Breaking News

ರಾಜ್ಯ

ಶೇಂಗಾ ಹೋಳಿಗೆ ತಿಂದು ಮೀಸಲಾತಿ ಹೋರಾಟ ನಿಲ್ಲಿಸಿದ ಪಂಚಮಸಾಲಿ ಜಗದ್ಗುರು ಬಸವ ಜಯಮೃತ್ಯುಂಜಯ ಶ್ರೀ

ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಕಳೆದ 64 ದಿನಗಳಿಂದ ನಡೆಸಲಾಗುತ್ತಿದ್ದ ಹೋರಾಟವನ್ನು ಪಂಚಮಸಾಲಿ ಜಗದ್ಗುರು ಬಸವ ಜಯಮೃತ್ಯುಂಜಯ ಶ್ರೀ ಅವರು ಶೇಂಗಾ ಹೋಳಿಗೆ ತಿನ್ನಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ಅಂತ್ಯಗೊಳಿಸಿದ್ದಾರೆ. ಇಂದು ಬೆಳಗ್ಗೆ ಸದನದಲ್ಲಿ ಮಾತನಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಮುದಾಯದ ಸ್ವಾಮೀಜಿಗಳು ಆರು ತಿಂಗಳ ಕಾಲ ಹೋರಾಟವನ್ನು ಸ್ಥಗಿತಗೊಳಿಸಬೇಕೆಂದು ಮನವಿ ಮಾಡಿದ್ದರು. ಅದಾದ ಕೆಲವೇ …

Read More »

ರಮೇಶ್ ಜಾರಕಿಹೊಳಿ ಸದಾಶಿವ ನಗರದಲ್ಲಿರುವ ಮನೆ ಬದಲಿಸಿ ಮಲ್ಲೇಶ್ವರದ ಮಂತ್ರಿ ಅಪಾರ್ಟ್ ಮೆಂಟ್ ಗೆ ಶಿಫ್ಟ್ ?

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒಂದೂವರೆ ವರ್ಷದ ಹಿಂದೆ ಖರೀದಿಸಿದ್ದ ಮನೆಯೇ ಅವರಿಗೆ ಮುಳುವಾಗಿದೆಯಾ? ಅವರ ಸಂಕಷ್ಟಗಳಿಗೆ ಈ ಹೊಸ ಮನೆಯ ವಾಸ್ತು ದೋಷವೇ ಕಾರಣವೇ ಎಂಬುದು ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಹೌದು, ರಮೇಶ್ ಜಾರಕಿಹೊಳಿ ಬೆಂಗಳೂರಿನ ಸದಾಶಿವನಗರದಲ್ಲಿ ಒಂದೂವರೆ ವರ್ಷದ ಹಿಂದೆ ಖರೀದಿಸಿದ್ದ ಮನೆಯನ್ನು ಇದೀಗ ಮಾರಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಈ ಪ್ರವೇಶಿಸಿದಾಗಿನಿಂದ ಅವರಿಗೆ ಒಂದಲ್ಲಾ ಒಂದು ಸಮಸ್ಯೆ ಕಾಡುತ್ತಿದ್ದು, ಸಂಕಷ್ಟಗಳಿಂದ ಹೊರಬರಲು ಅವರು ಈ …

Read More »

ಗ್ರಾಮ ಪಂಚಾಯತ್‌ ಭರ್ತಿ 8 ಸಾವಿರ ಹುದ್ದೆಗಳು ಖಾಲಿ ;

