Breaking News

ರಾಜ್ಯ

ಮುಂದಿನ ಕಾನೂನು ಹೋರಾಟಕ್ಕೆ ಹಿರಿಯ ವಕೀಲರ ಜೊತೆ ಬಾಲಚಂದ್ರ ಜಾರಕಿಹೊಳಿ ಚರ್ಚೆ

ಬೆಂಗಳೂರು: ಸಿಡಿ ಲೇಡಿ ಇಂದು ನ್ಯಾಯಾಧೀಶರ ಮುಂದೆ ಹಾಜರಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಹೇಗೆ ನಡೆಸಬೇಕು ಎಂಬುದನ್ನು ತಿಳಿಯಲು ಸೋಮವಾರ ರಾತ್ರಿ ಬಾಲಚಂದ್ರ ಜಾರಕಿಹೊಳಿ ಹಿರಿಯ ವಕೀಲರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟರೆ ರಮೇಶ್‌ ಜಾರಕಿಹೊಳಿಗೆ ಸಂಕಷ್ಟ ಗ್ಯಾರಂಟಿ. ಆಕೆಯ ಹೇಳಿಕೆ ವಿಡಿಯೋ ಹೇಳಿಕೆಗೆ ತದ್ವಿರುದ್ಧವಾಗಿ ಇದ್ರೆ ಮಾತ್ರ ಈ ಪ್ರಕರಣದಲ್ಲಿ ಪಾರು. ಇಲ್ಲದಿದ್ದರೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಆಗಲಿದೆ ಎಂದು ಹಿರಿಯ ವಕೀಲರು …

Read More »

ಇವರದ್ದು ಅವರ ಬಳಿ, ಅವರದೆಲ್ಲ ಇವರ ಬಳಿ, ಫಲಿತಾಂಶ ಶೂನ್ಯ ಕೇಂದ್ರವೇ ಮುಖ್ಯಮಂತ್ರಿಯನ್ನ ಬದಲಿಸುತ್ತಾರೆ: ಯತ್ನಾಳ್

ವಿಜಯಪುರ: ಸಿಡಿ ಪ್ರಕರಣದಲ್ಲಿ ಇಬ್ಬರು ಪ್ರಬಲ ನಾಯಕರಿದ್ದಾರೆ. ಒಬ್ಬರದ್ದು ಮತ್ತೊಬ್ಬರ ಬಳಿಯಲ್ಲಿದೆ. ಒಬ್ಬರಿಗೊಬ್ಬರು ಬ್ಲ್ಯಾಕ್‍ಮೇಲ್ ಮಾಡಿಕೊಂಡಿದ್ದಾರೆ. ಹಾಗಾಗಿ ಈ ಪ್ರಕರಣದ ಫಲಿತಾಂಶ ಶೂನ್ಯ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ರಾಜಕೀಯ ಪ್ರಭಾವ ಹೆಚ್ಚಿರುವ ಕಾರಣ ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ. ಪೊಲೀಸರ ಕೈಗಳನ್ನ ಕಟ್ಟಿ ಹಾಕಿ ಇದೇ ಪ್ರಶ್ನೆ ಕೇಳಬೇಕೆಂಬ ಒತ್ತಡಗಳಿವೆ. ಸಿಡಿ ಪ್ರಕರಣದಲ್ಲಿ ಓರ್ವ ಕಾಂಗ್ರೆಸ್ ಮತ್ತು ಮತ್ತೋರ್ವ ಬಿಜೆಪಿಗ ಇರೋದು ನಿಜ. ಡಿ.ಕೆ.ಶಿವಕುಮಾರ್ ಹೆಸರು …

Read More »

2 ಲಕ್ಷ ಮತಗಳ ಅಂತರದಿಂದ ಮಂಗಳಾ ಅಂಗಡಿ ಗೆಲ್ಲಬೇಕು..ಸಿಎಂ ಬಿಎಸ್‍ವೈ

ಅಂಗಡಿ ಕುಟುಂಬಸ್ಥರು ಸ್ಪರ್ಧೆ ಮಾಡಿದ್ರೆ ನಾನು ನಿಲ್ಲಲ್ಲ ಎಂದು ವಿರೋಧ ಪಕ್ಷದ ಅನೇಕರು ಹೇಳಿದ್ದಾರೆ. ಮಂಗಲಾ ಸುರೇಶ ಅಂಗಡಿ ಅವರನ್ನು ಗೆಲ್ಲಿಸಬೇಕು ಎಂದು ಪ್ರಾರ್ಥಿಸುತ್ತೇನೆ. 2 ಲಕ್ಷ ಮತಗಳ ಅಂತರದಿಂದ ಮಂಗಲಾ ಸುರೇಶ ಅಂಗಡಿ ಗೆಲ್ಲಬೇಕು ಎನ್ನುವುದು ನಮ್ಮ ಬಯಕೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಬೆಳಗಾವಿ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಿದ ಬಳಿಕ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ …

