ಮಂಗಳೂರು : ಈಗಾಗಲೇ ಉಸೇನ್ ಬೋಲ್ಟ್ ಓಡಿದಂತ ಮಾದರಿಯಲ್ಲಿಯೇ, ಕಂಬಳ ಅಂಗಳದಲ್ಲಿ ಓದಿ, ಕಂಬಳ ವೀರನೆಂದೇ ಖ್ಯಾತಿಯಾಗಿರುವಂತ, ಶ್ರೀನಿವಾಸ ಗೌಡ, ಇಂದು ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. ಅದೇನೆಂದ್ರೇ.. 8.96 ಸೆಕೆಂಡ್ ನಲ್ಲಿ 100 ಮೀಟರ್ ಕಂಬಳ ಕೆರೆಯಲ್ಲಿ ಓಡುವ ಮೂಲಕ, ಈ ಹಿಂದಿನ ಎಲ್ಲಾ ದಾಖಲೆಗಳನ್ನು ಅಳಿಸಿ ಹಾಕಿದ್ದಾರೆ. ‘ ಇಂದು ಬೆಳ್ತಂಗಡಿ ತಾಲೂಕಿನ ವೇಣೂರು-ಪೆರ್ಮುಡದಲ್ಲಿ ಸೂರ್ಯ-ಚಂದ್ರ ಜೋಡುಕೆರೆ ಕಂಬಳ ನಡೆಯಿತು. ಇಂತಹ ಕಂಬಳದಲ್ಲಿ ಭಾಗವಹಿಸಿದಂತ ಶ್ರೀನಿವಾಸಗೌಡ, 125 …
Read More »ರಾಗಿ ಕಾಳು ಎಣಿಸಿ ದಾಖಲೆ ಸೃಷ್ಟಿಸಿದ ಶಿವಮೊಗ್ಗ ಯುವಕ
ಶಿವಮೊಗ್ಗ: ಸಾಮಾನ್ಯವಾಗಿ ಒಂದು ಕೆ.ಜಿ ರಾಗಿಯಲ್ಲಿ ಎಷ್ಟು ಕಾಳುಗಳು ಇರುತ್ತವೆ ಎಂದು ಕೇಳಿದರೆ, ನಿನಗೇನು ಹುಚ್ಚಾ ಎಂದು ಪ್ರಶ್ನೆ ಮಾಡುವ ಮಂದಿಯೇ ಹೆಚ್ಚು. ನಗರದ ಯುವಕ ಒಂದು ಕೆ.ಜಿ. ರಾಗಿಯಲ್ಲಿ ಎಷ್ಟು ಕಾಳುಗಳಿವೆ ಎಂದು ಲೆಕ್ಕ ಹಾಕುವ ಮೂಲಕ ಇಂಡಿಯನ್ ವರ್ಲ್ಡ್ ರೆಕಾರ್ಡ್ನಲ್ಲಿ ದಾಖಲೆ ಸೃಷ್ಟಿಸಿದ್ದಾರೆ. ಶಿವಮೊಗ್ಗದ ಹೊಯ್ಸಳ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ. ವಿಭಾಗದ ವಿದ್ಯಾರ್ಥಿ ಸಚ್ಚಿನ್ ಈ ಸಾಧನೆ ಮಾಡಿದ ಯುವಕ. ಒಂದು ಕೆ.ಜಿ. ರಾಗಿಯಲ್ಲಿ 3,76,083 …
Read More »ಶಿವಸೇನಾ ಪುಂಡಾಟಿಕೆ ನಿಲ್ಲಿಸಲು ಕಠಿಣ ಕ್ರಮ: ಕಂದಾಯ ಸಚಿವ ಅಶೋಕ್
ಬೆಳಗಾವಿ: ‘ರಾಜ್ಯದಲ್ಲಿ ಶಿವಸೇನಾದವರ ಪುಂಡಾಟಿಕೆ ನಿಲ್ಲಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಶಿವಸೇನಾದವರು ನಿರಂತರವಾಗಿ ಪುಂಡಾಟಿಕೆ ನಡೆಸುತ್ತಿರುವುದನ್ನು ಗಮನಿಸಿದ್ದೇವೆ. ಕಠಿಣ ಕ್ರಮದ ಮೂಲಕ ಅದನ್ನು ನಿಲ್ಲಿಸಲೇಬೇಕಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗೆ ಸೂಚನೆ ಕೊಡಲಾಗಿದೆ. ಅಂಥವರನ್ನು ಮಟ್ಟ ಹಾಕಬೇಕು. ಆಗ ಮಾತ್ರ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ’ ಎಂದರು. ‘ಬೆಳಗಾವಿಯಲ್ಲಿ ಬಹಳ …
Read More »ಇಂದು ರಮೇಶ್ ಜಾರಕಿಹೊಳಿ ಅವರನ್ನ ಭೇಟಿ ಮಾಡಿದ ಲಖನ ಜಾರಕಿಹೊಳಿ…