ಬೆಂಗಳೂರು : ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆದು, ಅಧ್ಯಕ್ಷ- ಉಪಾಧ್ಯಕ್ಷರು ಆಯ್ಕೆಯಾಗಿ ಪೂರ್ಣ ಪ್ರಮಾಣದಲ್ಲಿ ಪಂಚಾಯತ್ಗಳು ಅಸ್ತಿತ್ವಕ್ಕೆ ಬಂದಿವೆ. ಆದರೆ ಬಹುತೇಕ ಕಡೆ ಖಾಲಿ ಹುದ್ದೆಗಳು ಹೊಸ ಅಧ್ಯಕ್ಷ- ಉಪಾಧ್ಯಕ್ಷರನ್ನು ಸ್ವಾಗತಿಸುವ ಸ್ಥಿತಿ ಇದೆ. ಬಹುತೇಕ ಗ್ರಾ.ಪಂ.ಗಳಲ್ಲಿ ಪಿಡಿಒ, ಗ್ರಾ.ಪಂ. ಕಾರ್ಯದರ್ಶಿ, ದ್ವಿ.ದ. ಲೆಕ್ಕ ಸಹಾಯಕರ ಹುದ್ದೆಗಳು ಖಾಲಿ ಇವೆ. ಕೊರೊನಾ ಕಾರಣಕ್ಕೆ ಆರ್ಥಿಕ ಮಿತವ್ಯಯ ಹೇರಿದ್ದರ ಪರಿಣಾಮ ಒಂದು ವರ್ಷದಿಂದ ಹೊಸ ನೇಮಕ ಆಗಿಲ್ಲ. ಇದು ಆಡಳಿತ ಮತ್ತು …

Read More »

ನಾಡಗೀತೆಗೆ ಶೀಘ್ರದಲ್ಲೇ ಕತ್ತರಿ ಹಾಕುವ ಸಾಧ್ಯತೆ: ಸಚಿವ ಅರವಿಂದ ಲಿಂಬಾವಳಿ

ಗದಗ : ನಾಡಗೀತೆಗೆ ಶೀಘ್ರದಲ್ಲೇ ಕತ್ತರಿ ಹಾಕುವ ಸಾಧ್ಯತೆ ಇದೆ. ಈ ಬಗ್ಗೆ ಸಾಹಿತಿಗಳು ಮತ್ತು ತಜ್ಞರ ಸಭೆ ಕರೆದು ತೀರ್ಮಾನ ಮಾಡುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾಡಗೀತೆ ಬಹಳ ಸುದೀರ್ಘವಾಗಿ ಇರುವುದರಿಂದ ಪುನರ್ ಪರಿಶೀಲನೆ ಮಾಡಿ ಶೀಘ್ರದಲ್ಲೇ ನಾಡಗೀತೆ ಕಡಿತಕ್ಕೆ ಚಿಂತನೆ ನಡೆದಿದೆ. ಈ ಬಗ್ಗೆ ಸಾಹಿತಿಗಳು ಮತ್ತು ತಜ್ಞರ ಸಭೆ ಕರೆದು …

Read More »

ಡಿಕೆಶಿ ಅವರೇ ಸಿಡಿ ಕೇಸ್ ನಲ್ಲಿ ಸಿಲುಕಿಸಿಕೊಂಡ್ರಾ..? ‘ಮಹಾನ್ ನಾಯಕ’ನ H.D.K ಹೊಸ ಬಾಂಬ್

ಮೈಸೂರು: ‘ಅನುಭವಿ ರಾಜಕಾರಣಿ ಡಿ.ಕೆ. ಶಿವಕುಮಾರ್ ಸಿಡಿ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಲಾಗ್ತಿದೆ ಎಂದು ಏಕೆ ಹೇಳಿದ್ದಾರೋ ಗೊತ್ತಿಲ್ಲ.’ ಹೀಗೆಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ನನಗಿಂತ ಪ್ರಬುದ್ಧ ರಾಜಕಾರಣಿ. ದುಡುಕಿ ಯಾಕೆ ಈ ರೀತಿ ಅವರು ತಮ್ಮ ಹೆಸರನ್ನು ಹೇಳಿಕೊಂಡಿದ್ದಾರೆಯೋ ಗೊತ್ತಿಲ್ಲ. ರಾಜ್ಯದಲ್ಲಿ ಮಹಾನ್ ನಾಯಕರು ಬಹಳ ಜನ ಇದ್ದಾರೆ. ಇವರೇ ಮಹಾನಾಯಕ ಎಂದು ಏಕೆ ಅಂದುಕೊಂಡಿದ್ದಾರೆ. ಬಿಜೆಪಿ ಒಳಗೊಬ್ಬ ಮಹಾನಾಯಕರು ಬೆಳೆಯುತ್ತಿದ್ದಾರೆ ಎಂದು ಹೇಳಿದ್ದಾರೆ. …

Read More »

ಸೆಕ್ಸ್ ಸಿಡಿ ಪ್ರಕರಣ: ಮನೆಯ ಬಾಗಿಲಿಗೆ ಅಂಟಿಸಿದ ನೋಟಿಸ್..!

