ಬೆಂಗಳೂರು : ಸಾರಿಗೆ ನೌಕರರು ದಿಢೀರ್ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದರು. ಒಕ್ಕೂಟದ ನೌಕರರು ಮತ್ತು ಟ್ರೇಡ್ ಯುನಿಯನ್ ಅವರು 9 ಬೇಡಿಕೆ ಮುಂದಿಟ್ಟರು. ನಾವು ಅವರ ಬೇಡಿಕೆಗಳ ಭರವಸೆ ಪತ್ರವನ್ನು ಲಿಖಿತ ರೂಪದಲ್ಲಿ ನೀಡಿ, ಎಂಟು ಬೇಡಿಕೆ ಈಡೆರಿಸಿ ಆದೇಶ ಹೊರಡಿಸಿದ್ದೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ಆರೋಗ್ಯ ಭಾಗ್ಯ ಸಂವೀಜಿವಿನಿ ಯೋಜನೆ, ಕೊರೊನಾ ಸೋಂಕಿನಿಂದ ನಿಧನ ಹೊಂದಿದರೆ …
Read More »5 ಸಾವಿರದ ಗಡಿ ದಾಟಿದ ಕೊರೊನಾ – ಬೆಂಗಳೂರಿನಲ್ಲಿ 3,728 ಜನಕ್ಕೆ ಸೋಂಕು ದೃಢ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಒಂದೇ ದಿನ 5,278 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ರಾಜಧಾನಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, 3,728 ಜನಕ್ಕೆ ಸೋಂಕು ದೃಢವಾಗಿದೆ.ಇಂದು ಕೊರೊನಾಗೆ 32 ಜನರು ಮೃತಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 12,657ಕ್ಕೆ ಏರಿಕೆಯಾಗಿದೆ. 42,483 ಸಕ್ರಿಯ ಪ್ರಕರಣಗಳ ಪೈಕಿ, 345 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ 10,20,434ಕ್ಕೇರಿಕೆಯಾಗಿದೆ.ಇಂದು 1,856 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಕೋವಿಡ್-19 ಖಚಿತ ಪ್ರಮಾಣ …
Read More »ಎಪಿಎಂಸಿಗೆ ಭೂಮಿ ಕೊಟ್ಟ ರೈತನಿಗಿಲ್ಲ ಪರಿಹಾರ- ಕೋರ್ಟ್ ಆದೇಶ ಮೇರೆಗೆ ಎಪಿಎಂಸಿ ಕಚೇರಿ ಜಪ್ತಿ
ಗದಗ: ಅಡಿಕೆಗೆ ಹೋದ ಮಾನ ಆನೆ ಕೋಟ್ರು ಬಾರದು ಅಂತಾರೆ. ಅದರಂತಾಗಿದೆ ಗದಗ ಎಪಿಎಂಸಿ ಕಚೇರಿ ಕಥೆ. ಗದಗ ನಗರದ ಎಪಿಎಂಸಿ ಕಚೇರಿಯನ್ನ ಇಂದು ಜಪ್ತಿ ಮಾಡಲಾಗಿದೆ. ಕಾರಣ ಆರ್.ಆರ್.ಹೇಮಂತನವರ ಎಂಬವರು 4 ಎಕರೆ 35 ಗುಂಟೆ ಜಾಗೆಯನ್ನು 40 ವರ್ಷಗಳ ಹಿಂದೆ ಎಪಿಎಂಸಿಗಾಗಿ ಸ್ವಾದೀನಪಡಿಸಿಕೊಂಡಿತ್ತು. ಆಗ ಸುಮಾರು 76 ಲಕ್ಷ ರೂಪಾಯಿ ಪರಿಹಾರ ಹಣ ಬಿಡುಗಡೆ ಮಾಡಿದ ಎಪಿಎಂಸಿ, ಇನ್ನುಳಿದ 16.50 ಲಕ್ಷ ರೂಪಾಯಿ ಪಾವತಿಸಲು ವಿಳಂಬ ಮಾಡಿದೆ. …
Read More »BMTC, KSRTC ಸಿಬ್ಬಂದಿ ಮುಷ್ಕರ – ಇಂದು ರಾತ್ರಿಯಿಂದಲೇ ಬಸ್ ಸಿಗೋದು ಡೌಟ್
ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ಮತ್ತೆ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳ ಓಡಾಟ ಅನಿರ್ದಿಷ್ಟಾವಧಿಗೆ ಸ್ತಬ್ಧವಾಗಿರಲಿದೆ. ಇಂದು ರಾತ್ರಿಯಿಂದಲೇ ಮುಷ್ಕರ ಆರಂಭ ಆಗುವ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ತಬ್ಧ ಆಗುವ ಸಾಧ್ಯತೆಯೇ ಹೆಚ್ಚು. ಡಿಸೆಂಬರ್ನಲ್ಲಿ ಮುಷ್ಕರ ಕೈಗೊಂಡಿದ್ದ ವೇಳೆ ನೀಡಿದ್ದ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೆ ತಿರುಗಿಬಿದ್ದಿದ್ದು, ನಾಳೆಯಿಂದ ರಾಜ್ಯಾದ್ಯಂತ ಮುಷ್ಕರ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಬಸ್ ಸಿಗದೇ ಜನಸಾಮಾನ್ಯರು ಪರದಾಡಬೇಕಾಗುವುದು ನಿಶ್ಚಿತ. ಕೆಲವು ಬೇಡಿಕೆಗಳ …
Read More »ಲೋಕಸಭಾ ಚುನಾವಣೆ ಪ್ರಚಾರ ಮಂಗಳವಾರ ಬೆಳಗಾವಿಗೆ B.S.Y.