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಷಡ್ಯಂತ್ರ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದು ಕೊಳ್ಳುತ್ತಿದ್ದೆ. ಇದಕ್ಕೆ ದಿನ ಕಳೆದಂತೆ ಹೊಸ ಬೆಳವಣಿಗೆ ಗಳು ಬೆಳಕಿಗೆ ಬರುತ್ತಿದ್ದು ರಮೇಶ್ ಜಾರಕಿಹೊಳಿ ಅವರು ಆದಷ್ಟು ಬೇಗ ಇದರಿಂದ ಹೊರಬರಲಿದ್ದಾರೆ ಎಂಬ ಸುಳಿವು ಸಿಗುತ್ತದೆ. ಇನ್ನು ರಮೇಶ್ ಜಾರಕಿಹೊಳಿಯವರ ಬೆನ್ನಿಗೆ ಮೊದಲನೆ ದಿನದಿಂದ ಬಾಲಚಂದ್ರ ಜಾರಕಿಹೊಳಿ ಅವರು ನಿಂತರೆ ದಿನ ಕಳೆದ ಹಾಗೆ ಎಲ್ಲ ಕುಟುಂಬದ ಸದಸ್ಯರು ಇವರನ್ನ ಭೇಟಿ ಮಾಡಿ ವಿಷಯದ …
Read More »ಬೆಳಗಾವಿ ಗಡಿ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ: ಆರ್.ಅಶೋಕ್
ಬೆಳಗಾವಿ: ಬೆಳಗಾವಿ ಗಡಿ ವಿಷಯದಲ್ಲಿ ಕರ್ನಾಟಕ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ. ಈ ನೆಲ, ಈ ಜಲವನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಣೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ರಕ್ಷಣೆ ಮಾಡುತ್ತದೆ. ಶಿವಸೇನೆ ಪುಂಡಾಟಿಕೆ ನಿಲ್ಲಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಶಿವಸೇನೆ ಪುಂಡಾಟಿಕೆ ನಿರಂತರವಾಗಿ ನಡೆಯುತ್ತಿದೆ. ಕಠಿಣ ಕ್ರಮ ಜರುಗಿಸಿ ನಾವು ನಿಲ್ಲಿಸಬೇಕಿದೆ …
Read More »ಥಿಯೇಟರ್ ಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಮುಂದುವರಿಕೆ :ಸಿನಿಮಾ ಮಂದಿಗೆ ಸಿಹಿ ಸುದ್ದಿ ನೀಡಿದ ಸಿಎಂ
ಬೆಂಗಳೂರು : ಕೊರೊನಾ ಹೆಚ್ಚಳದಿಂದ ಸಿನಿಮಾ ಮಂದಿರಗಳಲ್ಲಿ ಶೇ.50 ರಷ್ಟು ಆಸನ ಭರ್ತಿಗೆ ಮಾತ್ರ ಸರ್ಕಾರ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಭೀತಿಗೆ ಸಿಲುಕಿದ್ದ ಸಿನಿಮಾ ಉದ್ಯಮಕ್ಕೆ ಸಿಎಂ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಥಿಯೇಟರ್ಗಳಲ್ಲಿ ಪೂರ್ಣ ಆಸನ ಭರ್ತಿಗೆ ಇರುವ ಅವಕಾಶದಲ್ಲಿ ಬದಲಾವಣೆ ಇಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು …
Read More »ಸಿದ್ದರಾಮಯ್ಯ ವಿರುದ್ಧ ಮತ್ತೆ ಭುಗಿಲೆದ್ದ ಅಸಮಾಧಾನ.. ತವರು ಜಿಲ್ಲೆಯಲ್ಲಿ ತನ್ವೀರ್ ಸೇಠ್ ಬೆಂಬಲಿಗರ ಸಿಟ್ಟು..!
