ಗೋಕಾಕ: ಕಳೆದ 30 ವರ್ಷಗಳಿಂದ ಎಲ್ಲ ಸಮುದಾಯಗಳ ಅಭಿವೃದ್ದಿಗೆ ಶ್ರಮಿಸುತ್ತಿದ್ದು, ಈ ಬಾರಿ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮತದಾರರಲ್ಲಿ ವಿನಂತಿಸಿದರು. ಮಂಗಳವಾರದಂದು ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಂಡ ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿ ಮಾತನಾಡಿದ ಅವರು, ನಾನು ಹುಟ್ಟಿ ಬೆಳೆದ ನನ್ನೂರಿನ ಜನ ನನಗೆ ಆಶೀರ್ವಾದ …
Read More »ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ
ಗೋಕಾಕ: ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ ಜನ್ಮ ದಿನಾಚರಣೆ ನಿಮಿತ್ಯ ಭಾವಚಿತ್ರಕ್ಕೆ ಪೂಜೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಸನತ ಜಾರಕಿಹೊಳಿ ಅವರು ನೆರವೇರಿಸಿದರು. ಚಿತ್ರದಲ್ಲಿ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಆಯ್.ಎಸ್.ಪವಾರ, ಎನ್.ಕೆ.ಮಿರಾಶಿ, ಡಾ: ಎಸ್.ಎಮ್.ನದಾಫ, ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗನೀಸ, ಪಿ.ವಿ.ಚಚಡಿ ಇದ್ದಾರೆ.
Read More »ಇಂತಹ ಕೆಟ್ಟ ಸರ್ಕಾರವನ್ನ ಹಿಂದೆಯೂ ನೋಡಿರಲಿಲ್ಲ.. ಮುಂದೆಯೂ ಬರುವುದಿಲ್ಲ: ಹೆಚ್.ಡಿ ಕುಮಾರಸ್ವಾಮಿ
ಬೀದರ್: ಕರ್ನಾಟಕದಲ್ಲಿ ಇಂತಹ ಕೆಟ್ಟ ಸರಕಾರ ನೋಡಿರಲಿಲ್ಲ. ಹಿಂದೆಯೂ ಇಂತಹ ಸರ್ಕಾರ ಬಂದಿರಲಿಲ್ಲ.. ಮುಂದೆಯೂ ಬರುವುದಿಲ್ಲ.. ಕೊರೊನಾದಿಂದ ಜನರನ್ನ ದೇವರೇ ಕಾಪಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಸವ ಕಲ್ಯಾಣದಲ್ಲಿ ಮಾತನಾಡಿದ ಮಾಜಿ ಸಿಎಂ ‘ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಗಮನಿಸಿದೆ. 18ರ ನಂತ್ರ ಸರ್ವಪಕ್ಷ ಸಭೆ ಕರೆದು ಸಲಹೆ ಪಡೆಯುವುದಾಗಿ ಕೇಳ್ತಾರಂತೆ. ಯಾವ ಪುರುಷಾರ್ಥಕ್ಕಾಗಿ ಸಭೆ ಕರೆಯುತ್ತಾರೆ.. ಸಲಹೆ ಪಡೆಯುತ್ತಾರೆ? ಎಂದು ಪ್ರಶ್ನಿಸಿದರು. ಇನ್ನು ಈಗಾಗಲೇ …
Read More »ನೌಕರರ ಮುಷ್ಕರದ ಎಫೆಕ್ಟ್: ಸಾರಿಗೆ ನಿಗಮಗಳಿಗೆ ʼ₹152 ಕೋಟಿ ಲಾಸ್ʼ..!
ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಪಟ್ಟು ಹಿಡಿದ ಸಾರಿಗೆ ನೌಕರರು ಕಳೆದ 8 ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಆದ್ರೆ, ಈ ಮುಷ್ಕರದಿಂದ ನಾಲ್ಕೂ ನಿಗಮಗಳಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಹೌದು, ಈ ಮುಷ್ಕರದಿಂದ ಸಾರಿಗೆ ಇಲಾಖೆಯ 4 ವಿಭಾಗಗಳಿಗೂ ಕೋಟಿಗಟ್ಟಲೇ ನಷ್ಟವಾಗಿದೆ. ಅದ್ರಂತೆ, ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 70 ಕೋಟಿ ರೂಪಾಯಿ ನಷ್ಟವಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ- 20 ಕೋಟಿ ರೂಪಾಯಿ ನಷ್ಟವಾಗಿದೆ. ಇನ್ನು ವಾಯುವ್ಯ …
Read More »ಮಂಗಳಾ ಅಂಗಡಿಯವರಿಗೆ ಆಶೀರ್ವಾದ ಮಾಡುವಂತೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಕೋರಿದರು.
