಗೆ ಸಾಕ್ಷಿಯಾಯಿತು. ಇದು ಒಂದು ದಿನದಲ್ಲಿ ದೇಶಾದ್ಯಂತ ಸರಾಸರಿ 45,000 ಕ್ರಿಯಾತ್ಮಕ ಸಿವಿಸಿಗಳಿಗಿಂತ 28,600 ಹೆಚ್ಚಾಗಿದೆ. ಸೋಮವಾರ ರಾತ್ರಿ 8 ಗಂಟೆಯವರೆಗೆ ಭಾರತದಲ್ಲಿ 31 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್ ಗಳನ್ನು ನೀಡಲಾಯಿತು. ಫಲಾನುಭವಿಗಳಲ್ಲಿ ಸುಮಾರು 21.7 ಲಕ್ಷ ಜನರು ತಮ್ಮ ಮೊದಲ ಡೋಸ್ ಪಡೆಯುತ್ತಿದ್ದರು …

Read More »

ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆ ಮದ್ಯ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ನಿಯಂತ್ರಣಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ 6 ದಿನ ಲಾಕ್ ಡೌನ್ ಘೋಷಿಸಿದೆ. ಸೋಮವಾರ ರಾತ್ರಿಯಿಂದಲೇ ದೆಹಲಿಯಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆ ಮದ್ಯಪ್ರಿಯರು ಮದ್ಯ ಖರೀದಿಗೆ ಮುಗಿಬಿದ್ದ ದೃಶ್ಯಗಳು ಕಂಡು ಬಂದಿವೆ. ದೆಹಲಿಯಲ್ಲಿ ಪರಿಸ್ಥಿತಿ ಕೈ ಮೀರಿದ್ದು, ಸೋಂಕು ತಡೆಗೆ ಲಾಕ್ಡೌನ್ ಜಾರಿಮಾಡಲಾಗಿದೆ. ಸಿಎಂ ಕೇಜ್ರಿವಾಲ್ ಅವರು, ಇದು ಸಣ್ಣ ಪ್ರಮಾಣದ ಲಾಕ್ ಡೌನ್ ಆಗಿದ್ದು, …

Read More »

ಮುಂಬೈನಲ್ಲಿ ಕರ್ಫ್ಯೂ: ಬಾಯ್ ಫ್ರೆಂಡ್ ಜೊತೆ ಮಾಲ್ಡೀವ್ಸ್‌ಗೆ ಹಾರಿದ ನಟಿ ಆಲಿಯಾ ಭಟ್

ಕೊರೊನಾ ಎರಡನೇ ಅಲೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಯಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ಅನೇಕ ಕಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಮುಂಬೈನಲ್ಲಿ ಕರ್ಫ್ಯೂ ಜಾರಿಯಾಗಿದ್ದು, ಅನೇಕ ಬಾಲಿವುಡ್ ಕಲಾವಿದರು ಮುಂಬೈ ತೊರೆದಿದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ಬಿದ್ದ ಪರಿಣಾಮ ಸಮಯ ಕಳೆಯಲು ಸಿನಿ ತಾರೆಯರು ತಮ್ಮ ನೆಚ್ಚಿನ ಸ್ಥಳಕ್ಕೆ ಹೋಗುತ್ತಿದ್ದಾರೆ. ಇತ್ತೀಚಿಗಷ್ಟೆ ದೀಪಿಕಾ ಮತ್ತು ರಣ್ವೀರ್ ಸಿಂಗ್ ದಂಪತಿ ಮುಂಬೈ ತೊರೆದು ಬೆಂಗಳೂರಿಗೆ ಬಂದಿದ್ದಾರೆ. ಅನೇಕರು ಮುಂಬೈನಿಂದ …

Read More »

ಸ್ವತಃ ಲಾಕ್ ಡೌನ್ ಹೇರಿಕೊಂಡ ಗ್ರಾಮಸ್ಥರು

ಬೀದರ್ : ಕೊರೊನಾ ಅಟ್ಟಹಾಸಕ್ಕೆ ಗಡಿ ಜಿಲ್ಲೆ ನಲುಗಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರವು ಸಾಕಷ್ಟು ರೂಲ್ಸ್ ಜಾರಿಗೊಳಿಸುತ್ತಿದೆ. ಸದ್ಯ ಗ್ರಾಮಸ್ಥರೇ ಇಲ್ಲಿ ಸ್ವಯಂ ಲಾಕ್ ಡೌನ್ ಘೋಷಿಸಿಕೊಳ್ಳುತ್ತಿದ್ದಾರೆ. ಹೌದು! ಜಿಲ್ಲೆಯಲ್ಲಿ ಪ್ರತಿ ದಿನ 400ರ ಆಸುಪಾಸಿನಲ್ಲಿ ಕೇಸ್ ಗಳು ದಾಖಲಾಗುತ್ತಿವೆ. ಇದರಿಂದ ಭಯಗೊಂಡ ಗ್ರಾಮಸ್ಥರು ಸ್ವಯಂ ಲಾಕ್ ಡೌನ್ ಹೇರಿಕೊಳ್ಳುತ್ತಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಗ್ರಾಮದ ಹಿರಿಯರು, ಜನಪ್ರತಿನಿಧಿಗಳು ಸೇರಿಕೊಂಡು ಮಹಾಮಾರಿಗೆ ಕಡಿವಾಣ ಹಾಕಲು ಈ ನಿರ್ಧಾರ …

Read More »