ಬೆಳಗಾವಿ – ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಮಂಗಳವಾರ ಬೆಳಗಾವಿಗೆ ಆಗಮಿಸಲಿದ್ದು, ಬುಧವಾರ ವಿವಿಧೆಡೆ ಲೋಕಸಭಾ ಉಪಚುನಾವಣೆ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳವಾರ ಸಂಜೆ 5.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಯಡಿಯೂರಪ್ಪ ಅಲ್ಲಿಂದ ರಸ್ತೆ ಮಾರ್ಗದಲ್ಲಿ ಬೆಳಗಾವಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಬುಧವಾರ ಬೆಳಗ್ಗೆ 11 ಗಂಟೆಗ ರಾಮದುರ್ಗ ತಾಲೂಕು ಸಾಲಹಳ್ಳಿ ಹಾಗೂ 1 ಗಂಟೆಗೆ ಯರಗಟ್ಟಿ, 4.30ಕ್ಕೆ ಇಂಚಲದಲ್ಲಿ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ನಂತರ ಸಾಂಬ್ರಾ ವಿಮಾನ ನಿಲ್ದಾಣದ …
Read More »ರಶ್ಮಿಕಾರ ಹಳೆಯ ವಿಡಿಯೋ ಹಂಚಿಕೊಂಡು ಶುಭಾಶಯ ಕೋರಿದ ರಕ್ಷಿತ್ ಶೆಟ್ಟಿ
ನಟಿ ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ ಇಂದು (ಏಪ್ರಿಲ್ 05). ಕನ್ನಡ ಚಿತ್ರರಂಗದಿಂದ ನಟನಾ ವೃತ್ತಿ ಆರಂಭಿಸಿದ ರಶ್ಮಿಕಾ ಇಂದು ಬಾಲಿವುಡ್ನಲ್ಲಿ ಛಾಪು ಮೂಡಿಸಲು ತಯಾರಾಗಿದ್ದಾರೆ. ರಶ್ಮಿಕಾ ಅವರ ವೃತ್ತಿಯ ಗ್ರಾಫು ಏರುಮುಖದಲ್ಲಿ ಸಾಗಿದೆ. ರಶ್ಮಿಕಾ ಅವರನ್ನು ಸಿನಿಮಾಕ್ಕೆ ಪರಿಚಯಿಸುವ ಹಾಗೂ ಮೊದಲ ಸಿನಿಮಾದಲ್ಲಿಯೇ ಅವರಿಗೆ ನಟನೆಯ ಮೂಲಪಟ್ಟುಗಳನ್ನು ಹೇಳಿಕೊಡುವುದರಲ್ಲಿ ರಕ್ಷಿತ್ ಶೆಟ್ಟಿ ಪಾತ್ರ ದೊಡ್ಡದು. ರಶ್ಮಿಕಾರ ಮೊದಲ ಸಿನಿಮಾ ‘ಕಿರಿಕ್ ಪಾರ್ಟಿ’ಯಲ್ಲಿ ಮೋಡಿ ಮಾಡಿದ ರಶ್ಮಿಕಾ-ರಕ್ಷಿತ್ ಜೋಡಿ ನಿಜಜೀವನದಲ್ಲಿಯೂ ಒಂದಾಗಲು …
Read More »ಕಾಂಗ್ರೆಸ್ ಚಿಲ್ಲರೆ ರಾಜಕಾರಣದ ಬಗ್ಗೆ ಬಿಜೆಪಿ ಬಳಿ ಸಾಕ್ಷಿ ಇದೆಯಾ : ಸಿದ್ದರಾಮಯ್ಯ
ಕೊಪ್ಪಳ : ಬೆಳಗಾವಿ, ಮಸ್ಕಿ ಹಾಗೂ ಬಸವಕಲ್ಯಾಣದ ಉಪ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಕೊಪ್ಪಳ ಜಿಲ್ಲೆ ತಾವರಗೇರಾ ಪಟ್ಟಣದಲ್ಲಿ ಮಾತನಾಡಿ, ಮಸ್ಕಿ ಉಪಚುನಾವಣೆ ಪ್ರಚಾರಕ್ಕಾಗಿ ಹೋಗುತ್ತಿದ್ದೇನೆ. ಇಂದು 10- 15 ಕಡೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲಿದ್ದೇನೆ. ಬೆಳಗಾವಿ ಲೋಕಸಭೆ ಮತ್ತು 2 ವಿಧಾನಸಭೆ ಉಪ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದರು. ಕಾಂಗ್ರೆಸ್ ಚಿಲ್ಲರೇ ರಾಜಕಾರಣ ಮಾಡುತ್ತಿದೆ ಎಂಬ ಸಚಿವ ಜಗದ್ದೀಶ …