ಗೋಕಾಕ: ದೇಶದಾಧ್ಯಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಸಾರಥ್ಯದಲ್ಲಿ ಬಿಜೆಪಿಯ ಕಮಲ ಅರಳಿದ್ದು, ರಾಷ್ಟ್ರದ ಪ್ರಗತಿಯ ಹಿತದೃಷ್ಟಿಯಿಂದ ಹಾಗೂ ಬೆಳಗಾವಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗಾಗಿ ಬಿಜೆಪಿ ಬೆಂಬಲಿಸಿ ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಧರ್ಮಪತ್ನಿ ಮಂಗಳಾ ಅಂಗಡಿಯವರಿಗೆ ಆಶೀರ್ವಾದ ಮಾಡುವಂತೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಕೋರಿದರು. ಮಂಗಳವಾರದಂದು ಸಂಜೆ ಇಲ್ಲಿಗೆ ಸಮೀಪದ ಮೆಳವಂಕಿ (ಗೌಡನ ಕ್ರಾಸ್) …
Read More »ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನ ಮುಂದೂಡಿದೆ.
ಧಾರವಾಡ: ಕಳೆದ ಒಂದು ವಾರದಿಂದ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಹಿನ್ನೆಲೆ, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನ ಮುಂದೂಡಿದೆ. ನಾಳೆಯಿಂದ ಏಪ್ರಿಲ್ 17ರವರೆಗೆ ನಡೆಯಬೇಕಿದ್ದ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನ ಮುಂದೂಡಲಾಗಿದೆ. ಈ ಬಗ್ಗೆ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ಕೆ ಬಿ ಗುಡಸಿ ಮಾಹಿತಿ ನೀಡಿದ್ದಾರೆ. ಸಾರಿಗೆ ಮುಷ್ಕರ ಹಿನ್ನೆಲೆ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಇಲ್ಲದ ಕಾರಣ ಪರೀಕ್ಷೆ ಮುಂದೂಡಿದ್ದೇವೆ. ಮುಂದೂಡಲಾದ ಪರೀಕ್ಷೆಯ ದಿನಾಂಕವನ್ನ ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಗುಡಸಿ …
Read More »ಸತೀಶಣ್ಣನವರು ಲಕ್ಷಾಂತರ ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಯಾವ ಸಂಶಯವಿಲ್ಲ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೊದಗಾ ಗ್ರಾಮದಲ್ಲಿ ಲೋಕಸಭಾ ಉಪ ಚುಣಾವಣೆಯ ಅಂಗವಾಗಿ ಶ್ರೀ ಸತೀಶಣ್ಣನವರ ಜೊತೆ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತ ಯಾಚಿಸಿದೆ. ಅಭೂತಪೂರ್ವ ಜನ ಬೆಂಬಲ ದೊರೆಯುತ್ತಿರುವುದನ್ನು ನೋಡಿದರೆ ಸತೀಶಣ್ಣನವರು ಲಕ್ಷಾಂತರ ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಯಾವ ಸಂಶಯವಿಲ್ಲ
Read More »ಗ್ರಾಮೀಣ ಪ್ರದೇಶದ ಸಾಂಬ್ರಾ ಗ್ರಾಮಕ್ಕೆ ಶ್ರೀ ಸತೀಶಣ್ಣನವರ ಜೊತೆ ಪ್ರಚಾರ