ಲಾಕ್‍ಡೌನ್ ಮಾಡಿದ್ರೆ ಜನ ಸಾಯ್ತಾರೆ, ಸೆಕ್ಷನ್ 144 ತನ್ನಿ: ಸಿ.ಎಂ.ಇಬ್ರಾಹಿಂ

ಬೆಂಗಳೂರು: ಲಾಕ್‍ಡೌನ್ ಮಾಡಿದ್ರೆ ಜನರು ಸಾಯ್ತಾರೆ. ಅದರ ಬದಲಾಗಿ ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೆ ತರಬೇಕು. ಎಲ್ಲದಕ್ಕೂ ಲಾಕ್‍ಡೌನ್ ಪರಿಹಾರ ಅಲ್ಲ ಎಂದು ಕಾಂಗ್ರೆಸ್ ಎಂಎಲ್‍ಸಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಸಿಎಂ, ಸಚಿವರು, ಬೆಂಗಳೂರಿನ ಶಾಸಕರ ಜೊತೆಗಿನ ಸಭೆ ಬಳಿಕ ಸಿಎಂ ಇಬ್ರಾಹಿಂ ಮಾಧ್ಯಮಗಳ ಜೊತೆ ಮಾತನಾಡಿದರು. ಸರ್ಕಾರ ಸಂಪೂರ್ಣವಾಗಿ ಗೊಂದಲದಲ್ಲಿದ್ದು, ಗಂಟು ಹಾಕಿ ಹೊಳೆಯಲ್ಲಿ ಬಿಟ್ಟಂತಾಗಿದೆ. ರಾಜ್ಯದಲ್ಲಿ ಬೆಡ್, ಆಕ್ಸಿಜನ್, ಇಂಜೆಕ್ಷನ್, ಲಸಿಕೆ ಮತ್ತು ಔಷಧಿಗಳ ಕೊರತೆ ಇದೆ. ಈ …

Read More »

ಈ 6 ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯ!

ಮುಂಬೈ: ಕೋವಿಡ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಸೋಂಕು ಪ್ರಸರಣ ತಡೆಯಲು ಅಲ್ಲಿನ ಸರ್ಕಾರ ಹರಸಾಹಸ ಪಡುತ್ತಿದ್ದು, ಇದೀಗ 6 ರಾಜ್ಯಗಳಿಂದ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ. ಹೌದು…ಕೇರಳ, ಗೋವಾ, ರಾಜಸ್ಥಾನ, ದೆಹಲಿ, ಗುಜರಾತ್ ಮತ್ತು ಉತ್ತರಾಖಂಡ ಈ ಆರು ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸೂಚಿಸಿದೆ. ಮಹಾರಾಷ್ಟ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೋನಾ …

Read More »

ಆರೋಗ್ಯ ಕ್ಷೇತ್ರಕ್ಕೆ ₹30 ಸಾವಿರ ಕೋಟಿ ಮೀಸಲಿಡಬೇಕು : ಡಿ.ಕೆ. ಶಿವಕುಮಾರ್

ಬೆಂಗಳೂರು : ಕೊರೋನಾ ಎರಡನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರುಪಾಯಿ ಮೀಸಲಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ದಿನೇ ದಿನೇ ಗಂಭೀರವಾಗುತ್ತಿದೆ. ಸೋಂಕಿತರಿಗೆ ಬೆಡ್ ಗಳು ಸಿಗುತ್ತಿಲ್ಲ. ಐಸಿಯು, ರೆಮ್ ಡಿಸಿವಿಯರ್ ಲಸಿಕೆ, ಆಮ್ಲಜನಕ ಅಭಾವ ಸೃಷ್ಟಿಯಾಗಿವೆ. ಪ್ರತಿ ವಿಚಾರದಲ್ಲೂ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಸರ್ಕಾರ ಕೂಡಲೇ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿ, ಆ …

Read More »

ನಿಷ್ಠಾವಂತ ಸಿಬ್ಬಂದಿಗಳ ರಕ್ಷಣೆಗೆ ಬದ್ಧ: ಕೆಎಸ್‌ಆರ್‌ಟಿಸಿ

ಬೆಂಗಳೂರು, ಏ.19-ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗಳ ಮೇಲೆ ಹಲ್ಲೆ ಹಾಗೂ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸುವ ದುಷ್ಕರ್ಮಿಗಳು ಕಠಿಣ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಕರ್ತವ್ಯಕ್ಕೆ ಹಾಜರಾಗುವ ನಮ್ಮ ನಿಷ್ಠಾವಂತ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ನೀಡಲಾಗುವುದುಎಂದು ಕೆಎಸ್‌ಆರ್‌ಟಿಸಿ ಅಧಿಕೃತ ಪ್ರಕಟಣೆ ತಿಳಿಸಿದೆ. ಬಸ್ಸುಗಳ ಕಾರ್ಯಾಚರಣೆಯಲ್ಲಿನ ಏರಿಕೆಯಿಂದಾಗಿ ಮುಷ್ಕರ ನಿರತರು ವಿಚಲಿತರಾಗಿದ್ದಾರೆ. ನಿಷ್ಠಾವಂತ ಸಿಬ್ಬಂದಿಗಳ ಮೇಲೆ ಹಲ್ಲೇ , ಬಸ್ಸುಗಳಿಗೆ ಕಲ್ಲು ಹೊಡೆಯುವುದನ್ನು ಹೆಚ್ಚು ಮಾಡುತ್ತಿದ್ದಾರೆ ಎಂದು ಆರೋಪಿಸಿದೆ. ಈ …

Read More »