Read More »

ಎಲ್ಲರ ಕಣ್ತಪ್ಪಿಸಿ ನ್ಯಾಯಾಧೀಶರ ಮುಂದೆ ಹಾಜರಾದ ಸಿಡಿ ಯುವತಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮಹತ್ವದ ಘಟ್ಟ ತಲುಪಿದ್ದು, ಸಂತ್ರಸ್ತ ಯುವತಿ 24ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಳೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ಮಾಧ್ಯಮಗಳು, ನೆರೆದಿದ್ದ ಜನರ ಕಣ್ತಪ್ಪಿಸಿ ಯುವತಿ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದು, ತನ್ನ ಹೇಳಿಕೆ ದಾಖಲಿಸುತ್ತಿದ್ದಾಳೆ. ಈ ಕುರಿತು ಸಿಡಿ ಯುವತಿ ಪರ ವಕೀಲ ಜಗದೀಶ್ ಮಾಹಿತಿ ನೀಡಿದ್ದು, ಸಂತ್ರಸ್ತ ಯುವತಿ ಈಗಾಗಲೇ ಕೋರ್ಟ್ ಹಾಲ್ ನಲ್ಲಿದ್ದು, …

Read More »

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಡಿಸಿಎಂ ಲಕ್ಷ್ಮಣ ಸವದಿ ಸಿಹಿ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಿಹಿ ಸುದ್ದಿ ನೀಡಿದ್ದಾರೆ. ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈ ವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ವೇತನ ಪರಿಷ್ಕರಣೆ ಕುರಿತ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನಿಗಮಗಳು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಹಲವು ಸುತ್ತಿನ ಸಭೆ ನಡೆಸಿ ವೇತನ …

Read More »

ಸಿಡಿ ಪ್ರಕರಣ; ಯುವತಿಗೆ ಕಬ್ಬನ್ ಪಾರ್ಕ್ ಪೊಲೀಸರ ನೋಟಿಸ್

ಬೆಂಗಳೂರು, ಮಾರ್ಚ್ 29; ಮಾಜಿ ಸಚಿವ, ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಮಾರ್ಚ್ 30ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಯುವತಿ ಪರ ವಕೀಲ ಜಗದೀಶ್ ಮೂಲಕ ಸಂತ್ರಸ್ತ ಯುವತಿಗೆ ನೋಟಿಸ್ ನೀಡಿದ್ದಾರೆ. ಸೋಮವಾರ ಕಬ್ಬನ್ ಪಾರ್ಕ್ ಪೊಲೀಸರು ರಮೇಶ್ ಜಾರಕಿಹೊಳಿ ವಿಚಾರಣೆಯನ್ನು ನಡೆಸಿದ್ದರು. ಏಪ್ರಿಲ್ 2ರಂದು ಪುನಃ ವಿಚಾರಣೆಗೆ ಆಗಮಿಸಬೇಕು …

Read More »

ಎರಡು‌ವಾರಗಳ ಕಾಲ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ:B.S.Y.

ಬೆಂಗಳೂರು:  ಎರಡು‌ವಾರಗಳ ಕಾಲ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ ರಂದು ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕರೋನಾ ಹೆಚ್ಚಳದ ಹಿನ್ನೆಲೆಯಲ್ಲಿ‌ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ನಡೆಸಿದರು. ರಾಜ್ಯದಲ್ಲಿ‌ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಟಫ್ ರೂಲ್ಸ್ ಜಾರಿಗೆ ತರಲಾಗುವುದು ಎಂದು‌ ಮಾಹಿತಿಙೀಡಿದರು.ಜೊತೆ ಯಾವುದೇ ಜಾತ್ರಾ ಮಹೋತ್ಸವ ಹಾಗೂ ಸಭೆ ಸಮಾರಂಭಗಳಿ‌ಗೆ ಸದ್ಯಕ್ಕೆ ಬ್ರೇಲ್ ಹಾಕಲಾಗುವುದು ಎಂದು ಮಾಹಿತಿ‌ ನೀಡಿದರು

Read More »

ಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರ ಸೆಡ್ಡು, ಖಾಸಗಿ ಬಸ್‌ಗಳಿಗೆ ಅವಕಾಶ

