Breaking News

ರಾಜ್ಯ

ಕಾಂಗ್ರೆಸ್‌ ಸೇರಿ ಗಳಿಸಿದ್ದೆಲ್ಲ ಕಳೆದುಕೊಂಡಿದ್ದೆ: ಜಗ್ಗೇಶ್‌

ಚಿತ್ರದುರ್ಗ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಈ ಹಿಂದೆ ಮಂಕುಬೂದಿ ಎರಚಿದ ಕಾಂಗ್ರೆಸ್‌ನ ಎಂ.ಡಿ. ಲಕ್ಷ್ಮಿನಾರಾಯಣ್ ನನಗೂ ಬೆಂಕಿ ಇಟ್ಟ. ಭವಿಷ್ಯಕ್ಕೆ ಕಲ್ಲು ಹಾಕಿದ’ ಎಂದು ಬಿಜೆಪಿ ರಾಜ್ಯ ವಕ್ತಾರ ಜಗ್ಗೇಶ್‌ ದೂರಿದರು. ಇಲ್ಲಿ ಭಾನುವಾರ ಬಿಜೆಪಿಯಿಂದ ನಡೆದ ‘ಮಾಧ್ಯಮ ಮಂಥನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎರಡು ದಶಕಗಳ ಕೆಳಗೆ ನನ್ನನ್ನು ಕಾಂಗ್ರೆಸ್‌ಗೆ ಸೇರಿಸಿ ಕಾರ್ಯದರ್ಶಿಯಾಗಿ ಮಾಡಿದರು. ವೇದಿಕೆಗಳಲ್ಲಿ ಕೂರಿಸುವುದನ್ನು ನೋಡಿ ಭಾರಿ ದೊಡ್ಡ …

Read More »

ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಪ್ರಕರಣಗಳು!

ಮುಂಬೈ: ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿವೆ. ಒಂದೇ ದಿನದಲ್ಲಿ ಈ ಪರಿಪ್ರಮಾಣದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವುದು ಇದೇ ಮೊದಲಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತ ಪ್ರಕರಣಗಳು 27,13,875 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಮಾ.25 ರಂದು ರಾಜ್ಯದಲ್ಲಿ ಕೊರೋನಾ ಸಂಖ್ಯೆ 26 ಲಕ್ಷಕ್ಕೆ ಏರಿಕೆಯಾಗಿತ್ತು. ಕೊರೋನಾ ಕಾರಣದಿಂದಾಗಿ 108 ಮಂದಿ ಇತ್ತೀಚೆಗೆ ಮೃತಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 54,181ಕ್ಕೆ …

Read More »

ಸಿಡಿ ಲೇಡಿಯಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ರವಾನೆ

ಬೆಂಗಳೂರು, ಮಾರ್ಚ್ 29: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ಕಳುಹಿಸಿದ್ದಾರೆ. ತಮ್ಮ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಲಿ, ನನ್ನ ತಂದೆ ತಾಯಿಗೆ ರಕ್ಷಣೆ ಕೊಡಿ ಎಂದು ಇ-ಮೇಲ್‌ನಲ್ಲಿ ಮನವಿ ಮಾಡಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ, ನನ್ನ ಪೋಷಕರಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಪ್ರಕರಣದಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ …

Read More »

ನಾಮಪತ್ರ ಸಲ್ಲಿಕೆಗೆ ‘ಕರಿ’ ದಿನವನ್ನು ಆಯ್ಕೆ ಮಾಡಿಕೊಂಡ ಸತೀಶ್ ಜಾರಕಿಹೊಳಿ.!