ವಿಜಯಪುರ: ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ಯುವತಿಗೆ ನೀಡಿರುವ ನೋಟಿಸ್ ಅನ್ನು ಸಂತ್ರಸ್ತೆಯ ತಾಯಿಯ ತವರು ಮನೆಯ ಬಾಗಿಲಿಗೆ ಅಂಟಿಸಿದ್ದಾರೆ. ದಿನೇಶ್ ಕಲ್ಲಹಳ್ಳಿ ದಾಖಲಿಸಿದ್ದ ದೂರಿನ ವಿಚಾರಣೆ ಚಾಲ್ತಿಯಲಿದ್ದು, ಈ ಬಗ್ಗೆ ನಿಮ್ಮ ಹೇಳಿಕೆ ಪಡೆಯಬೇಕಾಗಿರುವುದರಿಂದ ನೋಟಿಸ್ ನೋಡಿದ ಕೂಡಲೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿರುವ ಪೊಲೀಸ್ ಅಧಿಕಾರಿ ಮೊಬೈಲ್ ಸಂಖ್ಯೆಗೆ ಕರೆ ಮಾಡುವಂತೆ ಸೂಚಿಸಲಾಗಿದೆ. ಮನೆಗೆ …

Read More »

ಮಾರ್ಚ್ 15ರಿಂದ ಮಾರ್ಚ್ 30ರವರೆಗೆ ರಜೆ ಘೋಷಿಸಲಾಗಿದೆ ಎಂಬ ಸುತ್ತೋಲೆ ಹರಿದಾಡುತ್ತಿದೆ. ಆದರೆ ಇದೊಂದು ನಕಲಿ ಸುತ್ತೋಲೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕಾಲೇಜುಗಳಿಗೆ ಮಾರ್ಚ್ 15ರಿಂದ ಮಾರ್ಚ್ 30ರವರೆಗೆ ರಜೆ ಘೋಷಿಸಲಾಗಿದೆ ಎಂಬ ಸುತ್ತೋಲೆ ಹರಿದಾಡುತ್ತಿದೆ. ಆದರೆ ಇದೊಂದು ನಕಲಿ ಸುತ್ತೋಲೆಯಾಗಿದ್ದು, ರಜೆ ಘೋಷಣೆ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಯಾರೋ ಕಿಡಿಗೇಡಿಗಳು ಸರ್ಕಾರದ ಆದೇಶ ಪ್ರತಿಯನ್ನು ನಕಲಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ. ಮುಂಜಾಗೃತಾ ಕ್ರಮವಾಗಿ ಎಲ್ಲಾ ಸರ್ಕಾರಿ ಹಾಗೂ …

Read More »

ಲವರ್​ ಜತೆ ಮದುವೆಗೆ ಸಿದ್ಧಳಾಗಿದ್ದ ಸಿಡಿ ಲೇಡಿ: ಉತ್ತರ ಕರ್ನಾಟಕದ ಇಂಜಿನಿಯರಿಂಗ್​ ಯುವತಿಯ ಸ್ಟೋರಿ ಇದು.