ಬೆಳಗಾವಿ ಗ್ರಾಮೀಣ ಪ್ರದೇಶದ ಸಾಂಬ್ರಾ ಗ್ರಾಮದಕ್ಕೆ ಇವತ್ತು ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಸಲುವಾಗಿ ತೆರಳಿ ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಹಾಗೂ ಮಹಾನ್ ನಾಯಕರಾದ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯ ನಿಮಿತ್ಯ ಅವರ ಪುತ್ಥಳಿಗೆ ಗೌರವಾರ್ಪಣೆಯನ್ನು ಸಲ್ಲಿಸಿ ಶ್ರೀ ಸತೀಶಣ್ಣನವರ ಜೊತೆ ಪ್ರಚಾರವನ್ನು ಕೈಗೊಂಡು ಮತ ಯಾಚಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಬೀರದೇವರ ಮಂದಿರಕ್ಕೆ ಸಹ ತೆರಳಿ ಆಶೀರ್ವಾದವನ್ನು ಪಡೆದು, ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ …
Read More »ಅವ್ವ-ಅಜ್ಜಿ ಜತೆ ಮದುವೆ ಮಾತುಕತೆಗೆ ಬಂದವ ಅಕ್ಕ-ತಂಗಿ ಮೇಲೆ ಮಚ್ಚುಬೀಸಿದ! ಕಾರಣ ಕೇಳಿದ್ರೆ ಶಾಕ್ ಆಗ್ತೀರಿ
ಹಾಸನ: ತಮ್ಮನನ್ನು ಮದುವೆಯಾಗಲು ಒಪ್ಪದ ಯುವತಿಯರಿಬ್ಬರ ಮೇಲೆ ವ್ಯಕ್ತಿಯೊಬ್ಬ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚಾವು ಗ್ರಾಮದಲ್ಲಿ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಹೋದರಿಯರಾದ ಯೋಗಿತಾ ಮತ್ತು ಪುಷ್ಪಿತಾ ಹಲ್ಲೆಗೊಳಗಾದವರು. ನಾಗರಾಜ್ ಹಲ್ಲೆ ಮಾಡಿದವ. ಈತನ ಸೋದರ ಮಾವನ ಮಕ್ಕಳು ಯೋಗಿತಾ ಮತ್ತು ಪುಷ್ಪಿತಾ. ಏ.12ರಂದು ಯೋಗಿತಾಳ ಜತೆ ತನ್ನ ತಮ್ಮನ ಮದುವೆ ಮಾತುಕತೆಗೆಂದು ತಾಯಿ ಹಾಗೂ ಅಜ್ಜಿ ಜತೆ ಸೋದರ ಮಾವನ ಮನೆಗೆ ನಾಗರಾಜ್ …
Read More »ಕೊಪ್ಪಳದ ಕಿಷ್ಕಿಂದೆಯೇ ಹನುಮ ಹುಟ್ಟಿದ ಸ್ಥಳ; ಇಲ್ಲಿವೆ ಖಚಿತ ದಾಖಲೆಗಳು
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ ಹುಟ್ಟಿದ ಸ್ಥಳ ಎಂದು ಹೆಸರಾದ ಅಂಜನಾದ್ರಿ ಪರ್ವತ ಇದೀಗ ಸುದ್ದಿಯಲ್ಲಿದೆ. ಟಿಟಿಡಿ ಹನುಮ ಹುಟ್ಟಿದ್ದು ನಮ್ಮಲ್ಲಿ ಎಂದು ಹೇಳ್ತಿದೆ. ಇತ್ತ ಕೊಪ್ಪಳ ಇತಿಹಾಸಕಾರರು, ಹನುಮ ಹುಟ್ಟಿದ್ದು ನಮ್ಮಲ್ಲಿ ಎನ್ನುತ್ತಿದ್ದಾರೆ. ಅಷ್ಕಕ್ಕೂ ಹನುಮ ಹುಟ್ಟಿದ ವಿವಾದ ಏನು ಎಂಬ ಈ ಆಸಕ್ತಿಕರ ಸ್ಟೋರಿ ಇಲ್ಲಿದೆ. ಕೊಪ್ಪಳ ಜಿಲ್ಲೆ ಕಿಷ್ಕಿಂದೆ ಹನುಮ ಹುಟ್ಟಿದ ಸ್ಥಳ ಎಂದು ಹೆಸರುವಾಸಿಯಾದ ಪ್ರದೇಶ. ಕಿಷ್ಕಿಂದೆ ಎಂದರೆ ಸಂಸ್ಕೃತದಲ್ಲಿ ಇಕ್ಕಟ್ಟಿನ ಪ್ರದೇಶ …
Read More »
Laxmi News 24×7