ಮಾಜಿ ಸಚಿವ ಸತೀಶ್ ಜಾರಕಿಹೊಳಿ ಮೂಢನಂಬಿಕೆಗಳ ವಿರೋಧಿ. ಹೀಗಾಗಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರದಿಂದ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿ ಜಯ ಸಾಧಿಸಿದ್ದರು. ಅಲ್ಲದೆ ಮೂಢನಂಬಿಕೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಸತೀಶ್ ಜಾರಕಿಹೊಳಿ ಹಮ್ಮಿಕೊಳ್ಳುತ್ತಿರುತ್ತಾರೆ. ಇದೀಗ ಸತೀಶ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಸತೀಶ್ ಜಾರಕಿಹೊಳಿ ಇಂದು ತಮ್ಮ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಇದಕ್ಕಾಗಿ ‘ಕರಿ’ ದಿನವನ್ನು …

Read More »

ಇ0ದು ಸಿ.ಡಿ ಲೇಡಿ ನ್ಯಾಯಾಲಯದ ಮುಂದೆ ಹಾಜರು’‌ ,,?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ಟ್ವಿಸ್ಟ್‌ಗಳು ಪಡೆಯುತ್ತಿದೆ. ಇದೀಗ ನಾಳೆ ಸಿ.ಡಿ ಲೇಡಿ ನ್ಯಾಯಾಲಯದ ಮುಂದೆ ಹಾಜರಾಗುತ್ತಾಳೆ ಎಂದು ಆಕೆಯ ಪರ ವಕೀಲ ಕೆಎನ್‌ ಜಗದೀಶ್‌ ಫೇಸ್‌ಬುಕ್‌ ಮೂಲಕ ತಿಳಿಸಿದ್ದಾರೆ. ಸಿಡಿ ಲೇಡಿ ಪೋಷಕರು ತಮ್ಮ ಮಗಳ ಪರವಾಗಿ ನಿಲ್ಲಬೇಕು. ಮಗಳಿಗೆ ಅನ್ಯಾಯವಾಗಿದೆ. ಹೀಗಾಗಿ ಆಕೆ ಪರವಾಗಿ ನಿಲ್ಲಬೇಕು. ನಾವು ಅಂದುಕೊಂಡಂತೆ ಆದರೆ ನಾಳೆ ಆಕೆ ಕೋರ್ಟ್(Court)‌ಗೆ ಹಾಜರಾಗಲಿದ್ದಾರೆ ಎಂದು …

Read More »

ದೇಶದಲ್ಲಿ ಕಾಂಗ್ರೆಸ್‌ ಗಿಲ್ಲ ಅಸ್ತಿತ್ವ

ಹೊನ್ನಾಳಿ: ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ತನ್ನ ಅಸ್ತಿತ್ವ ಕಳೆದು ಕೊಂಡಿದ್ದು, ಕಾಂಗ್ರೆಸ್‌ ಅನ್ನು ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕೂರಿಸಲು ಜನರು ತೀರ್ಮಾನ ಮಾಡಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು. ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಹಾಗೂ ಎಸ್‌ಟಿ ಮೋರ್ಚಾದಿಂದ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಸಂಘಟನೆಗೆ ಹೆಚ್ಚು ಒತ್ತು ನೀಡುವ ಏಕೈಕ ಪಕ್ಷ …

Read More »

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ಭಾರೀ ಸುದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವ್ರಿಗೆ ಪೊಲೀಸರು ನೋಟಿಸ್‌ ನೀಡಿದ್ದು, ಇಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.   ಕಬ್ಬನ್‌ ಪಾರ್ಕ್‌ ಪೊಲೀಸರಿಂದ ನೋಟಿಸ್‌ ನೀಡಿದ್ದು, ಸೋಮವಾರ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗಾಗಿ ಆಡುಗೋಡಿ ಟೆಕ್ನಿಕಲ್‌ ವಿಂಗ್‌ʼಗೆ ಹಾಜರಾಗಲು …

Read More »

ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ..!