ಮೈಸೂರು: ಅದ್ಯಾಕೋ ಮೈಸೂರು ಮೇಯರ್ ಆಯ್ಕೆ ನಂತ್ರ ಕಾಂಗ್ರೆಸ್ನಲ್ಲಿ ಆರಂಭವಾದ ಒಳಬೇಗುದಿ ಆರುವ ಲಕ್ಷಣಗಳೇ ಕಾಣುತ್ತಿಲ್ಲ. ಎಲ್ಲವೂ ಸರಿ ಆಯ್ತು ಅನ್ನೋ ವೇಳೆಗೆ ತನ್ವೀರ್ ಬೆಂಬಲಿಗರ ಅಮಾನತು ಮತ್ತೆ ಮೈಸೂರು ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಮೈಸೂರು ಮೇಯರ್ ಸ್ಥಾನ ಬಿಟ್ಟುಕೊಟ್ಟ ನಂತ್ರ ಆದ ಬೆಳವಣಿಗೆಯಲ್ಲಿ ತನ್ವೀರ್ ಸೇಠ್ ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿತ್ತು. ಇದಕ್ಕೆ ತುಪ್ಪ ಸುರಿಯುವಂತೆ ಸಿದ್ದು ಆಪ್ತ ಶಾಸಕ ರಮೇಶ್ಕುಮಾರ್ ಎನ್. ಆರ್ …
Read More »ರಾಯಚೂರು ವಿಮಾನ ನಿಲ್ದಾಣ: ಎಎಐ ತಂಡದಿಂದ ಸ್ಥಳ ಪರಿಶೀಲನೆ
ರಾಯಚೂರು: ನಗರ ಹೊರವಲಯದಲ್ಲಿರುವ ಯರಮರಸ್ ಬಳಿ ನಿರ್ಮಿಸಲು ಉದ್ದೇಶಿಸಲಾಗಿರುವ ವಿಮಾನ ನಿಲ್ದಾಣಕ್ಕೆ ಅನುಮತಿ ದೊರೆಯುವ ಸಾಧ್ಯತೆಗಳ ಬಗ್ಗೆ ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ತಂಡವು ಶುಕ್ರವಾರ ಭೇಟಿ ನೀಡಿದ ಬಳಿಕ ಆಶಾಭಾವ ವ್ಯಕ್ತಪಡಿಸಿತು. ಆನಂತರ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿತು. ರಾಯಚೂರು ವಿಮಾನ ನಿಲ್ದಾಣಕ್ಕೆ ಮೀಸಲಿಟ್ಟಿರುವ 400 ಎಕರೆ ಪ್ರದೇಶ ಸೂಕ್ತವೂ, ಉತ್ತಮವೂ ಆಗಿದೆ, ಅದರೊಂದಿಗೆ ಹೆಚ್ಚುವರಿ ಭೂಮಿಯೂ ಬೇಕಾಗಬಹುದು ಎಂದು ನವದೆಹಲಿಯ ವಿಮಾನಯಾನ …
Read More »ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ರೆ, ಮುಲಾಜಿಲ್ಲದೇ ಕ್ರಮ ಕೈಗೊಳ್ತೇವೆ: ಜಗದೀಶ್ ಶೆಟ್ಟರ್ ಎಚ್ಚರಿಕೆ
ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆ ಮಾಡುವ ವೇಳೆ ಸ್ಥಳೀಯರಿಗೆ ಉದ್ಯೋಗ ನೀಡದೆ ನಿಯಮ ಉಲ್ಲಂಘಿಸಿದ್ರೆ, ಅಂತಹ ಉದ್ಯಮಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಕೈಗಾರಿಕೆಗಳಿಗೆ ಜಮೀನು ನೀಡುವ ವೇಳೆಯೇ ಒಪ್ಪಂದ ಮಾಡಿಕೊಳ್ಳಲಾಗುತ್ತೆ. ಜಮೀನು ನೀಡಿದ ಕುಟುಂಬಸ್ಥರಿಗೆ ಉದ್ಯೋಗ ನೀಡಬೇಕು. ಕಾರಣವೊಡ್ಡಿ ಉದ್ಯೋಗ ನೀಡದಿದ್ರೆ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. …
Read More »ಸರ್ಕಾರಿ ಬಸ್ ಡಿಕ್ಕಿ: ಬೈಕ್ನಲ್ಲಿದ್ದ ಬ್ಯಾಂಕ್ ಮ್ಯಾನೇಜರ್-ಕ್ಯಾಷಿಯರ್ ಇಬ್ಬರೂ ಸ್ಥಳದಲ್ಲೇ ದುರ್ಮರಣ
ವಿಜಯಪುರ: ರಾಜ್ಯ ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಡಿ.ಎಸ್.ಬಿರಾದಾರ್ ಮತ್ತು ಕ್ಯಾಷಿಯರ್ ಚೈತನ್ಯ ಕುಮಾರ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಖೇಡಗಿ ಗ್ರಾಮದಲ್ಲಿರುವ ಕೆವಿಜಿ ಬ್ಯಾಂಕ್ ಶಾಖೆಯಲ್ಲಿ ಇವರಿಬ್ಬರೂ ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರಿ ಬಸ್ ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂಡಿ …
Read More »
Laxmi News 24×7