ಬೆಂಗಳೂರು, ಮಾರ್ಚ್ 30: ವಿವಿಧ ಬೇಡಿಕೆಗಳನ್ನು ಇರಿಸಿಕೊಂಡು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್‌ ಆಪರೇಟರ್‌ಗಳನ್ನು ಮುಂದಿರಿಕೊಂಡು ಟಕ್ಕರ್ ನೀಡಲು ಸರ್ಕಾರ ಮುಂದಾಗಿದೆ. ಏಪ್ರಿಲ್ 7 ರಂದು ಸರ್ಕಾರಿ ಬಸ್ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಖಾಸಗಿ ಬಸ್‌ಗಳ ಜತೆ ಕೈಜೋಡಿಸಲು ಸಿದ್ಧವಾಗಿದೆ. ರಾಜ್ಯದಲ್ಲಿ 10 ಸಾವಿರ ಖಾಸಗಿ ಬಸ್ ಹಾಗೂ 1 ಲಕ್ಷ ಟ್ಯಾಕ್ಸಿಗಳಿದ್ದು, ಒಂದೊಮ್ಮೆ ಬಸ್‌ಗಳನ್ನು ನಿಲ್ಲಿಸಿದ್ದೇ ಆದಲ್ಲಿ ಈ ಖಾಸಗಿ …

Read More »

ಚಿನ್ನದ ನಾಣ್ಯಗಳಿಂದ ಕರ್ನಾಟಕ ಬ್ರ್ಯಾಂಡ್‌

ಬೆಂಗಳೂರು : ಚಿನ್ನದ ನಾಣ್ಯಗಳ ಮೇಲೆ ನಾಡಿನ ಪಾರಂಪರಿಕ ಸ್ಥಳಗಳು ಮತ್ತು ಮಹನೀಯರ ಭಾವಚಿತ್ರಗಳನ್ನು ಟಂಕಿಸಿ ಮಾರುಕಟ್ಟೆ ಮಾಡುವ ಮೂಲಕ ರಾಜ್ಯದಲ್ಲಿ ಉತ್ಪಾದನೆಯಾಗುವ ಬಂಗಾರಕ್ಕೆ ಕರ್ನಾಟಕ ಬ್ರ್ಯಾಂಡ್‌ ಸೃಷ್ಟಿಸಲು ಸರಕಾರವು ಯೋಜನೆ ರೂಪಿಸಿದೆ. ಸರಕಾರವೇ ಚಿನ್ನದ ಅಂಗಡಿ ತೆರೆದು ಜನರಿಗೆ ಗುಣ ಮಟ್ಟದ ಚಿನ್ನ ಒದಗಿಸಲು ಮುಂದಾಗಿದೆ. ಬಂಗಾರದ ನಾಣ್ಯಗಳಲ್ಲಿ ರಾಜ್ಯ ಸರಕಾರದ ಲಾಂಛನ ಗಂಡ ಭೇರುಂಡದ ಜತೆಗೆ ರಾಜ್ಯದ ಇತಿಹಾಸ ಮತ್ತು ಪರಂಪರೆ ಸಾರುವ ಪಾರಂಪರಿಕ ಸ್ಥಳಗಳು ಹಾಗೂ ಮಹನೀಯರ ಭಾವಚಿತ್ರ …

Read More »

ಬೆಂಜ್ ಕಾರು ಖರೀದಿಸಿದ ‘ಕನ್ನಡತಿ’ ಖ್ಯಾತಿಯ ಕಿರಣ್ ರಾಜ್

‘ಕನ್ನಡತಿ’ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರ ನೆಚ್ಚಿನ ನಟ ಎನಿಸಿಕೊಂಡಿರುವ ಕಿರಣ್ ರಾಜ್ ಹೊಸ ಕಾರು ಖರೀದಿ ಮಾಡಿದ್ದಾರೆ. ಕಾರು ಖರೀದಿ ಮಾಡಿ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಕಿರಣ್ ರಾಜ್ ಅವರ ಈ ಪೋಸ್ಟ್ ನೋಡಿದ ಅಭಿಮಾನಿಗಳು ಖುಷಿಯಾಗಿದ್ದು, ಶುಭಾಶಯ ತಿಳಿಸಿದ್ದಾರೆ. ಯಾವ ಖುಷಿಗೆ ಕಾರು ಖರೀದಿಸಿದ್ದಾರೆ ಎಂದು ಕೇಳಿದ್ದಾರೆ. ಅಂದ್ಹಾಗೆ, ಕಿರಣ್ ರಾಜ್ ಕಪ್ಪು ಬಣ್ಣ ಮರ್ಸಿಡಿಸ್ ಬೆಂಜ್ ಕಾರು ಖರೀದಿ ಮಾಡಿದ್ದಾರೆ. …

Read More »