ಹಾಸನ,ಮಾ.28-ಬಸ್ ನಿಲ್ದಾಣದಲ್ಲಿ ಪೋಷಕರೊಂದಿಗೆ ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದ ಕಾಮುಕ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ ಮೂಲದ ಅಲೆಮಾರಿ ಕುಟುಂಬವೊಂದು ಹಾಸನದ ಹೊಸ ಬಸ್ ನಿಲ್ದಾಣಕ್ಕೆ ಬಂದಿದೆ. ರಾತ್ರಿ ಪೋಷಕರೊಂದಿಗೆ ಮಲಗಿದ್ದ ಆರು ವರ್ಷದ ಬಾಲಕಿಯನ್ನು ಕಾಮುಕ ಎತ್ತಿಕೊಂಡು ಹೋಗಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಬೆಳಗ್ಗೆ ವಿಷಯ ಗೊತ್ತಾಗಿದೆ. ಪೊಲೀಸರ ಮೊರೆಹೋದ ಬಾಲಕಿಯ ಕುಟುಂಬ ದೂರು ನೀಡಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಸಿಸಿಕ್ಯಾಮೆರಾವನ್ನು ಪರಿಶೀಲಿಸಿದಾಗ ಬಾಲಕಿಯನ್ನು ಎತ್ತಿಕೊಂಡು ಹೋಗುವ …

Read More »

ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ನೆನಪಿನ ಶಕ್ತಿ ಕಡಿಮೆ ಆಗಿದೆ. ಮೇಟಿ ಪ್ರಕರಣವನ್ನು ಸಿಐಡಿಗೆ ಕೊಟ್ಟು ಮುಚ್ಚಿ ಹಾಕಿದ್ದರು.: ಬೊಮ್ಮಾಯಿ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಮರ್ಪಕವಾಗಿ ಕೆಲಸ ಮಾಡುತ್ತಿದೆ. ಆಡಿಯೋ, ವೀಡಿಯೋ, ಸಿಡಿ ಎಲ್ಲವನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ಸತ್ಯಾಸತ್ಯತೆ ಹೊರಬರಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ನೆನಪಿನ ಶಕ್ತಿ ಕಡಿಮೆ ಆಗಿದೆ. ಮೇಟಿ ಪ್ರಕರಣವನ್ನು ಸಿಐಡಿಗೆ ಕೊಟ್ಟು ಮುಚ್ಚಿ ಹಾಕಿದ್ದರು. ಮೇಟಿ ವಿರುದ್ಧ ಕೇಸ್ ಕೂಡ ದಾಖಲಿಸಿರಲಿಲ್ಲ. ಆದರೆ ಈ ಪ್ರಕರಣದಲ್ಲಿ ನಾವು ಯುವತಿ ದೂರು …

Read More »

ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಕಲ್ಲು ತೂರಾಟ, ಚಪ್ಪಲಿ ಎಸೆದಂತಹ ಯಾವುದೇ ಘಟನೆ ನಡೆದೇ ಇಲ್ಲ ಎಂದು ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಕಲ್ಲು ತೂರಾಟ, ಚಪ್ಪಲಿ ಎಸೆದಂತಹ ಯಾವುದೇ ಘಟನೆ ನಡೆದೇ ಇಲ್ಲ ಎಂದು ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ ಸಮಜಾಯಿಷಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಹಾಗೂ ಬೆಂಬಲಿಗರ ವಾಹನದ ಮೇಲೆ ಕಲ್ಲು ತೂರಾಟದಂತಹ ಘಟನೆ ನಡೆದಿಲ್ಲ. ವಿಐಪಿಗಳು ಬಂದು ಹೋದ ಮೇಲೆ ಅಂತಹ ಘಟನೆ ನಡೆದಿದ್ದರೆ ದೃಶ್ಯಾವಳಿಗಳನ್ನು ಪರಿಶೀಲಿಸಿ ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು. ಡಿ.ಕೆ.ಶಿವಕುಮಾರ್ ಬೆಳಗಾವಿ ಭೇಟಿಗೆ …

Read More »