Read More »ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ – ಲಕ್ಷ್ಮಿ ಹೆಬ್ಬಾಳಕರ್ ಎಂ.ಬಿ.ಪಾಟೀಲ
ಬೆಳಗಾವಿ – ಬಿಜೆಪಿ ನೂರಾರು ಸುಳ್ಳು ಭರವಸೆಗಳನ್ನು ಜನರಿಗೆ ನೀಡಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಆದರೆ ಭ್ರಷ್ಟಾಚಾರ ಹೊರತುಪಡಿಸಿ ಎರಡೂ ಸರಕಾರಗಳ ಸಾಧನೆ ಶೂನ್ಯ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಪ್ರಯುಕ್ತ ಇಂದು ಮುತ್ನಾಳ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ವಿದೇಶದಿಂದ ಕಪ್ಪು ಹಣ ವಾಪಸ್ ತರುವುದಾಗಿ ಹೇಳಲಾಗಿತ್ತು. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. …
Read More »ಸಿಡಿ ಯುವತಿ ತಂದೆಯ ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಮಗಳ ಹೇಳಿಕೆ ಪರಿಗಣಿಸದಂತೆ ಸಿಡಿ ಯುವತಿ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ನನ್ನ ಮಗಳ ಹೇಳಿಕೆ ಪರಿಗಣಿಸಬೇಡಿ ಎಂದು 164 ಅನ್ನು ರದ್ದು ಮಾಡುವಂತೆ ಸಿಡಿ ಯುವತಿ ತಂದೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ನಡೆಸಿದೆ.ಸಿಆರ್ ಪಿಸಿ ಸೆ. 164 ಹೇಳಿಕೆ ಕೋರ್ಟ್ ನಲ್ಲಿದೆ, ಆರೋಪಪಟ್ಟಿ ಸಲ್ಲಿಕೆಯಾಗುವವರೆಗೆ ಹೇಳಿಕೆಯ ಪ್ರತಿ ಸಿಗುವುದಿಲ್ಲ. ಹೀಗಾಗಿ ಹೇಳಿಕೆ …
Read More »ನಿಜವಾಗಿಯೂ ಸಂತ್ರಸ್ತ ನನ್ನ ಕಕ್ಷಿದಾರ: ರಮೇಶ್ ಜಾರಕಿಹೊಳಿ ಪರ ವಕೀಲ
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಕಕ್ಷಿದಾರ ನಿಜವಾಗಿಯೂ ಸಂತ್ರಸ್ತ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ವಕೀಲ ಶ್ಯಾಮ್ ಸುಂದರ್ ಹೇಳಿದ್ದಾರೆ. ಇಂದುಮಾತನಾಡುತ್ತಾ ಅತ್ಯಾಚಾರ ಕೇಸ್ನ ತನಿಖೆ ಸರಿಯಾಗಿ ತನಿಖೆ ಆಗ್ತಿಲ್ಲ. ಪೊಲೀಸ್ ಆಯುಕ್ತರಿಗೆ ಯುವತಿ ಬರೆದಿರುವ ಪತ್ರದ ಕುರಿತು ಪ್ರತಿಕ್ರಿಯಿಸಿ, ಶ್ಯಾಮ್ ಸುಂದರ್ ಆಕ್ಷೇಪ ವ್ಯಕ್ತಪಡಿಸಿದರು. ಯುವತಿ ಸುಳ್ಳು ಆರೋಪ ಮತ್ತು ಸುಳ್ಳು ದೂರು ಕೊಡ್ತಿದ್ದಾರೆ. ನಿಜವಾಗಿಯೂ ಸಂತ್ರಸ್ತ ನನ್ನ ಕಕ್ಷಿದಾರ ಎಂದು ತಿಳಿಸಿದ್ದಾರೆ. ಇದೊಂದು …
Read More »
Laxmi News 24×7