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿಯ ಸಿ.ಡಿ ಕೇಸ್​ ಕ್ಷಣಕ್ಷಣಕ್ಕೂ ಕುತೂಹಲದ ತಿರುವು ಪಡೆದುಕೊಳ್ಳುತ್ತಿದೆ. ಇದಾಗಲೇ ಕೆಲವರನ್ನು ವಿಶೇಷ ತನಿಖಾ ತಂಡದ (ಎಸ್​ಐಟಿ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದು, ಇನ್ನು ಕೆಲವರಿಗಾಗಿ ಜಾಲ ಬೀಸಿದ್ದಾರೆ. ಈ ನಡುವೆಯೇ ಸಿ.ಡಿಯಲ್ಲಿ ಇರುವ ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿಗೂ ತನಿಖಾಧಿಕಾರಿಗಳು ನೋಟಿಸ್​ ಜಾರಿ ಮಾಡಿದ್ದಾರೆ. ಘಟನೆಯ ನಂತರದ ಬೆಳವಣಿಗೆಗಳ ಬಳಿಕ ಕಾಣೆಯಾಗಿದ್ದ ಯುವತಿ, ಕೊನೆಗೂ ಸಿಕ್ಕಿದ್ದು, ಆಕೆಯನ್ನು ವಿಚಾರಣೆ ಮಾಡುವ ಸಲುವಾಗಿ ನೋಟಿಸ್​ ಜಾರಿಗೊಳಿಸಲಾಗಿದೆ. …

Read More »

ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನಕ್ಕೆ ಆರೋಪಿಗಳು ಪ್ಲಾನ್ ಮಾಡಿದ್ದರೆಂಬ ವಿಷಯ ಇದೀಗ ಬಹಿರಂಗವಾಗಿದೆ.

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಸುದ್ದಿಗಳು ಹೊರಬರುತ್ತಲೇ ಇದೆ. ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನಕ್ಕೆ ಆರೋಪಿಗಳು ಪ್ಲಾನ್ ಮಾಡಿದ್ದರೆಂಬ ವಿಷಯ ಇದೀಗ ಬಹಿರಂಗವಾಗಿದೆ. ಸಿಡಿ ಪ್ರಕರಣದ ಕಿಂಗ್ ಪಿನ್ ಪತ್ರಕರ್ತ, ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನ ನಡೆಸಲು ಯೋಜನೆ ರೂಪಿಸಿದ್ದ. ಡೀಲ್ ದುಡ್ಡಲ್ಲಿ ಜಾತ್ರೆ ನಡೆಸಲು ಕೂಡ ಸಿದ್ಧತೆ ನಡೆಸಿದ್ದ ಎನ್ನಲಾಗಿದೆ.   ಮಹಿಂದ್ರಾ ಕಂಪನಿಯ ಎರಡು ಕಾರ್ ಖರೀದಿಸಲು ಮುಂದಾಗಿದ್ದ ಆತ …

Read More »

ನನಗೆ SIT ಮೇಲೆ ನಂಬಿಕೆ ಇಲ್ಲ , ಅಲ್ಲಿ ವಿಜಯೇಂದ್ರ ಹೇಳಿದಂತೆ ಕೇಳುವ ಅಧಿಕಾರಿ ಇದ್ದಾನೆ ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ..!

ವಿಜಯಪುರ : ನನಗೆ SIT ಮೇಲೆ ನಂಬಿಕೆ ಇಲ್ಲ ಎಷ್ಟು ಪಾರದರ್ಶಕತೆಯಿಂದ ನಡಿಯುತ್ತೋ ನನಗೆ ಸಂಶಯವಿದೆ ಎಂದು ಬಿಜೆಪಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಿಜೆಪಿ ರಾಜ್ಯಉಪಾಧ್ಯಕ್ಷ ವಿಜಯೇಂದ್ರ ವಿರುದ್ಧ ಗುಡುಗಿದ್ದಾರೆ. ಹೌದು ಇಂದು ವಿಜಯಪುರ ನಗರದಲ್ಲಿ ಮಾದ್ಯಮ ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ ನನಗೆ SIT ಮೇಲೆ ಸಂಶಯವಿದೆ ಯಾಕಂದ್ರೆ ಅಲ್ಲಿರುವಂತಹ ಒಬ್ಬ ಅಧಿಕಾರಿ ವಿಜಯೇಂದ್ರ ಹೇಳಿದಂತೆ ಕೇಳುವ ಅಧಿಕಾರಿ ಇದ್ದಾನೆ ಈ ಹಿಂದೆ ಡ್ರಗ್ಸ್ …

Read More »